Homeಮುಖಪುಟಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಸ್ಥಗಿತ: ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಖಂಡನೆ

ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ ಸ್ಥಗಿತ: ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಖಂಡನೆ

- Advertisement -
- Advertisement -

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಹಲವು ದಶಕಗಳಿಂದ ಜಾರಿಯಲ್ಲಿದ್ದ ಮೆಟ್ರಿಕ್‌-ಪೂರ್ವ ವಿದ್ಯಾರ್ಥಿವೇತನವನ್ನು ನಿಲ್ಲಿಸಿರುವ ಕೇಂದ್ರ ಸರ್ಕಾರ ಈಗ, ಅಲ್ಪ ಸಂಖ್ಯಾತ ವರ್ಗದ ಮಕ್ಕಳು ಉನ್ನತ ಶಿಕ್ಷಣ ಮುಂದುವರಿಸಲು ನೀಡಲಾಗುತ್ತಿದ್ದ ಮೌಲಾನಾ ಆಜಾದ್ ರಾಷ್ಟ್ರೀಯ ಫೆಲೋಶಿಪ್ (ಎಂಎಎನ್‌ಎಫ್‌) ಸ್ಥಗಿತಗೊಳಿಸುವ ತೀರ್ಮಾನವನ್ನೂ ಪ್ರಕಟಿಸಿದೆ. ಇದು ಅತ್ಯಂತ ಖಂಡನೀಯ ನಡೆ ಎಂದು ಕರ್ನಾಟಕ ರಾಜ್ಯ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಮಹಾಪೋಷಕರಾದ ವಿ.ಪಿ.ನಿರಂಜನಾರಾಧ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೀಸಲಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ನಿಲ್ಲಿಸುವ ಮೂಲಕ ಸಂವಿಧಾನದ ಪರಿಚ್ಚೇಧ 21ಎ ಅನ್ವಯ ಕೊಡಮಾಡಿರುವ ಶಿಕ್ಷಣದ ಮೂಲಭೂತ ಹಕ್ಕನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಉನ್ನತ ಶಿಕ್ಷಣದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅವಕಾಶವನ್ನು ಒದಗಿಸಲು ಸಾರ್ವತ್ರಿಕ ಮಾನವ ಹಕ್ಕುಗಳ ಘೋಷಣೆ 1948ರ ಪರಿಚ್ಚೇಧ 26ರ ಅನ್ವಯ ಹಾಗೂ ಭಾರತದಲ್ಲಿ ಮುಸ್ಲಿಮರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅಧ್ಯಯನ ಮಾಡಲಾಗಿದೆ. ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಿದ್ದ ಫೆಲೋಶಿಪ್‌ ಅವಕಾಶವನ್ನು ಕಸಿಯಲಾಗಿದೆ. ದೆಹಲಿಯ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಸಾಚಾರ್ ಸಮಿತಿಯ ಶಿಫಾರಸ್ಸಿನ ಅನ್ವಯ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಿದ್ದ ಫೆಲೋಶಿಪ್‌ ನಿಲ್ಲಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಅಲ್ಪ ಸಂಖ್ಯಾತ ವರ್ಗದ ಶಿಕ್ಷಣ ದಯನೀಯ ಪರಿಸ್ಥಿತಿಯಲ್ಲಿದೆ ಎಂದು ನ್ಯಾಯಮೂರ್ತಿ ಸಾಚಾರ್ ಸಮಿತಿಯ ವರದಿ ತಿಳಿಸಿತ್ತು. ಎಂಎಎನ್‌ಎಫ್‌ ಪ್ರಾರಂಭಿಸಿತ್ತು. ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ್ದ ಸ್ನಾತಕೋತ್ತರ ಮತ್ತು ಪಿಎಚ್‌.ಡಿ ಪದವಿಗಳನ್ನು ಒಳಗೊಂಡಂತೆ ಉನ್ನತ ಶಿಕ್ಷಣವನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ವಿದ್ಯಾರ್ಥಿವೇತನ ಕಾರ್ಯಕ್ರಮ ಇದಾಗಿತ್ತು ಎಂದು ನಿರಂಜನಾರಾಧ್ಯ ವಿವರಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಮತ್ತು ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಹೆಸರನ್ನು ಈ ವಿದ್ಯಾರ್ಥಿವೇತನಕ್ಕೆ ಇಡಲಾಗಿತ್ತು. ಈ ಫೆಲೋಶಿಪ್ ವಿದ್ಯಾರ್ಥಿಗಳ ಬೋಧನಾ ಶುಲ್ಕ, ಹಾಸ್ಟೆಲ್ ಸೌಕರ್ಯಗಳು ಮತ್ತು ಇತರ ಶೈಕ್ಷಣಿಕ ವೆಚ್ಚಗಳ ವೆಚ್ಚವನ್ನು ಒಳಗೊಂಡಿದ್ದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದಿಂದ ನಿರ್ವಹಿಸಲ್ಪಡುತ್ತಿತ್ತು. ಆರ್ಥಿಕ ಸ್ಥಿತಿಯ ವಿಷಯದಲ್ಲಿ ಅತ್ಯಂತ ಹಿಂದುಳಿದಿದ್ದ ಈ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಗಳ ವ್ಯಾಪ್ತಿಯಿಂದ ಹೊರಗಿದ್ದರು. ಸಾಚಾರ್‌ ಸಮಿತಿಯು ಉನ್ನತ ಶಿಕ್ಷಣದಲ್ಲಿ ಅಲ್ಪಸಂಖ್ಯಾತ ಸಮುದಾಯ ಅತ್ಯಂತ ಕಡಿಮೆ ಅನುಪಾತವನ್ನು ಹೊಂದಿದ್ದನ್ನು ಗುರುತಿಸಿ, ಉನ್ನತ ಶಿಕ್ಷಣದಲ್ಲಿ ಅವರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಈ ಆರ್ಥಿಕ ಪ್ರೋತ್ಸಾಹವನ್ನು ಶಿಫಾರಸ್ಸು ಮಾಡಿತ್ತು ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಜೆಪಿಯಲ್ಲಿ ಸ್ಥಾನ ಪಡೆಯಲು ರೌಡಿಗಳ ಕ್ರೈಮ್‌ ಸ್ಕೋರ್‌ ಹೆಚ್ಚಳ: ಕಾಂಗ್ರೆಸ್ ಆರೋಪ

ಕೇಂದ್ರ ಸರ್ಕಾರದ ಈ ನಡೆ ಅತ್ಯಂತ ತುಳಿತಕ್ಕೊಳಗಾದ ಮತ್ತು ಅವಕಾಶ ವಂಚಿತ ವರ್ಗಗಳ ಶೈಕ್ಷಣಿಕ ಹಕ್ಕುಗಳ ಮೇಲಿನ ನೇರ ದಾಳಿಯಾಗಿದೆ. ಕೇಂದ್ರದ ಈ ಕ್ರಮವು ದಲಿತ, ಬಹುಜನ, ಆದಿವಾಸಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿರೋಧಿ ನಡೆಯಾಗಿದೆ. ಇದು ರಾಷ್ಟ್ರೀಯ ಶಿಕ್ಷಣ ನೀತಿಯ ಗೌಪ್ಯ ಅಜೆಂಡಾಕ್ಕೆ ಸಾಕ್ಷಿಯಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಪೂರ್ಣವಾಗಿ ದುರ್ಬಲಗೊಳಿಸುವುದರ ಜೊತೆಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ವಂಚಿತ ಸಮುದಾಯಗಳಿಗಿದ್ದ ಎಲ್ಲಾ ಉತ್ತೇಜಕಗಳನ್ನು ಕಡಿತಗೊಳಿಸುವ ಮೂಲಕ ಶಿಕ್ಷಣದ ಖಾಸಗೀಕರಣವನ್ನು ವೇಗವರ್ಧನಗೊಳಿಸುವುದಾಗಿದೆ ಎಂಬುದನ್ನು ನಾಡಿನ ಜನತೆ ಈಗಲಾದರು ಅರಿಯಬೇಕಿದೆ ಎಂದು ಮನವಿ ಮಾಡಿದ್ದಾರೆ.

ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ ಸಿಗಬೇಕಾದರೆ ವಿದ್ಯಾರ್ಥಿಗಳಿಗೆ ಲಭ್ಯವಿರುವ ಈ ಯೋಜನೆಗಳ ಮಹತ್ವವನ್ನು ಸಂವಿಧಾನದಲ್ಲಿ ನಂಬಿಕೆ ಇರುವ ಎಲ್ಲರೂ ಅರಿಯಬೇಕಿದೆ. ಇವುಗಳನ್ನು ಮುಂದುವರಿಸಲು ಒಕ್ಕೊರಲಿನಿಂದ ಒತ್ತಾಯಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...