Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ ಬಿಎಸ್ಪಿಯಿಂದ ಉಚ್ಛಾಟಿತ ಡ್ಯಾನಿಶ್ ಅಲಿ

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ ಬಿಎಸ್ಪಿಯಿಂದ ಉಚ್ಛಾಟಿತ ಡ್ಯಾನಿಶ್ ಅಲಿ

- Advertisement -
- Advertisement -

ಬಹುಜನ ಸಮಾಜ ಪಕ್ಷದಿಂದ (ಬಿಎಸ್‌ಪಿ) ಅಮಾನತುಗೊಂಡಿರುವ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುವುದಾಗಿ  ಪ್ರಕಟಿಸಿದ್ದು, ಏಕತೆ ಮತ್ತು ನ್ಯಾಯಕ್ಕಾಗಿರುವ ಅತಿದೊಡ್ಡ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿಯಾಗಿ ತಮ್ಮ ಕರ್ತವ್ಯದಲ್ಲಿ ವಿಫಲನಾಗುತ್ತೇನೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು ‘ಪಕ್ಷ ವಿರೋಧಿ’ ಚಟುವಟಿಕೆ ಹಿನ್ನೆಲೆ ಬಿಎಸ್‌ಪಿ ಪಕ್ಷದಿಂದ ಡ್ಯಾನಿಶ್‌ ಅಲಿ ಅವರನ್ನು ಅಮಾನತುಗೊಳಿಸಿತ್ತು. ಮಾಯಾವತಿ ನೇತೃತ್ವದ ಬಿಎಸ್‌ಪಿಯು, ಆಡಳಿತಾರೂಢ ಮೈತ್ರಿಕೂಟ ಎನ್‌ಡಿಎ ಮತ್ತು ವಿರೋಧ ಪಕ್ಷವಾದ INDIA ಮೈತ್ರಿಕೂಟದಿಂದ ಅಂತರವನ್ನು ಕಾಯ್ದುಕೊಂಡಿತ್ತು. ಆದರೆ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಡ್ಯಾನಿಶ್‌ ಅಲಿ ವಿರೋಧ ಪಕ್ಷಗಳ ಜೊತೆ ಸಕ್ರಿಯರಾಗಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಡ್ಯಾನಿಶ್ ಅಲಿ,  ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಸೇರಲು ನಿರ್ಧರಿಸಿದ್ದೇನೆ. ಇದು ನನಗೆ ಬಹಳ ಮುಖ್ಯವಾದ ಕ್ಷಣವಾಗಿದೆ. ನಾನು ಸಾಕಷ್ಟು ಆತ್ಮಾವಲೋಕನದ ನಂತರ ಇಲ್ಲಿಗೆ ಬಂದಿದ್ದೇನೆ. ನನ್ನ ಮುಂದೆ ಎರಡು ಆಯ್ಕೆಯಿತ್ತು. ಒಂದು ಯಥಾಸ್ಥಿತಿಯನ್ನು ಒಪ್ಪಿಕೊಳ್ಳುವುದು ಅಥವಾ ದಲಿತರು, ಹಿಂದುಳಿದವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು ಮತ್ತು ಇತರ ಅಂಚಿನಲ್ಲಿರುವ ಮತ್ತು ಬಡ ವರ್ಗಗಳ ಶೋಷಣೆಯನ್ನು ನಿರ್ಲಕ್ಷಿಸುವುದು. ಎರಡನೆಯದಾಗಿ ದೇಶದಲ್ಲಿರವ ಈ ಭಯ, ದ್ವೇಷ, ಶೋಷಣೆ ಮತ್ತು ಆಳವಾಗುತ್ತಿರುವ ವಿಭಜನೆಯ ವಾತಾವರಣದ ವಿರುದ್ಧ ಸರ್ವಾಂಗೀಣ ಅಭಿಯಾನವನ್ನು ಪ್ರಾರಂಭಿಸುವುದಾಗಿದೆ. ನನ್ನ ಆತ್ಮಸಾಕ್ಷಿಯು ಎರಡನೇ ಆಯ್ಕೆಯನ್ನು ಆಯ್ದುಕೊಳ್ಳಲು ನನ್ನನ್ನು ಪ್ರೇರೇಪಿಸಿದೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಆಡಳಿತ ಪಕ್ಷದ ಸದಸ್ಯರು ನನ್ನ ಮತ್ತು ನನ್ನ ಧರ್ಮದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದರು. 2023ರ ಸೆಪ್ಟೆಂಬರ್‌ನಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿ ಸಂಸತ್ತಿನಲ್ಲಿ ಅತ್ಯಂತ ಅವಹೇಳನಕಾರಿ ಮತ್ತು ಇಸ್ಲಾಮೋಫೋಬಿಕ್ ಭಾಷೆಯನ್ನು ಬಳಸಿದಾಗ ಅಲಿ ರಾಷ್ಟ್ರದ ಗಮನ ಸೆಳೆದಿದ್ದರು. ಈ ವಿಷಯವನ್ನು ಸಂಸದೀಯ ಸಮಿತಿ ಮುಂದಿಡಲಾಗಿತ್ತು ಮತ್ತು ಬಿಜೆಪಿ ಸಂಸದರು ಕ್ಷಮೆಯಾಚಿಸಿದ್ದರು. ಈ ಬಗ್ಗೆ ಆರೋಪಿತ ಸಂಸದರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಡ್ಯಾನಿಶ್‌ ಅಲಿ ಹೇಳಿದ್ದರು.

ನನ್ನನ್ನು ಅವಹೇಳನ ಮಾಡಿದವನಿಗೆ ಶಿಕ್ಷಿಸುವ ಬದಲು ಆಡಳಿತ ಮಂಡಳಿಯು ಅವನಿಗೆ ಬಹುಮಾನ ನೀಡಿದೆ. ನನ್ನ ಮೇಲಿನ ದಾಳಿಯು ದೇಶದಲ್ಲಿ ಭಯ ಮತ್ತು ದ್ವೇಷದ ವಾತಾವರಣವನ್ನು ಸೃಷ್ಟಿಸುವ ದೊಡ್ಡ ಯೋಜನೆಯ ಭಾಗವಾಗಿದೆ ಎಂದು ನಾನು ಅರಿತುಕೊಂಡೆ ಎಂದು ಅಲಿ ಆರೋಪಿಸಿದ್ದರು. ಆ ಸಂಕಟದ ಸಮಯದಲ್ಲಿ ನನ್ನೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ ಮತ್ತು ನನ್ನ ಮತ್ತು ನನ್ನ ಕುಟುಂಬದ ಪರವಾಗಿ ನಿಂತ ಮೊದಲ ನಾಯಕ ರಾಹುಲ್ ಗಾಂಧಿ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರ ಯಾತ್ರೆಯ ಉದ್ದೇಶವು ಅಂಚಿನಲ್ಲಿರುವವರಿಗೆ ಮತ್ತು ಶೋಷಿತ ವರ್ಗಗಳಿಗೆ ನ್ಯಾಯ ದೊರಕಿಸುವುದಾಗಿದೆ. ಈ ಯಾತ್ರೆಯು ನಮ್ಮ ದೇಶದ ಜನರನ್ನು ಭಯ, ದ್ವೇಷ, ಶೋಷಣೆ ಮತ್ತು ವಿಭಜನೆಯ ವಿರುದ್ಧ ಒಗ್ಗೂಡಿಸುವ ಒಂದು ಕಾರ್ಯದ ಭಾಗವಾಗಿದೆ. ನಾನು ಈ ಯಾತ್ರೆಯಲ್ಲಿ ಸೇರಲು ನಿರ್ಧರಿಸಿದೆ ಏಕೆಂದರೆ ನಾನು ಏಕತೆ ಮತ್ತು ನ್ಯಾಯಕ್ಕಾಗಿರುವ ಈ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿ ಮತ್ತು ಸಮಾಜ ಸೇವಕನಾಗಿ ನನ್ನ ಕರ್ತವ್ಯ ಪೂರ್ಣಗೊಳಿಸಲು ವಿಫಲನಾಗುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...