Homeಕರ್ನಾಟಕಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಸಿದ ‘ಸುವರ್ಣ ನ್ಯೂಸ್‌’!

ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಸಿದ ‘ಸುವರ್ಣ ನ್ಯೂಸ್‌’!

- Advertisement -
- Advertisement -

ಮುಸ್ಲಿಂ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ.

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿ ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ. ಮುಸ್ಲಿಮರ ಜನಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿತ್ತು. ಚುನಾವಣೆಯ ಹೊತ್ತಲ್ಲೇ ಬಿಡುಗಡೆ ಮಾಡಿರುವ ವರದಿ ದೇಶದಾದ್ಯಂತ ವಿವಾದದ ಕಿಡಿ ಹೊತ್ತಿಸಿದೆ.

ಈ ವರದಿ ಆಧರಿಸಿ ಮೇ 9, 2024ರಂದು ರಾತ್ರಿ 8:30ಕ್ಕೆ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸಿತ್ತು. ಅಜಿತ್ ಹನುಮಕ್ಕನವರ್ ಸುದ್ದಿ ವಿಶ್ಲೇಷಣೆ ಮಾಡಿದ್ದರು. ಸುದ್ದಿಯಲ್ಲಿ ಹಿಂದೂ ಮುಸ್ಲಿಮರ ಜನಸಂಖ್ಯೆ ತೋರಿಸುವಾಗ ಹಿಂದೂಗಳ ಜನಸಂಖ್ಯೆಗೆ ಭಾರತದ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಲಾಗಿದೆ.

ಇದರ ವಿಡಿಯೋ ಹಾಗೂ ಸ್ಕ್ರೀನ್‌ಶಾಟ್‌ನ ವಿಡಿಯೋವನ್ನು ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕ ಹಾಗೂ ಪತ್ರಕರ್ತ ಮುಹಮ್ಮದ್ ಝುಬೈರ್ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆ ಬಳಿಕ ವಿಷಯ ಬಹಿರಂಗಗೊಂಡಿದೆ.

“ಭಾರತೀಯ ಹಿಂದೂಗಳಿಗೆ ಭಾರತದ ಧ್ವಜ ಮತ್ತು ಭಾರತೀಯ ಮುಸ್ಲಿಮರಿಗೆ ಪಾಕಿಸ್ತಾನದ ಧ್ವಜ ಬಳಸಲಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ಮತ್ತು ಅದರ ಆ್ಯಂಕರ್ ಅಜಿತ್ ಹನುಮಕ್ಕನವರ್ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ ವರದಿಯನ್ನು ಚರ್ಚಿಸುವಾಗ 20 ಕೋಟಿ ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನದ ಧ್ವಜ ಬಳಸಿ ಚಿತ್ರಿಸಿದ್ದಾರೆ. ಕರ್ನಾಟಕದ ಸಂಘಟನೆಗಳು ಆ್ಯಂಕರ್ ಮತ್ತು ಚಾನೆಲ್ ವಿರುದ್ಧ ದೂರು ದಾಖಲಿಸುತ್ತವೆ ಎಂದುಕೊಂಡಿದ್ದೇನೆ” ಎಂದು ಝಬೈರ್ ತನ್ನ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.

ಝುಬೈರ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸುವರ್ಣ ನ್ಯೂಸ್ ಮತ್ತು ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಭಾರತೀಯರು ಮುಸ್ಲಿಮರನ್ನು ಪಾಕಿಸ್ತಾನದವರು ಎಂದು ಚಿತ್ರಿಸುವ ಮೂಲಕ ಸುವರ್ಣ ನ್ಯೂಸ್ ದೇಶದ್ರೋಹಕ್ಕೆ ಸಮನಾದ ಕೃತ್ಯವೆಸಗಿದೆ ಎಂದು ಜನರು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳನ್ನು ಟ್ಯಾಗ್ ಮಾಡಿ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತರ ತಂಡವೊಂದು ಸುವರ್ಣ ನ್ಯೂಸ್ ಮತ್ತು ಅಜಿತ್ ಹನುಮಕ್ಕನವರ್ ವಿರುದ್ಧ ದೂರು ನೀಡಲು ಮುಂದಾಗಿದೆ ಎಂಬ ಮಾಹಿತಿ ದೊರೆತಿದೆ.

ಇದನ್ನೂ ಓದಿ : ‘ಆರೋಪಗಳನ್ನು ಹೊರಿಸಲು ಸಾಕಷ್ಟು ವಸ್ತುಗಳಿವೆ..’; ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಕೇಸ್ ದಾಖಲಿಸುವಂತೆ ಸೂಚಿಸಿದ ದೆಹಲಿ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...