Homeಮುಖಪುಟತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

ತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

- Advertisement -
- Advertisement -

ಪ್ರಾಧ್ಯಾಪಕರೊಬ್ಬರು ಮುಸ್ಲಿಂ ವಿದ್ಯಾರ್ಥಿಯೊಬ್ಬರನ್ನು ಕಸಬ್ ಎಂದು ಕರೆದು ಭಯೋತ್ಪಾದಕರಿಗೆ ಹೋಲಿಸುವ ಮೂಲಕ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವರದಿಯಾಗಿದೆ.

ಶುಕ್ರವಾರ ತರಗತಿಯೊಳಗೆ ಎಲ್ಲಾ ವಿದ್ಯಾರ್ಥಿಗಳ ಎದುರು ಮುಸ್ಲಿಂ ವಿದ್ಯಾರ್ಥಿಯ ಹೆಸರು ಕೇಳಿದಾಕ್ಷಣ ಒಹ್ ನೀನು ಕಸಬ್ ಎಂದು ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಕರೆದಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿಯು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಆಕ್ಷೇಪ ವ್ಯಕ್ತಪಡಿಸಿ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಸರ್ ನೀವು ಹೇಗೆ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತೀರಿ? ಒಂದು ಧರ್ಮವನ್ನು ಹೇಗೆ ಭಯೋತ್ಪಾದನೆ ತಳುಕು ಹಾಕುತ್ತೀರಿ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಪ್ರಾಧ್ಯಾಪಕ ನೀನು ನನ್ನ ಮಗನಿದ್ದಂತೆ ಎಂದಿದ್ದಾರೆ. ನೀವು ನಿಮ್ಮ ಮಗನನ್ನು ಹೀಗೆ ಕರೆಯುತ್ತೀರಾ? ಆತನನ್ನೂ ಭಯೋತ್ಪಾದಕ ಎಂದು ಕರೆಯುತ್ತೀರಾ, ಇಲ್ಲವೆಂದ ಮೇಲೆ ನನ್ನನ್ನು ಹೇಗೆ ಕರೆದಿರಿ? ಅದು ಇಷ್ಟು ಜನರ ಮುಂದೆ ಎಂದು ವಿದ್ಯಾರ್ಥಿ ಮರುಪ್ರಶ್ನಿಸಿದ್ದಾರೆ.

ಇದು ತಮಾಷೆ ಎಂದಾಗ, ಇಲ್ಲ ಸರ್ ಇದು ತಮಾಷೆಯಲ್ಲ. 26/11 ಭಯೋತ್ಪಾದನಾ ಪ್ರಕರಣವು ತಮಾಷೆಯಲ್ಲ. ಒಬ್ಬ ಮಸ್ಲಿಮನಾಗಿ ನಾನು ಇದನ್ನು ಪ್ರತಿನಿತ್ಯ ಎದುರಿಸುತ್ತಿದ್ದೇನೆ. ಹಾಗಾಗಿ ಇದು ತಮಾಷೆಯ ವಿಷಯವಲ್ಲ. ನೀವು ಪ್ರಾಧ್ಯಾಪಕರು. ನಮಗೆ ಪಾಠ ಮಾಡುತ್ತೀರಿ. ಹೇಗೆ ನನ್ನನ್ನು ಹಾಗೆ ಕರೆಯುವ ಹಾಗಿಲ್ಲ ಎಂದು ವಿದ್ಯಾರ್ಥಿ ವಾದಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಂತರ ಪ್ರಾಧ್ಯಾಪಕರು ಕ್ಷಮೆ ಕೇಳುತ್ತೇನೆ ಎಂದಾಗ, ನಿಮ್ಮ ಸಾರಿ ನೀವು ಏನೆಂಬುದನ್ನು ಮತ್ತು ನೀವು ಯೋಚಿಸುವ ವಿಧಾನವನ್ನು ಬದಲಿಸುವುದಿಲ್ಲ ಎಂದು ವಿದ್ಯಾರ್ಥಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿವಾದ ಬಳಿಕ ಮಾತನಾಡಿರುವ ವಿದ್ಯಾರ್ಥಿಯು, “ಜನಾಂಗೀಯ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಸ್ವೀಕರಾರ್ಹನಲ್ಲದ ಭಯೋತ್ಪಾದಕ ಕಸಬ್ ಹೆಸರಿನಿಂದ ನನ್ನನ್ನು ನಾನು ಇಷ್ಟಪಡುವ ಪ್ರಾಧ್ಯಾಪಕರೆ ಕರೆದುದ್ದುದು ಬೇಸರ ತರಿಸಿತು. ಅದಕ್ಕಾಗಿ ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿದೆ. ಆನಂತರ ಅವರೊಡನೆ ಮಾತನಾಡಿದ್ದೇನೆ. ಅವರು ಕ್ಷಮೆ ಯಾಚಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ” ಎಂದಿದ್ದಾರೆ.

ಈ ಘಟನೆ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಲೇಜಿನ ವ್ಯವಸ್ಥಾಪಕ ಮಂಡಳಿಯು, “ಈ ಘಟನೆ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ ಮತ್ತು ತನಿಖೆ ಮುಗಿಯುವವರೆಗೂ ಸಂಬಂಧಿತ ಪ್ರಾಧ್ಯಾಪಕರು ತರಗತಿ ತೆಗೆದುಕೊಳ್ಳದಂತೆ ಸೂಚಿಸಿದ್ದೇವೆ. ಸಂಸ್ಥೆಯು ಈ ರೀತಿಯ ನಡವಳಿಕೆಯನ್ನು ಕ್ಷಮಿಸುವುದಿಲ್ಲ ಮತ್ತು ಈ ಪ್ರತ್ಯೇಕ ಘಟನೆಯನ್ನು ನಿಗದಿಪಡಿಸಿದ ನೀತಿಗಳಿಗೆ ಅನುಗುಣವಾಗಿ ವಿಚಾರಣೆ ನಡೆಸುತ್ತದೆ. ನಮ್ಮ ಸಂಸ್ಥೆಯು ಕ್ಯಾಂಪಸ್‌ನಲ್ಲಿ ಬಹು ವೈವಿಧ್ಯತೆಯನ್ನು ಹೆಮ್ಮೆಯೆಂದು ಭಾವಿಸುತ್ತದೆ ಮತ್ತು ಜಾತಿ, ಧರ್ಮ, ಲಿಂಗ, ಪ್ರದೇಶಗಳನ್ನು ಲೆಕ್ಕಿಸದೆ ಎಲ್ಲರನ್ನು ಸಮಾನವಾಗಿ ಪರಿಗಣಿಸುವ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ; ಡೇಟಾ ಸಂರಕ್ಷಣೆ: ಹೇಳಿದ್ದೇನು? ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪೈ ಮಾಮುಗಳ ಕ್ಷಿಪ್ರ ಕಾರ್ಯಾಚರಣೆಯ ಹಿಂದೆ ಅವರ ಶಿಕ್ಷಣ ವ್ಯಾಪಾರದ ಹಿತಾಸಕ್ತಿ ಬಿಟ್ಟು ಬೇರೇನಿಲ್ಲ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....