Homeಮುಖಪುಟದೆಹಲಿ: ಮಾನವ ಕಳ್ಳ ಸಾಗಾಣಿಕೆ ಶಂಕೆ: ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರ ಬಂಧನ

ದೆಹಲಿ: ಮಾನವ ಕಳ್ಳ ಸಾಗಾಣಿಕೆ ಶಂಕೆ: ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರ ಬಂಧನ

- Advertisement -
- Advertisement -

ಮಾನವ ಕಳ್ಳಸಾಗಣೆ ದಂಧೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಾಲ್ವರು ಏರ್ ಇಂಡಿಯಾ ಸಿಬ್ಬಂದಿ ಮತ್ತು ಯುಕೆ ವಿಮಾನ ಏರಲು ಪ್ರಯತ್ನಿಸುತ್ತಿದ್ದ ಭಾರತೀಯ ಪ್ರಯಾಣಿಕನನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ.

ಅನುಮಾನಾಸ್ಪದ ವರ್ತನೆ ಕಂಡು ಬಂದ ಹಿನ್ನೆಲೆ ಒಟ್ಟು ಐವರನ್ನು ಬಂಧಿಸಲಾಗಿದೆ ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ತಿಳಿಸಿದೆ.

ಯುಕೆಗೆ ತೆರಳಲು ಸಿದ್ದನಾಗಿದ್ದ ದಿಲ್ಜೋತ್ ಸಿಂಗ್ ಎಂಬ ವ್ಯಕ್ತಿಯ ಪ್ರಯಾಣದ ದಾಖಲೆಗಳು ಇಮಿಗ್ರೇಶನ್‌ ಅಧಿಕಾರಿಗಳಿಗೆ ಸಂಶಯಾಸ್ಪದವಾಗಿ ಕಂಡು ಬಂದಿತ್ತು. ಹಾಗಾಗಿ, ಅಧಿಕಾರಿಗಳು ಆತ ವಿಮಾನ ಹತ್ತುವುದಕ್ಕೆ ಅವಕಾಶ ನಿರಕಾರಿಸಿದ್ದರು. ವಿಮಾನಯಾನ ಸಿಬ್ಬಂದಿಯೊಂದಿಗೆ ಆತನ ಕುರಿತು ಸ್ಪಷ್ಟಪಡಿಸುವಂತೆ ಸೂಚಿಸಿದ್ದರು.

ಪ್ರಯಾಣಿಕ ದಿಲ್ಜೋತ್ ಸಿಂಗ್, ದೆಹಲಿ ವಿಮಾನಯಾನ ಸಿಬ್ಬಂದಿಯನ್ನು ಸಂಪರ್ಕಿಸುವ ಬದಲು, ಏರ್ ಇಂಡಿಯಾ ಸ್ಯಾಟ್ಸ್ ಏರ್ಪೋರ್ಟ್ ಸರ್ವಿಸಸ್ ಪ್ರೈ. ಲಿಮಿಟೆಡ್ (ಎಐಎಸ್‌ಎಟಿಎಸ್‌) ಸಿಬ್ಬಂದಿಯಿಂದ ಸಹಾಯ ಕೋರಿದ್ದರು. ಇದು ಅಧಿಕಾರಿಗಳ ಅನುಮಾನ ಹೆಚ್ಚಿಸಿತ್ತು.

ತಕ್ಷಣ ಎಚ್ಚೆತ್ತ ಸಿಐಎಸ್ಎಫ್ ಸಿಬ್ಬಂದಿ, ದೆಹಲಿ ವಿಮಾನ ನಿಲ್ದಾಣ ಪ್ರಾಧಿಕಾರದ ಸಹಯೋಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ವಿಮಾನ ನಿಲ್ದಾಣದ ಚೆಕ್-ಇನ್ ಕೌಂಟರ್‌ನಲ್ಲಿದ್ದ ಏರ್ ಇಂಡಿಯಾ ಸಿಬ್ಬಂದಿ ಅಮಾನ್ಯ ದಾಖಲೆಗಳ ಮೂಲಕ ಸಿಂಗ್ ಮತ್ತು ಇತರ ಇಬ್ಬರ ಬೋರ್ಡಿಂಗ್ ಪ್ರಕ್ರಿಯೆ ಮುಗಿಸಿರುವುದು ಸಿಸಿಟಿವಿ ದೃಶ್ಯಗಳಿಂದ ಬಯಲಾಗಿತ್ತು.

ಈ ಹಿನ್ನೆಲೆ ದಿಲ್ಜೋತ್ ಸಿಂಗ್ ಜೊತೆಗೆ ರೋಹನ್ ವರ್ಮಾ, ಮೊಹಮ್ಮದ್ ಜಹಾಂಗೀರ್, ಯಶ್ ಮತ್ತು ಅಕ್ಷಯ್ ನಾರಂಗ್ ಎಂದು ಗುರುತಿಸಲಾದ ಸಿಬ್ಬಂದಿಯನ್ನು ಬಂಧಿಸಿದ ಸಿಐಎಸ್‌ಎಫ್ ಅಧಿಕಾರಿಗಳು, ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಎಐಎಸ್‌ಎಟಿಎಸ್‌ ಸಿಇಒ ಸಂಜಯ್ ಗುಪ್ತಾ, “ದೆಹಲಿ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಸಿಐಎಸ್‌ಎಫ್ ಸಹಯೋಗದಲ್ಲಿ ಮಾನವ ಕಳ್ಳಸಾಗಣೆ ಯತ್ನವನ್ನು ತಡೆಯುವಲ್ಲಿ ಕಂಪನಿಯು ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಹೇಳಿದ್ದಾರೆ.

ಮೂವರು ವ್ಯಕ್ತಿಗಳು ಅಕ್ರಮವಾಗಿ ಯುಕೆಗೆ ತೆರಳಲು ಪ್ರಯತ್ನಿಸಿದ್ದರು. ಕಾರ್ಯಾಚರಣೆಯ ಸಮಯದಲ್ಲಿ ಅವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಬೆಂಬಲ ನೀಡಿದ್ದ ನಮ್ಮ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಗುಪ್ತಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಕಾರ್ಯಾಚರಣೆಗಳ ಸಮಗ್ರತೆಯನ್ನು ಕಾಪಾಡಿಕೊಳ್ಳಲು, ಸುರಕ್ಷತೆ, ಕಾನೂನುಬದ್ಧತೆ ಮತ್ತು ನೈತಿಕ ನಡವಳಿಕೆಯ ಉನ್ನತ ಗುಣಮಟ್ಟವನ್ನು ಎತ್ತಿಹಿಡಿಯಲು ಸಂಸ್ಥೆಯು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಟಾಟಾ ಒಡೆತನದ ಏರ್ ಇಂಡಿಯಾ ಮತ್ತು ಸ್ಯಾಟ್ಸ್ ಏರ್ಪೋರ್ಟ್ ಸರ್ವಿಸಸ್ ಪ್ರೈ. ಲಿಮಿಟೆಡ್ ಜಂಟಿಯಾಗಿ ಬ್ಯಾಗೇಜ್ ನಿರ್ವಹಣೆ ಮತ್ತು ವಿಮಾನ ನಿರ್ವಹಣೆ ಸೇರಿದಂತೆ ವಿವಿಧ ವಿಮಾನ ನಿಲ್ದಾಣ ಸೇವೆಗಳನ್ನು ಒದಗಿಸುತ್ತಿದೆ.

ಈ ವಾರದ ಆರಂಭದಲ್ಲಿ ಸುಮಾರು 300 ಭಾರತೀಯರನ್ನು ಹೊತ್ತ ವಿಮಾನವನ್ನು ಮಾನವ ಕಳ್ಳ ಸಾಗಾಣಿಕೆಯ ಸಂಶಯದ ಮೇಲೆ ಫ್ರಾನ್ಸ್ ಅಧಿಕಾರಿಗಳು ತಡೆದಿದ್ದರು. ಆ ಬಳಿಕ ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ನಿಗಾ ವಹಿಸಲಾಗಿದೆ.

ಇದನ್ನೂ ಓದಿ : ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...