Homeಮುಖಪುಟತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

ತರಗತಿಯಲ್ಲಿ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಪ್ರಾಧ್ಯಾಪಕನಿಗೆ ಕ್ಲಾಸ್ ತೆಗೆದುಕೊಂಡ ವಿದ್ಯಾರ್ಥಿ

- Advertisement -
- Advertisement -

ಪ್ರಾಧ್ಯಾಪಕರೊಬ್ಬರು ಮುಸ್ಲಿಂ ವಿದ್ಯಾರ್ಥಿಯೊಬ್ಬರನ್ನು ಕಸಬ್ ಎಂದು ಕರೆದು ಭಯೋತ್ಪಾದಕರಿಗೆ ಹೋಲಿಸುವ ಮೂಲಕ ಇಸ್ಲಾಮೋಫೋಬಿಯಾ ಹರಡಲು ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವರದಿಯಾಗಿದೆ.

ಶುಕ್ರವಾರ ತರಗತಿಯೊಳಗೆ ಎಲ್ಲಾ ವಿದ್ಯಾರ್ಥಿಗಳ ಎದುರು ಮುಸ್ಲಿಂ ವಿದ್ಯಾರ್ಥಿಯ ಹೆಸರು ಕೇಳಿದಾಕ್ಷಣ ಒಹ್ ನೀನು ಕಸಬ್ ಎಂದು ಸಹಾಯಕ ಪ್ರಾಧ್ಯಾಪಕ ರವೀಂದ್ರನಾಥ್ ಕರೆದಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿಯು ನನ್ನನ್ನು ಹಾಗೆ ಹೇಗೆ ಕರೆಯುತ್ತೀರಿ ಎಂದು ಆಕ್ಷೇಪ ವ್ಯಕ್ತಪಡಿಸಿ ಪ್ರಾಧ್ಯಾಪಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ಸರ್ ನೀವು ಹೇಗೆ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತೀರಿ? ಒಂದು ಧರ್ಮವನ್ನು ಹೇಗೆ ಭಯೋತ್ಪಾದನೆ ತಳುಕು ಹಾಕುತ್ತೀರಿ ಎಂದು ವಿದ್ಯಾರ್ಥಿ ಪ್ರಶ್ನಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಪ್ರಾಧ್ಯಾಪಕ ನೀನು ನನ್ನ ಮಗನಿದ್ದಂತೆ ಎಂದಿದ್ದಾರೆ. ನೀವು ನಿಮ್ಮ ಮಗನನ್ನು ಹೀಗೆ ಕರೆಯುತ್ತೀರಾ? ಆತನನ್ನೂ ಭಯೋತ್ಪಾದಕ ಎಂದು ಕರೆಯುತ್ತೀರಾ, ಇಲ್ಲವೆಂದ ಮೇಲೆ ನನ್ನನ್ನು ಹೇಗೆ ಕರೆದಿರಿ? ಅದು ಇಷ್ಟು ಜನರ ಮುಂದೆ ಎಂದು ವಿದ್ಯಾರ್ಥಿ ಮರುಪ್ರಶ್ನಿಸಿದ್ದಾರೆ.

ಇದು ತಮಾಷೆ ಎಂದಾಗ, ಇಲ್ಲ ಸರ್ ಇದು ತಮಾಷೆಯಲ್ಲ. 26/11 ಭಯೋತ್ಪಾದನಾ ಪ್ರಕರಣವು ತಮಾಷೆಯಲ್ಲ. ಒಬ್ಬ ಮಸ್ಲಿಮನಾಗಿ ನಾನು ಇದನ್ನು ಪ್ರತಿನಿತ್ಯ ಎದುರಿಸುತ್ತಿದ್ದೇನೆ. ಹಾಗಾಗಿ ಇದು ತಮಾಷೆಯ ವಿಷಯವಲ್ಲ. ನೀವು ಪ್ರಾಧ್ಯಾಪಕರು. ನಮಗೆ ಪಾಠ ಮಾಡುತ್ತೀರಿ. ಹೇಗೆ ನನ್ನನ್ನು ಹಾಗೆ ಕರೆಯುವ ಹಾಗಿಲ್ಲ ಎಂದು ವಿದ್ಯಾರ್ಥಿ ವಾದಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ನಂತರ ಪ್ರಾಧ್ಯಾಪಕರು ಕ್ಷಮೆ ಕೇಳುತ್ತೇನೆ ಎಂದಾಗ, ನಿಮ್ಮ ಸಾರಿ ನೀವು ಏನೆಂಬುದನ್ನು ಮತ್ತು ನೀವು ಯೋಚಿಸುವ ವಿಧಾನವನ್ನು ಬದಲಿಸುವುದಿಲ್ಲ ಎಂದು ವಿದ್ಯಾರ್ಥಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿವಾದ ಬಳಿಕ ಮಾತನಾಡಿರುವ ವಿದ್ಯಾರ್ಥಿಯು, “ಜನಾಂಗೀಯ ನಿಂದನೆಯನ್ನು ಸಹಿಸಲು ಸಾಧ್ಯವಿಲ್ಲ. ದೇಶದ ಸ್ವೀಕರಾರ್ಹನಲ್ಲದ ಭಯೋತ್ಪಾದಕ ಕಸಬ್ ಹೆಸರಿನಿಂದ ನನ್ನನ್ನು ನಾನು ಇಷ್ಟಪಡುವ ಪ್ರಾಧ್ಯಾಪಕರೆ ಕರೆದುದ್ದುದು ಬೇಸರ ತರಿಸಿತು. ಅದಕ್ಕಾಗಿ ಅಲ್ಲಿಯೇ ಆಕ್ಷೇಪ ವ್ಯಕ್ತಪಡಿಸಿದೆ. ಆನಂತರ ಅವರೊಡನೆ ಮಾತನಾಡಿದ್ದೇನೆ. ಅವರು ಕ್ಷಮೆ ಯಾಚಿಸಿದ್ದಾರೆ. ಹಾಗಾಗಿ ಈ ಪ್ರಕರಣವನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ” ಎಂದಿದ್ದಾರೆ.

ಈ ಘಟನೆ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಾಲೇಜಿನ ವ್ಯವಸ್ಥಾಪಕ ಮಂಡಳಿಯು, “ಈ ಘಟನೆ ಕುರಿತು ಈಗಾಗಲೇ ವಿಚಾರಣೆ ನಡೆಯುತ್ತಿದೆ ಮತ್ತು ತನಿಖೆ ಮುಗಿಯುವವರೆಗೂ ಸಂಬಂಧಿತ ಪ್ರಾಧ್ಯಾಪಕರು ತರಗತಿ ತೆಗೆದುಕೊಳ್ಳದಂತೆ ಸೂಚಿಸಿದ್ದೇವೆ. ಸಂಸ್ಥೆಯು ಈ ರೀತಿಯ ನಡವಳಿಕೆಯನ್ನು ಕ್ಷಮಿಸುವುದಿಲ್ಲ ಮತ್ತು ಈ ಪ್ರತ್ಯೇಕ ಘಟನೆಯನ್ನು ನಿಗದಿಪಡಿಸಿದ ನೀತಿಗಳಿಗೆ ಅನುಗುಣವಾಗಿ ವಿಚಾರಣೆ ನಡೆಸುತ್ತದೆ. ನಮ್ಮ ಸಂಸ್ಥೆಯು ಕ್ಯಾಂಪಸ್‌ನಲ್ಲಿ ಬಹು ವೈವಿಧ್ಯತೆಯನ್ನು ಹೆಮ್ಮೆಯೆಂದು ಭಾವಿಸುತ್ತದೆ ಮತ್ತು ಜಾತಿ, ಧರ್ಮ, ಲಿಂಗ, ಪ್ರದೇಶಗಳನ್ನು ಲೆಕ್ಕಿಸದೆ ಎಲ್ಲರನ್ನು ಸಮಾನವಾಗಿ ಪರಿಗಣಿಸುವ ನಮ್ಮ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ; ಡೇಟಾ ಸಂರಕ್ಷಣೆ: ಹೇಳಿದ್ದೇನು? ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪೈ ಮಾಮುಗಳ ಕ್ಷಿಪ್ರ ಕಾರ್ಯಾಚರಣೆಯ ಹಿಂದೆ ಅವರ ಶಿಕ್ಷಣ ವ್ಯಾಪಾರದ ಹಿತಾಸಕ್ತಿ ಬಿಟ್ಟು ಬೇರೇನಿಲ್ಲ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...