Homeಮುಖಪುಟಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ.

- Advertisement -
- Advertisement -

ಆರ್ಯ ಸಮಾಜದ ನಾಯಕ, ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರ ಸಾವಿಗೆ ಮಾಜಿ ಐಪಿಎಸ್ ಅಧಿಕಾರಿ ಎಂ ನಾಗೇಶ್ವರ್‌ ರಾವ್ ಸಂಭ್ರಮಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸ್ವಾಮಿ ಅಗ್ನಿವೇಶ್(80) ನಿನ್ನೆ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್‌ ಬಿಲಿಯರಿ ಸೈನ್ಸಸ್​ ಆಸ್ಪತ್ರೆ (ILBS)ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ವಾಮಿ ಅಗ್ನಿವೇಶ್ ಪಿತ್ತಜನಕಾಂಗದ ಸಿರೋಸಿಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು.

ಸ್ವಾಮಿ ಅಗ್ನಿವೇಶ್ ಸಾವಿಗೆ ದೇಶದಾದ್ಯಂತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ ಸದಾ ವಿವಾದಗಳನ್ನು ಸೃಷ್ಟಿಸುವ ಮಾಜಿ ಐಪಿಎಸ್ ಅಧಿಕಾರಿ ನಾಗೇಶ್ವರ ರಾವ್ ಸಾವಿಗೆ ಸಂತಸ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ತನ್ನ ಟ್ವೀಟ್‌ನಲ್ಲಿ, “ನೀವು ಕೇಸರಿ ಬಟ್ಟೆಗಳನ್ನು ಧರಿಸುವ ಹಿಂದೂ ವಿರೋಧಿ. ನೀವು ಹಿಂದೂ ಧರ್ಮಕ್ಕೆ ಅಪಾರ ಹಾನಿ ಮಾಡಿದ್ದೀರಿ. ನೀವು ತೆಲುಗು ಬ್ರಾಹ್ಮಣರಾಗಿ ಹುಟ್ಟಿದ್ದೀರಿ ಎಂದು ಹೇಳಲು ನನಗೆ ನಾಚಿಕೆಯಾಗುತ್ತದೆ. ಗೋಮುಖ ವ್ಯಾಘ್ರ. ಯಮರಾಜನ ವಿರುದ್ಧ ನನ್ನ ತಕರಾರು ಏನೆಂದರೆ ಇದಕ್ಕೆ ಯಾಕೆ ಇಷ್ಟು ದಿನ ಕಾಯುತ್ತಿದ್ದ!” ಎಂದು ಅತ್ಯಂತ ಕೀಳು ಮಟ್ಟದಲ್ಲಿ ಮಾನವೀಯತೆ ಇಲ್ಲದೆ ಹೇಳಿಕೆ ನೀಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಇಲ್ಲಿದೆ)

ನಾಗೇಶ್ವರ ರಾವ್ ಟ್ವೀಟ್‌ಅನ್ನು ಖಂಡಿಸಿರುವ ಹಲವಾರು ವ್ಯಕ್ತಿಗಳು ಅವರ ವಿರುದ್ದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ವಕ್ತಾರರಾದ ಪವನ್ ಖೇರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಆರ್ಯಸಮಾಜವನ್ನು ಆರೆಸ್ಸೆಸ್ ಆಪೋಷನ ಮಾಡುವುದನ್ನು ತಡೆಯಲು ಸ್ವಾಮಿಅಗ್ನಿವೇಶ್ ಬಂಡೆಯಂತೆ ನಿಂತರು. ನಾನೊಬ್ಬ ಹಿಂದೂ ಆಗಿ, ಚಾರ್ವಕನ ಅನುಯಾಯಿಗಳಿಗೆ ನನ್ನ ಧರ್ಮ ನೀಡಿದ ಜಾಗವನ್ನು ನಾನು ಮೆಚ್ಚುತ್ತೇನೆ. ಹಿಂದೂ ಧರ್ಮ ತುಂಬಾ ವಿಶಾಲ, ಆಳವಾಗಿದೆ. ಜೊತೆಗೆ ನಿಮ್ಮ ಟ್ವೀಟ್‌ನಲ್ಲಿ ಕಂಡುಬರುವಂತಹ ಅವಿವೇಕಿತನದ ದ್ವೇಷವನ್ನು ತಿರಸ್ಕರಿಸುವಷ್ಟು ಸುರಕ್ಷಿತವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಇಂಡಿಯನ್ ಪೊಲೀಸ್ ಫೌಂಡೇಶನ್ ನಾಗೇಶ್ವರ್‌ ರಾವ್ ಅವರ ಹೇಳಿಕೆಯನ್ನು ವಿರೋಧಿಸಿದ್ದು, “ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ಇಂತಹ ದ್ವೇಷ ಸಂದೇಶಗಳನ್ನು ಟ್ವೀಟ್ ಮಾಡಿ ಅವರು ಧರಿಸಿದ್ದ ಪೊಲೀಸ್ ಸಮವಸ್ತ್ರವನ್ನು ಅಪವಿತ್ರಗೊಳಿಸಿದ್ದಾರೆ ಮತ್ತು ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದಾರೆ. ಅವರು ದೇಶದ ಇಡೀ ಪೊಲೀಸ್ ಪಡೆಗಳನ್ನು, ವಿಶೇಷವಾಗಿ ಯುವ ಅಧಿಕಾರಿಗಳನ್ನು ನಿರಾಶೆಗೊಳಿಸಿದ್ದಾರೆ” ಎಂದು ಹೇಳಿದೆ.

CNN-News18 ಸಂಪಾದಕಿಯಾಗಿರುವ ಅರುನಿಮಾ, “ನೀಚ ಪೊಲೀಸ್ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಬಂದು ಸುರಿಯುತ್ತಿದ್ದಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ನಾಗೇಶ್ವರ್ ರಾವ್ ಇದಕ್ಕೆ ಉದಾಹರಣೆಯಾಗಿದ್ದಾರೆ. ಇನ್ನು ಕೆಲವು ಐಪಿಎಸ್ ಅಧಿಕಾರಿಗಳು ಬಹಿರಂಗವಾಗಿ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿ ಪ್ರಚಾರ ಮಾಡುತ್ತಿದ್ದಾರೆ. ಇದು ಆಡಳಿತ ಕಚೇರಿಯ ಪ್ರಮಾಣವಚನವೆ? ಟ್ರೈನಿಂಗ್‌ ಅಕಾಡೆಮಿಯಲ್ಲಿ ನೀಡಲಾದ ತರಬೇತಿಯೆ?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸಾಕೆತ್‌ ಗೋಖಲೆ, “ಈ ಕೆಟ್ಟ ವ್ಯಕ್ತಿ ನಿವೃತ್ತ ಐಪಿಎಸ್. ನಾಗರಿಕ ಸೇವಾಯಲ್ಲಿ ಇಲ್ಲದಿದ್ದರೂ ಅವರ ಹೆಸರಲ್ಲಿ ’ಐಪಿಎಸ್’ ಅನ್ನು ಬಳಸುವುದನ್ನು ಮುಂದುವರೆಸಿದ್ದಾರೆ. ಇಂದು ಸಂಜೆ ವೇಳೆಗೆ ನಿಮ್ಮ ಹೆಸರಿನಿಂದ ’ಐಪಿಎಸ್’ ಪದವನ್ನು ತೆಗೆದುಹಾಕಿ. ಇಲ್ಲದಿದ್ದರೆ ಪ್ರಕರಣ ದಾಖಲಿಸಲಾಗುವುದು” ಎಂದು ಹೇಳಿದ್ದಾರೆ.

ಇತಿಹಾಸಗಾರ ಇರ್ಫಾನ್ ಹಬೀಬ್, “ನಾಚಿಕೆಯಾಗಬೇಕು ನಿಮಗೆ. ಪೊಲೀಸ್ ಅಧಿಕಾರಿಯಾಗಿ ನೀವು ಏನು ಮಾಡಿರಬೇಕು ಎಂದು ಊಹಿಸಬಲ್ಲಿರಾ? ಸತ್ತವರನ್ನು ನಿಂದಿಸುವುದು ಹಿಂದುತ್ವವಾಗಿರಬಹುದು ಆದರೆ ಖಂಡಿತವಾಗಿಯೂ ಹಿಂದೂ ಧರ್ಮವಲ್ಲ. ನೀವು ಚಿಕಿತ್ಸೆ ಪಡೆಯಿರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

1986 ಬ್ಯಾಚ್‌ನ IPS ಅಧಿಕಾರಿಯಾಗಿದ್ದ, ಒಂದೂವರೆ ವರುಷದ ಹಿಂದೆ CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ. ಕಳೆದ ಜುಲೈನಲ್ಲಿ ಅವರು ನಿವೃತ್ತಿಯಾಗಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ‘ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು’ ಎಂದ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...