Homeಮುಖಪುಟಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

- Advertisement -
- Advertisement -

2015ರಲ್ಲಿ 193 ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು 2030ರ ಕಾರ್ಯಸೂಚಿಯ ಅಂಗವಾಗಿ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (ಎಸ್‌ಡಿಜಿ-ಸಸ್ಟೇನಬಲ್‍ ಡೆವೆಲಪ್‍ಮೆಂಟ್‍ ಗೋಲ್ಸ್) ಅಂಗೀಕರಿಸಿದ್ದವು. ಈ ಪಟ್ಟಿಯಲ್ಲಿ ಭಾರತದ ಶ್ರೇಣಿ ಕಳೆದ ವರ್ಷದಿಂದ ಎರಡು ಸ್ಥಾನ ಕುಸಿದು 117ಕ್ಕೆ ಇಳಿದಿದೆ ಎಂದು ಹೊಸ ವರದಿ ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

‘ಭಾರತದ ಪರಿಸರ ವರದಿ 2021’ ಅನ್ನು ಬಹಿರಂಗಪಡಿಸಿದ್ದು, ಕಳೆದ ವರ್ಷ ಭಾರತದ ಶ್ರೇಯಾಂಕ 115 ಇದ್ದುದು ಈಗ ಎರಡು ಸ್ಥಾನಗಳಿಂದ ಕೆಳಗಿಳಿದಿದೆ. ಮುಖ್ಯವಾಗಿ ಹಸಿವನ್ನು ಕೊನೆಗೊಳಿಸುವುದು ಮತ್ತು ಆಹಾರ ಭದ್ರತೆಯನ್ನು ಸಾಧಿಸುವುದು (ಎಸ್‌ಡಿಜಿ 2), ಲಿಂಗ ಸಮಾನತೆ (ಎಸ್‌ಡಿಜಿ 5), ಸುಸ್ಥಿರ ಮೂಲಸೌಕರ್ಯಗಳನ್ನು ನಿರ್ಮಿಸುವುದು, ಒಳಗೊಳ್ಳುವ ಮತ್ತು ಸುಸ್ಥಿರ ಕೈಗಾರಿಕೀಕರಣವನ್ನು ಉತ್ತೇಜಿಸುವುದು ಮತ್ತು ನಾವೀನ್ಯತೆ (ಎಸ್‌ಡಿಜಿ 9) – ಗುರಿಗಳಲ್ಲಿ ದೇಶವು ಹಿಂದುಳಿದಿದೆ ಎಂದು ವರದಿ ತಿಳಿಸಿದೆ.

ಭಾರತವು ದಕ್ಷಿಣ ಏಷ್ಯಾದ ನಾಲ್ಕು ರಾಷ್ಟ್ರಗಳಾದ ಭೂತಾನ್, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕಿಂತ ಕೆಳಗಿದೆ ಎಂದು ವರದಿ ಹೇಳಿದೆ. ಭಾರತದ ಒಟ್ಟಾರೆ ಎಸ್‌ಡಿಜಿ ಅಂಕ 100 ರಲ್ಲಿ 61.9 ಆಗಿದೆ.

ಜಾರ್ಖಂಡ್‍ ಮತ್ತು ಬಿಹಾರಗಳು 2030ರ ವೇಳೆಗೆ ಎಸ್‌ಡಿಜಿಗಳನ್ನು ಸಾಧಿಸಲು ಕನಿಷ್ಠ ಸಿದ್ಧತೆ  ಮಾತ್ರ ಹೊಂದಿವೆ. ಐದು ಎಸ್‌ಡಿಜಿಗಳಲ್ಲಿ ಜಾರ್ಖಂಡ್ ಹಿಂದುಳಿದಿದ್ದರೆ, ಬಿಹಾರ ಏಳು ಎಸ್‍ಡಿಜಿಗಳಲ್ಲಿ ಹಿಂದುಳಿದಿವೆ.

ಎಸ್‌ಡಿಜಿಗಳನ್ನು ಸಾಧಿಸುವ ಹಾದಿಯಲ್ಲಿ ಒಟ್ಟಾರೆ ಅತ್ಯುತ್ತಮ ಅಂಕಗಳನ್ನು ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೆಂದರೆ ಕೇರಳ, ಹಿಮಾಚಲ ಪ್ರದೇಶ ಮತ್ತು ಚಂಡೀಗಢ.

ಸುಸ್ಥಿರ ಅಭಿವೃದ್ಧಿಗಾಗಿ 2030ರ ಕಾರ್ಯಸೂಚಿಯನ್ನು 2015ರಲ್ಲಿ ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಅಂಗೀಕರಿಸಿದವು. ಇದು ಜನರಿಗೆ ಮತ್ತು ವಿಶ್ವಕ್ಕೆ ಶಾಂತಿ ಮತ್ತು ಸಮೃದ್ಧಿ ಕುರಿತ ನೀಲನಕ್ಷೆಯನ್ನು ಒದಗಿಸುತ್ತದೆ.

ಜಾಗತಿಕ ಪಾಲುದಾರಿಕೆಯಲ್ಲಿ ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ಎಲ್ಲಾ ದೇಶಗಳ ಕ್ರಮಕ್ಕಾಗಿ ಕರೆ ನೀಡುವ 17 ಎಸ್‌ಡಿಜಿಗಳಿವೆ, ಅಂದರೆ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಮಾನದಂಡಗಳಾಗಿ ಅಂಗೀಕರಿಲಾಗಿದೆ.

ಎಸ್‌ಡಿಜಿ 1- ಬಡತನ ನಿರ್ಮೂಲನೆ, ಎಸ್‌ಡಿಜಿ 2-ಶೂನ್ಯ ಹಸಿವು, ಎಸ್‌ಡಿಜಿ 3-ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ, ಎಸ್‌ಡಿಜಿ 4- ಗುಣಮಟ್ಟದ ಶಿಕ್ಷಣ, ಎಸ್‌ಡಿಜಿ 5- ಲಿಂಗ ಸಮಾನತೆ, ಎಸ್‌ಡಿಜಿ 6- ಶುದ್ಧ ನೀರು ಮತ್ತು ನೈರ್ಮಲ್ಯ, ಎಸ್‌ಡಿಜಿ 7 – ಕೈಗೆಟುಕುವ ಶುದ್ಧ ಇಂಧನ, ಎಸ್‌ಡಿಜಿ 8 – ಯೋಗ್ಯ ಕೆಲಸ ಮತ್ತು ಆರ್ಥಿಕ ಬೆಳವಣಿಗೆ, ಎಸ್‌ಡಿಜಿ 9- ಉದ್ಯಮ, ನಾವೀನ್ಯತೆ ಮತ್ತು ಮೂಲಸೌಕರ್ಯ,

ಎಸ್‌ಡಿಜಿ 10 – ಕಡಿಮೆ ಅಸಮಾನತೆಗಳು, ಎಸ್‌ಡಿಜಿ 11- ಸುಸ್ಥಿರ ನಗರಗಳು ಮತ್ತು ಸಮುದಾಯಗಳು, ಎಸ್‌ಡಿಜಿ 12- ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಉತ್ಪಾದನೆ, ಎಸ್‌ಡಿಜಿ 13- ಹವಾಮಾನ ಕ್ರಮಗಳು, ಎಸ್‌ಡಿಜಿ 14- ಜಲಾಚರ ಜೀವಿಗಳನ್ನು ಕಾಪಾಡುವುದು, ಎಸ್‌ಡಿಜಿ 15- ಭೂಮಿಯ ಮೇಲಿನ ಜೀವವೈವಿಧ್ಯತೆ  ರಕ್ಷಣೆ, ಎಸ್‌ಡಿಜಿ 16- ಶಾಂತಿ, ನ್ಯಾಯಕ್ಕಾಗಿ ಪ್ರಬಲವಾದ ಸಂಸ್ಥೆಗಳು ಮತ್ತು ಕೊನೆಯದಾಗಿ ಎಸ್‌ಡಿಜಿ 17- ಗುರಿಗಳಿಗಾಗಿ ಜಾಗತಿಕ ಸಹಭಾಗಿತ್ವವನ್ನು ಬಲಪಡಿಸುವುದು.

ಪರಿಸರ, ಆರೋಗ್ಯ, ಹವಾಮಾನ, ವಾಯುಮಾಲಿನ್ಯ, ನೈರ್ಮಲ್ಯ ಮತ್ತು ಕುಡಿಯುವ ನೀರು, ಪರಿಸರ ವ್ಯವಸ್ಥೆಯ ಸೇವೆಗಳು, ಜೀವವೈವಿಧ್ಯತೆ ಸೇರಿದಂತೆ ವಿವಿಧ ಸೂಚಕಗಳ ಮೇಲೆ ಲೆಕ್ಕಹಾಕಲಾದ ಪರಿಸರ ಕಾರ್ಯಕ್ಷಮತೆ ಸೂಚ್ಯಂಕ (ಇಪಿಐ)ದ ಪ್ರಕಾರ ಭಾರತವು 180 ದೇಶಗಳಲ್ಲಿ 168ನೆ ಸ್ಥಾನದಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೋನಾ ನಿಯಂತ್ರಣಕ್ಕೆ ಸರ್ಕಾರದ ಮೇಲೆ ಒತ್ತಡ ತನ್ನಿ: 187 ಜನ ಗಣ್ಯರಿಂದ ವಿರೋಧ ಪಕ್ಷಗಳಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...

ತಮಿಳುನಾಡು: ಜಾತಿ ಜಗಳದಲ್ಲಿ ದಲಿತ ವ್ಯಕ್ತಿ, ಒಡಿಶಾ ವಲಸೆ ಕಾರ್ಮಿಕನ ಹತ್ಯೆ; ಹಿಂದೆಯೂ ಜಾತಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳು

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ನಂಗುನೇರಿಯಿಂದ ಜಾತಿ ಹಿಂಸಾಚಾರದ ಭಯಾನಕ ಘಟನೆ ವರದಿಯಾಗಿದೆ, ಪೆರುಂಪತ್ತು ಗ್ರಾಮದಲ್ಲಿ ನಡೆದ ಕ್ರೂರ ದಾಳಿಯಲ್ಲಿ ಅಂಗವಿಕಲ ದಲಿತ ವ್ಯಕ್ತಿ ಮತ್ತು ಒಡಿಶಾದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದಾರೆ.  ಆರೋಪಿಗಳಲ್ಲಿ ಇಬ್ಬರು ಕೆಲವು...

ರಾಜ್ಯಸಭಾ ಚುನಾವಣೆ: ಆರು ಜನರ ಹೆಸರು ಘೋಷಿಸಿದ ಕಾಂಗ್ರೆಸ್; ಸಿಂಘ್ವಿ-ನೇತಮ್ ಮರು ನಾಮನಿರ್ದೇಶನ

ರಾಜ್ಯಸಭೆಗೆ ಮುಂಬರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಇಬ್ಬರು ಹಾಲಿ ಸದಸ್ಯರನ್ನು ಮತ್ತೆ ನಾಮನಿರ್ದೇಶನ ಮಾಡಿದ್ದು, ವಿವಿಧ ರಾಜ್ಯಗಳಿಂದ ಹಲವಾರು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯರಾದ ಅಭಿಷೇಕ್ ಮನು...

ರಾಷ್ಟ್ರ ರಾಜಕಾರಣಕ್ಕೆ ನಿತೀಶ್ ಕುಮಾರ್; ರಾಜ್ಯಸಭೆ ಪ್ರವೇಶ ದೃಢಪಡಿಸಿದ ಬಿಹಾರ ಸಿಎಂ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ನಿತೀಶ್ ಕುಮಾರ್, 20 ವರ್ಷಗಳಿಗೂ ಹೆಚ್ಚು ಕಾಲ ತಾವು ಹೊಂದಿದ್ದ ಹುದ್ದೆಗೆ ರಾಜೀನಾಮೆ ನೀಡಿ ರಾಜ್ಯಸಭೆಗೆ ತೆರಳುವುದಾಗಿ ದೃಢಪಡಿಸಿದ್ದಾರೆ. "ನನ್ನ ಸಂಸದೀಯ...

ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ : ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ,...

ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸಲು ಅಡ್ಡಿ : ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ಧ ಪ್ರತಿಭಟನೆ

ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ಸಂಪ್ರದಾಯದಂತೆ ಉರೂಸ್ ನಡೆಸುವ ಕಾನೂನಾತ್ಮಕ ಅವಕಾಶವನ್ನು ಕಿತ್ತುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದ್ದು, ಜಿಲ್ಲಾಡಳಿತದ ದ್ವಿಮುಖ ನೀತಿ ವಿರುದ್ದ ಗುರುವಾರ (ಮಾ.5) ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಉರೂಸ್‌ ಸಂದರ್ಭದಲ್ಲಿ ಬಾಬಾ ಬುಡನ್‌ಗಿರಿಯ...

ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು 

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ....

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...