Homeಮುಖಪುಟಅಮಾನತುಗೊಂಡ ಸಂಸದರು ಸಂಸತ್ತಿನ ಚೇಂಬರ್, ಲಾಬಿ, ಗ್ಯಾಲರಿಗಳಿಗೆ ಪ್ರವೇಶಿಸದಂತೆ ನಿರ್ಬಂಧ

ಅಮಾನತುಗೊಂಡ ಸಂಸದರು ಸಂಸತ್ತಿನ ಚೇಂಬರ್, ಲಾಬಿ, ಗ್ಯಾಲರಿಗಳಿಗೆ ಪ್ರವೇಶಿಸದಂತೆ ನಿರ್ಬಂಧ

- Advertisement -
- Advertisement -

ಚಳಿಗಾಲದ ಅಧಿವೇಶನ ವೇಳೆ ಡಿಸೆಂಬರ್ 14ರಿಂದ 19ರವರೆಗೆ ಸಂಸತ್‌ನಿಂದ ಅಮಾನತ್ತಾದ ಪ್ರತಿಪಕ್ಷಗಳ 141 ಸಂಸದರಿಗೆ ಲೋಕಸಭೆಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

ಈ ಸುತ್ತೋಲೆಯ ಪ್ರಕಾರ, ಅಮಾನತುಗೊಂಡ ಸಂಸದರು, ಸಂಸತ್‌ ಭವನದ ಚೇಂಬರ್, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

“ಅಮಾನತುಗೊಂಡ ಸಂಸದರು ಸಂಸತ್ ಭವನದ ಚೇಂಬರ್, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸುವಂತಿಲ್ಲ. ಅವರು ಸದಸ್ಯರಾಗಿರುವ ಸಂಸದೀಯ ಸಮಿತಿಗಳ ಸಭೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ. ಅಮಾನತುಗೊಂಡವರ ಯಾವುದೇ ವಿಷಯಗಳು ಸಂಸತ್‌ನ ವ್ಯವಹಾರ ಪಟ್ಟಿಯಲ್ಲಿ ಇರುವುದಿಲ್ಲ” ಎಂದು ಲೋಕಸಭೆಯ ಕಾರ್ಯದರ್ಶಿಯ ಸುತ್ತೋಲೆ ಹೇಳಿದೆ.

“ಅಮಾನತು ಅವಧಿಯಲ್ಲಿ ಸಂಸದರು ಮಂಡಿಸಿದ ಯಾವುದೇ ಸೂಚನೆಗಳು ಸ್ವೀಕಾರಾರ್ಹವಲ್ಲ. ಸಮಿತಿಗಳ ಚುನಾವಣೆಯಲ್ಲಿ ಮತ ಹಾಕುವಂತಿಲ್ಲ. ಅಧಿವೇಶನದ ಉಳಿದ ಅವಧಿಗೆ ಸದನದ ಸೇವೆಯಿಂದ ಅಮಾನತುಗೊಂಡರೆ ಅಮಾನತು ಅವಧಿಯ ದೈನಂದಿನ ಭತ್ಯೆಗೆ ಅವರು ಅರ್ಹರಾಗಿರುವುದಿಲ್ಲ. ಏಕೆಂದರೆ, 1954 ರ ಭತ್ಯೆಗಳು ಮತ್ತು ಪಿಂಚಣಿಗಳ ಸಂಸತ್ತಿನ ಕಾಯ್ದೆ ಪ್ರಕಾರ, ಅಮಾನತುಗೊಂಡ ಸಂಸದರು ಕರ್ತವ್ಯದ ಸ್ಥಳದಲ್ಲಿ ಇರುವುದನ್ನು ಸೆಕ್ಷನ್ 2(ಡಿ) ಅಡಿಯಲ್ಲಿ ಕರ್ತವ್ಯದ ನಿವಾಸವೆಂದು ಪರಿಗಣಿಸಲಾಗುವುದಿಲ್ಲ” ಎಂದು ಸುತ್ತೋಲೆ ತಿಳಿಸಿದೆ.

ದೇಶವ್ಯಾಪಿ ಪ್ರತಿಭಟನೆ: ಮಲ್ಲಿಕಾರ್ಜುನ ಖರ್ಗೆ

ಸಂಸತ್‌ನಿಂದ ಅತ್ಯಧಿಕ ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಇಂಡಿಯಾ ಒಕ್ಕೂಟ ಡಿಸೆಂಬರ್ 22ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇಂಡಿಯಾ ಒಕ್ಕೂಟದ ಸಭೆಯಲ್ಲಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಂಸದರನ್ನು ಅಮಾನತು ಮಾಡಿರುವುದು ತಪ್ಪು. ಇದರ ವಿರುದ್ದ ನಾವು ಡಿ.22ರಂದು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತೇವೆ. ಸರ್ವಾಧಿಕಾರಿ ಧೋರಣೆಯ ವಿರುದ್ಧ ನಾವು ಹೋರಾಡುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಡಿಸೆಂಬರ್ 14ರಿಂದ 18ರವರೆಗೆ ಸಂಸತ್ತಿನ ಉಭಯ ಸದನಗಳಿಂದ ಒಟ್ಟು 141 ಸಂಸದರನ್ನು ಅಮಾನತು ಮಾಡಲಾಗಿದೆ.

ಡಿಸೆಂಬರ್ 14ರಂದು ರಾಜ್ಯಸಭೆಯ ಒಬ್ಬರು ಮತ್ತು ಲೋಕಸಭೆಯ 13 ಜನರು ಸೇರಿ ಒಟ್ಟು 14 ಸಂಸದರನ್ನು ಅಮಾನತು ಮಾಡಲಾಗಿತ್ತು. ಡಿ.18 ಸೋಮವಾರ ರಾಜ್ಯಸಭೆಯಿಂದ 45 ಮತ್ತು ಲೋಕಸಭೆಯಿಂದ 33 ಸಂಸದರು ಸೇರಿ 78 ಮಂದಿಯನ್ನು ಅಮಾನತು ಮಾಡಲಾಗಿತ್ತು. ಈ ಮೂಲಕ ಅಮಾನತ್ತಾದ ಒಟ್ಟು ಸಂಸದರ ಸಂಖ್ಯೆ 92 ಆಗಿತ್ತು. ನಿನ್ನೆ(ಡಿ.19) ಉಭಯ ಸದನಗಳಿಂದ 49 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ಅಮಾನತ್ತಾದ ಸಂಸದರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ.

ಡಿ.13ರಂದು ಸಂಸತ್‌ನಲ್ಲಿ ಸಂಭವಿಸಿದ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸಿದ್ದಕ್ಕೆ ಸ್ಪೀಕರ್ ಕ್ರಮ ಕೈಗೊಂಡಿದ್ದಾರೆ.

ಗೃಹ ಸಚಿವರ ಹೇಳಿಕೆ ನೀಡುವಂತೆ ಪ್ರತಿಪಕ್ಷಗಳ ಬೇಡಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, “ಸಂಸತ್ತಿನ ಒಳಗಿನ ಭದ್ರತೆಯು ಸೆಕ್ರೆಟರಿಯೇಟ್ ವ್ಯಾಪ್ತಿಗೆ ಒಳಪಟ್ಟಿದೆ. ಕೇಂದ್ರವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

ಡಿ.13ರಂದು ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿದ್ದರು. 2001ರ ಸಂಸತ್ ದಾಳಿಯ 22ನೇ ವರ್ಷದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ 6 ಮಂದಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸಂಸತ್‌ನಿಂದ ಮತ್ತೆ 49 ಸಂಸದರ ಅಮಾನತು: ಒಟ್ಟು ಸಂಖ್ಯೆ 141ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...