Homeಮುಖಪುಟಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸ್ವಾಮಿ ಅಗ್ನಿವೇಶ್ ನಿಧನ; ಸಂಭ್ರಮಿಸಿದ ಮಾಜಿ ಐಪಿಎಸ್ ಅಧಿಕಾರಿ- ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ.

- Advertisement -
- Advertisement -

ಆರ್ಯ ಸಮಾಜದ ನಾಯಕ, ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರ ಸಾವಿಗೆ ಮಾಜಿ ಐಪಿಎಸ್ ಅಧಿಕಾರಿ ಎಂ ನಾಗೇಶ್ವರ್‌ ರಾವ್ ಸಂಭ್ರಮಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸ್ವಾಮಿ ಅಗ್ನಿವೇಶ್(80) ನಿನ್ನೆ ದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್‌ ಬಿಲಿಯರಿ ಸೈನ್ಸಸ್​ ಆಸ್ಪತ್ರೆ (ILBS)ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ವಾಮಿ ಅಗ್ನಿವೇಶ್ ಪಿತ್ತಜನಕಾಂಗದ ಸಿರೋಸಿಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು.

ಸ್ವಾಮಿ ಅಗ್ನಿವೇಶ್ ಸಾವಿಗೆ ದೇಶದಾದ್ಯಂತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ ಸದಾ ವಿವಾದಗಳನ್ನು ಸೃಷ್ಟಿಸುವ ಮಾಜಿ ಐಪಿಎಸ್ ಅಧಿಕಾರಿ ನಾಗೇಶ್ವರ ರಾವ್ ಸಾವಿಗೆ ಸಂತಸ ವ್ಯಕ್ತಪಡಿಸಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ತನ್ನ ಟ್ವೀಟ್‌ನಲ್ಲಿ, “ನೀವು ಕೇಸರಿ ಬಟ್ಟೆಗಳನ್ನು ಧರಿಸುವ ಹಿಂದೂ ವಿರೋಧಿ. ನೀವು ಹಿಂದೂ ಧರ್ಮಕ್ಕೆ ಅಪಾರ ಹಾನಿ ಮಾಡಿದ್ದೀರಿ. ನೀವು ತೆಲುಗು ಬ್ರಾಹ್ಮಣರಾಗಿ ಹುಟ್ಟಿದ್ದೀರಿ ಎಂದು ಹೇಳಲು ನನಗೆ ನಾಚಿಕೆಯಾಗುತ್ತದೆ. ಗೋಮುಖ ವ್ಯಾಘ್ರ. ಯಮರಾಜನ ವಿರುದ್ಧ ನನ್ನ ತಕರಾರು ಏನೆಂದರೆ ಇದಕ್ಕೆ ಯಾಕೆ ಇಷ್ಟು ದಿನ ಕಾಯುತ್ತಿದ್ದ!” ಎಂದು ಅತ್ಯಂತ ಕೀಳು ಮಟ್ಟದಲ್ಲಿ ಮಾನವೀಯತೆ ಇಲ್ಲದೆ ಹೇಳಿಕೆ ನೀಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಇಲ್ಲಿದೆ)

ನಾಗೇಶ್ವರ ರಾವ್ ಟ್ವೀಟ್‌ಅನ್ನು ಖಂಡಿಸಿರುವ ಹಲವಾರು ವ್ಯಕ್ತಿಗಳು ಅವರ ವಿರುದ್ದ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ವಕ್ತಾರರಾದ ಪವನ್ ಖೇರ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಆರ್ಯಸಮಾಜವನ್ನು ಆರೆಸ್ಸೆಸ್ ಆಪೋಷನ ಮಾಡುವುದನ್ನು ತಡೆಯಲು ಸ್ವಾಮಿಅಗ್ನಿವೇಶ್ ಬಂಡೆಯಂತೆ ನಿಂತರು. ನಾನೊಬ್ಬ ಹಿಂದೂ ಆಗಿ, ಚಾರ್ವಕನ ಅನುಯಾಯಿಗಳಿಗೆ ನನ್ನ ಧರ್ಮ ನೀಡಿದ ಜಾಗವನ್ನು ನಾನು ಮೆಚ್ಚುತ್ತೇನೆ. ಹಿಂದೂ ಧರ್ಮ ತುಂಬಾ ವಿಶಾಲ, ಆಳವಾಗಿದೆ. ಜೊತೆಗೆ ನಿಮ್ಮ ಟ್ವೀಟ್‌ನಲ್ಲಿ ಕಂಡುಬರುವಂತಹ ಅವಿವೇಕಿತನದ ದ್ವೇಷವನ್ನು ತಿರಸ್ಕರಿಸುವಷ್ಟು ಸುರಕ್ಷಿತವಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ಇಂಡಿಯನ್ ಪೊಲೀಸ್ ಫೌಂಡೇಶನ್ ನಾಗೇಶ್ವರ್‌ ರಾವ್ ಅವರ ಹೇಳಿಕೆಯನ್ನು ವಿರೋಧಿಸಿದ್ದು, “ನಿವೃತ್ತ ಐಪಿಎಸ್ ಅಧಿಕಾರಿಯೊಬ್ಬರು ಇಂತಹ ದ್ವೇಷ ಸಂದೇಶಗಳನ್ನು ಟ್ವೀಟ್ ಮಾಡಿ ಅವರು ಧರಿಸಿದ್ದ ಪೊಲೀಸ್ ಸಮವಸ್ತ್ರವನ್ನು ಅಪವಿತ್ರಗೊಳಿಸಿದ್ದಾರೆ ಮತ್ತು ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದಾರೆ. ಅವರು ದೇಶದ ಇಡೀ ಪೊಲೀಸ್ ಪಡೆಗಳನ್ನು, ವಿಶೇಷವಾಗಿ ಯುವ ಅಧಿಕಾರಿಗಳನ್ನು ನಿರಾಶೆಗೊಳಿಸಿದ್ದಾರೆ” ಎಂದು ಹೇಳಿದೆ.

CNN-News18 ಸಂಪಾದಕಿಯಾಗಿರುವ ಅರುನಿಮಾ, “ನೀಚ ಪೊಲೀಸ್ ಅಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಬಂದು ಸುರಿಯುತ್ತಿದ್ದಾರೆ ಎಂದು ನಂಬಲು ಸಾಧ್ಯವಾಗುತ್ತಿಲ್ಲ. ನಾಗೇಶ್ವರ್ ರಾವ್ ಇದಕ್ಕೆ ಉದಾಹರಣೆಯಾಗಿದ್ದಾರೆ. ಇನ್ನು ಕೆಲವು ಐಪಿಎಸ್ ಅಧಿಕಾರಿಗಳು ಬಹಿರಂಗವಾಗಿ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿ ಪ್ರಚಾರ ಮಾಡುತ್ತಿದ್ದಾರೆ. ಇದು ಆಡಳಿತ ಕಚೇರಿಯ ಪ್ರಮಾಣವಚನವೆ? ಟ್ರೈನಿಂಗ್‌ ಅಕಾಡೆಮಿಯಲ್ಲಿ ನೀಡಲಾದ ತರಬೇತಿಯೆ?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸಾಕೆತ್‌ ಗೋಖಲೆ, “ಈ ಕೆಟ್ಟ ವ್ಯಕ್ತಿ ನಿವೃತ್ತ ಐಪಿಎಸ್. ನಾಗರಿಕ ಸೇವಾಯಲ್ಲಿ ಇಲ್ಲದಿದ್ದರೂ ಅವರ ಹೆಸರಲ್ಲಿ ’ಐಪಿಎಸ್’ ಅನ್ನು ಬಳಸುವುದನ್ನು ಮುಂದುವರೆಸಿದ್ದಾರೆ. ಇಂದು ಸಂಜೆ ವೇಳೆಗೆ ನಿಮ್ಮ ಹೆಸರಿನಿಂದ ’ಐಪಿಎಸ್’ ಪದವನ್ನು ತೆಗೆದುಹಾಕಿ. ಇಲ್ಲದಿದ್ದರೆ ಪ್ರಕರಣ ದಾಖಲಿಸಲಾಗುವುದು” ಎಂದು ಹೇಳಿದ್ದಾರೆ.

ಇತಿಹಾಸಗಾರ ಇರ್ಫಾನ್ ಹಬೀಬ್, “ನಾಚಿಕೆಯಾಗಬೇಕು ನಿಮಗೆ. ಪೊಲೀಸ್ ಅಧಿಕಾರಿಯಾಗಿ ನೀವು ಏನು ಮಾಡಿರಬೇಕು ಎಂದು ಊಹಿಸಬಲ್ಲಿರಾ? ಸತ್ತವರನ್ನು ನಿಂದಿಸುವುದು ಹಿಂದುತ್ವವಾಗಿರಬಹುದು ಆದರೆ ಖಂಡಿತವಾಗಿಯೂ ಹಿಂದೂ ಧರ್ಮವಲ್ಲ. ನೀವು ಚಿಕಿತ್ಸೆ ಪಡೆಯಿರಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

1986 ಬ್ಯಾಚ್‌ನ IPS ಅಧಿಕಾರಿಯಾಗಿದ್ದ, ಒಂದೂವರೆ ವರುಷದ ಹಿಂದೆ CBI ನ ಹಂಗಾಮಿ ನಿರ್ದೇಶಕರಾಗಿದ್ದ ನಾಗೇಶ್ವರ್‌ ರಾವ್‌ ಅದಕ್ಕಿಂತ ಮೊದಲು CBI ನ ಜಂಟಿ ನಿರ್ದೇಶಕರಾಗಿದ್ದರು. ತನ್ನ ಸೇವಾವಧಿಯುದ್ದಕ್ಕೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಲಂಚ, ಮನೀ ಲಾಂಡ್ರಿಂಗ್ ಮುಂತಾದ ಗಂಭೀರ ಆರೋಪಗಳನ್ನೆದುರಿಸಿದ್ದಾರೆ. ಕಳೆದ ಜುಲೈನಲ್ಲಿ ಅವರು ನಿವೃತ್ತಿಯಾಗಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ‘ಆರ್‌ಎಸ್‌ಎಸ್ ಕಾರ್ಯಕರ್ತರು ಹಂದಿಗಳು’ ಎಂದ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...