Homeಮುಖಪುಟಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ ಬಿಎಸ್ಪಿಯಿಂದ ಉಚ್ಛಾಟಿತ ಡ್ಯಾನಿಶ್ ಅಲಿ

ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಿದ ಬಿಎಸ್ಪಿಯಿಂದ ಉಚ್ಛಾಟಿತ ಡ್ಯಾನಿಶ್ ಅಲಿ

- Advertisement -
- Advertisement -

ಬಹುಜನ ಸಮಾಜ ಪಕ್ಷದಿಂದ (ಬಿಎಸ್‌ಪಿ) ಅಮಾನತುಗೊಂಡಿರುವ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುವುದಾಗಿ  ಪ್ರಕಟಿಸಿದ್ದು, ಏಕತೆ ಮತ್ತು ನ್ಯಾಯಕ್ಕಾಗಿರುವ ಅತಿದೊಡ್ಡ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿಯಾಗಿ ತಮ್ಮ ಕರ್ತವ್ಯದಲ್ಲಿ ವಿಫಲನಾಗುತ್ತೇನೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು ‘ಪಕ್ಷ ವಿರೋಧಿ’ ಚಟುವಟಿಕೆ ಹಿನ್ನೆಲೆ ಬಿಎಸ್‌ಪಿ ಪಕ್ಷದಿಂದ ಡ್ಯಾನಿಶ್‌ ಅಲಿ ಅವರನ್ನು ಅಮಾನತುಗೊಳಿಸಿತ್ತು. ಮಾಯಾವತಿ ನೇತೃತ್ವದ ಬಿಎಸ್‌ಪಿಯು, ಆಡಳಿತಾರೂಢ ಮೈತ್ರಿಕೂಟ ಎನ್‌ಡಿಎ ಮತ್ತು ವಿರೋಧ ಪಕ್ಷವಾದ INDIA ಮೈತ್ರಿಕೂಟದಿಂದ ಅಂತರವನ್ನು ಕಾಯ್ದುಕೊಂಡಿತ್ತು. ಆದರೆ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಡ್ಯಾನಿಶ್‌ ಅಲಿ ವಿರೋಧ ಪಕ್ಷಗಳ ಜೊತೆ ಸಕ್ರಿಯರಾಗಿದ್ದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಡ್ಯಾನಿಶ್ ಅಲಿ,  ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಸೇರಲು ನಿರ್ಧರಿಸಿದ್ದೇನೆ. ಇದು ನನಗೆ ಬಹಳ ಮುಖ್ಯವಾದ ಕ್ಷಣವಾಗಿದೆ. ನಾನು ಸಾಕಷ್ಟು ಆತ್ಮಾವಲೋಕನದ ನಂತರ ಇಲ್ಲಿಗೆ ಬಂದಿದ್ದೇನೆ. ನನ್ನ ಮುಂದೆ ಎರಡು ಆಯ್ಕೆಯಿತ್ತು. ಒಂದು ಯಥಾಸ್ಥಿತಿಯನ್ನು ಒಪ್ಪಿಕೊಳ್ಳುವುದು ಅಥವಾ ದಲಿತರು, ಹಿಂದುಳಿದವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು ಮತ್ತು ಇತರ ಅಂಚಿನಲ್ಲಿರುವ ಮತ್ತು ಬಡ ವರ್ಗಗಳ ಶೋಷಣೆಯನ್ನು ನಿರ್ಲಕ್ಷಿಸುವುದು. ಎರಡನೆಯದಾಗಿ ದೇಶದಲ್ಲಿರವ ಈ ಭಯ, ದ್ವೇಷ, ಶೋಷಣೆ ಮತ್ತು ಆಳವಾಗುತ್ತಿರುವ ವಿಭಜನೆಯ ವಾತಾವರಣದ ವಿರುದ್ಧ ಸರ್ವಾಂಗೀಣ ಅಭಿಯಾನವನ್ನು ಪ್ರಾರಂಭಿಸುವುದಾಗಿದೆ. ನನ್ನ ಆತ್ಮಸಾಕ್ಷಿಯು ಎರಡನೇ ಆಯ್ಕೆಯನ್ನು ಆಯ್ದುಕೊಳ್ಳಲು ನನ್ನನ್ನು ಪ್ರೇರೇಪಿಸಿದೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಆಡಳಿತ ಪಕ್ಷದ ಸದಸ್ಯರು ನನ್ನ ಮತ್ತು ನನ್ನ ಧರ್ಮದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದರು. 2023ರ ಸೆಪ್ಟೆಂಬರ್‌ನಲ್ಲಿ ಬಿಜೆಪಿ ಸಂಸದ ರಮೇಶ್ ಬಿಧುರಿ ಸಂಸತ್ತಿನಲ್ಲಿ ಅತ್ಯಂತ ಅವಹೇಳನಕಾರಿ ಮತ್ತು ಇಸ್ಲಾಮೋಫೋಬಿಕ್ ಭಾಷೆಯನ್ನು ಬಳಸಿದಾಗ ಅಲಿ ರಾಷ್ಟ್ರದ ಗಮನ ಸೆಳೆದಿದ್ದರು. ಈ ವಿಷಯವನ್ನು ಸಂಸದೀಯ ಸಮಿತಿ ಮುಂದಿಡಲಾಗಿತ್ತು ಮತ್ತು ಬಿಜೆಪಿ ಸಂಸದರು ಕ್ಷಮೆಯಾಚಿಸಿದ್ದರು. ಈ ಬಗ್ಗೆ ಆರೋಪಿತ ಸಂಸದರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಡ್ಯಾನಿಶ್‌ ಅಲಿ ಹೇಳಿದ್ದರು.

ನನ್ನನ್ನು ಅವಹೇಳನ ಮಾಡಿದವನಿಗೆ ಶಿಕ್ಷಿಸುವ ಬದಲು ಆಡಳಿತ ಮಂಡಳಿಯು ಅವನಿಗೆ ಬಹುಮಾನ ನೀಡಿದೆ. ನನ್ನ ಮೇಲಿನ ದಾಳಿಯು ದೇಶದಲ್ಲಿ ಭಯ ಮತ್ತು ದ್ವೇಷದ ವಾತಾವರಣವನ್ನು ಸೃಷ್ಟಿಸುವ ದೊಡ್ಡ ಯೋಜನೆಯ ಭಾಗವಾಗಿದೆ ಎಂದು ನಾನು ಅರಿತುಕೊಂಡೆ ಎಂದು ಅಲಿ ಆರೋಪಿಸಿದ್ದರು. ಆ ಸಂಕಟದ ಸಮಯದಲ್ಲಿ ನನ್ನೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ ಮತ್ತು ನನ್ನ ಮತ್ತು ನನ್ನ ಕುಟುಂಬದ ಪರವಾಗಿ ನಿಂತ ಮೊದಲ ನಾಯಕ ರಾಹುಲ್ ಗಾಂಧಿ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರ ಯಾತ್ರೆಯ ಉದ್ದೇಶವು ಅಂಚಿನಲ್ಲಿರುವವರಿಗೆ ಮತ್ತು ಶೋಷಿತ ವರ್ಗಗಳಿಗೆ ನ್ಯಾಯ ದೊರಕಿಸುವುದಾಗಿದೆ. ಈ ಯಾತ್ರೆಯು ನಮ್ಮ ದೇಶದ ಜನರನ್ನು ಭಯ, ದ್ವೇಷ, ಶೋಷಣೆ ಮತ್ತು ವಿಭಜನೆಯ ವಿರುದ್ಧ ಒಗ್ಗೂಡಿಸುವ ಒಂದು ಕಾರ್ಯದ ಭಾಗವಾಗಿದೆ. ನಾನು ಈ ಯಾತ್ರೆಯಲ್ಲಿ ಸೇರಲು ನಿರ್ಧರಿಸಿದೆ ಏಕೆಂದರೆ ನಾನು ಏಕತೆ ಮತ್ತು ನ್ಯಾಯಕ್ಕಾಗಿರುವ ಈ ಯಾತ್ರೆಯಲ್ಲಿ ಭಾಗವಹಿಸದಿದ್ದರೆ ರಾಜಕಾರಣಿ ಮತ್ತು ಸಮಾಜ ಸೇವಕನಾಗಿ ನನ್ನ ಕರ್ತವ್ಯ ಪೂರ್ಣಗೊಳಿಸಲು ವಿಫಲನಾಗುತ್ತೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...