Homeಮುಖಪುಟಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ!

- Advertisement -
- Advertisement -

2015ರಲ್ಲಿ 193 ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು 2030ರ ಕಾರ್ಯಸೂಚಿಯ ಅಂಗವಾಗಿ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು (ಎಸ್‌ಡಿಜಿ-ಸಸ್ಟೇನಬಲ್‍ ಡೆವೆಲಪ್‍ಮೆಂಟ್‍ ಗೋಲ್ಸ್) ಅಂಗೀಕರಿಸಿದ್ದವು. ಈ ಪಟ್ಟಿಯಲ್ಲಿ ಭಾರತದ ಶ್ರೇಣಿ ಕಳೆದ ವರ್ಷದಿಂದ ಎರಡು ಸ್ಥಾನ ಕುಸಿದು 117ಕ್ಕೆ ಇಳಿದಿದೆ ಎಂದು ಹೊಸ ವರದಿ ಉಲ್ಲೇಖಿಸಿ ಎನ್‍ಡಿಟಿವಿ ವರದಿ ಮಾಡಿದೆ.

‘ಭಾರತದ ಪರಿಸರ ವರದಿ 2021’ ಅನ್ನು ಬಹಿರಂಗಪಡಿಸಿದ್ದು, ಕಳೆದ ವರ್ಷ ಭಾರತದ ಶ್ರೇಯಾಂಕ 115 ಇದ್ದುದು ಈಗ ಎರಡು ಸ್ಥಾನಗಳಿಂದ ಕೆಳಗಿಳಿದಿದೆ. ಮುಖ್ಯವಾಗಿ ಹಸಿವನ್ನು ಕೊನೆಗೊಳಿಸುವುದು ಮತ್ತು ಆಹಾರ ಭದ್ರತೆಯನ್ನು ಸಾಧಿಸುವುದು (ಎಸ್‌ಡಿಜಿ 2), ಲಿಂಗ ಸಮಾನತೆ (ಎಸ್‌ಡಿಜಿ 5), ಸುಸ್ಥಿರ ಮೂಲಸೌಕರ್ಯಗಳನ್ನು ನಿರ್ಮಿಸುವುದು, ಒಳಗೊಳ್ಳುವ ಮತ್ತು ಸುಸ್ಥಿರ ಕೈಗಾರಿಕೀಕರಣವನ್ನು ಉತ್ತೇಜಿಸುವುದು ಮತ್ತು ನಾವೀನ್ಯತೆ (ಎಸ್‌ಡಿಜಿ 9) – ಗುರಿಗಳಲ್ಲಿ ದೇಶವು ಹಿಂದುಳಿದಿದೆ ಎಂದು ವರದಿ ತಿಳಿಸಿದೆ.

ಭಾರತವು ದಕ್ಷಿಣ ಏಷ್ಯಾದ ನಾಲ್ಕು ರಾಷ್ಟ್ರಗಳಾದ ಭೂತಾನ್, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕಿಂತ ಕೆಳಗಿದೆ ಎಂದು ವರದಿ ಹೇಳಿದೆ. ಭಾರತದ ಒಟ್ಟಾರೆ ಎಸ್‌ಡಿಜಿ ಅಂಕ 100 ರಲ್ಲಿ 61.9 ಆಗಿದೆ.

ಜಾರ್ಖಂಡ್‍ ಮತ್ತು ಬಿಹಾರಗಳು 2030ರ ವೇಳೆಗೆ ಎಸ್‌ಡಿಜಿಗಳನ್ನು ಸಾಧಿಸಲು ಕನಿಷ್ಠ ಸಿದ್ಧತೆ  ಮಾತ್ರ ಹೊಂದಿವೆ. ಐದು ಎಸ್‌ಡಿಜಿಗಳಲ್ಲಿ ಜಾರ್ಖಂಡ್ ಹಿಂದುಳಿದಿದ್ದರೆ, ಬಿಹಾರ ಏಳು ಎಸ್‍ಡಿಜಿಗಳಲ್ಲಿ ಹಿಂದುಳಿದಿವೆ.

ಎಸ್‌ಡಿಜಿಗಳನ್ನು ಸಾಧಿಸುವ ಹಾದಿಯಲ್ಲಿ ಒಟ್ಟಾರೆ ಅತ್ಯುತ್ತಮ ಅಂಕಗಳನ್ನು ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೆಂದರೆ ಕೇರಳ, ಹಿಮಾಚಲ ಪ್ರದೇಶ ಮತ್ತು ಚಂಡೀಗಢ.

ಸುಸ್ಥಿರ ಅಭಿವೃದ್ಧಿಗಾಗಿ 2030ರ ಕಾರ್ಯಸೂಚಿಯನ್ನು 2015ರಲ್ಲಿ ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಅಂಗೀಕರಿಸಿದವು. ಇದು ಜನರಿಗೆ ಮತ್ತು ವಿಶ್ವಕ್ಕೆ ಶಾಂತಿ ಮತ್ತು ಸಮೃದ್ಧಿ ಕುರಿತ ನೀಲನಕ್ಷೆಯನ್ನು ಒದಗಿಸುತ್ತದೆ.

ಜಾಗತಿಕ ಪಾಲುದಾರಿಕೆಯಲ್ಲಿ ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ಎಲ್ಲಾ ದೇಶಗಳ ಕ್ರಮಕ್ಕಾಗಿ ಕರೆ ನೀಡುವ 17 ಎಸ್‌ಡಿಜಿಗಳಿವೆ, ಅಂದರೆ 17 ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಮಾನದಂಡಗಳಾಗಿ ಅಂಗೀಕರಿಲಾಗಿದೆ.

ಎಸ್‌ಡಿಜಿ 1- ಬಡತನ ನಿರ್ಮೂಲನೆ, ಎಸ್‌ಡಿಜಿ 2-ಶೂನ್ಯ ಹಸಿವು, ಎಸ್‌ಡಿಜಿ 3-ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ, ಎಸ್‌ಡಿಜಿ 4- ಗುಣಮಟ್ಟದ ಶಿಕ್ಷಣ, ಎಸ್‌ಡಿಜಿ 5- ಲಿಂಗ ಸಮಾನತೆ, ಎಸ್‌ಡಿಜಿ 6- ಶುದ್ಧ ನೀರು ಮತ್ತು ನೈರ್ಮಲ್ಯ, ಎಸ್‌ಡಿಜಿ 7 – ಕೈಗೆಟುಕುವ ಶುದ್ಧ ಇಂಧನ, ಎಸ್‌ಡಿಜಿ 8 – ಯೋಗ್ಯ ಕೆಲಸ ಮತ್ತು ಆರ್ಥಿಕ ಬೆಳವಣಿಗೆ, ಎಸ್‌ಡಿಜಿ 9- ಉದ್ಯಮ, ನಾವೀನ್ಯತೆ ಮತ್ತು ಮೂಲಸೌಕರ್ಯ,

ಎಸ್‌ಡಿಜಿ 10 – ಕಡಿಮೆ ಅಸಮಾನತೆಗಳು, ಎಸ್‌ಡಿಜಿ 11- ಸುಸ್ಥಿರ ನಗರಗಳು ಮತ್ತು ಸಮುದಾಯಗಳು, ಎಸ್‌ಡಿಜಿ 12- ಸಂಪನ್ಮೂಲಗಳ ಜವಾಬ್ದಾರಿಯುತ ಬಳಕೆ ಮತ್ತು ಉತ್ಪಾದನೆ, ಎಸ್‌ಡಿಜಿ 13- ಹವಾಮಾನ ಕ್ರಮಗಳು, ಎಸ್‌ಡಿಜಿ 14- ಜಲಾಚರ ಜೀವಿಗಳನ್ನು ಕಾಪಾಡುವುದು, ಎಸ್‌ಡಿಜಿ 15- ಭೂಮಿಯ ಮೇಲಿನ ಜೀವವೈವಿಧ್ಯತೆ  ರಕ್ಷಣೆ, ಎಸ್‌ಡಿಜಿ 16- ಶಾಂತಿ, ನ್ಯಾಯಕ್ಕಾಗಿ ಪ್ರಬಲವಾದ ಸಂಸ್ಥೆಗಳು ಮತ್ತು ಕೊನೆಯದಾಗಿ ಎಸ್‌ಡಿಜಿ 17- ಗುರಿಗಳಿಗಾಗಿ ಜಾಗತಿಕ ಸಹಭಾಗಿತ್ವವನ್ನು ಬಲಪಡಿಸುವುದು.

ಪರಿಸರ, ಆರೋಗ್ಯ, ಹವಾಮಾನ, ವಾಯುಮಾಲಿನ್ಯ, ನೈರ್ಮಲ್ಯ ಮತ್ತು ಕುಡಿಯುವ ನೀರು, ಪರಿಸರ ವ್ಯವಸ್ಥೆಯ ಸೇವೆಗಳು, ಜೀವವೈವಿಧ್ಯತೆ ಸೇರಿದಂತೆ ವಿವಿಧ ಸೂಚಕಗಳ ಮೇಲೆ ಲೆಕ್ಕಹಾಕಲಾದ ಪರಿಸರ ಕಾರ್ಯಕ್ಷಮತೆ ಸೂಚ್ಯಂಕ (ಇಪಿಐ)ದ ಪ್ರಕಾರ ಭಾರತವು 180 ದೇಶಗಳಲ್ಲಿ 168ನೆ ಸ್ಥಾನದಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಕೊರೋನಾ ನಿಯಂತ್ರಣಕ್ಕೆ ಸರ್ಕಾರದ ಮೇಲೆ ಒತ್ತಡ ತನ್ನಿ: 187 ಜನ ಗಣ್ಯರಿಂದ ವಿರೋಧ ಪಕ್ಷಗಳಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...