Homeಕರ್ನಾಟಕಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

- Advertisement -
- Advertisement -

2020ರ ಆಗಸ್ಟ್ ತಿಂಗಳಿನಲ್ಲಿ ರೈತರ ಮನೆಗಳಿಗೆ ನಿಗೂಢ ಮೂಲಗಳಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ಬರುತ್ತಿದ್ದ ವರದಿಯಾಗಿತ್ತು. ಅಪರಿಚಿತ ಮೂಲಗಳಿಂದ ಭಾರತಕ್ಕೆ ಪ್ರವೇಶಿಸುವ “ಅನುಮಾನಾಸ್ಪದ / ಅಪೇಕ್ಷಿಸದ ಬೀಜ ಪಾರ್ಸೆಲ್‌ಗಳ” ಬಗ್ಗೆ ಜಾಗರೂಕರಾಗಿರಿ. ಇದು ದೇಶದ ಜೀವವೈವಿಧ್ಯತೆಗೆ ಅಪಾಯಕಾರಿಯಾಗಿದೆ ಎಂದು ಕೇಂದ್ರವು ರಾಜ್ಯ ಸರ್ಕಾರಗಳು ಮತ್ತು ಬೀಜ ಉದ್ಯಮ ಮತ್ತು ಸಂಶೋಧನಾ ಸಂಸ್ಥೆಗಳನ್ನು ಎಚ್ಚರಿಸಿತ್ತು.

“ಕಳೆದ ಕೆಲವು ತಿಂಗಳುಗಳಲ್ಲಿ ವಿಶ್ವದಾದ್ಯಂತ ಸಾವಿರಾರು ಅನುಮಾನಾಸ್ಪದ ಬೀಜ ಸಾಗಣೆಗಳು ವರದಿಯಾಗಿವೆ. ಅಮೆರಿಕ, ಕೆನಡಾ, ಯುಕೆ, ನ್ಯೂಜಿಲೆಂಡ್, ಜಪಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈ ರೀತಿಯ ಘಟನೆಗಳು ವರದಿಯಾಗಿವೆ” ಎಂದು ಕೃಷಿ ಸಚಿವಾಲಯ ಕಳೆದ ವರ್ಷ ತಿಳಿಸಿತ್ತು.

ಆಗಿನಿಂದ ವಾಟ್ಸಾಪ್‌ನಲ್ಲಿ “ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ರೈತರಿಗೆ ಬರುತ್ತಿವೆ. ಅವುಗಳನ್ನು ಹೊಲಕ್ಕೆ ಹಾಕಿದರೆ ಬೆಳೆಯೆಲ್ಲಾ ನಾಶವಾಗುತ್ತದೆ. ಭೂಮಿಯ ಫಲವತ್ತತೆ ಹಾಳಾಗುತ್ತದೆ. ಅವುಗಳಲ್ಲಿ ವೈರಸ್ ಸಹ ಇವೆ” ಎಂಬ ಫೇಕ್‌ ಸುದ್ದಿಯೊಂದು ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ನಿಖರ ತನಿಖೆ ನಡೆದಿಲ್ಲ ಮತ್ತು ಯಾವುದೇ ಆಧಾರಗಳು ಸಿಕ್ಕಿಲ್ಲ.

ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ರತೇಂದ್ರನಾಥ್ ಸೂಗೂರರವರು ಜೂನ್ 1 ರಂದು “ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಿನಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ. ಅನಾಧೇಯರಿಂದ ಬೀಜ ಬಂದರೆ ರೈತರು ಸ್ವೀಕರಿಸಬಾರದು” ಎಂದು ಪತ್ರಿಕಾ ಹೇಳಿಕೆ ನೀಡಿದ್ದು ಅದನ್ನು ಪ್ರಜಾವಾಣಿ ಮತ್ತು ವಿಜಯ ಕರ್ನಾಟಕ ಪತ್ರಿಕೆಗಳು ವರದಿ ಮಾಡಿವೆ.

ಈ ರೀತಿ ಚೀನಾದಿಂದ ಬಿತ್ತನೆ ಬೀಜಗಳು ಪಾರ್ಸೆಲ್ ಬಂದಿದ್ದೆ ಆದರೆ ಅದು ನಮ್ಮ ದೇಶವನ್ನು ದೊಡ್ಡ ಅಪಾಯಕ್ಕೆ ದೂಡಲಿದೆ. ಈ ಕುರಿತು ತೀವ್ರ ತನಿಖೆ ನಡೆಸಿ ಅದರ ಮೂಲವನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಿಲ್ಲ ಏಕೆ? ಭಾರತ ಸರ್ಕಾರ ಇದರ ಬಗ್ಗೆ ಮಾತನಾಡಿಲ್ಲ. ಪತ್ರಿಕೆಗಳಲ್ಲಿ ಚರ್ಚೆಯಾಗುತ್ತಿಲ್ಲ. ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಯಾವ ಆಧಾರದಲ್ಲಿ ಈ ಹೇಳಿಕೆ ನೀಡಿದರು ಎಂಬುದು ವಿವಾದಕ್ಕೆ ಕಾರಣವಾಗಿದೆ.

“ರಾಜ್ಯದಲ್ಲಿ ಇಂತಹ ಬೀಜಗಳು ಬಂದಿರುವ ಬಗ್ಗೆ ವರದಿಯಾಗಿಲ್ಲ, ಮುನ್ನೆಚ್ಚರಿಕೆಯಾಗಿ ರೈತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇವೆ” ಎಂದು ಸಹ ಅದೇ ಅಧಿಕಾರಿ ಹೇಳಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಅವರಿಂದ ಸ್ಪಷ್ಟನೆ ಪಡೆಯಲು ಪ್ರಯತ್ನಿಸಿತು.

ಸರ್ ಚೀನಾ ಬಿತ್ತನೆ ಬೀಜಗಳ ಮಾಹಿತಿಯ ಮೂಲ ಯಾವುದು? ಸರ್ಕಾರದಿಂದ ಈ ಕುರಿತು ಆದೇಶ ಬಂದಿದೆಯೇ ಎಂದು ಡಾ. ರತೇಂದ್ರನಾಥ್ ಸೂಗೂರರವರನ್ನು ಪ್ರಶ್ನಿಸಿದೆವು. “ಮೊದಲಿಗೆ ಆದೇಶವಿದೆ ಎಂದರು. ಅದರ ಪ್ರತಿ ಕಳಿಸಿ ಎಂದಾಕ್ಷಣ, ಅದು ವ್ಯಾಟ್ಸಾಪ್‌ನಲ್ಲಿ ಬಂದೈತ್ರಿ, ಆಮ್ಯಾಲ ಅದನ್ನ ಕಳಿಸ್ತೀನಿ” ಎಂದರು.

ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶ್ ಅವರನ್ನು ನಾನುಗೌರಿ. ಕಾಂ ಸಂಪರ್ಕಿಸಿ, ಇಲಾಖೆಯಿಂದ ಇಂತಹ ಆದೇಶವಿದೆಯೇ ಎಂದು ಪ್ರಶ್ನೆ ಮಾಡಿತು. ಅದಕ್ಕೆ ಅವರು, ‘ಸದ್ಯಕ್ಕೆ ಅಂತಹ ಆದೇಶವೇ ಇಲ್ಲ. ಅದೂ ವ್ಯಾಟ್ಸಾಪ್ ಮೂಲಕ ಇಂತಹ ಆದೇಶ ಹೊರಡಿಸಲೂ ಆಗದು. ಕಳೆದ ವರ್ಷ ಕೇಂದ್ರ ಸರ್ಕಾರದ ಕೃಷಿ ಇಲಾಖೆ ಹೊರಡಿಸಿದ ಒಂದು ಸುತ್ತೋಲೆ ಪ್ರಕಾರ, ಅನಾಮಿಕ ವಿಳಾಸದಿಂದ ಬಂದ ಬಿತ್ತನೆ ಬೀಜಗಳನ್ನು ರೈತರು ಬಳಸಬಾರದು ಎಂಬ ಸೂಚನೆಯಿದೆ. ಅದರಲ್ಲಿ ಚೀನಾ ದೇಶದ ಪ್ರಸ್ತಾಪವಿಲ್ಲ. ಆದರೆ ಅಂತಹ ಬೀಜಗಳ ಪಾರ್ಸೆಲ್ ಬಂದಿರುವುದನ್ನು ನಾನು ಮತ್ತು ನನ್ನ ಸಹಮಿತ್ರ ಅಧಿಕಾರಿಗಳು ಇಲ್ಲಿವರೆಗೆ ಕಂಡೇ ಇಲ್ಲ’ ಎಂದರು.

ಈ ಕುರಿತು ಸಂಪೂರ್ಣ ವಿವರ ಪಡೆಯಲು, ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ವೆಂಕಟರಮಣರೆಡ್ಡಿಯವರನ್ನು ಸಂಪರ್ಕಿಸಿದಾಗ  ‘ಸದ್ಯಕ್ಕೆ ಅಂತಹ ಯಾವ ಆದೇಶವೂ ಇಲ್ಲ. ವ್ಯಾಟ್ಸಾಪ್ ಮೂಲಕ ಅಂತಹ ಆದೇಶವನ್ನೂ ಇಲಾಖೆ ನೀಡುವುದಿಲ್ಲ. 2020ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು, ಅನಾಮಧೇಯ ವಿಳಾಸಗಳಿಂದ ಬರುವ ಬಿತ್ತನೆ ಬೀಜಗಳ ಬಗ್ಗೆ ಎಚ್ಚರವಿರಲಿ ಎಂಬ ಸುತ್ತೋಲೆ ಹೊರಡಿಸಿತ್ತು. ಈಗೇನೂ ಅಂಥಾದ್ದಿಲ್ಲ. ಕಲಬುರಗಿ ಅಧಿಕಾರಿ ಹೀಗೇಕೆ ಮಾಡಿದರು ಎಂಬುದನ್ನು ವಿಚಾರಿಸುತ್ತೇನೆ’ ಎಂದು ತಿಳಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ಕಳಿಸಿದ ಕಳೆದ ವರ್ಷದ ಆದೇಶದ ಪ್ರತಿ

ಇಂತಹ ವಿಚಾರಗಳಲ್ಲಿ ಕೃಷಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಮತ್ತು ಅನಗತ್ಯ ಗೊಂದಲ ಉಂಟು ಮಾಡಬಾರದು. ಈ ರೀತಿ ಬಿತ್ತನೆ ಬೀಜಗಳು ಬರುತ್ತಿದ್ದರೆ ಅದರ ಮೂಲ ಪತ್ತೆ ಹಚ್ಚುವುದು ನಮ್ಮ ಪೊಲೀಸ್ ಇಲಾಖೆಗೆ ದೊಡ್ಡದಲ್ಲ. ಹಾಗಾಗಿ ಅದು ನಿಜವಾಗಿದ್ದರೆ ಈ ಕುರಿತು ಸೂಕ್ತ ಕಾನೂನು ಕ್ರಮಕ್ಕೆ ಕೃಷಿ ಇಲಾಖೆ ಮುಂದಾಗಬೇಕು. ಇಲ್ಲದಿದ್ದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅನಗತ್ಯ ಭಯ ಮೂಡಿಸದೆ ಸ್ಪಷ್ಟನೆ ನೀಡಬೇಕು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಳ್ಳಾರಿಯ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ.ಮುದಗಲ್ ಅವರು 2021ರ ಜೂನ್ 2ರಂದು ಪ್ರಕಟಣೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...