Homeಮುಖಪುಟಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

- Advertisement -
- Advertisement -

2015ರಲ್ಲಿ 193 ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು 2030ರ ಕಾರ್ಯಸೂಚಿಯ ಅಂಗವಾಗಿ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (ಎಸ್‌ಡಿಜಿ-ಸಸ್ಟೇನಬಲ್‍ ಡೆವೆಲಪ್‍ಮೆಂಟ್‍ ಗೋಲ್ಸ್) ಅಂಗೀಕರಿಸಿದ್ದವು. ಈ ಪಟ್ಟಿಯಲ್ಲಿ ಭಾರತದ ಶ್ರೇಣಿ ಕಳೆದ ವರ್ಷದಿಂದ ಎರಡು ಸ್ಥಾನ ಕುಸಿದು 117ಕ್ಕೆ ಇಳಿದಿದೆ ಎಂದು ಹೊಸ ವರದಿ ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

‘ಭಾರತದ ಪರಿಸರ ವರದಿ 2021’ ಅನ್ನು ಬಹಿರಂಗಪಡಿಸಿದ್ದು, ಕಳೆದ ವರ್ಷ ಭಾರತದ ಶ್ರೇಯಾಂಕ 115 ಇದ್ದುದು ಈಗ ಎರಡು ಸ್ಥಾನಗಳಿಂದ ಕೆಳಗಿಳಿದಿದೆ. ಮುಖ್ಯವಾಗಿ ಹಸಿವನ್ನು ಕೊನೆಗೊಳಿಸುವುದು ಮತ್ತು ಆಹಾರ ಭದ್ರತೆಯನ್ನು ಸಾಧಿಸುವುದು (ಎಸ್‌ಡಿಜಿ 2), ಲಿಂಗ ಸಮಾನತೆ (ಎಸ್‌ಡಿಜಿ 5), ಸುಸ್ಥಿರ ಮೂಲಸೌಕರ್ಯಗಳನ್ನು ನಿರ್ಮಿಸುವುದು, ಒಳಗೊಳ್ಳುವ ಮತ್ತು ಸುಸ್ಥಿರ ಕೈಗಾರಿಕೀಕರಣವನ್ನು ಉತ್ತೇಜಿಸುವುದು ಮತ್ತು ನಾವೀನ್ಯತೆ (ಎಸ್‌ಡಿಜಿ 9) – ಗುರಿಗಳಲ್ಲಿ ದೇಶವು ಹಿಂದುಳಿದಿದೆ ಎಂದು ವರದಿ ತಿಳಿಸಿದೆ.

ಭಾರತವು ದಕ್ಷಿಣ ಏಷ್ಯಾದ ನಾಲ್ಕು ರಾಷ್ಟ್ರಗಳಾದ ಭೂತಾನ್, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕಿಂತ ಕೆಳಗಿದೆ ಎಂದು ವರದಿ ಹೇಳಿದೆ. ಭಾರತದ ಒಟ್ಟಾರೆ ಎಸ್‌ಡಿಜಿ ಅಂಕ 100 ರಲ್ಲಿ 61.9 ಆಗಿದೆ.

ಜಾರ್ಖಂಡ್‍ ಮತ್ತು ಬಿಹಾರಗಳು 2030ರ ವೇಳೆಗೆ ಎಸ್‌ಡಿಜಿಗಳನ್ನು ಸಾಧಿಸಲು ಕನಿಷ್ಠ ಸಿದ್ಧತೆ  ಮಾತ್ರ ಹೊಂದಿವೆ. ಐದು ಎಸ್‌ಡಿಜಿಗಳಲ್ಲಿ ಜಾರ್ಖಂಡ್ ಹಿಂದುಳಿದಿದ್ದರೆ, ಬಿಹಾರ ಏಳು ಎಸ್‍ಡಿಜಿಗಳಲ್ಲಿ ಹಿಂದುಳಿದಿವೆ.

ಎಸ್‌ಡಿಜಿಗಳನ್ನು ಸಾಧಿಸುವ ಹಾದಿಯಲ್ಲಿ ಒಟ್ಟಾರೆ ಅತ್ಯುತ್ತಮ ಅಂಕಗಳನ್ನು ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೆಂದರೆ ಕೇರಳ, ಹಿಮಾಚಲ ಪ್ರದೇಶ ಮತ್ತು ಚಂಡೀಗಢ.

ಸುಸ್ಥಿರ ಅಭಿವೃದ್ಧಿಗಾಗಿ 2030ರ ಕಾರ್ಯಸೂಚಿಯನ್ನು 2015ರಲ್ಲಿ ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಅಂಗೀಕರಿಸಿದವು. ಇದು ಜನರಿಗೆ ಮತ್ತು ವಿಶ್ವಕ್ಕೆ ಶಾಂತಿ ಮತ್ತು ಸಮೃದ್ಧಿ ಕುರಿತ ನೀಲನಕ್ಷೆಯನ್ನು ಒದಗಿಸುತ್ತದೆ.

ಜಾಗತಿಕ ಪಾಲುದಾರಿಕೆಯಲ್ಲಿ ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ಎಲ್ಲಾ ದೇಶಗಳ ಕ್ರಮಕ್ಕಾಗಿ ಕರೆ ನೀಡುವ 17 ಎಸ್‌ಡಿಜಿಗಳಿವೆ, ಅಂದರೆ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಮಾನದಂಡಗಳಾಗಿ ಅಂಗೀಕರಿಲಾಗಿದೆ.

ಎಸ್‌ಡಿಜಿ 1- ಬಡತನ ನಿರ್ಮೂಲನೆ, ಎಸ್‌ಡಿಜಿ 2-ಶೂನ್ಯ ಹಸಿವು, ಎಸ್‌ಡಿಜಿ 3-ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ, ಎಸ್‌ಡಿಜಿ 4- ಗುಣಮಟ್ಟದ ಶಿಕ್ಷಣ, ಎಸ್‌ಡಿಜಿ 5- ಲಿಂಗ ಸಮಾನತೆ, ಎಸ್‌ಡಿಜಿ 6- ಶುದ್ಧ ನೀರು ಮತ್ತು ನೈರ್ಮಲ್ಯ, ಎಸ್‌ಡಿಜಿ 7 – ಕೈಗೆಟುಕುವ ಶುದ್ಧ ಇಂಧನ, ಎಸ್‌ಡಿಜಿ 8 – ಯೋಗ್ಯ ಕೆಲಸ ಮತ್ತು ಆರ್ಥಿಕ ಬೆಳವಣಿಗೆ, ಎಸ್‌ಡಿಜಿ 9- ಉದ್ಯಮ, ನಾವೀನ್ಯತೆ ಮತ್ತು ಮೂಲಸೌಕರ್ಯ,

ಎಸ್‌ಡಿಜಿ 10 – ಕಡಿಮೆ ಅಸಮಾನತೆಗಳು, ಎಸ್‌ಡಿಜಿ 11- ಸುಸ್ಥಿರ ನಗರಗಳು ಮತ್ತು ಸಮುದಾಯಗಳು, ಎಸ್‌ಡಿಜಿ 12- ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಉತ್ಪಾದನೆ, ಎಸ್‌ಡಿಜಿ 13- ಹವಾಮಾನ ಕ್ರಮಗಳು, ಎಸ್‌ಡಿಜಿ 14- ಜಲಾಚರ ಜೀವಿಗಳನ್ನು ಕಾಪಾಡುವುದು, ಎಸ್‌ಡಿಜಿ 15- ಭೂಮಿಯ ಮೇಲಿನ ಜೀವವೈವಿಧ್ಯತೆ  ರಕ್ಷಣೆ, ಎಸ್‌ಡಿಜಿ 16- ಶಾಂತಿ, ನ್ಯಾಯಕ್ಕಾಗಿ ಪ್ರಬಲವಾದ ಸಂಸ್ಥೆಗಳು ಮತ್ತು ಕೊನೆಯದಾಗಿ ಎಸ್‌ಡಿಜಿ 17- ಗುರಿಗಳಿಗಾಗಿ ಜಾಗತಿಕ ಸಹಭಾಗಿತ್ವವನ್ನು ಬಲಪಡಿಸುವುದು.

ಪರಿಸರ, ಆರೋಗ್ಯ, ಹವಾಮಾನ, ವಾಯುಮಾಲಿನ್ಯ, ನೈರ್ಮಲ್ಯ ಮತ್ತು ಕುಡಿಯುವ ನೀರು, ಪರಿಸರ ವ್ಯವಸ್ಥೆಯ ಸೇವೆಗಳು, ಜೀವವೈವಿಧ್ಯತೆ ಸೇರಿದಂತೆ ವಿವಿಧ ಸೂಚಕಗಳ ಮೇಲೆ ಲೆಕ್ಕಹಾಕಲಾದ ಪರಿಸರ ಕಾರ್ಯಕ್ಷಮತೆ ಸೂಚ್ಯಂಕ (ಇಪಿಐ)ದ ಪ್ರಕಾರ ಭಾರತವು 180 ದೇಶಗಳಲ್ಲಿ 168ನೆ ಸ್ಥಾನದಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೋನಾ ನಿಯಂತ್ರಣಕ್ಕೆ ಸರ್ಕಾರದ ಮೇಲೆ ಒತ್ತಡ ತನ್ನಿ: 187 ಜನ ಗಣ್ಯರಿಂದ ವಿರೋಧ ಪಕ್ಷಗಳಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...