Homeಕರ್ನಾಟಕಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

- Advertisement -
- Advertisement -

2020ರ ಆಗಸ್ಟ್ ತಿಂಗಳಿನಲ್ಲಿ ರೈತರ ಮನೆಗಳಿಗೆ ನಿಗೂಢ ಮೂಲಗಳಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ಬರುತ್ತಿದ್ದ ವರದಿಯಾಗಿತ್ತು. ಅಪರಿಚಿತ ಮೂಲಗಳಿಂದ ಭಾರತಕ್ಕೆ ಪ್ರವೇಶಿಸುವ “ಅನುಮಾನಾಸ್ಪದ / ಅಪೇಕ್ಷಿಸದ ಬೀಜ ಪಾರ್ಸೆಲ್‌ಗಳ” ಬಗ್ಗೆ ಜಾಗರೂಕರಾಗಿರಿ. ಇದು ದೇಶದ ಜೀವವೈವಿಧ್ಯತೆಗೆ ಅಪಾಯಕಾರಿಯಾಗಿದೆ ಎಂದು ಕೇಂದ್ರವು ರಾಜ್ಯ ಸರ್ಕಾರಗಳು ಮತ್ತು ಬೀಜ ಉದ್ಯಮ ಮತ್ತು ಸಂಶೋಧನಾ ಸಂಸ್ಥೆಗಳನ್ನು ಎಚ್ಚರಿಸಿತ್ತು.

“ಕಳೆದ ಕೆಲವು ತಿಂಗಳುಗಳಲ್ಲಿ ವಿಶ್ವದಾದ್ಯಂತ ಸಾವಿರಾರು ಅನುಮಾನಾಸ್ಪದ ಬೀಜ ಸಾಗಣೆಗಳು ವರದಿಯಾಗಿವೆ. ಅಮೆರಿಕ, ಕೆನಡಾ, ಯುಕೆ, ನ್ಯೂಜಿಲೆಂಡ್, ಜಪಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈ ರೀತಿಯ ಘಟನೆಗಳು ವರದಿಯಾಗಿವೆ” ಎಂದು ಕೃಷಿ ಸಚಿವಾಲಯ ಕಳೆದ ವರ್ಷ ತಿಳಿಸಿತ್ತು.

ಆಗಿನಿಂದ ವಾಟ್ಸಾಪ್‌ನಲ್ಲಿ “ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ರೈತರಿಗೆ ಬರುತ್ತಿವೆ. ಅವುಗಳನ್ನು ಹೊಲಕ್ಕೆ ಹಾಕಿದರೆ ಬೆಳೆಯೆಲ್ಲಾ ನಾಶವಾಗುತ್ತದೆ. ಭೂಮಿಯ ಫಲವತ್ತತೆ ಹಾಳಾಗುತ್ತದೆ. ಅವುಗಳಲ್ಲಿ ವೈರಸ್ ಸಹ ಇವೆ” ಎಂಬ ಫೇಕ್‌ ಸುದ್ದಿಯೊಂದು ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ನಿಖರ ತನಿಖೆ ನಡೆದಿಲ್ಲ ಮತ್ತು ಯಾವುದೇ ಆಧಾರಗಳು ಸಿಕ್ಕಿಲ್ಲ.

ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ರತೇಂದ್ರನಾಥ್ ಸೂಗೂರರವರು ಜೂನ್ 1 ರಂದು “ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಿನಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ. ಅನಾಧೇಯರಿಂದ ಬೀಜ ಬಂದರೆ ರೈತರು ಸ್ವೀಕರಿಸಬಾರದು” ಎಂದು ಪತ್ರಿಕಾ ಹೇಳಿಕೆ ನೀಡಿದ್ದು ಅದನ್ನು ಪ್ರಜಾವಾಣಿ ಮತ್ತು ವಿಜಯ ಕರ್ನಾಟಕ ಪತ್ರಿಕೆಗಳು ವರದಿ ಮಾಡಿವೆ.

ಈ ರೀತಿ ಚೀನಾದಿಂದ ಬಿತ್ತನೆ ಬೀಜಗಳು ಪಾರ್ಸೆಲ್ ಬಂದಿದ್ದೆ ಆದರೆ ಅದು ನಮ್ಮ ದೇಶವನ್ನು ದೊಡ್ಡ ಅಪಾಯಕ್ಕೆ ದೂಡಲಿದೆ. ಈ ಕುರಿತು ತೀವ್ರ ತನಿಖೆ ನಡೆಸಿ ಅದರ ಮೂಲವನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಿಲ್ಲ ಏಕೆ? ಭಾರತ ಸರ್ಕಾರ ಇದರ ಬಗ್ಗೆ ಮಾತನಾಡಿಲ್ಲ. ಪತ್ರಿಕೆಗಳಲ್ಲಿ ಚರ್ಚೆಯಾಗುತ್ತಿಲ್ಲ. ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಯಾವ ಆಧಾರದಲ್ಲಿ ಈ ಹೇಳಿಕೆ ನೀಡಿದರು ಎಂಬುದು ವಿವಾದಕ್ಕೆ ಕಾರಣವಾಗಿದೆ.

“ರಾಜ್ಯದಲ್ಲಿ ಇಂತಹ ಬೀಜಗಳು ಬಂದಿರುವ ಬಗ್ಗೆ ವರದಿಯಾಗಿಲ್ಲ, ಮುನ್ನೆಚ್ಚರಿಕೆಯಾಗಿ ರೈತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇವೆ” ಎಂದು ಸಹ ಅದೇ ಅಧಿಕಾರಿ ಹೇಳಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಅವರಿಂದ ಸ್ಪಷ್ಟನೆ ಪಡೆಯಲು ಪ್ರಯತ್ನಿಸಿತು.

ಸರ್ ಚೀನಾ ಬಿತ್ತನೆ ಬೀಜಗಳ ಮಾಹಿತಿಯ ಮೂಲ ಯಾವುದು? ಸರ್ಕಾರದಿಂದ ಈ ಕುರಿತು ಆದೇಶ ಬಂದಿದೆಯೇ ಎಂದು ಡಾ. ರತೇಂದ್ರನಾಥ್ ಸೂಗೂರರವರನ್ನು ಪ್ರಶ್ನಿಸಿದೆವು. “ಮೊದಲಿಗೆ ಆದೇಶವಿದೆ ಎಂದರು. ಅದರ ಪ್ರತಿ ಕಳಿಸಿ ಎಂದಾಕ್ಷಣ, ಅದು ವ್ಯಾಟ್ಸಾಪ್‌ನಲ್ಲಿ ಬಂದೈತ್ರಿ, ಆಮ್ಯಾಲ ಅದನ್ನ ಕಳಿಸ್ತೀನಿ” ಎಂದರು.

ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶ್ ಅವರನ್ನು ನಾನುಗೌರಿ. ಕಾಂ ಸಂಪರ್ಕಿಸಿ, ಇಲಾಖೆಯಿಂದ ಇಂತಹ ಆದೇಶವಿದೆಯೇ ಎಂದು ಪ್ರಶ್ನೆ ಮಾಡಿತು. ಅದಕ್ಕೆ ಅವರು, ‘ಸದ್ಯಕ್ಕೆ ಅಂತಹ ಆದೇಶವೇ ಇಲ್ಲ. ಅದೂ ವ್ಯಾಟ್ಸಾಪ್ ಮೂಲಕ ಇಂತಹ ಆದೇಶ ಹೊರಡಿಸಲೂ ಆಗದು. ಕಳೆದ ವರ್ಷ ಕೇಂದ್ರ ಸರ್ಕಾರದ ಕೃಷಿ ಇಲಾಖೆ ಹೊರಡಿಸಿದ ಒಂದು ಸುತ್ತೋಲೆ ಪ್ರಕಾರ, ಅನಾಮಿಕ ವಿಳಾಸದಿಂದ ಬಂದ ಬಿತ್ತನೆ ಬೀಜಗಳನ್ನು ರೈತರು ಬಳಸಬಾರದು ಎಂಬ ಸೂಚನೆಯಿದೆ. ಅದರಲ್ಲಿ ಚೀನಾ ದೇಶದ ಪ್ರಸ್ತಾಪವಿಲ್ಲ. ಆದರೆ ಅಂತಹ ಬೀಜಗಳ ಪಾರ್ಸೆಲ್ ಬಂದಿರುವುದನ್ನು ನಾನು ಮತ್ತು ನನ್ನ ಸಹಮಿತ್ರ ಅಧಿಕಾರಿಗಳು ಇಲ್ಲಿವರೆಗೆ ಕಂಡೇ ಇಲ್ಲ’ ಎಂದರು.

ಈ ಕುರಿತು ಸಂಪೂರ್ಣ ವಿವರ ಪಡೆಯಲು, ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ವೆಂಕಟರಮಣರೆಡ್ಡಿಯವರನ್ನು ಸಂಪರ್ಕಿಸಿದಾಗ  ‘ಸದ್ಯಕ್ಕೆ ಅಂತಹ ಯಾವ ಆದೇಶವೂ ಇಲ್ಲ. ವ್ಯಾಟ್ಸಾಪ್ ಮೂಲಕ ಅಂತಹ ಆದೇಶವನ್ನೂ ಇಲಾಖೆ ನೀಡುವುದಿಲ್ಲ. 2020ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು, ಅನಾಮಧೇಯ ವಿಳಾಸಗಳಿಂದ ಬರುವ ಬಿತ್ತನೆ ಬೀಜಗಳ ಬಗ್ಗೆ ಎಚ್ಚರವಿರಲಿ ಎಂಬ ಸುತ್ತೋಲೆ ಹೊರಡಿಸಿತ್ತು. ಈಗೇನೂ ಅಂಥಾದ್ದಿಲ್ಲ. ಕಲಬುರಗಿ ಅಧಿಕಾರಿ ಹೀಗೇಕೆ ಮಾಡಿದರು ಎಂಬುದನ್ನು ವಿಚಾರಿಸುತ್ತೇನೆ’ ಎಂದು ತಿಳಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ಕಳಿಸಿದ ಕಳೆದ ವರ್ಷದ ಆದೇಶದ ಪ್ರತಿ

ಇಂತಹ ವಿಚಾರಗಳಲ್ಲಿ ಕೃಷಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಮತ್ತು ಅನಗತ್ಯ ಗೊಂದಲ ಉಂಟು ಮಾಡಬಾರದು. ಈ ರೀತಿ ಬಿತ್ತನೆ ಬೀಜಗಳು ಬರುತ್ತಿದ್ದರೆ ಅದರ ಮೂಲ ಪತ್ತೆ ಹಚ್ಚುವುದು ನಮ್ಮ ಪೊಲೀಸ್ ಇಲಾಖೆಗೆ ದೊಡ್ಡದಲ್ಲ. ಹಾಗಾಗಿ ಅದು ನಿಜವಾಗಿದ್ದರೆ ಈ ಕುರಿತು ಸೂಕ್ತ ಕಾನೂನು ಕ್ರಮಕ್ಕೆ ಕೃಷಿ ಇಲಾಖೆ ಮುಂದಾಗಬೇಕು. ಇಲ್ಲದಿದ್ದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅನಗತ್ಯ ಭಯ ಮೂಡಿಸದೆ ಸ್ಪಷ್ಟನೆ ನೀಡಬೇಕು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಳ್ಳಾರಿಯ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ.ಮುದಗಲ್ ಅವರು 2021ರ ಜೂನ್ 2ರಂದು ಪ್ರಕಟಣೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...