Homeಮುಖಪುಟಬಜೆಟ್ ಅಧಿವೇಶನಕ್ಕೂ ಮುನ್ನ ಎಲ್ಲಾ ವಿಪಕ್ಷ ಸಂಸದರ ಅಮಾನತು ವಾಪಸ್

ಬಜೆಟ್ ಅಧಿವೇಶನಕ್ಕೂ ಮುನ್ನ ಎಲ್ಲಾ ವಿಪಕ್ಷ ಸಂಸದರ ಅಮಾನತು ವಾಪಸ್

- Advertisement -
- Advertisement -

ಸಂಸತ್‌ನ ಬಜೆಟ್‌ ಅಧಿವೇಶನದ ಮುನ್ನಾ ದಿನ ಇಂದು (ಜ.30) 11 ರಾಜ್ಯಸಭಾ ಸದಸ್ಯರ ವಿರುದ್ದದ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.

ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ. ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿರುವ ಎಲ್ಲಾ ಸಂಸದರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಲೋಕಸಭೆ ಸ್ಪೀಕರ್‌ ಹಾಗೂ ರಾಜ್ಯಸಭೆಯ ಅಧ್ಯಕ್ಷರಿಗೆ ಸರ್ಕಾರದ ಪರವಾಗಿ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಡಿಸೆಂಬರ್‌ 2023ರಲ್ಲಿ, ಅಂದರೆ ಕಳೆದ ತಿಂಗಳು ನಡೆದ ಸಂಸತ್ತಿನ ಚಳಿಗಾಲದ ಅಧಿವೇಶನಲ್ಲಿ ಭದ್ರತಾ ಲೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟಿಸಿದ್ದಕ್ಕಾಗಿ ಲೋಕಸಭೆ ಮತ್ತು ರಾಜ್ಯಸಭೆಯ ಒಟ್ಟು 146 ಸಂಸದರನ್ನು ಅಮಾನತು ಮಾಡಲಾಗಿತ್ತು.

146 ಸಂಸದರ ಪೈಕಿ 132 ಸಂಸದರನ್ನು ಅಧಿವೇಶನದ ಉಳಿದ ಅವಧಿಗೆ ಮಾತ್ರ ಅಮಾನತುಗೊಳಿಸಲಾಗಿತ್ತು. ಪ್ರಸ್ತುತ ಅವರ ಅಮಾನತು ಆದೇಶ ಮಾನ್ಯತೆಯಲ್ಲಿ ಇಲ್ಲ. ಇನ್ನುಳಿದ 14 ಸಂಸದರನ್ನು (ರಾಜ್ಯಸಭೆಯ 11 ಮತ್ತು ಲೋಕಸಭೆಯ 3) ಹಕ್ಕುಬಾಧ್ಯತಾ ಸಮಿತಿಗಳು ನಿರ್ಧರಿಸುವವರೆಗೆ ಅಮಾನತುಗೊಳಿಸಲಾಗಿತ್ತು.

ಲೋಕಸಭೆಯ ವಿಶೇಷಾಧಿಕಾರ ಸಮಿತಿಯು ಜನವರಿ 12ರಂದು ಮೂವರು ಲೋಕಸಭೆ ಸಂಸದರ ಅಮಾನತು ಆದೇಶವನ್ನು ರದ್ದುಗೊಳಿಸಿತ್ತು. ಉಳಿದ 11 ರಾಜ್ಯಸಭಾ ಸದಸ್ಯರ ಅಮಾನತನ್ನು ಇಂದು ಹಿಂಪಡೆಯಲಾಗಿದೆ.

ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ:

ಬಜೆಟ್ ಅಧಿವೇಶನಕ್ಕೂ ಮುನ್ನ ಸಂಸತ್ತಿನ ಲೈಬ್ರರಿ ಕಟ್ಟಡದಲ್ಲಿ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಇಂದು ಸರ್ವಪಕ್ಷ ಸಭೆ ನಡೆಯಿತು. ಬಜೆಟ್ ಅಧಿವೇಶನವು ನಾಳೆ (ಜ 31, ಬುಧವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಪ್ರಾರಂಭವಾಗಲಿದೆ. ಫೆಬ್ರವರಿ 9 ರಂದು ಅಧಿವೇಶನ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು 2024-25ನೇ ಆರ್ಥಿಕ ವರ್ಷದ ಬಜೆಟ್ ಮಂಡಿಸಲಿದ್ದಾರೆ. ದೇಶವು ಏಪ್ರಿಲ್-ಮೇನಲ್ಲಿ ಸಾರ್ವತ್ರಿಕ ಚುನಾವಣೆ ಎದುರಿಸುವ ಸಾಧ್ಯತೆ ಇರುವ ಕಾರಣ ಈ ಬಜೆಟ್ ಅನ್ನು ‘ಮಧ್ಯಂತರ’ ಎಂದು ಪರಿಗಣಿಸಲಾಗಿದೆ. ಇದು ನರೇಂದ್ರ ಮೋದಿ ಸರ್ಕಾರ 2.0ದ ಅಂತಿಮ ಬಜೆಟ್ ಆಗಿದೆ.

ಇದನ್ನೂ ಓದಿ: ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಸಭೆಗೆ? ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...