Homeಮುಖಪುಟದೆಹಲಿ: ಮಾನವ ಕಳ್ಳ ಸಾಗಾಣಿಕೆ ಶಂಕೆ: ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರ ಬಂಧನ

ದೆಹಲಿ: ಮಾನವ ಕಳ್ಳ ಸಾಗಾಣಿಕೆ ಶಂಕೆ: ಏರ್ ಇಂಡಿಯಾ ಸಿಬ್ಬಂದಿ ಸೇರಿ ಐವರ ಬಂಧನ

- Advertisement -
- Advertisement -

ಮಾನವ ಕಳ್ಳಸಾಗಣೆ ದಂಧೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಾಲ್ವರು ಏರ್ ಇಂಡಿಯಾ ಸಿಬ್ಬಂದಿ ಮತ್ತು ಯುಕೆ ವಿಮಾನ ಏರಲು ಪ್ರಯತ್ನಿಸುತ್ತಿದ್ದ ಭಾರತೀಯ ಪ್ರಯಾಣಿಕನನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ.

ಅನುಮಾನಾಸ್ಪದ ವರ್ತನೆ ಕಂಡು ಬಂದ ಹಿನ್ನೆಲೆ ಒಟ್ಟು ಐವರನ್ನು ಬಂಧಿಸಲಾಗಿದೆ ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ತಿಳಿಸಿದೆ.

ಯುಕೆಗೆ ತೆರಳಲು ಸಿದ್ದನಾಗಿದ್ದ ದಿಲ್ಜೋತ್ ಸಿಂಗ್ ಎಂಬ ವ್ಯಕ್ತಿಯ ಪ್ರಯಾಣದ ದಾಖಲೆಗಳು ಇಮಿಗ್ರೇಶನ್‌ ಅಧಿಕಾರಿಗಳಿಗೆ ಸಂಶಯಾಸ್ಪದವಾಗಿ ಕಂಡು ಬಂದಿತ್ತು. ಹಾಗಾಗಿ, ಅಧಿಕಾರಿಗಳು ಆತ ವಿಮಾನ ಹತ್ತುವುದಕ್ಕೆ ಅವಕಾಶ ನಿರಕಾರಿಸಿದ್ದರು. ವಿಮಾನಯಾನ ಸಿಬ್ಬಂದಿಯೊಂದಿಗೆ ಆತನ ಕುರಿತು ಸ್ಪಷ್ಟಪಡಿಸುವಂತೆ ಸೂಚಿಸಿದ್ದರು.

ಪ್ರಯಾಣಿಕ ದಿಲ್ಜೋತ್ ಸಿಂಗ್, ದೆಹಲಿ ವಿಮಾನಯಾನ ಸಿಬ್ಬಂದಿಯನ್ನು ಸಂಪರ್ಕಿಸುವ ಬದಲು, ಏರ್ ಇಂಡಿಯಾ ಸ್ಯಾಟ್ಸ್ ಏರ್ಪೋರ್ಟ್ ಸರ್ವಿಸಸ್ ಪ್ರೈ. ಲಿಮಿಟೆಡ್ (ಎಐಎಸ್‌ಎಟಿಎಸ್‌) ಸಿಬ್ಬಂದಿಯಿಂದ ಸಹಾಯ ಕೋರಿದ್ದರು. ಇದು ಅಧಿಕಾರಿಗಳ ಅನುಮಾನ ಹೆಚ್ಚಿಸಿತ್ತು.

ತಕ್ಷಣ ಎಚ್ಚೆತ್ತ ಸಿಐಎಸ್ಎಫ್ ಸಿಬ್ಬಂದಿ, ದೆಹಲಿ ವಿಮಾನ ನಿಲ್ದಾಣ ಪ್ರಾಧಿಕಾರದ ಸಹಯೋಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ವಿಮಾನ ನಿಲ್ದಾಣದ ಚೆಕ್-ಇನ್ ಕೌಂಟರ್‌ನಲ್ಲಿದ್ದ ಏರ್ ಇಂಡಿಯಾ ಸಿಬ್ಬಂದಿ ಅಮಾನ್ಯ ದಾಖಲೆಗಳ ಮೂಲಕ ಸಿಂಗ್ ಮತ್ತು ಇತರ ಇಬ್ಬರ ಬೋರ್ಡಿಂಗ್ ಪ್ರಕ್ರಿಯೆ ಮುಗಿಸಿರುವುದು ಸಿಸಿಟಿವಿ ದೃಶ್ಯಗಳಿಂದ ಬಯಲಾಗಿತ್ತು.

ಈ ಹಿನ್ನೆಲೆ ದಿಲ್ಜೋತ್ ಸಿಂಗ್ ಜೊತೆಗೆ ರೋಹನ್ ವರ್ಮಾ, ಮೊಹಮ್ಮದ್ ಜಹಾಂಗೀರ್, ಯಶ್ ಮತ್ತು ಅಕ್ಷಯ್ ನಾರಂಗ್ ಎಂದು ಗುರುತಿಸಲಾದ ಸಿಬ್ಬಂದಿಯನ್ನು ಬಂಧಿಸಿದ ಸಿಐಎಸ್‌ಎಫ್ ಅಧಿಕಾರಿಗಳು, ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಎಐಎಸ್‌ಎಟಿಎಸ್‌ ಸಿಇಒ ಸಂಜಯ್ ಗುಪ್ತಾ, “ದೆಹಲಿ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಸಿಐಎಸ್‌ಎಫ್ ಸಹಯೋಗದಲ್ಲಿ ಮಾನವ ಕಳ್ಳಸಾಗಣೆ ಯತ್ನವನ್ನು ತಡೆಯುವಲ್ಲಿ ಕಂಪನಿಯು ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಹೇಳಿದ್ದಾರೆ.

ಮೂವರು ವ್ಯಕ್ತಿಗಳು ಅಕ್ರಮವಾಗಿ ಯುಕೆಗೆ ತೆರಳಲು ಪ್ರಯತ್ನಿಸಿದ್ದರು. ಕಾರ್ಯಾಚರಣೆಯ ಸಮಯದಲ್ಲಿ ಅವರಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಬೆಂಬಲ ನೀಡಿದ್ದ ನಮ್ಮ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮುಂದಿನ ಕಾನೂನು ಕ್ರಮಕ್ಕಾಗಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಗುಪ್ತಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಕಾರ್ಯಾಚರಣೆಗಳ ಸಮಗ್ರತೆಯನ್ನು ಕಾಪಾಡಿಕೊಳ್ಳಲು, ಸುರಕ್ಷತೆ, ಕಾನೂನುಬದ್ಧತೆ ಮತ್ತು ನೈತಿಕ ನಡವಳಿಕೆಯ ಉನ್ನತ ಗುಣಮಟ್ಟವನ್ನು ಎತ್ತಿಹಿಡಿಯಲು ಸಂಸ್ಥೆಯು ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಟಾಟಾ ಒಡೆತನದ ಏರ್ ಇಂಡಿಯಾ ಮತ್ತು ಸ್ಯಾಟ್ಸ್ ಏರ್ಪೋರ್ಟ್ ಸರ್ವಿಸಸ್ ಪ್ರೈ. ಲಿಮಿಟೆಡ್ ಜಂಟಿಯಾಗಿ ಬ್ಯಾಗೇಜ್ ನಿರ್ವಹಣೆ ಮತ್ತು ವಿಮಾನ ನಿರ್ವಹಣೆ ಸೇರಿದಂತೆ ವಿವಿಧ ವಿಮಾನ ನಿಲ್ದಾಣ ಸೇವೆಗಳನ್ನು ಒದಗಿಸುತ್ತಿದೆ.

ಈ ವಾರದ ಆರಂಭದಲ್ಲಿ ಸುಮಾರು 300 ಭಾರತೀಯರನ್ನು ಹೊತ್ತ ವಿಮಾನವನ್ನು ಮಾನವ ಕಳ್ಳ ಸಾಗಾಣಿಕೆಯ ಸಂಶಯದ ಮೇಲೆ ಫ್ರಾನ್ಸ್ ಅಧಿಕಾರಿಗಳು ತಡೆದಿದ್ದರು. ಆ ಬಳಿಕ ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಮಾನವ ಕಳ್ಳ ಸಾಗಾಣಿಕೆಯ ಬಗ್ಗೆ ನಿಗಾ ವಹಿಸಲಾಗಿದೆ.

ಇದನ್ನೂ ಓದಿ : ಪ್ರತಿಪಕ್ಷ ನಾಯಕರಿಗೆ ಎಚ್ಚರಿಕೆ ಸಂದೇಶ: ಹೇಳಿಕೆ ಬದಲಿಸಲು ಅ್ಯಪಲ್‌ ಕಂಪನಿಗೆ ಸರ್ಕಾರದ ಒತ್ತಡ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...