Homeಮುಖಪುಟಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಗೆಲುವು ನ್ಯಾಯಯುತವಲ್ಲ: ಮಾಜಿ ಬಿಜೆಪಿ ನಾಯಕ

ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಗೆಲುವು ನ್ಯಾಯಯುತವಲ್ಲ: ಮಾಜಿ ಬಿಜೆಪಿ ನಾಯಕ

- Advertisement -
- Advertisement -

ಪಶ್ಚಿಮ ಬಂಗಾಳದ 2021 ರ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯ ಸುವೇಂದು ಅಧಿಕಾರಿ ಗೆಲುವು ಸಾಧಿಸಿದ್ದು ನ್ಯಾಯಯುತವಲ್ಲ ಎಂದು ಹೇಳುವ ಮೂಲಕ ಹಿರಿಯ ನಾಯಕ ಜಾಯ್ ಪ್ರಕಾಶ್ ಮಜುಂದಾರ್ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

ಬಿಜೆಪಿ ನಾಯಜಕ ಸುವೇಂದು ಅಧಿಕಾರಿ ಈಗ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಿರಿಯ ನಾಯಕ ಜಾಯ್ ಪ್ರಕಾಶ್ ಮಜುಂದಾರ್ ಬಿಜೆಪಿಯನ್ನು ತೊರೆದು ಟಿಎಂಸಿಗೆ ಸೇರ್ಪಡೆಯಾದ ಕೆಲವೇ ದಿನಗಳಲ್ಲಿ ಈ ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆಯನ್ನು ಮಾಜಿ ರಾಜ್ಯ ಸಚಿವ ರಾಜೀವ್ ಬಂಡೋಪಾಧ್ಯಾಯ ಕೂಡ ಪುಷ್ಟಿಕರಿಸಿದ್ದಾರೆ.

ಜಾಯ್ ಪ್ರಕಾಶ್ ಮಜುಂದಾರ್ ಅವರನ್ನು “ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ” ಜನವರಿಯ ಕೊನೆಯ ವಾರದಲ್ಲಿ ಬಿಜೆಪಿಯಿಂದ ಅಮಾನತುಗೊಳಿಸಲಾಗಿತ್ತು.

“ನಂದಿಗ್ರಾಮ ಗೆಲ್ಲಲು ಹಲವು ತಂತ್ರಗಳನ್ನು ಬಳಸಬೇಕಾಯಿತು ಎಂದು ಮೇ 2 ರ ರಾತ್ರಿ ಸುವೇಂದು ಅಧಿಕಾರಿ ಹೇಳಿದ್ದು ನನಗೆ ನೆನಪಿದೆ” ಎಂದು ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿಯವರ ತೀವ್ರ ಟೀಕಾಕಾರರಾಗಿದ್ದ ಟಿಎಂಸಿಯ ನೂತನ ಉಪಾಧ್ಯಕ್ಷ, ಜಾಯ್ ಪ್ರಕಾಶ್ ಮಜುಂದಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸದಂತೆ ಸುವೇಂದುಗೆ ಬಿಜೆಪಿ ನಾಯಕರ ಮನವಿ

“ನಂದಿಗ್ರಾಮ್‌ನಲ್ಲಿ ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿರಲಿಲ್ಲ. ಮಮತಾ ಬ್ಯಾನರ್ಜಿಯವರನ್ನು ಆರಂಭದಲ್ಲಿ ವಿಜೇತ ಎಂದು ಘೋಷಿಸಲಾಗಿತ್ತು, ಆದರೆ, ಕೈ ಚಳಕದಿಂದಾಗಿ ಸುವೇಂದು ಅಧಿಕಾರಿ ಇದ್ದಕ್ಕಿದ್ದಂತೆ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ್ದರು” ಎಂದು ಮಜುಂದಾರ್ ಹೇಳಿದ್ದಾರೆ.

ಇನ್ನು, ದೊಮ್‌ಜೂರ್‌ನಿಂದ (Domjur) ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋಲುಕಂಡಿದ್ದ ಮಾಜಿ ರಾಜ್ಯ ಸಚಿವ ರಾಜೀವ್ ಬಂಡೋಪಾಧ್ಯಾಯ ಕೂಡ ಜಾಯ್ ಪ್ರಕಾಶ್ ಮಜುಂದಾರ್ ಅವರ ಹೇಳಿಕೆಗಳು 100 ಪ್ರತಿಶತ ನಿಜವೆಂದು ಪ್ರತಿಪಾದಿಸಿದ್ದಾರೆ. “ಸುವೇಂದು ಅಧಿಕಾರಿಯನ್ನು ನ್ಯಾಯಯುತವಾಗಿ ವಿಜೇತ ಎಂದು ಘೋಷಿಸಲಾಗಿಲ್ಲ ಎಂದು ನನಗೆ ತಿಳಿದಿದೆ. ಅದಕ್ಕೆ ನಾನು ಭರವಸೆ ನೀಡಬಲ್ಲೆ” ಎಂದಿದ್ದಾರೆ.

ನಾಯಕರ ವಿವಾದಿತ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಬಂಗಾಳಿ ಭಾಷೆಯಲ್ಲಿ ಟ್ವಿಟರ್ ಪೋಸ್ಟ್‌ ಮಾಡಿ, ತೃಣಮೂಲ ಕಾಂಗ್ರೆಸ್ ನಾಯಕರ ಪತ್ರಿಕಾಗೋಷ್ಠಿಯನ್ನು “ಸುಲಿಗೆಕೋರ” ಪಕ್ಷ ನಡೆಸಿದ “ಪ್ರಹಸನ” ಎಂದು ಬಣ್ಣಿಸಿದ್ದಾರೆ. ಸತ್ಯೇಂದ್ರ ನಾಥ್ ದತ್ತಾ ಅವರ ಪ್ರಸಿದ್ಧ ಬಂಗಾಳಿ ಕವಿತೆಯನ್ನು ಹಂಚಿಕೊಂಡಿರುವ ಅವರು, ಆರೋಪಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.


ಇದನ್ನೂ ಓದಿ: ಬಿಜೆಪಿಯ ಗೆಲುವು ಜನಾದೇಶವಲ್ಲ; ಯಂತ್ರೋಪಕರಣಗಳ ಆದೇಶ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂದ್ರೆ ಬಿಜೆಪಿ ಇರುತ್ತಿದ್ದಿದ್ದರೆ ನ್ಯಾಯಸಮ್ಮತವಾಗಿ ಇದೆಯೇ………..,,?

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...