Homeಮುಖಪುಟಅಮಾನತುಗೊಂಡ ಸಂಸದರು ಸಂಸತ್ತಿನ ಚೇಂಬರ್, ಲಾಬಿ, ಗ್ಯಾಲರಿಗಳಿಗೆ ಪ್ರವೇಶಿಸದಂತೆ ನಿರ್ಬಂಧ

ಅಮಾನತುಗೊಂಡ ಸಂಸದರು ಸಂಸತ್ತಿನ ಚೇಂಬರ್, ಲಾಬಿ, ಗ್ಯಾಲರಿಗಳಿಗೆ ಪ್ರವೇಶಿಸದಂತೆ ನಿರ್ಬಂಧ

- Advertisement -
- Advertisement -

ಚಳಿಗಾಲದ ಅಧಿವೇಶನ ವೇಳೆ ಡಿಸೆಂಬರ್ 14ರಿಂದ 19ರವರೆಗೆ ಸಂಸತ್‌ನಿಂದ ಅಮಾನತ್ತಾದ ಪ್ರತಿಪಕ್ಷಗಳ 141 ಸಂಸದರಿಗೆ ಲೋಕಸಭೆಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

ಈ ಸುತ್ತೋಲೆಯ ಪ್ರಕಾರ, ಅಮಾನತುಗೊಂಡ ಸಂಸದರು, ಸಂಸತ್‌ ಭವನದ ಚೇಂಬರ್, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

“ಅಮಾನತುಗೊಂಡ ಸಂಸದರು ಸಂಸತ್ ಭವನದ ಚೇಂಬರ್, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸುವಂತಿಲ್ಲ. ಅವರು ಸದಸ್ಯರಾಗಿರುವ ಸಂಸದೀಯ ಸಮಿತಿಗಳ ಸಭೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಅಮಾನತುಗೊಂಡವರ ಯಾವುದೇ ವಿಷಯಗಳು ಸಂಸತ್‌ನ ವ್ಯವಹಾರ ಪಟ್ಟಿಯಲ್ಲಿ ಇರುವುದಿಲ್ಲ” ಎಂದು ಲೋಕಸಭೆಯ ಕಾರ್ಯದರ್ಶಿಯ ಸುತ್ತೋಲೆ ಹೇಳಿದೆ.

“ಅಮಾನತು ಅವಧಿಯಲ್ಲಿ ಸಂಸದರು ಮಂಡಿಸಿದ ಯಾವುದೇ ಸೂಚನೆಗಳು ಸ್ವೀಕಾರಾರ್ಹವಲ್ಲ. ಸಮಿತಿಗಳ ಚುನಾವಣೆಯಲ್ಲಿ ಮತ ಹಾಕುವಂತಿಲ್ಲ. ಅಧಿವೇಶನದ ಉಳಿದ ಅವಧಿಗೆ ಸದನದ ಸೇವೆಯಿಂದ ಅಮಾನತುಗೊಂಡರೆ ಅಮಾನತು ಅವಧಿಯ ದೈನಂದಿನ ಭತ್ಯೆಗೆ ಅವರು ಅರ್ಹರಾಗಿರುವುದಿಲ್ಲ. ಏಕೆಂದರೆ, 1954 ರ ಭತ್ಯೆಗಳು ಮತ್ತು ಪಿಂಚಣಿಗಳ ಸಂಸತ್ತಿನ ಕಾಯ್ದೆ ಪ್ರಕಾರ, ಅಮಾನತುಗೊಂಡ ಸಂಸದರು ಕರ್ತವ್ಯದ ಸ್ಥಳದಲ್ಲಿ ಇರುವುದನ್ನು ಸೆಕ್ಷನ್ 2(ಡಿ) ಅಡಿಯಲ್ಲಿ ಕರ್ತವ್ಯದ ನಿವಾಸವೆಂದು ಪರಿಗಣಿಸಲಾಗುವುದಿಲ್ಲ” ಎಂದು ಸುತ್ತೋಲೆ ತಿಳಿಸಿದೆ.

ದೇಶವ್ಯಾಪಿ ಪ್ರತಿಭಟನೆ: ಮಲ್ಲಿಕಾರ್ಜುನ ಖರ್ಗೆ

ಸಂಸತ್‌ನಿಂದ ಅತ್ಯಧಿಕ ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಇಂಡಿಯಾ ಒಕ್ಕೂಟ ಡಿಸೆಂಬರ್ 22ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇಂಡಿಯಾ ಒಕ್ಕೂಟದ ಸಭೆಯಲ್ಲಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಂಸದರನ್ನು ಅಮಾನತು ಮಾಡಿರುವುದು ತಪ್ಪು. ಇದರ ವಿರುದ್ದ ನಾವು ಡಿ.22ರಂದು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತೇವೆ. ಸರ್ವಾಧಿಕಾರಿ ಧೋರಣೆಯ ವಿರುದ್ಧ ನಾವು ಹೋರಾಡುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಡಿಸೆಂಬರ್ 14ರಿಂದ 18ರವರೆಗೆ ಸಂಸತ್ತಿನ ಉಭಯ ಸದನಗಳಿಂದ ಒಟ್ಟು 141 ಸಂಸದರನ್ನು ಅಮಾನತು ಮಾಡಲಾಗಿದೆ.

ಡಿಸೆಂಬರ್ 14ರಂದು ರಾಜ್ಯಸಭೆಯ ಒಬ್ಬರು ಮತ್ತು ಲೋಕಸಭೆಯ 13 ಜನರು ಸೇರಿ ಒಟ್ಟು 14 ಸಂಸದರನ್ನು ಅಮಾನತು ಮಾಡಲಾಗಿತ್ತು. ಡಿ.18 ಸೋಮವಾರ ರಾಜ್ಯಸಭೆಯಿಂದ 45 ಮತ್ತು ಲೋಕಸಭೆಯಿಂದ 33 ಸಂಸದರು ಸೇರಿ 78 ಮಂದಿಯನ್ನು ಅಮಾನತು ಮಾಡಲಾಗಿತ್ತು. ಈ ಮೂಲಕ ಅಮಾನತ್ತಾದ ಒಟ್ಟು ಸಂಸದರ ಸಂಖ್ಯೆ 92 ಆಗಿತ್ತು. ನಿನ್ನೆ(ಡಿ.19) ಉಭಯ ಸದನಗಳಿಂದ 49 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ಅಮಾನತ್ತಾದ ಸಂಸದರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ.

ಡಿ.13ರಂದು ಸಂಸತ್‌ನಲ್ಲಿ ಸಂಭವಿಸಿದ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸಿದ್ದಕ್ಕೆ ಸ್ಪೀಕರ್ ಕ್ರಮ ಕೈಗೊಂಡಿದ್ದಾರೆ.

ಗೃಹ ಸಚಿವರ ಹೇಳಿಕೆ ನೀಡುವಂತೆ ಪ್ರತಿಪಕ್ಷಗಳ ಬೇಡಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, “ಸಂಸತ್ತಿನ ಒಳಗಿನ ಭದ್ರತೆಯು ಸೆಕ್ರೆಟರಿಯೇಟ್ ವ್ಯಾಪ್ತಿಗೆ ಒಳಪಟ್ಟಿದೆ. ಕೇಂದ್ರವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

ಡಿ.13ರಂದು ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿದ್ದರು. 2001ರ ಸಂಸತ್ ದಾಳಿಯ 22ನೇ ವರ್ಷದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ 6 ಮಂದಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಂಸತ್‌ನಿಂದ ಮತ್ತೆ 49 ಸಂಸದರ ಅಮಾನತು: ಒಟ್ಟು ಸಂಖ್ಯೆ 141ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...