Homeಮುಖಪುಟಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿದ್ದ ಸಂಸದ ಡ್ಯಾನಿಶ್ ಅಲೀ ಕಾಂಗ್ರೆಸ್ ಸೇರ್ಪಡೆ

ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿದ್ದ ಸಂಸದ ಡ್ಯಾನಿಶ್ ಅಲೀ ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ಯಿಂದ ಉಚ್ಚಾಟನೆಗೊಂಡಿದ್ದ ಲೋಕಸಭೆ ಸಂಸದ ಡ್ಯಾನಿಶ್‌ ಅಲೀ ಬುಧವಾರ ದೆಹಲಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅಲೀ, ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿದ್ದರು.

ಮಣಿಪುರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುವ ಮೂಲಕ ಅಲೀ ಅವರು ಕಾಂಗ್ರೆಸ್ ಸೇರುವ ಮುನ್ಸೂಚನೆ ನೀಡಿದ್ದರು. ಭಾರತ್ ಜೋಡೋ ಯಾತ್ರೆ ವೇಳೆ ತೌಬಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದ ಅಲೀ, “ರಾಜಕಾರಣಿಯಾಗಿ ‘ಏಕತೆ ಮತ್ತು ನ್ಯಾಯಕ್ಕಾಗಿ’ ನಡೆಯುತ್ತಿರುವ ಈ ಯಾತ್ರೆಯಲ್ಲಿ ಪಾಲ್ಗೊಳ್ಳುವುದು ನನ್ನ ಕರ್ತವ್ಯ” ಎಂದಿದ್ದರು.

ತನ್ನ ಕ್ಷೇತ್ರದ ಅಮ್ರೋಹದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ಉಸ್ತುವಾರಿಯನ್ನು ಸ್ವತಃ ಅಲೀ ಅವರೇ ವಹಿಸಿದ್ದರು. ಈ ಬೆನ್ನಲ್ಲೇ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಅವರನ್ನು ಬಿಎಸ್‌ಪಿಯಿಂದ ಉಚ್ಚಾಟಿಸಲಾಗಿತ್ತು.

ಅಲೀ ಅವರು 2018 ರವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದ ಜಾತ್ಯಾತೀತ ಜನತಾದಳದ (ಜೆಡಿಎಸ್) ಜೊತೆ ಗುರುತಿಸಿಕೊಂಡಿದ್ದರು. 2018ರ ಕರ್ನಾಟಕ ಚುನಾವಣೆಯಲ್ಲಿ ಅಲೀ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಬಿಎಸ್ಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿ ಹಿನ್ನೆಲೆ, ದೇವೇಗೌಡರ ಶಿಫಾರಸಿನ ಮೇರೆಗೆ ಅಲೀ ಅವರನ್ನು ಬಿಎಸ್ಪಿ ಅಮ್ರೋಹಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು.

ಕಳೆದ ವರ್ಷ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಲೋಕಸಭೆಯಿಂದ ಅನರ್ಹಗೊಂಡಾಗ ಇಂಡಿಯಾ ಒಕ್ಕೂಟ ಸಂಸತ್ ಬಳಿ ಪ್ರತಿಭಟನೆ ನಡೆಸಿತ್ತು. ಬಿಎಸ್ಪಿ ಇಂಡಿಯಾ ಒಕ್ಕೂಟ ಸೇರದಿದ್ದರೂ, ಅಂದಿನ ಪ್ರತಿಭಟನೆಯಲ್ಲಿ ಡ್ಯಾನಿಶ್ ಅಲೀ ಪಾಲ್ಗೊಂಡಿದ್ದರು.

ಕಳೆದ ವರ್ಷದ ಸೆಪ್ಟೆಂಬರ್‌ 21ರಂದು ಲೋಕಸಭೆಯಲ್ಲಿ ಚಂದ್ರಯಾನ ಮಿಷನ್‌-3ರ ಯಶಸ್ಸಿನ ಕುರಿತ ಚರ್ಚೆಯ ವೇಳೆ ಬಿಜೆಪಿ ಸಂಸದ ರಮೇಶ್ ಬಿಧುರಿ ಡ್ಯಾನಿಶ್ ಅಲೀ ಅವರನ್ನು ಗುರಿಯಾಗಿಸಿ, ಭದ್ವಾ (ಪಿಂಪ್), ಕತ್ವಾ (ಮುಂಜಿ ಮಾಡಿಸಿಕೊಂಡವರು) ಮುಲ್ಲಾ ಉಗ್ರವಾದಿ (ಮುಸ್ಲಿಂ ಭಯೋತ್ಪಾದಕ), ಅತಂಕವಾದಿ (ಭಯೋತ್ಪಾದಕ) ಇತ್ಯಾದಿ ಅಸಂಸದೀಯ ಪದಗಳನ್ನು ಬಳಸಿ ನಿಂದಿಸಿದ್ದರು. ಕೋಮುವಾದಿ ಭಾಷಣ ಮಾಡಿದ್ದರು. ಇದಕ್ಕೆ ದೇಶದಾದ್ಯಂತ ಭಾರೀ ಖಂಡನೆ ವ್ಯಕ್ತವಾಗಿತ್ತು.

ಬಿಧುರಿ ಹೇಳಿಕೆಗೆ ಲೋಕಸಭೆಯಲ್ಲಿ ಅಂದೇ ವಿಷಾದ ವ್ಯಕ್ತಪಡಿಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದರ ಹೇಳಿಕೆಯಿಂದ ಪ್ರತಿಪಕ್ಷದ ಸದಸ್ಯರ ಮನಸ್ಸಿಗೆ ನೋವಾಗಿದ್ದರೆ ಸಂಸದ ಹೇಳಿಕೆಯನ್ನು ಕಡತಗಳಿಂದ ತೆಗೆದು ಹಾಕಲು ನಾನು ಸ್ಪೀಕರ್‌ಗೆ ಆಗ್ರಹಿಸುತ್ತೇನೆ ಎಂದಿದ್ದರು. ಇದಕ್ಕೆ ಪ್ರತಿಪಕ್ಷ ಸದಸ್ಯರು ಮೇಜು ತಟ್ಟಿ ಬೆಂಬಲ ವ್ಯಕ್ತಪಡಿಸಿದ್ದರು.

ಬಳಿಕ ರಮೇಶ್ ಬಿಧುರಿ ಲೋಕಸಭೆಯ ಹಕ್ಕು ಬಾಧ್ಯತಾ ಸಮಿತಿ ಮುಂದೆ ಕ್ಷಮೆ ಯಾಚಿಸಿದ್ದರು. ಅಲ್ಲಿಗೆ ಪ್ರಕರಣ ಇತ್ಯರ್ಥಗೊಂಡಿತ್ತು.

ಇದನ್ನೂ ಓದಿ : ನಿನ್ನೆ ತೆಲಂಗಾಣ ಗವರ್ನರ್ ಸ್ಥಾನಕ್ಕೆ ರಾಜೀನಾಮೆ; ಇಂದು ಪುನಃ ಬಿಜೆಪಿ ಸೇರಿದ ತಮಿಳಿಸೈ ಸೌಂದರರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...