Homeಕರ್ನಾಟಕಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್ ಆರೋಪ: ಆಧಾರವಿಲ್ಲದೇ ಕೃಷಿ ಅಧಿಕಾರಿಯ ಪತ್ರಿಕಾ ಹೇಳಿಕೆ!

- Advertisement -
- Advertisement -

2020ರ ಆಗಸ್ಟ್ ತಿಂಗಳಿನಲ್ಲಿ ರೈತರ ಮನೆಗಳಿಗೆ ನಿಗೂಢ ಮೂಲಗಳಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ಬರುತ್ತಿದ್ದ ವರದಿಯಾಗಿತ್ತು. ಅಪರಿಚಿತ ಮೂಲಗಳಿಂದ ಭಾರತಕ್ಕೆ ಪ್ರವೇಶಿಸುವ “ಅನುಮಾನಾಸ್ಪದ / ಅಪೇಕ್ಷಿಸದ ಬೀಜ ಪಾರ್ಸೆಲ್‌ಗಳ” ಬಗ್ಗೆ ಜಾಗರೂಕರಾಗಿರಿ. ಇದು ದೇಶದ ಜೀವವೈವಿಧ್ಯತೆಗೆ ಅಪಾಯಕಾರಿಯಾಗಿದೆ ಎಂದು ಕೇಂದ್ರವು ರಾಜ್ಯ ಸರ್ಕಾರಗಳು ಮತ್ತು ಬೀಜ ಉದ್ಯಮ ಮತ್ತು ಸಂಶೋಧನಾ ಸಂಸ್ಥೆಗಳನ್ನು ಎಚ್ಚರಿಸಿತ್ತು.

“ಕಳೆದ ಕೆಲವು ತಿಂಗಳುಗಳಲ್ಲಿ ವಿಶ್ವದಾದ್ಯಂತ ಸಾವಿರಾರು ಅನುಮಾನಾಸ್ಪದ ಬೀಜ ಸಾಗಣೆಗಳು ವರದಿಯಾಗಿವೆ. ಅಮೆರಿಕ, ಕೆನಡಾ, ಯುಕೆ, ನ್ಯೂಜಿಲೆಂಡ್, ಜಪಾನ್ ಮತ್ತು ಕೆಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈ ರೀತಿಯ ಘಟನೆಗಳು ವರದಿಯಾಗಿವೆ” ಎಂದು ಕೃಷಿ ಸಚಿವಾಲಯ ಕಳೆದ ವರ್ಷ ತಿಳಿಸಿತ್ತು.

ಆಗಿನಿಂದ ವಾಟ್ಸಾಪ್‌ನಲ್ಲಿ “ಚೀನಾದಿಂದ ಶಂಕಾಸ್ಪದ ಬಿತ್ತನೆ ಬೀಜ ಪಾರ್ಸೆಲ್‌ಗಳು ರೈತರಿಗೆ ಬರುತ್ತಿವೆ. ಅವುಗಳನ್ನು ಹೊಲಕ್ಕೆ ಹಾಕಿದರೆ ಬೆಳೆಯೆಲ್ಲಾ ನಾಶವಾಗುತ್ತದೆ. ಭೂಮಿಯ ಫಲವತ್ತತೆ ಹಾಳಾಗುತ್ತದೆ. ಅವುಗಳಲ್ಲಿ ವೈರಸ್ ಸಹ ಇವೆ” ಎಂಬ ಫೇಕ್‌ ಸುದ್ದಿಯೊಂದು ವೈರಲ್ ಆಗುತ್ತಿದೆ. ಆದರೆ ಈ ಬಗ್ಗೆ ನಿಖರ ತನಿಖೆ ನಡೆದಿಲ್ಲ ಮತ್ತು ಯಾವುದೇ ಆಧಾರಗಳು ಸಿಕ್ಕಿಲ್ಲ.

ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ರತೇಂದ್ರನಾಥ್ ಸೂಗೂರರವರು ಜೂನ್ 1 ರಂದು “ಚೀನಾದಿಂದ ಬಿತ್ತನೆ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ತಿಂಗಳಿನಲ್ಲಿಯೇ ಬೆಳೆ ಸಂಪೂರ್ಣ ನಾಶವಾಗುತ್ತದೆ. ಅನಾಧೇಯರಿಂದ ಬೀಜ ಬಂದರೆ ರೈತರು ಸ್ವೀಕರಿಸಬಾರದು” ಎಂದು ಪತ್ರಿಕಾ ಹೇಳಿಕೆ ನೀಡಿದ್ದು ಅದನ್ನು ಪ್ರಜಾವಾಣಿ ಮತ್ತು ವಿಜಯ ಕರ್ನಾಟಕ ಪತ್ರಿಕೆಗಳು ವರದಿ ಮಾಡಿವೆ.

ಈ ರೀತಿ ಚೀನಾದಿಂದ ಬಿತ್ತನೆ ಬೀಜಗಳು ಪಾರ್ಸೆಲ್ ಬಂದಿದ್ದೆ ಆದರೆ ಅದು ನಮ್ಮ ದೇಶವನ್ನು ದೊಡ್ಡ ಅಪಾಯಕ್ಕೆ ದೂಡಲಿದೆ. ಈ ಕುರಿತು ತೀವ್ರ ತನಿಖೆ ನಡೆಸಿ ಅದರ ಮೂಲವನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಿಲ್ಲ ಏಕೆ? ಭಾರತ ಸರ್ಕಾರ ಇದರ ಬಗ್ಗೆ ಮಾತನಾಡಿಲ್ಲ. ಪತ್ರಿಕೆಗಳಲ್ಲಿ ಚರ್ಚೆಯಾಗುತ್ತಿಲ್ಲ. ಆದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಯಾವ ಆಧಾರದಲ್ಲಿ ಈ ಹೇಳಿಕೆ ನೀಡಿದರು ಎಂಬುದು ವಿವಾದಕ್ಕೆ ಕಾರಣವಾಗಿದೆ.

“ರಾಜ್ಯದಲ್ಲಿ ಇಂತಹ ಬೀಜಗಳು ಬಂದಿರುವ ಬಗ್ಗೆ ವರದಿಯಾಗಿಲ್ಲ, ಮುನ್ನೆಚ್ಚರಿಕೆಯಾಗಿ ರೈತರಿಗೆ ಈ ಬಗ್ಗೆ ಮಾಹಿತಿ ನೀಡಿದ್ದೇವೆ” ಎಂದು ಸಹ ಅದೇ ಅಧಿಕಾರಿ ಹೇಳಿದ್ದಾರೆ. ಈ ಕುರಿತು ನಾನುಗೌರಿ.ಕಾಂ ಅವರಿಂದ ಸ್ಪಷ್ಟನೆ ಪಡೆಯಲು ಪ್ರಯತ್ನಿಸಿತು.

ಸರ್ ಚೀನಾ ಬಿತ್ತನೆ ಬೀಜಗಳ ಮಾಹಿತಿಯ ಮೂಲ ಯಾವುದು? ಸರ್ಕಾರದಿಂದ ಈ ಕುರಿತು ಆದೇಶ ಬಂದಿದೆಯೇ ಎಂದು ಡಾ. ರತೇಂದ್ರನಾಥ್ ಸೂಗೂರರವರನ್ನು ಪ್ರಶ್ನಿಸಿದೆವು. “ಮೊದಲಿಗೆ ಆದೇಶವಿದೆ ಎಂದರು. ಅದರ ಪ್ರತಿ ಕಳಿಸಿ ಎಂದಾಕ್ಷಣ, ಅದು ವ್ಯಾಟ್ಸಾಪ್‌ನಲ್ಲಿ ಬಂದೈತ್ರಿ, ಆಮ್ಯಾಲ ಅದನ್ನ ಕಳಿಸ್ತೀನಿ” ಎಂದರು.

ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶ್ ಅವರನ್ನು ನಾನುಗೌರಿ. ಕಾಂ ಸಂಪರ್ಕಿಸಿ, ಇಲಾಖೆಯಿಂದ ಇಂತಹ ಆದೇಶವಿದೆಯೇ ಎಂದು ಪ್ರಶ್ನೆ ಮಾಡಿತು. ಅದಕ್ಕೆ ಅವರು, ‘ಸದ್ಯಕ್ಕೆ ಅಂತಹ ಆದೇಶವೇ ಇಲ್ಲ. ಅದೂ ವ್ಯಾಟ್ಸಾಪ್ ಮೂಲಕ ಇಂತಹ ಆದೇಶ ಹೊರಡಿಸಲೂ ಆಗದು. ಕಳೆದ ವರ್ಷ ಕೇಂದ್ರ ಸರ್ಕಾರದ ಕೃಷಿ ಇಲಾಖೆ ಹೊರಡಿಸಿದ ಒಂದು ಸುತ್ತೋಲೆ ಪ್ರಕಾರ, ಅನಾಮಿಕ ವಿಳಾಸದಿಂದ ಬಂದ ಬಿತ್ತನೆ ಬೀಜಗಳನ್ನು ರೈತರು ಬಳಸಬಾರದು ಎಂಬ ಸೂಚನೆಯಿದೆ. ಅದರಲ್ಲಿ ಚೀನಾ ದೇಶದ ಪ್ರಸ್ತಾಪವಿಲ್ಲ. ಆದರೆ ಅಂತಹ ಬೀಜಗಳ ಪಾರ್ಸೆಲ್ ಬಂದಿರುವುದನ್ನು ನಾನು ಮತ್ತು ನನ್ನ ಸಹಮಿತ್ರ ಅಧಿಕಾರಿಗಳು ಇಲ್ಲಿವರೆಗೆ ಕಂಡೇ ಇಲ್ಲ’ ಎಂದರು.

ಈ ಕುರಿತು ಸಂಪೂರ್ಣ ವಿವರ ಪಡೆಯಲು, ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ವೆಂಕಟರಮಣರೆಡ್ಡಿಯವರನ್ನು ಸಂಪರ್ಕಿಸಿದಾಗ  ‘ಸದ್ಯಕ್ಕೆ ಅಂತಹ ಯಾವ ಆದೇಶವೂ ಇಲ್ಲ. ವ್ಯಾಟ್ಸಾಪ್ ಮೂಲಕ ಅಂತಹ ಆದೇಶವನ್ನೂ ಇಲಾಖೆ ನೀಡುವುದಿಲ್ಲ. 2020ರ ಆಗಸ್ಟ್‌ನಲ್ಲಿ ಕೇಂದ್ರ ಸರ್ಕಾರವು, ಅನಾಮಧೇಯ ವಿಳಾಸಗಳಿಂದ ಬರುವ ಬಿತ್ತನೆ ಬೀಜಗಳ ಬಗ್ಗೆ ಎಚ್ಚರವಿರಲಿ ಎಂಬ ಸುತ್ತೋಲೆ ಹೊರಡಿಸಿತ್ತು. ಈಗೇನೂ ಅಂಥಾದ್ದಿಲ್ಲ. ಕಲಬುರಗಿ ಅಧಿಕಾರಿ ಹೀಗೇಕೆ ಮಾಡಿದರು ಎಂಬುದನ್ನು ವಿಚಾರಿಸುತ್ತೇನೆ’ ಎಂದು ತಿಳಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆ ಅಪರ ಕಾರ್ಯದರ್ಶಿ ಕಳಿಸಿದ ಕಳೆದ ವರ್ಷದ ಆದೇಶದ ಪ್ರತಿ

ಇಂತಹ ವಿಚಾರಗಳಲ್ಲಿ ಕೃಷಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು ಮತ್ತು ಅನಗತ್ಯ ಗೊಂದಲ ಉಂಟು ಮಾಡಬಾರದು. ಈ ರೀತಿ ಬಿತ್ತನೆ ಬೀಜಗಳು ಬರುತ್ತಿದ್ದರೆ ಅದರ ಮೂಲ ಪತ್ತೆ ಹಚ್ಚುವುದು ನಮ್ಮ ಪೊಲೀಸ್ ಇಲಾಖೆಗೆ ದೊಡ್ಡದಲ್ಲ. ಹಾಗಾಗಿ ಅದು ನಿಜವಾಗಿದ್ದರೆ ಈ ಕುರಿತು ಸೂಕ್ತ ಕಾನೂನು ಕ್ರಮಕ್ಕೆ ಕೃಷಿ ಇಲಾಖೆ ಮುಂದಾಗಬೇಕು. ಇಲ್ಲದಿದ್ದರೆ ಕಲಬುರಗಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಅನಗತ್ಯ ಭಯ ಮೂಡಿಸದೆ ಸ್ಪಷ್ಟನೆ ನೀಡಬೇಕು.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಳ್ಳಾರಿಯ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ.ಮುದಗಲ್ ಅವರು 2021ರ ಜೂನ್ 2ರಂದು ಪ್ರಕಟಣೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...