Homeಕರ್ನಾಟಕಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

- Advertisement -
- Advertisement -

2020ರ ಆಗಸ್ಟ್ ತಿಂಗಳಿನಲ್ಲಿ ರೈತರ ಮನೆಗಳಿಗೆ ನಿಗೂಢ ಮೂಲಗಳಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ಬರುತ್ತಿದ್ದ ವರದಿಯಾಗಿತ್ತು. ಅಪರಿಚಿತ ಮೂಲಗಳಿಂದ ಭಾರತಕ್ಕೆ ಪ್ರವೇಶಿಸುವ “ಅನುಮಾನಾಸ್ಪದ / ಅಪೇಕ್ಷಿಸದ ಬೀಜ ಪಾರ್ಸೆಲ್‌ಗಳ” ಬಗ್ಗೆ ಜಾಗರೂಕರಾಗಿರಿ. ಇದು ದೇಶದ ಜೀವವೈವಿಧ್ಯತೆಗೆ ಅಪಾಯಕಾರಿಯಾಗಿದೆ ಎಂದು ಕೇಂದ್ರವು ರಾಜ್ಯ ಸರ್ಕಾರಗಳು ಮತ್ತು ಬೀಜ ಉದ್ಯಮ ಮತ್ತು ಸಂಶೋಧನಾ ಸಂಸ್ಥೆಗಳನ್ನು ಎಚ್ಚರಿಸಿತ್ತು.

“ಕಳೆದ ಕೆಲವು ತಿಂಗಳುಗಳಲ್ಲಿ ವಿಶ್ವದಾದ್ಯಂತ ಸಾವಿರಾರು ಅನುಮಾನಾಸ್ಪದ ಬೀಜ ಸಾಗಣೆಗಳು ವರದಿಯಾಗಿವೆ. ಅಮೆರಿಕ, ಕೆನಡಾ, ಯುಕೆ, ನ್ಯೂಜಿಲೆಂಡ್, ಜಪಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈ ರೀತಿಯ ಘಟನೆಗಳು ವರದಿಯಾಗಿವೆ” ಎಂದು ಕೃಷಿ ಸಚಿವಾಲಯ ಕಳೆದ ವರ್ಷ ತಿಳಿಸಿತ್ತು.

ಆಗಿನಿಂದ ವಾಟ್ಸಾಪ್‌ನಲ್ಲಿ “ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ರೈತರಿಗೆ ಬರುತ್ತಿವೆ. ಅವುಗಳನ್ನು ಹೊಲಕ್ಕೆ ಹಾಕಿದರೆ ಬೆಳೆಯೆಲ್ಲಾ ನಾಶವಾಗುತ್ತದೆ. ಭೂಮಿಯ ಫಲವತ್ತತೆ ಹಾಳಾಗುತ್ತದೆ. ಅವುಗಳಲ್ಲಿ ವೈರಸ್ ಸಹ ಇವೆ” ಎಂಬ ಫೇಕ್‌ ಸುದ್ದಿಯೊಂದು ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ನಿಖರ ತನಿಖೆ ನಡೆದಿಲ್ಲ ಮತ್ತು ಯಾವುದೇ ಆಧಾರಗಳು ಸಿಕ್ಕಿಲ್ಲ.

ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ರತೇಂದ್ರನಾಥ್ ಸೂಗೂರರವರು ಜೂನ್ 1 ರಂದು “ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಿನಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ. ಅನಾಧೇಯರಿಂದ ಬೀಜ ಬಂದರೆ ರೈತರು ಸ್ವೀಕರಿಸಬಾರದು” ಎಂದು ಪತ್ರಿಕಾ ಹೇಳಿಕೆ ನೀಡಿದ್ದು ಅದನ್ನು ಪ್ರಜಾವಾಣಿ ಮತ್ತು ವಿಜಯ ಕರ್ನಾಟಕ ಪತ್ರಿಕೆಗಳು ವರದಿ ಮಾಡಿವೆ.

ಈ ರೀತಿ ಚೀನಾದಿಂದ ಬಿತ್ತನೆ ಬೀಜಗಳು ಪಾರ್ಸೆಲ್ ಬಂದಿದ್ದೆ ಆದರೆ ಅದು ನಮ್ಮ ದೇಶವನ್ನು ದೊಡ್ಡ ಅಪಾಯಕ್ಕೆ ದೂಡಲಿದೆ. ಈ ಕುರಿತು ತೀವ್ರ ತನಿಖೆ ನಡೆಸಿ ಅದರ ಮೂಲವನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಿಲ್ಲ ಏಕೆ? ಭಾರತ ಸರ್ಕಾರ ಇದರ ಬಗ್ಗೆ ಮಾತನಾಡಿಲ್ಲ. ಪತ್ರಿಕೆಗಳಲ್ಲಿ ಚರ್ಚೆಯಾಗುತ್ತಿಲ್ಲ. ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಯಾವ ಆಧಾರದಲ್ಲಿ ಈ ಹೇಳಿಕೆ ನೀಡಿದರು ಎಂಬುದು ವಿವಾದಕ್ಕೆ ಕಾರಣವಾಗಿದೆ.

“ರಾಜ್ಯದಲ್ಲಿ ಇಂತಹ ಬೀಜಗಳು ಬಂದಿರುವ ಬಗ್ಗೆ ವರದಿಯಾಗಿಲ್ಲ, ಮುನ್ನೆಚ್ಚರಿಕೆಯಾಗಿ ರೈತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇವೆ” ಎಂದು ಸಹ ಅದೇ ಅಧಿಕಾರಿ ಹೇಳಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಅವರಿಂದ ಸ್ಪಷ್ಟನೆ ಪಡೆಯಲು ಪ್ರಯತ್ನಿಸಿತು.

ಸರ್ ಚೀನಾ ಬಿತ್ತನೆ ಬೀಜಗಳ ಮಾಹಿತಿಯ ಮೂಲ ಯಾವುದು? ಸರ್ಕಾರದಿಂದ ಈ ಕುರಿತು ಆದೇಶ ಬಂದಿದೆಯೇ ಎಂದು ಡಾ. ರತೇಂದ್ರನಾಥ್ ಸೂಗೂರರವರನ್ನು ಪ್ರಶ್ನಿಸಿದೆವು. “ಮೊದಲಿಗೆ ಆದೇಶವಿದೆ ಎಂದರು. ಅದರ ಪ್ರತಿ ಕಳಿಸಿ ಎಂದಾಕ್ಷಣ, ಅದು ವ್ಯಾಟ್ಸಾಪ್‌ನಲ್ಲಿ ಬಂದೈತ್ರಿ, ಆಮ್ಯಾಲ ಅದನ್ನ ಕಳಿಸ್ತೀನಿ” ಎಂದರು.

ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶ್ ಅವರನ್ನು ನಾನುಗೌರಿ. ಕಾಂ ಸಂಪರ್ಕಿಸಿ, ಇಲಾಖೆಯಿಂದ ಇಂತಹ ಆದೇಶವಿದೆಯೇ ಎಂದು ಪ್ರಶ್ನೆ ಮಾಡಿತು. ಅದಕ್ಕೆ ಅವರು, ‘ಸದ್ಯಕ್ಕೆ ಅಂತಹ ಆದೇಶವೇ ಇಲ್ಲ. ಅದೂ ವ್ಯಾಟ್ಸಾಪ್ ಮೂಲಕ ಇಂತಹ ಆದೇಶ ಹೊರಡಿಸಲೂ ಆಗದು. ಕಳೆದ ವರ್ಷ ಕೇಂದ್ರ ಸರ್ಕಾರದ ಕೃಷಿ ಇಲಾಖೆ ಹೊರಡಿಸಿದ ಒಂದು ಸುತ್ತೋಲೆ ಪ್ರಕಾರ, ಅನಾಮಿಕ ವಿಳಾಸದಿಂದ ಬಂದ ಬಿತ್ತನೆ ಬೀಜಗಳನ್ನು ರೈತರು ಬಳಸಬಾರದು ಎಂಬ ಸೂಚನೆಯಿದೆ. ಅದರಲ್ಲಿ ಚೀನಾ ದೇಶದ ಪ್ರಸ್ತಾಪವಿಲ್ಲ. ಆದರೆ ಅಂತಹ ಬೀಜಗಳ ಪಾರ್ಸೆಲ್ ಬಂದಿರುವುದನ್ನು ನಾನು ಮತ್ತು ನನ್ನ ಸಹಮಿತ್ರ ಅಧಿಕಾರಿಗಳು ಇಲ್ಲಿವರೆಗೆ ಕಂಡೇ ಇಲ್ಲ’ ಎಂದರು.

ಈ ಕುರಿತು ಸಂಪೂರ್ಣ ವಿವರ ಪಡೆಯಲು, ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ವೆಂಕಟರಮಣರೆಡ್ಡಿಯವರನ್ನು ಸಂಪರ್ಕಿಸಿದಾಗ  ‘ಸದ್ಯಕ್ಕೆ ಅಂತಹ ಯಾವ ಆದೇಶವೂ ಇಲ್ಲ. ವ್ಯಾಟ್ಸಾಪ್ ಮೂಲಕ ಅಂತಹ ಆದೇಶವನ್ನೂ ಇಲಾಖೆ ನೀಡುವುದಿಲ್ಲ. 2020ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು, ಅನಾಮಧೇಯ ವಿಳಾಸಗಳಿಂದ ಬರುವ ಬಿತ್ತನೆ ಬೀಜಗಳ ಬಗ್ಗೆ ಎಚ್ಚರವಿರಲಿ ಎಂಬ ಸುತ್ತೋಲೆ ಹೊರಡಿಸಿತ್ತು. ಈಗೇನೂ ಅಂಥಾದ್ದಿಲ್ಲ. ಕಲಬುರಗಿ ಅಧಿಕಾರಿ ಹೀಗೇಕೆ ಮಾಡಿದರು ಎಂಬುದನ್ನು ವಿಚಾರಿಸುತ್ತೇನೆ’ ಎಂದು ತಿಳಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ಕಳಿಸಿದ ಕಳೆದ ವರ್ಷದ ಆದೇಶದ ಪ್ರತಿ

ಇಂತಹ ವಿಚಾರಗಳಲ್ಲಿ ಕೃಷಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಮತ್ತು ಅನಗತ್ಯ ಗೊಂದಲ ಉಂಟು ಮಾಡಬಾರದು. ಈ ರೀತಿ ಬಿತ್ತನೆ ಬೀಜಗಳು ಬರುತ್ತಿದ್ದರೆ ಅದರ ಮೂಲ ಪತ್ತೆ ಹಚ್ಚುವುದು ನಮ್ಮ ಪೊಲೀಸ್ ಇಲಾಖೆಗೆ ದೊಡ್ಡದಲ್ಲ. ಹಾಗಾಗಿ ಅದು ನಿಜವಾಗಿದ್ದರೆ ಈ ಕುರಿತು ಸೂಕ್ತ ಕಾನೂನು ಕ್ರಮಕ್ಕೆ ಕೃಷಿ ಇಲಾಖೆ ಮುಂದಾಗಬೇಕು. ಇಲ್ಲದಿದ್ದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅನಗತ್ಯ ಭಯ ಮೂಡಿಸದೆ ಸ್ಪಷ್ಟನೆ ನೀಡಬೇಕು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಳ್ಳಾರಿಯ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ.ಮುದಗಲ್ ಅವರು 2021ರ ಜೂನ್ 2ರಂದು ಪ್ರಕಟಣೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...