Homeಮುಖಪುಟಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

- Advertisement -
- Advertisement -

2015ರಲ್ಲಿ 193 ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು 2030ರ ಕಾರ್ಯಸೂಚಿಯ ಅಂಗವಾಗಿ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (ಎಸ್‌ಡಿಜಿ-ಸಸ್ಟೇನಬಲ್‍ ಡೆವೆಲಪ್‍ಮೆಂಟ್‍ ಗೋಲ್ಸ್) ಅಂಗೀಕರಿಸಿದ್ದವು. ಈ ಪಟ್ಟಿಯಲ್ಲಿ ಭಾರತದ ಶ್ರೇಣಿ ಕಳೆದ ವರ್ಷದಿಂದ ಎರಡು ಸ್ಥಾನ ಕುಸಿದು 117ಕ್ಕೆ ಇಳಿದಿದೆ ಎಂದು ಹೊಸ ವರದಿ ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

‘ಭಾರತದ ಪರಿಸರ ವರದಿ 2021’ ಅನ್ನು ಬಹಿರಂಗಪಡಿಸಿದ್ದು, ಕಳೆದ ವರ್ಷ ಭಾರತದ ಶ್ರೇಯಾಂಕ 115 ಇದ್ದುದು ಈಗ ಎರಡು ಸ್ಥಾನಗಳಿಂದ ಕೆಳಗಿಳಿದಿದೆ. ಮುಖ್ಯವಾಗಿ ಹಸಿವನ್ನು ಕೊನೆಗೊಳಿಸುವುದು ಮತ್ತು ಆಹಾರ ಭದ್ರತೆಯನ್ನು ಸಾಧಿಸುವುದು (ಎಸ್‌ಡಿಜಿ 2), ಲಿಂಗ ಸಮಾನತೆ (ಎಸ್‌ಡಿಜಿ 5), ಸುಸ್ಥಿರ ಮೂಲಸೌಕರ್ಯಗಳನ್ನು ನಿರ್ಮಿಸುವುದು, ಒಳಗೊಳ್ಳುವ ಮತ್ತು ಸುಸ್ಥಿರ ಕೈಗಾರಿಕೀಕರಣವನ್ನು ಉತ್ತೇಜಿಸುವುದು ಮತ್ತು ನಾವೀನ್ಯತೆ (ಎಸ್‌ಡಿಜಿ 9) – ಗುರಿಗಳಲ್ಲಿ ದೇಶವು ಹಿಂದುಳಿದಿದೆ ಎಂದು ವರದಿ ತಿಳಿಸಿದೆ.

ಭಾರತವು ದಕ್ಷಿಣ ಏಷ್ಯಾದ ನಾಲ್ಕು ರಾಷ್ಟ್ರಗಳಾದ ಭೂತಾನ್, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕಿಂತ ಕೆಳಗಿದೆ ಎಂದು ವರದಿ ಹೇಳಿದೆ. ಭಾರತದ ಒಟ್ಟಾರೆ ಎಸ್‌ಡಿಜಿ ಅಂಕ 100 ರಲ್ಲಿ 61.9 ಆಗಿದೆ.

ಜಾರ್ಖಂಡ್‍ ಮತ್ತು ಬಿಹಾರಗಳು 2030ರ ವೇಳೆಗೆ ಎಸ್‌ಡಿಜಿಗಳನ್ನು ಸಾಧಿಸಲು ಕನಿಷ್ಠ ಸಿದ್ಧತೆ  ಮಾತ್ರ ಹೊಂದಿವೆ. ಐದು ಎಸ್‌ಡಿಜಿಗಳಲ್ಲಿ ಜಾರ್ಖಂಡ್ ಹಿಂದುಳಿದಿದ್ದರೆ, ಬಿಹಾರ ಏಳು ಎಸ್‍ಡಿಜಿಗಳಲ್ಲಿ ಹಿಂದುಳಿದಿವೆ.

ಎಸ್‌ಡಿಜಿಗಳನ್ನು ಸಾಧಿಸುವ ಹಾದಿಯಲ್ಲಿ ಒಟ್ಟಾರೆ ಅತ್ಯುತ್ತಮ ಅಂಕಗಳನ್ನು ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೆಂದರೆ ಕೇರಳ, ಹಿಮಾಚಲ ಪ್ರದೇಶ ಮತ್ತು ಚಂಡೀಗಢ.

ಸುಸ್ಥಿರ ಅಭಿವೃದ್ಧಿಗಾಗಿ 2030ರ ಕಾರ್ಯಸೂಚಿಯನ್ನು 2015ರಲ್ಲಿ ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಅಂಗೀಕರಿಸಿದವು. ಇದು ಜನರಿಗೆ ಮತ್ತು ವಿಶ್ವಕ್ಕೆ ಶಾಂತಿ ಮತ್ತು ಸಮೃದ್ಧಿ ಕುರಿತ ನೀಲನಕ್ಷೆಯನ್ನು ಒದಗಿಸುತ್ತದೆ.

ಜಾಗತಿಕ ಪಾಲುದಾರಿಕೆಯಲ್ಲಿ ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ಎಲ್ಲಾ ದೇಶಗಳ ಕ್ರಮಕ್ಕಾಗಿ ಕರೆ ನೀಡುವ 17 ಎಸ್‌ಡಿಜಿಗಳಿವೆ, ಅಂದರೆ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಮಾನದಂಡಗಳಾಗಿ ಅಂಗೀಕರಿಲಾಗಿದೆ.

ಎಸ್‌ಡಿಜಿ 1- ಬಡತನ ನಿರ್ಮೂಲನೆ, ಎಸ್‌ಡಿಜಿ 2-ಶೂನ್ಯ ಹಸಿವು, ಎಸ್‌ಡಿಜಿ 3-ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ, ಎಸ್‌ಡಿಜಿ 4- ಗುಣಮಟ್ಟದ ಶಿಕ್ಷಣ, ಎಸ್‌ಡಿಜಿ 5- ಲಿಂಗ ಸಮಾನತೆ, ಎಸ್‌ಡಿಜಿ 6- ಶುದ್ಧ ನೀರು ಮತ್ತು ನೈರ್ಮಲ್ಯ, ಎಸ್‌ಡಿಜಿ 7 – ಕೈಗೆಟುಕುವ ಶುದ್ಧ ಇಂಧನ, ಎಸ್‌ಡಿಜಿ 8 – ಯೋಗ್ಯ ಕೆಲಸ ಮತ್ತು ಆರ್ಥಿಕ ಬೆಳವಣಿಗೆ, ಎಸ್‌ಡಿಜಿ 9- ಉದ್ಯಮ, ನಾವೀನ್ಯತೆ ಮತ್ತು ಮೂಲಸೌಕರ್ಯ,

ಎಸ್‌ಡಿಜಿ 10 – ಕಡಿಮೆ ಅಸಮಾನತೆಗಳು, ಎಸ್‌ಡಿಜಿ 11- ಸುಸ್ಥಿರ ನಗರಗಳು ಮತ್ತು ಸಮುದಾಯಗಳು, ಎಸ್‌ಡಿಜಿ 12- ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಉತ್ಪಾದನೆ, ಎಸ್‌ಡಿಜಿ 13- ಹವಾಮಾನ ಕ್ರಮಗಳು, ಎಸ್‌ಡಿಜಿ 14- ಜಲಾಚರ ಜೀವಿಗಳನ್ನು ಕಾಪಾಡುವುದು, ಎಸ್‌ಡಿಜಿ 15- ಭೂಮಿಯ ಮೇಲಿನ ಜೀವವೈವಿಧ್ಯತೆ  ರಕ್ಷಣೆ, ಎಸ್‌ಡಿಜಿ 16- ಶಾಂತಿ, ನ್ಯಾಯಕ್ಕಾಗಿ ಪ್ರಬಲವಾದ ಸಂಸ್ಥೆಗಳು ಮತ್ತು ಕೊನೆಯದಾಗಿ ಎಸ್‌ಡಿಜಿ 17- ಗುರಿಗಳಿಗಾಗಿ ಜಾಗತಿಕ ಸಹಭಾಗಿತ್ವವನ್ನು ಬಲಪಡಿಸುವುದು.

ಪರಿಸರ, ಆರೋಗ್ಯ, ಹವಾಮಾನ, ವಾಯುಮಾಲಿನ್ಯ, ನೈರ್ಮಲ್ಯ ಮತ್ತು ಕುಡಿಯುವ ನೀರು, ಪರಿಸರ ವ್ಯವಸ್ಥೆಯ ಸೇವೆಗಳು, ಜೀವವೈವಿಧ್ಯತೆ ಸೇರಿದಂತೆ ವಿವಿಧ ಸೂಚಕಗಳ ಮೇಲೆ ಲೆಕ್ಕಹಾಕಲಾದ ಪರಿಸರ ಕಾರ್ಯಕ್ಷಮತೆ ಸೂಚ್ಯಂಕ (ಇಪಿಐ)ದ ಪ್ರಕಾರ ಭಾರತವು 180 ದೇಶಗಳಲ್ಲಿ 168ನೆ ಸ್ಥಾನದಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೋನಾ ನಿಯಂತ್ರಣಕ್ಕೆ ಸರ್ಕಾರದ ಮೇಲೆ ಒತ್ತಡ ತನ್ನಿ: 187 ಜನ ಗಣ್ಯರಿಂದ ವಿರೋಧ ಪಕ್ಷಗಳಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...