Homeಮುಖಪುಟಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

- Advertisement -
- Advertisement -

2015ರಲ್ಲಿ 193 ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು 2030ರ ಕಾರ್ಯಸೂಚಿಯ ಅಂಗವಾಗಿ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (ಎಸ್‌ಡಿಜಿ-ಸಸ್ಟೇನಬಲ್‍ ಡೆವೆಲಪ್‍ಮೆಂಟ್‍ ಗೋಲ್ಸ್) ಅಂಗೀಕರಿಸಿದ್ದವು. ಈ ಪಟ್ಟಿಯಲ್ಲಿ ಭಾರತದ ಶ್ರೇಣಿ ಕಳೆದ ವರ್ಷದಿಂದ ಎರಡು ಸ್ಥಾನ ಕುಸಿದು 117ಕ್ಕೆ ಇಳಿದಿದೆ ಎಂದು ಹೊಸ ವರದಿ ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

‘ಭಾರತದ ಪರಿಸರ ವರದಿ 2021’ ಅನ್ನು ಬಹಿರಂಗಪಡಿಸಿದ್ದು, ಕಳೆದ ವರ್ಷ ಭಾರತದ ಶ್ರೇಯಾಂಕ 115 ಇದ್ದುದು ಈಗ ಎರಡು ಸ್ಥಾನಗಳಿಂದ ಕೆಳಗಿಳಿದಿದೆ. ಮುಖ್ಯವಾಗಿ ಹಸಿವನ್ನು ಕೊನೆಗೊಳಿಸುವುದು ಮತ್ತು ಆಹಾರ ಭದ್ರತೆಯನ್ನು ಸಾಧಿಸುವುದು (ಎಸ್‌ಡಿಜಿ 2), ಲಿಂಗ ಸಮಾನತೆ (ಎಸ್‌ಡಿಜಿ 5), ಸುಸ್ಥಿರ ಮೂಲಸೌಕರ್ಯಗಳನ್ನು ನಿರ್ಮಿಸುವುದು, ಒಳಗೊಳ್ಳುವ ಮತ್ತು ಸುಸ್ಥಿರ ಕೈಗಾರಿಕೀಕರಣವನ್ನು ಉತ್ತೇಜಿಸುವುದು ಮತ್ತು ನಾವೀನ್ಯತೆ (ಎಸ್‌ಡಿಜಿ 9) – ಗುರಿಗಳಲ್ಲಿ ದೇಶವು ಹಿಂದುಳಿದಿದೆ ಎಂದು ವರದಿ ತಿಳಿಸಿದೆ.

ಭಾರತವು ದಕ್ಷಿಣ ಏಷ್ಯಾದ ನಾಲ್ಕು ರಾಷ್ಟ್ರಗಳಾದ ಭೂತಾನ್, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕಿಂತ ಕೆಳಗಿದೆ ಎಂದು ವರದಿ ಹೇಳಿದೆ. ಭಾರತದ ಒಟ್ಟಾರೆ ಎಸ್‌ಡಿಜಿ ಅಂಕ 100 ರಲ್ಲಿ 61.9 ಆಗಿದೆ.

ಜಾರ್ಖಂಡ್‍ ಮತ್ತು ಬಿಹಾರಗಳು 2030ರ ವೇಳೆಗೆ ಎಸ್‌ಡಿಜಿಗಳನ್ನು ಸಾಧಿಸಲು ಕನಿಷ್ಠ ಸಿದ್ಧತೆ  ಮಾತ್ರ ಹೊಂದಿವೆ. ಐದು ಎಸ್‌ಡಿಜಿಗಳಲ್ಲಿ ಜಾರ್ಖಂಡ್ ಹಿಂದುಳಿದಿದ್ದರೆ, ಬಿಹಾರ ಏಳು ಎಸ್‍ಡಿಜಿಗಳಲ್ಲಿ ಹಿಂದುಳಿದಿವೆ.

ಎಸ್‌ಡಿಜಿಗಳನ್ನು ಸಾಧಿಸುವ ಹಾದಿಯಲ್ಲಿ ಒಟ್ಟಾರೆ ಅತ್ಯುತ್ತಮ ಅಂಕಗಳನ್ನು ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೆಂದರೆ ಕೇರಳ, ಹಿಮಾಚಲ ಪ್ರದೇಶ ಮತ್ತು ಚಂಡೀಗಢ.

ಸುಸ್ಥಿರ ಅಭಿವೃದ್ಧಿಗಾಗಿ 2030ರ ಕಾರ್ಯಸೂಚಿಯನ್ನು 2015ರಲ್ಲಿ ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಅಂಗೀಕರಿಸಿದವು. ಇದು ಜನರಿಗೆ ಮತ್ತು ವಿಶ್ವಕ್ಕೆ ಶಾಂತಿ ಮತ್ತು ಸಮೃದ್ಧಿ ಕುರಿತ ನೀಲನಕ್ಷೆಯನ್ನು ಒದಗಿಸುತ್ತದೆ.

ಜಾಗತಿಕ ಪಾಲುದಾರಿಕೆಯಲ್ಲಿ ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ಎಲ್ಲಾ ದೇಶಗಳ ಕ್ರಮಕ್ಕಾಗಿ ಕರೆ ನೀಡುವ 17 ಎಸ್‌ಡಿಜಿಗಳಿವೆ, ಅಂದರೆ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಮಾನದಂಡಗಳಾಗಿ ಅಂಗೀಕರಿಲಾಗಿದೆ.

ಎಸ್‌ಡಿಜಿ 1- ಬಡತನ ನಿರ್ಮೂಲನೆ, ಎಸ್‌ಡಿಜಿ 2-ಶೂನ್ಯ ಹಸಿವು, ಎಸ್‌ಡಿಜಿ 3-ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ, ಎಸ್‌ಡಿಜಿ 4- ಗುಣಮಟ್ಟದ ಶಿಕ್ಷಣ, ಎಸ್‌ಡಿಜಿ 5- ಲಿಂಗ ಸಮಾನತೆ, ಎಸ್‌ಡಿಜಿ 6- ಶುದ್ಧ ನೀರು ಮತ್ತು ನೈರ್ಮಲ್ಯ, ಎಸ್‌ಡಿಜಿ 7 – ಕೈಗೆಟುಕುವ ಶುದ್ಧ ಇಂಧನ, ಎಸ್‌ಡಿಜಿ 8 – ಯೋಗ್ಯ ಕೆಲಸ ಮತ್ತು ಆರ್ಥಿಕ ಬೆಳವಣಿಗೆ, ಎಸ್‌ಡಿಜಿ 9- ಉದ್ಯಮ, ನಾವೀನ್ಯತೆ ಮತ್ತು ಮೂಲಸೌಕರ್ಯ,

ಎಸ್‌ಡಿಜಿ 10 – ಕಡಿಮೆ ಅಸಮಾನತೆಗಳು, ಎಸ್‌ಡಿಜಿ 11- ಸುಸ್ಥಿರ ನಗರಗಳು ಮತ್ತು ಸಮುದಾಯಗಳು, ಎಸ್‌ಡಿಜಿ 12- ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಉತ್ಪಾದನೆ, ಎಸ್‌ಡಿಜಿ 13- ಹವಾಮಾನ ಕ್ರಮಗಳು, ಎಸ್‌ಡಿಜಿ 14- ಜಲಾಚರ ಜೀವಿಗಳನ್ನು ಕಾಪಾಡುವುದು, ಎಸ್‌ಡಿಜಿ 15- ಭೂಮಿಯ ಮೇಲಿನ ಜೀವವೈವಿಧ್ಯತೆ  ರಕ್ಷಣೆ, ಎಸ್‌ಡಿಜಿ 16- ಶಾಂತಿ, ನ್ಯಾಯಕ್ಕಾಗಿ ಪ್ರಬಲವಾದ ಸಂಸ್ಥೆಗಳು ಮತ್ತು ಕೊನೆಯದಾಗಿ ಎಸ್‌ಡಿಜಿ 17- ಗುರಿಗಳಿಗಾಗಿ ಜಾಗತಿಕ ಸಹಭಾಗಿತ್ವವನ್ನು ಬಲಪಡಿಸುವುದು.

ಪರಿಸರ, ಆರೋಗ್ಯ, ಹವಾಮಾನ, ವಾಯುಮಾಲಿನ್ಯ, ನೈರ್ಮಲ್ಯ ಮತ್ತು ಕುಡಿಯುವ ನೀರು, ಪರಿಸರ ವ್ಯವಸ್ಥೆಯ ಸೇವೆಗಳು, ಜೀವವೈವಿಧ್ಯತೆ ಸೇರಿದಂತೆ ವಿವಿಧ ಸೂಚಕಗಳ ಮೇಲೆ ಲೆಕ್ಕಹಾಕಲಾದ ಪರಿಸರ ಕಾರ್ಯಕ್ಷಮತೆ ಸೂಚ್ಯಂಕ (ಇಪಿಐ)ದ ಪ್ರಕಾರ ಭಾರತವು 180 ದೇಶಗಳಲ್ಲಿ 168ನೆ ಸ್ಥಾನದಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೋನಾ ನಿಯಂತ್ರಣಕ್ಕೆ ಸರ್ಕಾರದ ಮೇಲೆ ಒತ್ತಡ ತನ್ನಿ: 187 ಜನ ಗಣ್ಯರಿಂದ ವಿರೋಧ ಪಕ್ಷಗಳಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...