Homeಮುಖಪುಟವಿದ್ಯಾರ್ಥಿಯನ್ನು ಕಸಬ್ ಎಂದು ಕರೆದು ಅಮಾನತ್ತಾಗಿದ್ದ ಪ್ರಾಧ್ಯಾಪಕ ಮರಳಿ ಕಾಲೇಜಿಗೆ; ಉಳಿದವರು ಪಾಠ ಕಲಿಯುವರೆ?

ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದು ಅಮಾನತ್ತಾಗಿದ್ದ ಪ್ರಾಧ್ಯಾಪಕ ಮರಳಿ ಕಾಲೇಜಿಗೆ; ಉಳಿದವರು ಪಾಠ ಕಲಿಯುವರೆ?

- Advertisement -
- Advertisement -

ಮುಸ್ಲಿಂ ವಿದ್ಯಾರ್ಥಿಯೊಬ್ಬರನ್ನು ಕಸಬ್ ಎಂದು ಕರೆದು ಭಯೋತ್ಪಾದಕರಿಗೆ ಹೋಲಿಸುವ ಮೂಲಕ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿ ಅಮಾನತ್ತಾಗಿದ್ದ ಉಡುಪಿ ಜಿಲ್ಲೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ರವೀಂದ್ರನಾಥ್ ತಮ್ಮ ಕೆಲಸಕ್ಕೆ ಮರಳಿದ್ದಾರೆ.  ಆದರೆ ಅವರಿಗಿನ್ನೂ ಪಾಠ ಮಾಡಲು ಅವಕಾಶ ಕೊಟ್ಟಿಲ್ಲ ಎನ್ನಲಾಗಿದೆ.

ಪ್ರಾಧ್ಯಾಪಕನ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅವರೀಗ ಉತ್ತಮ ಮನಸ್ಥಿತಿಯಲ್ಲಿದ್ದಾರೆ. ವಿದ್ಯಾರ್ಥಿಯು ಸಹ ರಾಜಿ ಮಾಡಿಕೊಂಡಿದ್ದು, ಪ್ರಾಧ್ಯಾಪಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಬಯಸಲಿಲ್ಲ. ಹಾಗಾಗಿ ಪ್ರಕರಣ ಅಂತ್ಯಗೊಳಿಸಲಾಗಿದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಉಪಕುಲಪತಿಗಳ ಹೇಳಿಕೆ ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ತರಗತಿಯೊಳಗೆ ಎಲ್ಲಾ ವಿದ್ಯಾರ್ಥಿಗಳ ಎದುರು ಮುಸ್ಲಿಂ ವಿದ್ಯಾರ್ಥಿಯ ಹೆಸರು ಕೇಳಿದಾಕ್ಷಣ ಒಹ್ ನೀನು ಕಸಬ್ ಎಂದು ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಕರೆದಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿಯು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಆಕ್ಷೇಪ ವ್ಯಕ್ತಪಡಿಸಿ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

“ಸರ್ ನೀವು ನನ್ನನ್ನು ಭಯೋತ್ಪಾದಕ ಎಂದು ಹೇಗೆ ಕರೆಯುತ್ತೀರಿ? ಒಂದು ಧರ್ಮವನ್ನು ಹೇಗೆ ಭಯೋತ್ಪಾದನೆಗೆ ತಳುಕು ಹಾಕುತ್ತೀರಿ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಪ್ರಾಧ್ಯಾಪಕ ನೀನು ನನ್ನ ಮಗನಿದ್ದಂತೆ ಎಂದಿದ್ದಾರೆ. ನೀವು ನಿಮ್ಮ ಮಗನನ್ನು ಹೀಗೆ ಕರೆಯುತ್ತೀರಾ? ಆತನನ್ನೂ ಭಯೋತ್ಪಾದಕ ಎಂದು ಕರೆಯುತ್ತೀರಾ, ಇಲ್ಲವೆಂದ ಮೇಲೆ ನನ್ನನ್ನು ಹೇಗೆ ಕರೆದಿರಿ? ಅದು ಇಷ್ಟು ಜನರ ಮುಂದೆ ಎಂದು ವಿದ್ಯಾರ್ಥಿ ಮರುಪ್ರಶ್ನಿಸಿದ್ದಾರೆ.

ಇದು ತಮಾಷೆ ಎಂದಾಗ, ಇಲ್ಲ ಸರ್ ಇದು ತಮಾಷೆಯಲ್ಲ. 26/11 ಭಯೋತ್ಪಾದನಾ ಪ್ರಕರಣವು ತಮಾಷೆಯಲ್ಲ. ಒಬ್ಬ ಮಸ್ಲಿಮನಾಗಿ ನಾನು ಇದನ್ನು ಪ್ರತಿನಿತ್ಯ ಎದುರಿಸುತ್ತಿದ್ದೇನೆ. ಹಾಗಾಗಿ ಇದು ತಮಾಷೆಯ ವಿಷಯವಲ್ಲ. ನೀವು ಪ್ರಾಧ್ಯಾಪಕರು. ನಮಗೆ ಪಾಠ ಮಾಡುತ್ತೀರಿ. ನನ್ನನ್ನು ಹಾಗೆ ಕರೆಯುವ ಹಾಗಿಲ್ಲ ಎಂದು ವಿದ್ಯಾರ್ಥಿ ವಾದಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಂತರ ಪ್ರಾಧ್ಯಾಪಕರು ಕ್ಷಮೆ ಕೇಳುತ್ತೇನೆ ಎಂದಾಗ, ನಿಮ್ಮ ಸಾರಿ ನೀವು ಏನೆಂಬುದನ್ನು ಮತ್ತು ನೀವು ಯೋಚಿಸುವ ವಿಧಾನವನ್ನು ಬದಲಿಸುವುದಿಲ್ಲ ಎಂದು ವಿದ್ಯಾರ್ಥಿ ಅಸಮಾಧಾನ ವ್ಯಕ್ತಪಡಿಸಿದ್ದರು.

ವಿವಾದ ಬಳಿಕ ಮಾತನಾಡಿರುವ ವಿದ್ಯಾರ್ಥಿಯು, “ಜನಾಂಗೀಯ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಸ್ವೀಕರಾರ್ಹನಲ್ಲದ ಭಯೋತ್ಪಾದಕ ಕಸಬ್ ಹೆಸರಿನಿಂದ ನನ್ನನ್ನು ನಾನು ಇಷ್ಟಪಡುವ ಪ್ರಾಧ್ಯಾಪಕರೆ ಕರೆದುದ್ದುದು ಬೇಸರ ತರಿಸಿತು. ಅದಕ್ಕಾಗಿ ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿದೆ. ಆನಂತರ ಅವರೊಡನೆ ಮಾತನಾಡಿದ್ದೇನೆ. ಅವರು ಕ್ಷಮೆ ಯಾಚಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ” ಎಂದಿದ್ದರು.

ಈ ಘಟನೆ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಲೇಜಿನ ವ್ಯವಸ್ಥಾಪಕ ಮಂಡಳಿಯು, “ಈ ಘಟನೆ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ ಮತ್ತು ತನಿಖೆ ಮುಗಿಯುವವರೆಗೂ ಸಂಬಂಧಿತ ಪ್ರಾಧ್ಯಾಪಕರು ತರಗತಿ ತೆಗೆದುಕೊಳ್ಳದಂತೆ ಸೂಚಿಸಿದ್ದೇವೆ. ಸಂಸ್ಥೆಯು ಈ ರೀತಿಯ ನಡವಳಿಕೆಯನ್ನು ಕ್ಷಮಿಸುವುದಿಲ್ಲ ಮತ್ತು ಈ ಪ್ರತ್ಯೇಕ ಘಟನೆಯನ್ನು ನಿಗದಿಪಡಿಸಿದ ನೀತಿಗಳಿಗೆ ಅನುಗುಣವಾಗಿ ವಿಚಾರಣೆ ನಡೆಸುತ್ತದೆ. ನಮ್ಮ ಸಂಸ್ಥೆಯು ಕ್ಯಾಂಪಸ್‌ನಲ್ಲಿ ಬಹು ವೈವಿಧ್ಯತೆಯನ್ನು ಹೆಮ್ಮೆಯೆಂದು ಭಾವಿಸುತ್ತದೆ ಮತ್ತು ಜಾತಿ, ಧರ್ಮ, ಲಿಂಗ, ಪ್ರದೇಶಗಳನ್ನು ಲೆಕ್ಕಿಸದೆ ಎಲ್ಲರನ್ನು ಸಮಾನವಾಗಿ ಪರಿಗಣಿಸುವ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ” ಎಂದು ಹೇಳಿತ್ತು.

ಇತ್ತೀಚಿಗೆ ಶಿಕ್ಷಕರೊಬ್ಬರು ಬಿಟ್ಟಿ ಭಾಗ್ಯಗಳು ಎಂದು ಸುಳ್ಳು ಸುದ್ದಿಯನ್ನು ಹರಡಿದ್ದಾಗಿ ಅಮಾನತ್ತಾಗಿದ್ದಾರೆ. ಈ ಪ್ರಾಧ್ಯಾಪಕ ಆರು ತಿಂಗಳ ನಂತರ ಕೆಲಸಕ್ಕೆ ಮರಳಿದ್ದಾರೆ. ಶಿಕ್ಷಕ ಸಮುದಾಯ ಯೋಚಿಸಿ, ಸಮಚಿತ್ತತೆಯಿಂದ ವರ್ತಿಬೇಕೆ ಹೊರತು ಪೂರ್ವಾಗ್ರಹಪೀಡಿತರಾಗಿ ಅಲ್ಲ ಎಂಬುದನ್ನು ಈ ಘಟನೆಗಳು ನಿರೂಪಿಸುತ್ತವೆ. ಉಳಿದವರೆ ಇಂತಹ ತಪ್ಪೆಸೆಗುವ ಮುನ್ನ ಇವುಗಳ ಪಾಠವಾಗಬೇಕಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನವರ ಕುರಿತು ಫೇಕ್ ನ್ಯೂಸ್ ಹಂಚಿ ಅಮಾನತ್ತಾದ ಶಿಕ್ಷಕ: ಈ ಕ್ರಮ ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...