Homeಮುಖಪುಟಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

ಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

- Advertisement -
- Advertisement -

ಪ.ಬಂಗಾಳ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿಸಿ ಹೈಡ್ರಾಮ ಮಾಡಿದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಬಿಜೆಪಿ ಶಾಸಕರನ್ನು ಸ್ಪೀಕರ್‌ ಅಮಾನತು ಮಾಡಿದ್ದಾರೆ.

ಭೂ ಕಬಳಿಕೆ ಆರೋಪದ ಮೇಲೆ ಟಿಎಂಸಿ ನಾಯಕ ಶಹಜಹಾನ್ ಶೇಖ್ ಮತ್ತು ಅವರ ಇಬ್ಬರು ಸಹಾಯಕರನ್ನು ಬಂಧಿಸುವಂತೆ ಕೋರಿ ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ ಬಿಜೆಪಿ ಬೆಂಬಲಿತರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಇದೇ ಘಟನೆ ಬಗ್ಗೆ ಪಶ್ಚಿಮ ಬಂಗಾಳ ವಿಧಾನಸಭೆಗೆ ಎಳೆದು ತಂದು ಸುವೇಂದು ಅಧಿಕಾರಿ ಸೇರಿದಂತೆ ಬಿಜೆಪಿ ಶಾಸಕರು ಸದನದಲ್ಲಿ ಗದ್ದಲ ಸೃಷ್ಟಿಸಿ ಸದನದ ಕಲಾಪಕ್ಕೆ ಅಡ್ಡಿ ಉಂಟು ಮಾಡಿದ್ದರು.

ಬಂಗಾಳ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಜೊತೆಗೆ ಮಿಹಿರ್ ಗೋಸ್ವಾಮಿ, ಶಂಕರ್ ಘೋಷ್, ತಾಪಸಿ ಮೊಂಡೋಲ್, ಅಗ್ನಿಮಿತ್ರ ಪಾಲ್ ಮತ್ತು ಬಂಕಿಮ್ ಘೋಷ್ ಅವರನ್ನು ಅಮಾನತು ಮಾಡಲಾಗಿದೆ.

ಸೋಮವಾರ ಬೆಳಿಗ್ಗೆ ಬಿಜೆಪಿಯ ಎಲ್ಲ ಶಾಸಕರು ಟೀ ಶರ್ಟ್‌ ಧರಿಸಿಕೊಂಡು ಅಧಿವೇಶನಕ್ಕೆ ಬಂದಿದ್ದು, ‘ನಾವು ಸಂದೇಶ ಖಾಲಿ ಜೊತೆಗಿದ್ದೇವೆ’ ಎಂದು ಅದರಲ್ಲಿ ಬರೆಯಲಾಗಿತ್ತು, ಘಟನೆಯ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸದನದಲ್ಲಿ ಮಾತನಾಡಬೇಕು ಎಂದು ಬಿಜೆಪಿ ಶಾಸಕರು ಒತ್ತಾಯಿಸಿದ್ದರು.

ಟಿ-ಶರ್ಟ್‌ಗಳನ್ನು ನೋಡಿದ ಸ್ಪೀಕರ್ ಬಿಮನ್ ಬ್ಯಾನರ್ಜಿ, ಅದನ್ನು ತೆಗೆಯಲು ವಿರೋಧ ಪಕ್ಷದ ಶಾಸಕರಿಗೆ ನಿರ್ದೇಶನ ನೀಡುವಂತೆ ಸುವೇಂದು ಅಧಿಕಾರಿಗೆ ಮನವಿ ಮಾಡಿದ್ದಾರೆ, ಆದರೆ ಅವರು ನಿರಾಕರಿಸಿದ್ದರು. ಟೀ-ಶರ್ಟ್‌ಗಳ ಮೇಲೆ ಆಕ್ಷೇಪಾರ್ಹವಾದ ಪದಗಳನ್ನು ಬರೆಯಲಾಗಿಲ್ಲವಾದ್ದರಿಂದ ಅವುಗಳನ್ನು ಏಕೆ ತೆಗೆಯಬೇಕು ಎಂದು ಸುವೇಂದು ಅಧಿಕಾರಿ ಕೇಳಿದ್ದರು. ನಂತರ ಸ್ಪೀಕರ್‌ ಮನವಿಯನ್ನು ಧಿಕ್ಕರಿಸಿ ಸದನದ ಬಾವಿಯ ಕೆಳಗೆ ಕುಳಿತು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಇದರಿಂದ ಸ್ಪೀಕರ್ ಆರು ಶಾಸಕರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಏನಿದು ಘಟನೆ?

ಫೆಬ್ರವರಿ 10ರಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದೆ. ಪಡಿತರ ಹಗರಣದಲ್ಲಿ ತಲೆ ಮರೆಸಿಕೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಮತ್ತು ಅವರ ಸಹಚರರನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯ ಮಹಿಳೆಯರು ಮೆರವಣಿಗೆ ನಡೆಸಿದ್ದರು. ಜಾರಿ ನಿರ್ದೇಶನಾಲಯ ತಂಡವು ಷಹಜಹಾನ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ಮಾಡಲು ಹೋದಾಗ ಅವರ ಮೇಲೆ ಹಲ್ಲೆ ಕೂಡ ನಡೆದಿತ್ತು.

ಸ್ಥಳೀಯ ಮಹಿಳೆಯರ ಮೆರವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸಂದೇಶ ಖಾಲಿಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಶೇಖ್ ಷಹಜಹಾನ್ ಮತ್ತು ಅವರ ತಂಡದ ಸದಸ್ಯರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಕೂಡ ಪ್ರತಿಭಟನಾನಿರತರು ಆರೋಪಿಸಿದ್ದರು. ಈ ಬಗ್ಗೆ ಬಿಜೆಪಿ ಶಾಸಕರು ಸದನದಲ್ಲಿ ಗದ್ದಲವನ್ನುಂಟುಮಾಡಿದ್ದು, ಅವರನ್ನು ಸ್ಪೀಕರ್‌ ಅಮಾನತು ಮಾಡಿದ್ದಾರೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...