Homeಮುಖಪುಟವಿದ್ಯಾರ್ಥಿಯನ್ನು ಕಸಬ್ ಎಂದು ಕರೆದು ಅಮಾನತ್ತಾಗಿದ್ದ ಪ್ರಾಧ್ಯಾಪಕ ಮರಳಿ ಕಾಲೇಜಿಗೆ; ಉಳಿದವರು ಪಾಠ ಕಲಿಯುವರೆ?

ವಿದ್ಯಾರ್ಥಿಯನ್ನು ಕಸಬ್ ಎಂದು ಕರೆದು ಅಮಾನತ್ತಾಗಿದ್ದ ಪ್ರಾಧ್ಯಾಪಕ ಮರಳಿ ಕಾಲೇಜಿಗೆ; ಉಳಿದವರು ಪಾಠ ಕಲಿಯುವರೆ?

- Advertisement -
- Advertisement -

ಮುಸ್ಲಿಂ ವಿದ್ಯಾರ್ಥಿಯೊಬ್ಬರನ್ನು ಕಸಬ್ ಎಂದು ಕರೆದು ಭಯೋತ್ಪಾದಕರಿಗೆ ಹೋಲಿಸುವ ಮೂಲಕ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿ ಅಮಾನತ್ತಾಗಿದ್ದ ಉಡುಪಿ ಜಿಲ್ಲೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ರವೀಂದ್ರನಾಥ್ ತಮ್ಮ ಕೆಲಸಕ್ಕೆ ಮರಳಿದ್ದಾರೆ.  ಆದರೆ ಅವರಿಗಿನ್ನೂ ಪಾಠ ಮಾಡಲು ಅವಕಾಶ ಕೊಟ್ಟಿಲ್ಲ ಎನ್ನಲಾಗಿದೆ.

ಪ್ರಾಧ್ಯಾಪಕನ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅವರೀಗ ಉತ್ತಮ ಮನಸ್ಥಿತಿಯಲ್ಲಿದ್ದಾರೆ. ವಿದ್ಯಾರ್ಥಿಯು ಸಹ ರಾಜಿ ಮಾಡಿಕೊಂಡಿದ್ದು, ಪ್ರಾಧ್ಯಾಪಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಬಯಸಲಿಲ್ಲ. ಹಾಗಾಗಿ ಪ್ರಕರಣ ಅಂತ್ಯಗೊಳಿಸಲಾಗಿದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಉಪಕುಲಪತಿಗಳ ಹೇಳಿಕೆ ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ತರಗತಿಯೊಳಗೆ ಎಲ್ಲಾ ವಿದ್ಯಾರ್ಥಿಗಳ ಎದುರು ಮುಸ್ಲಿಂ ವಿದ್ಯಾರ್ಥಿಯ ಹೆಸರು ಕೇಳಿದಾಕ್ಷಣ ಒಹ್ ನೀನು ಕಸಬ್ ಎಂದು ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಕರೆದಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿಯು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಆಕ್ಷೇಪ ವ್ಯಕ್ತಪಡಿಸಿ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

“ಸರ್ ನೀವು ನನ್ನನ್ನು ಭಯೋತ್ಪಾದಕ ಎಂದು ಹೇಗೆ ಕರೆಯುತ್ತೀರಿ? ಒಂದು ಧರ್ಮವನ್ನು ಹೇಗೆ ಭಯೋತ್ಪಾದನೆಗೆ ತಳುಕು ಹಾಕುತ್ತೀರಿ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಪ್ರಾಧ್ಯಾಪಕ ನೀನು ನನ್ನ ಮಗನಿದ್ದಂತೆ ಎಂದಿದ್ದಾರೆ. ನೀವು ನಿಮ್ಮ ಮಗನನ್ನು ಹೀಗೆ ಕರೆಯುತ್ತೀರಾ? ಆತನನ್ನೂ ಭಯೋತ್ಪಾದಕ ಎಂದು ಕರೆಯುತ್ತೀರಾ, ಇಲ್ಲವೆಂದ ಮೇಲೆ ನನ್ನನ್ನು ಹೇಗೆ ಕರೆದಿರಿ? ಅದು ಇಷ್ಟು ಜನರ ಮುಂದೆ ಎಂದು ವಿದ್ಯಾರ್ಥಿ ಮರುಪ್ರಶ್ನಿಸಿದ್ದಾರೆ.

ಇದು ತಮಾಷೆ ಎಂದಾಗ, ಇಲ್ಲ ಸರ್ ಇದು ತಮಾಷೆಯಲ್ಲ. 26/11 ಭಯೋತ್ಪಾದನಾ ಪ್ರಕರಣವು ತಮಾಷೆಯಲ್ಲ. ಒಬ್ಬ ಮಸ್ಲಿಮನಾಗಿ ನಾನು ಇದನ್ನು ಪ್ರತಿನಿತ್ಯ ಎದುರಿಸುತ್ತಿದ್ದೇನೆ. ಹಾಗಾಗಿ ಇದು ತಮಾಷೆಯ ವಿಷಯವಲ್ಲ. ನೀವು ಪ್ರಾಧ್ಯಾಪಕರು. ನಮಗೆ ಪಾಠ ಮಾಡುತ್ತೀರಿ. ನನ್ನನ್ನು ಹಾಗೆ ಕರೆಯುವ ಹಾಗಿಲ್ಲ ಎಂದು ವಿದ್ಯಾರ್ಥಿ ವಾದಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಂತರ ಪ್ರಾಧ್ಯಾಪಕರು ಕ್ಷಮೆ ಕೇಳುತ್ತೇನೆ ಎಂದಾಗ, ನಿಮ್ಮ ಸಾರಿ ನೀವು ಏನೆಂಬುದನ್ನು ಮತ್ತು ನೀವು ಯೋಚಿಸುವ ವಿಧಾನವನ್ನು ಬದಲಿಸುವುದಿಲ್ಲ ಎಂದು ವಿದ್ಯಾರ್ಥಿ ಅಸಮಾಧಾನ ವ್ಯಕ್ತಪಡಿಸಿದ್ದರು.

ವಿವಾದ ಬಳಿಕ ಮಾತನಾಡಿರುವ ವಿದ್ಯಾರ್ಥಿಯು, “ಜನಾಂಗೀಯ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಸ್ವೀಕರಾರ್ಹನಲ್ಲದ ಭಯೋತ್ಪಾದಕ ಕಸಬ್ ಹೆಸರಿನಿಂದ ನನ್ನನ್ನು ನಾನು ಇಷ್ಟಪಡುವ ಪ್ರಾಧ್ಯಾಪಕರೆ ಕರೆದುದ್ದುದು ಬೇಸರ ತರಿಸಿತು. ಅದಕ್ಕಾಗಿ ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿದೆ. ಆನಂತರ ಅವರೊಡನೆ ಮಾತನಾಡಿದ್ದೇನೆ. ಅವರು ಕ್ಷಮೆ ಯಾಚಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ” ಎಂದಿದ್ದರು.

ಈ ಘಟನೆ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಲೇಜಿನ ವ್ಯವಸ್ಥಾಪಕ ಮಂಡಳಿಯು, “ಈ ಘಟನೆ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ ಮತ್ತು ತನಿಖೆ ಮುಗಿಯುವವರೆಗೂ ಸಂಬಂಧಿತ ಪ್ರಾಧ್ಯಾಪಕರು ತರಗತಿ ತೆಗೆದುಕೊಳ್ಳದಂತೆ ಸೂಚಿಸಿದ್ದೇವೆ. ಸಂಸ್ಥೆಯು ಈ ರೀತಿಯ ನಡವಳಿಕೆಯನ್ನು ಕ್ಷಮಿಸುವುದಿಲ್ಲ ಮತ್ತು ಈ ಪ್ರತ್ಯೇಕ ಘಟನೆಯನ್ನು ನಿಗದಿಪಡಿಸಿದ ನೀತಿಗಳಿಗೆ ಅನುಗುಣವಾಗಿ ವಿಚಾರಣೆ ನಡೆಸುತ್ತದೆ. ನಮ್ಮ ಸಂಸ್ಥೆಯು ಕ್ಯಾಂಪಸ್‌ನಲ್ಲಿ ಬಹು ವೈವಿಧ್ಯತೆಯನ್ನು ಹೆಮ್ಮೆಯೆಂದು ಭಾವಿಸುತ್ತದೆ ಮತ್ತು ಜಾತಿ, ಧರ್ಮ, ಲಿಂಗ, ಪ್ರದೇಶಗಳನ್ನು ಲೆಕ್ಕಿಸದೆ ಎಲ್ಲರನ್ನು ಸಮಾನವಾಗಿ ಪರಿಗಣಿಸುವ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ” ಎಂದು ಹೇಳಿತ್ತು.

ಇತ್ತೀಚಿಗೆ ಶಿಕ್ಷಕರೊಬ್ಬರು ಬಿಟ್ಟಿ ಭಾಗ್ಯಗಳು ಎಂದು ಸುಳ್ಳು ಸುದ್ದಿಯನ್ನು ಹರಡಿದ್ದಾಗಿ ಅಮಾನತ್ತಾಗಿದ್ದಾರೆ. ಈ ಪ್ರಾಧ್ಯಾಪಕ ಆರು ತಿಂಗಳ ನಂತರ ಕೆಲಸಕ್ಕೆ ಮರಳಿದ್ದಾರೆ. ಶಿಕ್ಷಕ ಸಮುದಾಯ ಯೋಚಿಸಿ, ಸಮಚಿತ್ತತೆಯಿಂದ ವರ್ತಿಬೇಕೆ ಹೊರತು ಪೂರ್ವಾಗ್ರಹಪೀಡಿತರಾಗಿ ಅಲ್ಲ ಎಂಬುದನ್ನು ಈ ಘಟನೆಗಳು ನಿರೂಪಿಸುತ್ತವೆ. ಉಳಿದವರೆ ಇಂತಹ ತಪ್ಪೆಸೆಗುವ ಮುನ್ನ ಇವುಗಳ ಪಾಠವಾಗಬೇಕಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನವರ ಕುರಿತು ಫೇಕ್ ನ್ಯೂಸ್ ಹಂಚಿ ಅಮಾನತ್ತಾದ ಶಿಕ್ಷಕ: ಈ ಕ್ರಮ ಸರಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...