Homeಕರ್ನಾಟಕಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

- Advertisement -
- Advertisement -

2020ರ ಆಗಸ್ಟ್ ತಿಂಗಳಿನಲ್ಲಿ ರೈತರ ಮನೆಗಳಿಗೆ ನಿಗೂಢ ಮೂಲಗಳಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ಬರುತ್ತಿದ್ದ ವರದಿಯಾಗಿತ್ತು. ಅಪರಿಚಿತ ಮೂಲಗಳಿಂದ ಭಾರತಕ್ಕೆ ಪ್ರವೇಶಿಸುವ “ಅನುಮಾನಾಸ್ಪದ / ಅಪೇಕ್ಷಿಸದ ಬೀಜ ಪಾರ್ಸೆಲ್‌ಗಳ” ಬಗ್ಗೆ ಜಾಗರೂಕರಾಗಿರಿ. ಇದು ದೇಶದ ಜೀವವೈವಿಧ್ಯತೆಗೆ ಅಪಾಯಕಾರಿಯಾಗಿದೆ ಎಂದು ಕೇಂದ್ರವು ರಾಜ್ಯ ಸರ್ಕಾರಗಳು ಮತ್ತು ಬೀಜ ಉದ್ಯಮ ಮತ್ತು ಸಂಶೋಧನಾ ಸಂಸ್ಥೆಗಳನ್ನು ಎಚ್ಚರಿಸಿತ್ತು.

“ಕಳೆದ ಕೆಲವು ತಿಂಗಳುಗಳಲ್ಲಿ ವಿಶ್ವದಾದ್ಯಂತ ಸಾವಿರಾರು ಅನುಮಾನಾಸ್ಪದ ಬೀಜ ಸಾಗಣೆಗಳು ವರದಿಯಾಗಿವೆ. ಅಮೆರಿಕ, ಕೆನಡಾ, ಯುಕೆ, ನ್ಯೂಜಿಲೆಂಡ್, ಜಪಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈ ರೀತಿಯ ಘಟನೆಗಳು ವರದಿಯಾಗಿವೆ” ಎಂದು ಕೃಷಿ ಸಚಿವಾಲಯ ಕಳೆದ ವರ್ಷ ತಿಳಿಸಿತ್ತು.

ಆಗಿನಿಂದ ವಾಟ್ಸಾಪ್‌ನಲ್ಲಿ “ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ರೈತರಿಗೆ ಬರುತ್ತಿವೆ. ಅವುಗಳನ್ನು ಹೊಲಕ್ಕೆ ಹಾಕಿದರೆ ಬೆಳೆಯೆಲ್ಲಾ ನಾಶವಾಗುತ್ತದೆ. ಭೂಮಿಯ ಫಲವತ್ತತೆ ಹಾಳಾಗುತ್ತದೆ. ಅವುಗಳಲ್ಲಿ ವೈರಸ್ ಸಹ ಇವೆ” ಎಂಬ ಫೇಕ್‌ ಸುದ್ದಿಯೊಂದು ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ನಿಖರ ತನಿಖೆ ನಡೆದಿಲ್ಲ ಮತ್ತು ಯಾವುದೇ ಆಧಾರಗಳು ಸಿಕ್ಕಿಲ್ಲ.

ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ರತೇಂದ್ರನಾಥ್ ಸೂಗೂರರವರು ಜೂನ್ 1 ರಂದು “ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಿನಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ. ಅನಾಧೇಯರಿಂದ ಬೀಜ ಬಂದರೆ ರೈತರು ಸ್ವೀಕರಿಸಬಾರದು” ಎಂದು ಪತ್ರಿಕಾ ಹೇಳಿಕೆ ನೀಡಿದ್ದು ಅದನ್ನು ಪ್ರಜಾವಾಣಿ ಮತ್ತು ವಿಜಯ ಕರ್ನಾಟಕ ಪತ್ರಿಕೆಗಳು ವರದಿ ಮಾಡಿವೆ.

ಈ ರೀತಿ ಚೀನಾದಿಂದ ಬಿತ್ತನೆ ಬೀಜಗಳು ಪಾರ್ಸೆಲ್ ಬಂದಿದ್ದೆ ಆದರೆ ಅದು ನಮ್ಮ ದೇಶವನ್ನು ದೊಡ್ಡ ಅಪಾಯಕ್ಕೆ ದೂಡಲಿದೆ. ಈ ಕುರಿತು ತೀವ್ರ ತನಿಖೆ ನಡೆಸಿ ಅದರ ಮೂಲವನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಿಲ್ಲ ಏಕೆ? ಭಾರತ ಸರ್ಕಾರ ಇದರ ಬಗ್ಗೆ ಮಾತನಾಡಿಲ್ಲ. ಪತ್ರಿಕೆಗಳಲ್ಲಿ ಚರ್ಚೆಯಾಗುತ್ತಿಲ್ಲ. ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಯಾವ ಆಧಾರದಲ್ಲಿ ಈ ಹೇಳಿಕೆ ನೀಡಿದರು ಎಂಬುದು ವಿವಾದಕ್ಕೆ ಕಾರಣವಾಗಿದೆ.

“ರಾಜ್ಯದಲ್ಲಿ ಇಂತಹ ಬೀಜಗಳು ಬಂದಿರುವ ಬಗ್ಗೆ ವರದಿಯಾಗಿಲ್ಲ, ಮುನ್ನೆಚ್ಚರಿಕೆಯಾಗಿ ರೈತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇವೆ” ಎಂದು ಸಹ ಅದೇ ಅಧಿಕಾರಿ ಹೇಳಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಅವರಿಂದ ಸ್ಪಷ್ಟನೆ ಪಡೆಯಲು ಪ್ರಯತ್ನಿಸಿತು.

ಸರ್ ಚೀನಾ ಬಿತ್ತನೆ ಬೀಜಗಳ ಮಾಹಿತಿಯ ಮೂಲ ಯಾವುದು? ಸರ್ಕಾರದಿಂದ ಈ ಕುರಿತು ಆದೇಶ ಬಂದಿದೆಯೇ ಎಂದು ಡಾ. ರತೇಂದ್ರನಾಥ್ ಸೂಗೂರರವರನ್ನು ಪ್ರಶ್ನಿಸಿದೆವು. “ಮೊದಲಿಗೆ ಆದೇಶವಿದೆ ಎಂದರು. ಅದರ ಪ್ರತಿ ಕಳಿಸಿ ಎಂದಾಕ್ಷಣ, ಅದು ವ್ಯಾಟ್ಸಾಪ್‌ನಲ್ಲಿ ಬಂದೈತ್ರಿ, ಆಮ್ಯಾಲ ಅದನ್ನ ಕಳಿಸ್ತೀನಿ” ಎಂದರು.

ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶ್ ಅವರನ್ನು ನಾನುಗೌರಿ. ಕಾಂ ಸಂಪರ್ಕಿಸಿ, ಇಲಾಖೆಯಿಂದ ಇಂತಹ ಆದೇಶವಿದೆಯೇ ಎಂದು ಪ್ರಶ್ನೆ ಮಾಡಿತು. ಅದಕ್ಕೆ ಅವರು, ‘ಸದ್ಯಕ್ಕೆ ಅಂತಹ ಆದೇಶವೇ ಇಲ್ಲ. ಅದೂ ವ್ಯಾಟ್ಸಾಪ್ ಮೂಲಕ ಇಂತಹ ಆದೇಶ ಹೊರಡಿಸಲೂ ಆಗದು. ಕಳೆದ ವರ್ಷ ಕೇಂದ್ರ ಸರ್ಕಾರದ ಕೃಷಿ ಇಲಾಖೆ ಹೊರಡಿಸಿದ ಒಂದು ಸುತ್ತೋಲೆ ಪ್ರಕಾರ, ಅನಾಮಿಕ ವಿಳಾಸದಿಂದ ಬಂದ ಬಿತ್ತನೆ ಬೀಜಗಳನ್ನು ರೈತರು ಬಳಸಬಾರದು ಎಂಬ ಸೂಚನೆಯಿದೆ. ಅದರಲ್ಲಿ ಚೀನಾ ದೇಶದ ಪ್ರಸ್ತಾಪವಿಲ್ಲ. ಆದರೆ ಅಂತಹ ಬೀಜಗಳ ಪಾರ್ಸೆಲ್ ಬಂದಿರುವುದನ್ನು ನಾನು ಮತ್ತು ನನ್ನ ಸಹಮಿತ್ರ ಅಧಿಕಾರಿಗಳು ಇಲ್ಲಿವರೆಗೆ ಕಂಡೇ ಇಲ್ಲ’ ಎಂದರು.

ಈ ಕುರಿತು ಸಂಪೂರ್ಣ ವಿವರ ಪಡೆಯಲು, ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ವೆಂಕಟರಮಣರೆಡ್ಡಿಯವರನ್ನು ಸಂಪರ್ಕಿಸಿದಾಗ  ‘ಸದ್ಯಕ್ಕೆ ಅಂತಹ ಯಾವ ಆದೇಶವೂ ಇಲ್ಲ. ವ್ಯಾಟ್ಸಾಪ್ ಮೂಲಕ ಅಂತಹ ಆದೇಶವನ್ನೂ ಇಲಾಖೆ ನೀಡುವುದಿಲ್ಲ. 2020ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು, ಅನಾಮಧೇಯ ವಿಳಾಸಗಳಿಂದ ಬರುವ ಬಿತ್ತನೆ ಬೀಜಗಳ ಬಗ್ಗೆ ಎಚ್ಚರವಿರಲಿ ಎಂಬ ಸುತ್ತೋಲೆ ಹೊರಡಿಸಿತ್ತು. ಈಗೇನೂ ಅಂಥಾದ್ದಿಲ್ಲ. ಕಲಬುರಗಿ ಅಧಿಕಾರಿ ಹೀಗೇಕೆ ಮಾಡಿದರು ಎಂಬುದನ್ನು ವಿಚಾರಿಸುತ್ತೇನೆ’ ಎಂದು ತಿಳಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ಕಳಿಸಿದ ಕಳೆದ ವರ್ಷದ ಆದೇಶದ ಪ್ರತಿ

ಇಂತಹ ವಿಚಾರಗಳಲ್ಲಿ ಕೃಷಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಮತ್ತು ಅನಗತ್ಯ ಗೊಂದಲ ಉಂಟು ಮಾಡಬಾರದು. ಈ ರೀತಿ ಬಿತ್ತನೆ ಬೀಜಗಳು ಬರುತ್ತಿದ್ದರೆ ಅದರ ಮೂಲ ಪತ್ತೆ ಹಚ್ಚುವುದು ನಮ್ಮ ಪೊಲೀಸ್ ಇಲಾಖೆಗೆ ದೊಡ್ಡದಲ್ಲ. ಹಾಗಾಗಿ ಅದು ನಿಜವಾಗಿದ್ದರೆ ಈ ಕುರಿತು ಸೂಕ್ತ ಕಾನೂನು ಕ್ರಮಕ್ಕೆ ಕೃಷಿ ಇಲಾಖೆ ಮುಂದಾಗಬೇಕು. ಇಲ್ಲದಿದ್ದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅನಗತ್ಯ ಭಯ ಮೂಡಿಸದೆ ಸ್ಪಷ್ಟನೆ ನೀಡಬೇಕು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಳ್ಳಾರಿಯ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ.ಮುದಗಲ್ ಅವರು 2021ರ ಜೂನ್ 2ರಂದು ಪ್ರಕಟಣೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...