Homeಮುಖಪುಟಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಸ್ಥಗಿತ: ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಖಂಡನೆ

ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಸ್ಥಗಿತ: ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಖಂಡನೆ

- Advertisement -
- Advertisement -

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಹಲವು ದಶಕಗಳಿಂದ ಜಾರಿಯಲ್ಲಿದ್ದ ಮೆಟ್ರಿಕ್‌-ಪೂರ್ವ ವಿದ್ಯಾರ್ಥಿವೇತನವನ್ನು ನಿಲ್ಲಿಸಿರುವ ಕೇಂದ್ರ ಸರ್ಕಾರ ಈಗ, ಅಲ್ಪ ಸಂಖ್ಯಾತ ವರ್ಗದ ಮಕ್ಕಳು ಉನ್ನತ ಶಿಕ್ಷಣ ಮುಂದುವರಿಸಲು ನೀಡಲಾಗುತ್ತಿದ್ದ ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ (ಎಂಎಎನ್‌ಎಫ್‌) ಸ್ಥಗಿತಗೊಳಿಸುವ ತೀರ್ಮಾನವನ್ನೂ ಪ್ರಕಟಿಸಿದೆ. ಇದು ಅತ್ಯಂತ ಖಂಡನೀಯ ನಡೆ ಎಂದು ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಮಹಾಪೋಷಕರಾದ ವಿ.ಪಿ.ನಿರಂಜನಾರಾಧ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೀಸಲಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ನಿಲ್ಲಿಸುವ ಮೂಲಕ ಸಂವಿಧಾನದ ಪರಿಚ್ಚೇಧ 21ಎ ಅನ್ವಯ ಕೊಡಮಾಡಿರುವ ಶಿಕ್ಷಣದ ಮೂಲಭೂತ ಹಕ್ಕನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಉನ್ನತ ಶಿಕ್ಷಣದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅವಕಾಶವನ್ನು ಒದಗಿಸಲು ಸಾರ್ವತ್ರಿಕ ಮಾನವ ಹಕ್ಕುಗಳ ಘೋಷಣೆ 1948ರ ಪರಿಚ್ಚೇಧ 26ರ ಅನ್ವಯ ಹಾಗೂ ಭಾರತದಲ್ಲಿ ಮುಸ್ಲಿಮರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅಧ್ಯಯನ ಮಾಡಲಾಗಿದೆ. ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಿದ್ದ ಫೆಲೋಶಿಪ್‌ ಅವಕಾಶವನ್ನು ಕಸಿಯಲಾಗಿದೆ. ದೆಹಲಿಯ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಸಾಚಾರ್ ಸಮಿತಿಯ ಶಿಫಾರಸ್ಸಿನ ಅನ್ವಯ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಿದ್ದ ಫೆಲೋಶಿಪ್‌ ನಿಲ್ಲಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಅಲ್ಪ ಸಂಖ್ಯಾತ ವರ್ಗದ ಶಿಕ್ಷಣ ದಯನೀಯ ಪರಿಸ್ಥಿತಿಯಲ್ಲಿದೆ ಎಂದು ನ್ಯಾಯಮೂರ್ತಿ ಸಾಚಾರ್ ಸಮಿತಿಯ ವರದಿ ತಿಳಿಸಿತ್ತು. ಎಂಎಎನ್‌ಎಫ್‌ ಪ್ರಾರಂಭಿಸಿತ್ತು. ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ್ದ ಸ್ನಾತಕೋತ್ತರ ಮತ್ತು ಪಿಎಚ್‌.ಡಿ ಪದವಿಗಳನ್ನು ಒಳಗೊಂಡಂತೆ ಉನ್ನತ ಶಿಕ್ಷಣವನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ವಿದ್ಯಾರ್ಥಿವೇತನ ಕಾರ್ಯಕ್ರಮ ಇದಾಗಿತ್ತು ಎಂದು ನಿರಂಜನಾರಾಧ್ಯ ವಿವರಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಮತ್ತು ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಹೆಸರನ್ನು ಈ ವಿದ್ಯಾರ್ಥಿವೇತನಕ್ಕೆ ಇಡಲಾಗಿತ್ತು. ಈ ಫೆಲೋಶಿಪ್ ವಿದ್ಯಾರ್ಥಿಗಳ ಬೋಧನಾ ಶುಲ್ಕ, ಹಾಸ್ಟೆಲ್ ಸೌಕರ್ಯಗಳು ಮತ್ತು ಇತರ ಶೈಕ್ಷಣಿಕ ವೆಚ್ಚಗಳ ವೆಚ್ಚವನ್ನು ಒಳಗೊಂಡಿದ್ದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದಿಂದ ನಿರ್ವಹಿಸಲ್ಪಡುತ್ತಿತ್ತು. ಆರ್ಥಿಕ ಸ್ಥಿತಿಯ ವಿಷಯದಲ್ಲಿ ಅತ್ಯಂತ ಹಿಂದುಳಿದಿದ್ದ ಈ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಗಳ ವ್ಯಾಪ್ತಿಯಿಂದ ಹೊರಗಿದ್ದರು. ಸಾಚಾರ್‌ ಸಮಿತಿಯು ಉನ್ನತ ಶಿಕ್ಷಣದಲ್ಲಿ ಅಲ್ಪಸಂಖ್ಯಾತ ಸಮುದಾಯ ಅತ್ಯಂತ ಕಡಿಮೆ ಅನುಪಾತವನ್ನು ಹೊಂದಿದ್ದನ್ನು ಗುರುತಿಸಿ, ಉನ್ನತ ಶಿಕ್ಷಣದಲ್ಲಿ ಅವರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಈ ಆರ್ಥಿಕ ಪ್ರೋತ್ಸಾಹವನ್ನು ಶಿಫಾರಸ್ಸು ಮಾಡಿತ್ತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯಲ್ಲಿ ಸ್ಥಾನ ಪಡೆಯಲು ರೌಡಿಗಳ ಕ್ರೈಮ್‌ ಸ್ಕೋರ್‌ ಹೆಚ್ಚಳ: ಕಾಂಗ್ರೆಸ್ ಆರೋಪ

ಕೇಂದ್ರ ಸರ್ಕಾರದ ಈ ನಡೆ ಅತ್ಯಂತ ತುಳಿತಕ್ಕೊಳಗಾದ ಮತ್ತು ಅವಕಾಶ ವಂಚಿತ ವರ್ಗಗಳ ಶೈಕ್ಷಣಿಕ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ. ಕೇಂದ್ರದ ಈ ಕ್ರಮವು ದಲಿತ, ಬಹುಜನ, ಆದಿವಾಸಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿರೋಧಿ ನಡೆಯಾಗಿದೆ. ಇದು ರಾಷ್ಟ್ರೀಯ ಶಿಕ್ಷಣ ನೀತಿಯ ಗೌಪ್ಯ ಅಜೆಂಡಾಕ್ಕೆ ಸಾಕ್ಷಿಯಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಪೂರ್ಣವಾಗಿ ದುರ್ಬಲಗೊಳಿಸುವುದರ ಜೊತೆಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ವಂಚಿತ ಸಮುದಾಯಗಳಿಗಿದ್ದ ಎಲ್ಲಾ ಉತ್ತೇಜಕಗಳನ್ನು ಕಡಿತಗೊಳಿಸುವ ಮೂಲಕ ಶಿಕ್ಷಣದ ಖಾಸಗೀಕರಣವನ್ನು ವೇಗವರ್ಧನಗೊಳಿಸುವುದಾಗಿದೆ ಎಂಬುದನ್ನು ನಾಡಿನ ಜನತೆ ಈಗಲಾದರು ಅರಿಯಬೇಕಿದೆ ಎಂದು ಮನವಿ ಮಾಡಿದ್ದಾರೆ.

ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ ಸಿಗಬೇಕಾದರೆ ವಿದ್ಯಾರ್ಥಿಗಳಿಗೆ ಲಭ್ಯವಿರುವ ಈ ಯೋಜನೆಗಳ ಮಹತ್ವವನ್ನು ಸಂವಿಧಾನದಲ್ಲಿ ನಂಬಿಕೆ ಇರುವ ಎಲ್ಲರೂ ಅರಿಯಬೇಕಿದೆ. ಇವುಗಳನ್ನು ಮುಂದುವರಿಸಲು ಒಕ್ಕೊರಲಿನಿಂದ ಒತ್ತಾಯಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...