Homeಮುಖಪುಟಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ.

- Advertisement -
- Advertisement -

ಆರ್ಯ ಸಮಾಜದ ನಾಯಕ, ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರ ಸಾವಿಗೆ ಮಾಜಿ ಐಪಿಎಸ್ ಅಧಿಕಾರಿ ಎಂ ನಾಗೇಶ್ವರ್‌ ರಾವ್ ಸಂಭ್ರಮಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸ್ವಾಮಿ ಅಗ್ನಿವೇಶ್(80) ನಿನ್ನೆ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್‌ ಬಿಲಿಯರಿ ಸೈನ್ಸಸ್​ ಆಸ್ಪತ್ರೆ (ILBS)ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ವಾಮಿ ಅಗ್ನಿವೇಶ್ ಪಿತ್ತಜನಕಾಂಗದ ಸಿರೋಸಿಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು.

ಸ್ವಾಮಿ ಅಗ್ನಿವೇಶ್ ಸಾವಿಗೆ ದೇಶದಾದ್ಯಂತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ ಸದಾ ವಿವಾದಗಳನ್ನು ಸೃಷ್ಟಿಸುವ ಮಾಜಿ ಐಪಿಎಸ್ ಅಧಿಕಾರಿ ನಾಗೇಶ್ವರ ರಾವ್ ಸಾವಿಗೆ ಸಂತಸ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ತನ್ನ ಟ್ವೀಟ್‌ನಲ್ಲಿ, “ನೀವು ಕೇಸರಿ ಬಟ್ಟೆಗಳನ್ನು ಧರಿಸುವ ಹಿಂದೂ ವಿರೋಧಿ. ನೀವು ಹಿಂದೂ ಧರ್ಮಕ್ಕೆ ಅಪಾರ ಹಾನಿ ಮಾಡಿದ್ದೀರಿ. ನೀವು ತೆಲುಗು ಬ್ರಾಹ್ಮಣರಾಗಿ ಹುಟ್ಟಿದ್ದೀರಿ ಎಂದು ಹೇಳಲು ನನಗೆ ನಾಚಿಕೆಯಾಗುತ್ತದೆ. ಗೋಮುಖ ವ್ಯಾಘ್ರ. ಯಮರಾಜನ ವಿರುದ್ಧ ನನ್ನ ತಕರಾರು ಏನೆಂದರೆ ಇದಕ್ಕೆ ಯಾಕೆ ಇಷ್ಟು ದಿನ ಕಾಯುತ್ತಿದ್ದ!” ಎಂದು ಅತ್ಯಂತ ಕೀಳು ಮಟ್ಟದಲ್ಲಿ ಮಾನವೀಯತೆ ಇಲ್ಲದೆ ಹೇಳಿಕೆ ನೀಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಇಲ್ಲಿದೆ)

ನಾಗೇಶ್ವರ ರಾವ್ ಟ್ವೀಟ್‌ಅನ್ನು ಖಂಡಿಸಿರುವ ಹಲವಾರು ವ್ಯಕ್ತಿಗಳು ಅವರ ವಿರುದ್ದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ವಕ್ತಾರರಾದ ಪವನ್ ಖೇರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಆರ್ಯಸಮಾಜವನ್ನು ಆರೆಸ್ಸೆಸ್ ಆಪೋಷನ ಮಾಡುವುದನ್ನು ತಡೆಯಲು ಸ್ವಾಮಿಅಗ್ನಿವೇಶ್ ಬಂಡೆಯಂತೆ ನಿಂತರು. ನಾನೊಬ್ಬ ಹಿಂದೂ ಆಗಿ, ಚಾರ್ವಕನ ಅನುಯಾಯಿಗಳಿಗೆ ನನ್ನ ಧರ್ಮ ನೀಡಿದ ಜಾಗವನ್ನು ನಾನು ಮೆಚ್ಚುತ್ತೇನೆ. ಹಿಂದೂ ಧರ್ಮ ತುಂಬಾ ವಿಶಾಲ, ಆಳವಾಗಿದೆ. ಜೊತೆಗೆ ನಿಮ್ಮ ಟ್ವೀಟ್‌ನಲ್ಲಿ ಕಂಡುಬರುವಂತಹ ಅವಿವೇಕಿತನದ ದ್ವೇಷವನ್ನು ತಿರಸ್ಕರಿಸುವಷ್ಟು ಸುರಕ್ಷಿತವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಇಂಡಿಯನ್ ಪೊಲೀಸ್ ಫೌಂಡೇಶನ್ ನಾಗೇಶ್ವರ್‌ ರಾವ್ ಅವರ ಹೇಳಿಕೆಯನ್ನು ವಿರೋಧಿಸಿದ್ದು, “ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ಇಂತಹ ದ್ವೇಷ ಸಂದೇಶಗಳನ್ನು ಟ್ವೀಟ್ ಮಾಡಿ ಅವರು ಧರಿಸಿದ್ದ ಪೊಲೀಸ್ ಸಮವಸ್ತ್ರವನ್ನು ಅಪವಿತ್ರಗೊಳಿಸಿದ್ದಾರೆ ಮತ್ತು ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದಾರೆ. ಅವರು ದೇಶದ ಇಡೀ ಪೊಲೀಸ್ ಪಡೆಗಳನ್ನು, ವಿಶೇಷವಾಗಿ ಯುವ ಅಧಿಕಾರಿಗಳನ್ನು ನಿರಾಶೆಗೊಳಿಸಿದ್ದಾರೆ” ಎಂದು ಹೇಳಿದೆ.

CNN-News18 ಸಂಪಾದಕಿಯಾಗಿರುವ ಅರುನಿಮಾ, “ನೀಚ ಪೊಲೀಸ್ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಬಂದು ಸುರಿಯುತ್ತಿದ್ದಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ನಾಗೇಶ್ವರ್ ರಾವ್ ಇದಕ್ಕೆ ಉದಾಹರಣೆಯಾಗಿದ್ದಾರೆ. ಇನ್ನು ಕೆಲವು ಐಪಿಎಸ್ ಅಧಿಕಾರಿಗಳು ಬಹಿರಂಗವಾಗಿ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿ ಪ್ರಚಾರ ಮಾಡುತ್ತಿದ್ದಾರೆ. ಇದು ಆಡಳಿತ ಕಚೇರಿಯ ಪ್ರಮಾಣವಚನವೆ? ಟ್ರೈನಿಂಗ್‌ ಅಕಾಡೆಮಿಯಲ್ಲಿ ನೀಡಲಾದ ತರಬೇತಿಯೆ?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸಾಕೆತ್‌ ಗೋಖಲೆ, “ಈ ಕೆಟ್ಟ ವ್ಯಕ್ತಿ ನಿವೃತ್ತ ಐಪಿಎಸ್. ನಾಗರಿಕ ಸೇವಾಯಲ್ಲಿ ಇಲ್ಲದಿದ್ದರೂ ಅವರ ಹೆಸರಲ್ಲಿ ’ಐಪಿಎಸ್’ ಅನ್ನು ಬಳಸುವುದನ್ನು ಮುಂದುವರೆಸಿದ್ದಾರೆ. ಇಂದು ಸಂಜೆ ವೇಳೆಗೆ ನಿಮ್ಮ ಹೆಸರಿನಿಂದ ’ಐಪಿಎಸ್’ ಪದವನ್ನು ತೆಗೆದುಹಾಕಿ. ಇಲ್ಲದಿದ್ದರೆ ಪ್ರಕರಣ ದಾಖಲಿಸಲಾಗುವುದು” ಎಂದು ಹೇಳಿದ್ದಾರೆ.

ಇತಿಹಾಸಗಾರ ಇರ್ಫಾನ್ ಹಬೀಬ್, “ನಾಚಿಕೆಯಾಗಬೇಕು ನಿಮಗೆ. ಪೊಲೀಸ್ ಅಧಿಕಾರಿಯಾಗಿ ನೀವು ಏನು ಮಾಡಿರಬೇಕು ಎಂದು ಊಹಿಸಬಲ್ಲಿರಾ? ಸತ್ತವರನ್ನು ನಿಂದಿಸುವುದು ಹಿಂದುತ್ವವಾಗಿರಬಹುದು ಆದರೆ ಖಂಡಿತವಾಗಿಯೂ ಹಿಂದೂ ಧರ್ಮವಲ್ಲ. ನೀವು ಚಿಕಿತ್ಸೆ ಪಡೆಯಿರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

1986 ಬ್ಯಾಚ್‌ನ IPS ಅಧಿಕಾರಿಯಾಗಿದ್ದ, ಒಂದೂವರೆ ವರುಷದ ಹಿಂದೆ CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ. ಕಳೆದ ಜುಲೈನಲ್ಲಿ ಅವರು ನಿವೃತ್ತಿಯಾಗಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ‘ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು’ ಎಂದ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...