Homeಕರ್ನಾಟಕಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

- Advertisement -
- Advertisement -

2020ರ ಆಗಸ್ಟ್ ತಿಂಗಳಿನಲ್ಲಿ ರೈತರ ಮನೆಗಳಿಗೆ ನಿಗೂಢ ಮೂಲಗಳಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ಬರುತ್ತಿದ್ದ ವರದಿಯಾಗಿತ್ತು. ಅಪರಿಚಿತ ಮೂಲಗಳಿಂದ ಭಾರತಕ್ಕೆ ಪ್ರವೇಶಿಸುವ “ಅನುಮಾನಾಸ್ಪದ / ಅಪೇಕ್ಷಿಸದ ಬೀಜ ಪಾರ್ಸೆಲ್‌ಗಳ” ಬಗ್ಗೆ ಜಾಗರೂಕರಾಗಿರಿ. ಇದು ದೇಶದ ಜೀವವೈವಿಧ್ಯತೆಗೆ ಅಪಾಯಕಾರಿಯಾಗಿದೆ ಎಂದು ಕೇಂದ್ರವು ರಾಜ್ಯ ಸರ್ಕಾರಗಳು ಮತ್ತು ಬೀಜ ಉದ್ಯಮ ಮತ್ತು ಸಂಶೋಧನಾ ಸಂಸ್ಥೆಗಳನ್ನು ಎಚ್ಚರಿಸಿತ್ತು.

“ಕಳೆದ ಕೆಲವು ತಿಂಗಳುಗಳಲ್ಲಿ ವಿಶ್ವದಾದ್ಯಂತ ಸಾವಿರಾರು ಅನುಮಾನಾಸ್ಪದ ಬೀಜ ಸಾಗಣೆಗಳು ವರದಿಯಾಗಿವೆ. ಅಮೆರಿಕ, ಕೆನಡಾ, ಯುಕೆ, ನ್ಯೂಜಿಲೆಂಡ್, ಜಪಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈ ರೀತಿಯ ಘಟನೆಗಳು ವರದಿಯಾಗಿವೆ” ಎಂದು ಕೃಷಿ ಸಚಿವಾಲಯ ಕಳೆದ ವರ್ಷ ತಿಳಿಸಿತ್ತು.

ಆಗಿನಿಂದ ವಾಟ್ಸಾಪ್‌ನಲ್ಲಿ “ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ರೈತರಿಗೆ ಬರುತ್ತಿವೆ. ಅವುಗಳನ್ನು ಹೊಲಕ್ಕೆ ಹಾಕಿದರೆ ಬೆಳೆಯೆಲ್ಲಾ ನಾಶವಾಗುತ್ತದೆ. ಭೂಮಿಯ ಫಲವತ್ತತೆ ಹಾಳಾಗುತ್ತದೆ. ಅವುಗಳಲ್ಲಿ ವೈರಸ್ ಸಹ ಇವೆ” ಎಂಬ ಫೇಕ್‌ ಸುದ್ದಿಯೊಂದು ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ನಿಖರ ತನಿಖೆ ನಡೆದಿಲ್ಲ ಮತ್ತು ಯಾವುದೇ ಆಧಾರಗಳು ಸಿಕ್ಕಿಲ್ಲ.

ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ರತೇಂದ್ರನಾಥ್ ಸೂಗೂರರವರು ಜೂನ್ 1 ರಂದು “ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಿನಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ. ಅನಾಧೇಯರಿಂದ ಬೀಜ ಬಂದರೆ ರೈತರು ಸ್ವೀಕರಿಸಬಾರದು” ಎಂದು ಪತ್ರಿಕಾ ಹೇಳಿಕೆ ನೀಡಿದ್ದು ಅದನ್ನು ಪ್ರಜಾವಾಣಿ ಮತ್ತು ವಿಜಯ ಕರ್ನಾಟಕ ಪತ್ರಿಕೆಗಳು ವರದಿ ಮಾಡಿವೆ.

ಈ ರೀತಿ ಚೀನಾದಿಂದ ಬಿತ್ತನೆ ಬೀಜಗಳು ಪಾರ್ಸೆಲ್ ಬಂದಿದ್ದೆ ಆದರೆ ಅದು ನಮ್ಮ ದೇಶವನ್ನು ದೊಡ್ಡ ಅಪಾಯಕ್ಕೆ ದೂಡಲಿದೆ. ಈ ಕುರಿತು ತೀವ್ರ ತನಿಖೆ ನಡೆಸಿ ಅದರ ಮೂಲವನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಿಲ್ಲ ಏಕೆ? ಭಾರತ ಸರ್ಕಾರ ಇದರ ಬಗ್ಗೆ ಮಾತನಾಡಿಲ್ಲ. ಪತ್ರಿಕೆಗಳಲ್ಲಿ ಚರ್ಚೆಯಾಗುತ್ತಿಲ್ಲ. ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಯಾವ ಆಧಾರದಲ್ಲಿ ಈ ಹೇಳಿಕೆ ನೀಡಿದರು ಎಂಬುದು ವಿವಾದಕ್ಕೆ ಕಾರಣವಾಗಿದೆ.

“ರಾಜ್ಯದಲ್ಲಿ ಇಂತಹ ಬೀಜಗಳು ಬಂದಿರುವ ಬಗ್ಗೆ ವರದಿಯಾಗಿಲ್ಲ, ಮುನ್ನೆಚ್ಚರಿಕೆಯಾಗಿ ರೈತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇವೆ” ಎಂದು ಸಹ ಅದೇ ಅಧಿಕಾರಿ ಹೇಳಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಅವರಿಂದ ಸ್ಪಷ್ಟನೆ ಪಡೆಯಲು ಪ್ರಯತ್ನಿಸಿತು.

ಸರ್ ಚೀನಾ ಬಿತ್ತನೆ ಬೀಜಗಳ ಮಾಹಿತಿಯ ಮೂಲ ಯಾವುದು? ಸರ್ಕಾರದಿಂದ ಈ ಕುರಿತು ಆದೇಶ ಬಂದಿದೆಯೇ ಎಂದು ಡಾ. ರತೇಂದ್ರನಾಥ್ ಸೂಗೂರರವರನ್ನು ಪ್ರಶ್ನಿಸಿದೆವು. “ಮೊದಲಿಗೆ ಆದೇಶವಿದೆ ಎಂದರು. ಅದರ ಪ್ರತಿ ಕಳಿಸಿ ಎಂದಾಕ್ಷಣ, ಅದು ವ್ಯಾಟ್ಸಾಪ್‌ನಲ್ಲಿ ಬಂದೈತ್ರಿ, ಆಮ್ಯಾಲ ಅದನ್ನ ಕಳಿಸ್ತೀನಿ” ಎಂದರು.

ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶ್ ಅವರನ್ನು ನಾನುಗೌರಿ. ಕಾಂ ಸಂಪರ್ಕಿಸಿ, ಇಲಾಖೆಯಿಂದ ಇಂತಹ ಆದೇಶವಿದೆಯೇ ಎಂದು ಪ್ರಶ್ನೆ ಮಾಡಿತು. ಅದಕ್ಕೆ ಅವರು, ‘ಸದ್ಯಕ್ಕೆ ಅಂತಹ ಆದೇಶವೇ ಇಲ್ಲ. ಅದೂ ವ್ಯಾಟ್ಸಾಪ್ ಮೂಲಕ ಇಂತಹ ಆದೇಶ ಹೊರಡಿಸಲೂ ಆಗದು. ಕಳೆದ ವರ್ಷ ಕೇಂದ್ರ ಸರ್ಕಾರದ ಕೃಷಿ ಇಲಾಖೆ ಹೊರಡಿಸಿದ ಒಂದು ಸುತ್ತೋಲೆ ಪ್ರಕಾರ, ಅನಾಮಿಕ ವಿಳಾಸದಿಂದ ಬಂದ ಬಿತ್ತನೆ ಬೀಜಗಳನ್ನು ರೈತರು ಬಳಸಬಾರದು ಎಂಬ ಸೂಚನೆಯಿದೆ. ಅದರಲ್ಲಿ ಚೀನಾ ದೇಶದ ಪ್ರಸ್ತಾಪವಿಲ್ಲ. ಆದರೆ ಅಂತಹ ಬೀಜಗಳ ಪಾರ್ಸೆಲ್ ಬಂದಿರುವುದನ್ನು ನಾನು ಮತ್ತು ನನ್ನ ಸಹಮಿತ್ರ ಅಧಿಕಾರಿಗಳು ಇಲ್ಲಿವರೆಗೆ ಕಂಡೇ ಇಲ್ಲ’ ಎಂದರು.

ಈ ಕುರಿತು ಸಂಪೂರ್ಣ ವಿವರ ಪಡೆಯಲು, ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ವೆಂಕಟರಮಣರೆಡ್ಡಿಯವರನ್ನು ಸಂಪರ್ಕಿಸಿದಾಗ  ‘ಸದ್ಯಕ್ಕೆ ಅಂತಹ ಯಾವ ಆದೇಶವೂ ಇಲ್ಲ. ವ್ಯಾಟ್ಸಾಪ್ ಮೂಲಕ ಅಂತಹ ಆದೇಶವನ್ನೂ ಇಲಾಖೆ ನೀಡುವುದಿಲ್ಲ. 2020ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು, ಅನಾಮಧೇಯ ವಿಳಾಸಗಳಿಂದ ಬರುವ ಬಿತ್ತನೆ ಬೀಜಗಳ ಬಗ್ಗೆ ಎಚ್ಚರವಿರಲಿ ಎಂಬ ಸುತ್ತೋಲೆ ಹೊರಡಿಸಿತ್ತು. ಈಗೇನೂ ಅಂಥಾದ್ದಿಲ್ಲ. ಕಲಬುರಗಿ ಅಧಿಕಾರಿ ಹೀಗೇಕೆ ಮಾಡಿದರು ಎಂಬುದನ್ನು ವಿಚಾರಿಸುತ್ತೇನೆ’ ಎಂದು ತಿಳಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ಕಳಿಸಿದ ಕಳೆದ ವರ್ಷದ ಆದೇಶದ ಪ್ರತಿ

ಇಂತಹ ವಿಚಾರಗಳಲ್ಲಿ ಕೃಷಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಮತ್ತು ಅನಗತ್ಯ ಗೊಂದಲ ಉಂಟು ಮಾಡಬಾರದು. ಈ ರೀತಿ ಬಿತ್ತನೆ ಬೀಜಗಳು ಬರುತ್ತಿದ್ದರೆ ಅದರ ಮೂಲ ಪತ್ತೆ ಹಚ್ಚುವುದು ನಮ್ಮ ಪೊಲೀಸ್ ಇಲಾಖೆಗೆ ದೊಡ್ಡದಲ್ಲ. ಹಾಗಾಗಿ ಅದು ನಿಜವಾಗಿದ್ದರೆ ಈ ಕುರಿತು ಸೂಕ್ತ ಕಾನೂನು ಕ್ರಮಕ್ಕೆ ಕೃಷಿ ಇಲಾಖೆ ಮುಂದಾಗಬೇಕು. ಇಲ್ಲದಿದ್ದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅನಗತ್ಯ ಭಯ ಮೂಡಿಸದೆ ಸ್ಪಷ್ಟನೆ ನೀಡಬೇಕು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಳ್ಳಾರಿಯ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ.ಮುದಗಲ್ ಅವರು 2021ರ ಜೂನ್ 2ರಂದು ಪ್ರಕಟಣೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...