Homeಮುಖಪುಟಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ.

- Advertisement -
- Advertisement -

ಆರ್ಯ ಸಮಾಜದ ನಾಯಕ, ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರ ಸಾವಿಗೆ ಮಾಜಿ ಐಪಿಎಸ್ ಅಧಿಕಾರಿ ಎಂ ನಾಗೇಶ್ವರ್‌ ರಾವ್ ಸಂಭ್ರಮಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸ್ವಾಮಿ ಅಗ್ನಿವೇಶ್(80) ನಿನ್ನೆ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್‌ ಬಿಲಿಯರಿ ಸೈನ್ಸಸ್​ ಆಸ್ಪತ್ರೆ (ILBS)ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ವಾಮಿ ಅಗ್ನಿವೇಶ್ ಪಿತ್ತಜನಕಾಂಗದ ಸಿರೋಸಿಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು.

ಸ್ವಾಮಿ ಅಗ್ನಿವೇಶ್ ಸಾವಿಗೆ ದೇಶದಾದ್ಯಂತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ ಸದಾ ವಿವಾದಗಳನ್ನು ಸೃಷ್ಟಿಸುವ ಮಾಜಿ ಐಪಿಎಸ್ ಅಧಿಕಾರಿ ನಾಗೇಶ್ವರ ರಾವ್ ಸಾವಿಗೆ ಸಂತಸ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ತನ್ನ ಟ್ವೀಟ್‌ನಲ್ಲಿ, “ನೀವು ಕೇಸರಿ ಬಟ್ಟೆಗಳನ್ನು ಧರಿಸುವ ಹಿಂದೂ ವಿರೋಧಿ. ನೀವು ಹಿಂದೂ ಧರ್ಮಕ್ಕೆ ಅಪಾರ ಹಾನಿ ಮಾಡಿದ್ದೀರಿ. ನೀವು ತೆಲುಗು ಬ್ರಾಹ್ಮಣರಾಗಿ ಹುಟ್ಟಿದ್ದೀರಿ ಎಂದು ಹೇಳಲು ನನಗೆ ನಾಚಿಕೆಯಾಗುತ್ತದೆ. ಗೋಮುಖ ವ್ಯಾಘ್ರ. ಯಮರಾಜನ ವಿರುದ್ಧ ನನ್ನ ತಕರಾರು ಏನೆಂದರೆ ಇದಕ್ಕೆ ಯಾಕೆ ಇಷ್ಟು ದಿನ ಕಾಯುತ್ತಿದ್ದ!” ಎಂದು ಅತ್ಯಂತ ಕೀಳು ಮಟ್ಟದಲ್ಲಿ ಮಾನವೀಯತೆ ಇಲ್ಲದೆ ಹೇಳಿಕೆ ನೀಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಇಲ್ಲಿದೆ)

ನಾಗೇಶ್ವರ ರಾವ್ ಟ್ವೀಟ್‌ಅನ್ನು ಖಂಡಿಸಿರುವ ಹಲವಾರು ವ್ಯಕ್ತಿಗಳು ಅವರ ವಿರುದ್ದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ವಕ್ತಾರರಾದ ಪವನ್ ಖೇರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಆರ್ಯಸಮಾಜವನ್ನು ಆರೆಸ್ಸೆಸ್ ಆಪೋಷನ ಮಾಡುವುದನ್ನು ತಡೆಯಲು ಸ್ವಾಮಿಅಗ್ನಿವೇಶ್ ಬಂಡೆಯಂತೆ ನಿಂತರು. ನಾನೊಬ್ಬ ಹಿಂದೂ ಆಗಿ, ಚಾರ್ವಕನ ಅನುಯಾಯಿಗಳಿಗೆ ನನ್ನ ಧರ್ಮ ನೀಡಿದ ಜಾಗವನ್ನು ನಾನು ಮೆಚ್ಚುತ್ತೇನೆ. ಹಿಂದೂ ಧರ್ಮ ತುಂಬಾ ವಿಶಾಲ, ಆಳವಾಗಿದೆ. ಜೊತೆಗೆ ನಿಮ್ಮ ಟ್ವೀಟ್‌ನಲ್ಲಿ ಕಂಡುಬರುವಂತಹ ಅವಿವೇಕಿತನದ ದ್ವೇಷವನ್ನು ತಿರಸ್ಕರಿಸುವಷ್ಟು ಸುರಕ್ಷಿತವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಇಂಡಿಯನ್ ಪೊಲೀಸ್ ಫೌಂಡೇಶನ್ ನಾಗೇಶ್ವರ್‌ ರಾವ್ ಅವರ ಹೇಳಿಕೆಯನ್ನು ವಿರೋಧಿಸಿದ್ದು, “ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ಇಂತಹ ದ್ವೇಷ ಸಂದೇಶಗಳನ್ನು ಟ್ವೀಟ್ ಮಾಡಿ ಅವರು ಧರಿಸಿದ್ದ ಪೊಲೀಸ್ ಸಮವಸ್ತ್ರವನ್ನು ಅಪವಿತ್ರಗೊಳಿಸಿದ್ದಾರೆ ಮತ್ತು ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದಾರೆ. ಅವರು ದೇಶದ ಇಡೀ ಪೊಲೀಸ್ ಪಡೆಗಳನ್ನು, ವಿಶೇಷವಾಗಿ ಯುವ ಅಧಿಕಾರಿಗಳನ್ನು ನಿರಾಶೆಗೊಳಿಸಿದ್ದಾರೆ” ಎಂದು ಹೇಳಿದೆ.

CNN-News18 ಸಂಪಾದಕಿಯಾಗಿರುವ ಅರುನಿಮಾ, “ನೀಚ ಪೊಲೀಸ್ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಬಂದು ಸುರಿಯುತ್ತಿದ್ದಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ನಾಗೇಶ್ವರ್ ರಾವ್ ಇದಕ್ಕೆ ಉದಾಹರಣೆಯಾಗಿದ್ದಾರೆ. ಇನ್ನು ಕೆಲವು ಐಪಿಎಸ್ ಅಧಿಕಾರಿಗಳು ಬಹಿರಂಗವಾಗಿ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿ ಪ್ರಚಾರ ಮಾಡುತ್ತಿದ್ದಾರೆ. ಇದು ಆಡಳಿತ ಕಚೇರಿಯ ಪ್ರಮಾಣವಚನವೆ? ಟ್ರೈನಿಂಗ್‌ ಅಕಾಡೆಮಿಯಲ್ಲಿ ನೀಡಲಾದ ತರಬೇತಿಯೆ?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸಾಕೆತ್‌ ಗೋಖಲೆ, “ಈ ಕೆಟ್ಟ ವ್ಯಕ್ತಿ ನಿವೃತ್ತ ಐಪಿಎಸ್. ನಾಗರಿಕ ಸೇವಾಯಲ್ಲಿ ಇಲ್ಲದಿದ್ದರೂ ಅವರ ಹೆಸರಲ್ಲಿ ’ಐಪಿಎಸ್’ ಅನ್ನು ಬಳಸುವುದನ್ನು ಮುಂದುವರೆಸಿದ್ದಾರೆ. ಇಂದು ಸಂಜೆ ವೇಳೆಗೆ ನಿಮ್ಮ ಹೆಸರಿನಿಂದ ’ಐಪಿಎಸ್’ ಪದವನ್ನು ತೆಗೆದುಹಾಕಿ. ಇಲ್ಲದಿದ್ದರೆ ಪ್ರಕರಣ ದಾಖಲಿಸಲಾಗುವುದು” ಎಂದು ಹೇಳಿದ್ದಾರೆ.

ಇತಿಹಾಸಗಾರ ಇರ್ಫಾನ್ ಹಬೀಬ್, “ನಾಚಿಕೆಯಾಗಬೇಕು ನಿಮಗೆ. ಪೊಲೀಸ್ ಅಧಿಕಾರಿಯಾಗಿ ನೀವು ಏನು ಮಾಡಿರಬೇಕು ಎಂದು ಊಹಿಸಬಲ್ಲಿರಾ? ಸತ್ತವರನ್ನು ನಿಂದಿಸುವುದು ಹಿಂದುತ್ವವಾಗಿರಬಹುದು ಆದರೆ ಖಂಡಿತವಾಗಿಯೂ ಹಿಂದೂ ಧರ್ಮವಲ್ಲ. ನೀವು ಚಿಕಿತ್ಸೆ ಪಡೆಯಿರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

1986 ಬ್ಯಾಚ್‌ನ IPS ಅಧಿಕಾರಿಯಾಗಿದ್ದ, ಒಂದೂವರೆ ವರುಷದ ಹಿಂದೆ CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ. ಕಳೆದ ಜುಲೈನಲ್ಲಿ ಅವರು ನಿವೃತ್ತಿಯಾಗಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ‘ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು’ ಎಂದ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...