Homeಮುಖಪುಟಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ.

- Advertisement -
- Advertisement -

ಆರ್ಯ ಸಮಾಜದ ನಾಯಕ, ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರ ಸಾವಿಗೆ ಮಾಜಿ ಐಪಿಎಸ್ ಅಧಿಕಾರಿ ಎಂ ನಾಗೇಶ್ವರ್‌ ರಾವ್ ಸಂಭ್ರಮಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸ್ವಾಮಿ ಅಗ್ನಿವೇಶ್(80) ನಿನ್ನೆ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್‌ ಬಿಲಿಯರಿ ಸೈನ್ಸಸ್​ ಆಸ್ಪತ್ರೆ (ILBS)ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ವಾಮಿ ಅಗ್ನಿವೇಶ್ ಪಿತ್ತಜನಕಾಂಗದ ಸಿರೋಸಿಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು.

ಸ್ವಾಮಿ ಅಗ್ನಿವೇಶ್ ಸಾವಿಗೆ ದೇಶದಾದ್ಯಂತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ ಸದಾ ವಿವಾದಗಳನ್ನು ಸೃಷ್ಟಿಸುವ ಮಾಜಿ ಐಪಿಎಸ್ ಅಧಿಕಾರಿ ನಾಗೇಶ್ವರ ರಾವ್ ಸಾವಿಗೆ ಸಂತಸ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ತನ್ನ ಟ್ವೀಟ್‌ನಲ್ಲಿ, “ನೀವು ಕೇಸರಿ ಬಟ್ಟೆಗಳನ್ನು ಧರಿಸುವ ಹಿಂದೂ ವಿರೋಧಿ. ನೀವು ಹಿಂದೂ ಧರ್ಮಕ್ಕೆ ಅಪಾರ ಹಾನಿ ಮಾಡಿದ್ದೀರಿ. ನೀವು ತೆಲುಗು ಬ್ರಾಹ್ಮಣರಾಗಿ ಹುಟ್ಟಿದ್ದೀರಿ ಎಂದು ಹೇಳಲು ನನಗೆ ನಾಚಿಕೆಯಾಗುತ್ತದೆ. ಗೋಮುಖ ವ್ಯಾಘ್ರ. ಯಮರಾಜನ ವಿರುದ್ಧ ನನ್ನ ತಕರಾರು ಏನೆಂದರೆ ಇದಕ್ಕೆ ಯಾಕೆ ಇಷ್ಟು ದಿನ ಕಾಯುತ್ತಿದ್ದ!” ಎಂದು ಅತ್ಯಂತ ಕೀಳು ಮಟ್ಟದಲ್ಲಿ ಮಾನವೀಯತೆ ಇಲ್ಲದೆ ಹೇಳಿಕೆ ನೀಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಇಲ್ಲಿದೆ)

ನಾಗೇಶ್ವರ ರಾವ್ ಟ್ವೀಟ್‌ಅನ್ನು ಖಂಡಿಸಿರುವ ಹಲವಾರು ವ್ಯಕ್ತಿಗಳು ಅವರ ವಿರುದ್ದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ವಕ್ತಾರರಾದ ಪವನ್ ಖೇರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಆರ್ಯಸಮಾಜವನ್ನು ಆರೆಸ್ಸೆಸ್ ಆಪೋಷನ ಮಾಡುವುದನ್ನು ತಡೆಯಲು ಸ್ವಾಮಿಅಗ್ನಿವೇಶ್ ಬಂಡೆಯಂತೆ ನಿಂತರು. ನಾನೊಬ್ಬ ಹಿಂದೂ ಆಗಿ, ಚಾರ್ವಕನ ಅನುಯಾಯಿಗಳಿಗೆ ನನ್ನ ಧರ್ಮ ನೀಡಿದ ಜಾಗವನ್ನು ನಾನು ಮೆಚ್ಚುತ್ತೇನೆ. ಹಿಂದೂ ಧರ್ಮ ತುಂಬಾ ವಿಶಾಲ, ಆಳವಾಗಿದೆ. ಜೊತೆಗೆ ನಿಮ್ಮ ಟ್ವೀಟ್‌ನಲ್ಲಿ ಕಂಡುಬರುವಂತಹ ಅವಿವೇಕಿತನದ ದ್ವೇಷವನ್ನು ತಿರಸ್ಕರಿಸುವಷ್ಟು ಸುರಕ್ಷಿತವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಇಂಡಿಯನ್ ಪೊಲೀಸ್ ಫೌಂಡೇಶನ್ ನಾಗೇಶ್ವರ್‌ ರಾವ್ ಅವರ ಹೇಳಿಕೆಯನ್ನು ವಿರೋಧಿಸಿದ್ದು, “ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ಇಂತಹ ದ್ವೇಷ ಸಂದೇಶಗಳನ್ನು ಟ್ವೀಟ್ ಮಾಡಿ ಅವರು ಧರಿಸಿದ್ದ ಪೊಲೀಸ್ ಸಮವಸ್ತ್ರವನ್ನು ಅಪವಿತ್ರಗೊಳಿಸಿದ್ದಾರೆ ಮತ್ತು ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದಾರೆ. ಅವರು ದೇಶದ ಇಡೀ ಪೊಲೀಸ್ ಪಡೆಗಳನ್ನು, ವಿಶೇಷವಾಗಿ ಯುವ ಅಧಿಕಾರಿಗಳನ್ನು ನಿರಾಶೆಗೊಳಿಸಿದ್ದಾರೆ” ಎಂದು ಹೇಳಿದೆ.

CNN-News18 ಸಂಪಾದಕಿಯಾಗಿರುವ ಅರುನಿಮಾ, “ನೀಚ ಪೊಲೀಸ್ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಬಂದು ಸುರಿಯುತ್ತಿದ್ದಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ನಾಗೇಶ್ವರ್ ರಾವ್ ಇದಕ್ಕೆ ಉದಾಹರಣೆಯಾಗಿದ್ದಾರೆ. ಇನ್ನು ಕೆಲವು ಐಪಿಎಸ್ ಅಧಿಕಾರಿಗಳು ಬಹಿರಂಗವಾಗಿ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿ ಪ್ರಚಾರ ಮಾಡುತ್ತಿದ್ದಾರೆ. ಇದು ಆಡಳಿತ ಕಚೇರಿಯ ಪ್ರಮಾಣವಚನವೆ? ಟ್ರೈನಿಂಗ್‌ ಅಕಾಡೆಮಿಯಲ್ಲಿ ನೀಡಲಾದ ತರಬೇತಿಯೆ?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸಾಕೆತ್‌ ಗೋಖಲೆ, “ಈ ಕೆಟ್ಟ ವ್ಯಕ್ತಿ ನಿವೃತ್ತ ಐಪಿಎಸ್. ನಾಗರಿಕ ಸೇವಾಯಲ್ಲಿ ಇಲ್ಲದಿದ್ದರೂ ಅವರ ಹೆಸರಲ್ಲಿ ’ಐಪಿಎಸ್’ ಅನ್ನು ಬಳಸುವುದನ್ನು ಮುಂದುವರೆಸಿದ್ದಾರೆ. ಇಂದು ಸಂಜೆ ವೇಳೆಗೆ ನಿಮ್ಮ ಹೆಸರಿನಿಂದ ’ಐಪಿಎಸ್’ ಪದವನ್ನು ತೆಗೆದುಹಾಕಿ. ಇಲ್ಲದಿದ್ದರೆ ಪ್ರಕರಣ ದಾಖಲಿಸಲಾಗುವುದು” ಎಂದು ಹೇಳಿದ್ದಾರೆ.

ಇತಿಹಾಸಗಾರ ಇರ್ಫಾನ್ ಹಬೀಬ್, “ನಾಚಿಕೆಯಾಗಬೇಕು ನಿಮಗೆ. ಪೊಲೀಸ್ ಅಧಿಕಾರಿಯಾಗಿ ನೀವು ಏನು ಮಾಡಿರಬೇಕು ಎಂದು ಊಹಿಸಬಲ್ಲಿರಾ? ಸತ್ತವರನ್ನು ನಿಂದಿಸುವುದು ಹಿಂದುತ್ವವಾಗಿರಬಹುದು ಆದರೆ ಖಂಡಿತವಾಗಿಯೂ ಹಿಂದೂ ಧರ್ಮವಲ್ಲ. ನೀವು ಚಿಕಿತ್ಸೆ ಪಡೆಯಿರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

1986 ಬ್ಯಾಚ್‌ನ IPS ಅಧಿಕಾರಿಯಾಗಿದ್ದ, ಒಂದೂವರೆ ವರುಷದ ಹಿಂದೆ CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ. ಕಳೆದ ಜುಲೈನಲ್ಲಿ ಅವರು ನಿವೃತ್ತಿಯಾಗಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ‘ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು’ ಎಂದ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...