Homeಮುಖಪುಟಬಾಲಿವುಡ್ ನಟಿ ಸ್ವರ ಭಾಸ್ಕರ್‌ಗೆ ಜೀವ ಬೆದರಿಕೆ ಪತ್ರ: ಮುಂಬೈನಲ್ಲಿ ದೂರು ದಾಖಲು

ಬಾಲಿವುಡ್ ನಟಿ ಸ್ವರ ಭಾಸ್ಕರ್‌ಗೆ ಜೀವ ಬೆದರಿಕೆ ಪತ್ರ: ಮುಂಬೈನಲ್ಲಿ ದೂರು ದಾಖಲು

- Advertisement -
- Advertisement -

ಖ್ಯಾತ ಬಾಲಿವುಡ್ ನಟಿ ಸ್ವರ ಭಾಸ್ಕರ್‌ರವರ ಮುಂಬೈ ನಿವಾಸಕ್ಕೆ ಅನಾಮಧೇಯ ಜೀವ ಬೆದರಿಕೆ ಪತ್ರವೊಂದು ಬಂದ ಹಿನ್ನೆಲೆಯಲ್ಲಿ ಅವರು ವೆರ್ಸೊವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದಲ್ಲಿ ಅಪರಿಚಿತ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬೆದರಿಕೆ ಪತ್ರದಲ್ಲಿ “ವೀರ್‌ ಸಾವರ್ಕರ್‌ಗೆ ಅವಮಾನ ಮಾಡುವುದನ್ನು ಈ ದೇಶದ ಯುವಜನರು ಸಹಿಸುವುದಿಲ್ಲ” ಎಂದು ಹಿಂದಿಯಲ್ಲಿ ಬರೆಯಲಾಗಿದೆ ಎಂದು ವರದಿಯಾಗಿದೆ.

‘ವೀರೆ ದಿ ವೆಡ್ಡಿಂಗ್’ ಚಿತ್ರದ ಮೂಲಕ ಗಮನ ಸೆಳೆದ ಸ್ವರ ಭಾಸ್ಕರ್ ಬಾಲಿವುಡ್‌ನ ಖ್ಯಾತ ನಟಿಯಾಗಿದ್ದಾರೆ. ಜೊತೆ ಜೊತೆಗೆ ಅವರು ಸಮಾಜದ ಆಗುಹೋಗುಗಳಿಗೆ ಸಕ್ರಿಯವಾಗಿ ಪ್ರತಿಕ್ರಿಯಿಸುತ್ತಿರುತ್ತಾರೆ. ಸಿಎಎ, ಎನ್‌ಆರ್‌ಸಿ ವಿರುದ್ಧ ಗಟ್ಟಿ ದನಿಯೆತ್ತಿದವರಲ್ಲಿ ಅವರು ಒಬ್ಬರು. ಲಾಕ್‌ಡೌನ್ ಸಂದರ್ಭದಲ್ಲಿ ಸಾವಿರಾರು ವಲಸೆ ಕಾರ್ಮಿಕರಿಗೆ ಅವರು ಸಹಾಯ ಮಾಡಿದ್ದಾರೆ. 1300ಕ್ಕೂ ಹೆಚ್ಚು ಜನರಿಗೆ ರೈಲು ಟಿಕೆಟ್ ಬುಕ್ ಮಾಡಿಕೊಟ್ಟು, ಮತ್ತಷ್ಟು ಜನರಿಗೆ ಅಗತ್ಯ ವಸ್ತುಗಳನ್ನು ಒದಗಿಸಿದ್ದರು.

ಕೃಷಿ ಕಾಯ್ದೆಗಳ ವಿರುದ್ಧ ನಡೆದ ಹೋರಾಟದಲ್ಲಿ ಅವರು ರೈತರ ಪರ ನಿಂತಿದ್ದರು. ಸರ್ಕಾರದ ನೀತಿಗಳ ವಿಮರ್ಶಕರಲ್ಲಿ ಅವರು ಒಬ್ಬರಾಗಿದ್ದಾರೆ. ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಟೀಕಿಸುವ ಮತ್ತು ಸರ್ಕಾರವನ್ನು ಖಂಡಿಸುವ ಹೇಳಿಕೆ ನೀಡಿದ್ದಕ್ಕಾಗಿ ಸ್ವರ ವಿರುದ್ಧ ವಿಚಾರಣೆ ನಡೆಸುವಂತೆ ಮಾನನಷ್ಟ ಮೊಕದ್ದಮೆಯಡಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅದನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ ತಿರಸ್ಕರಿದ್ದರು.

ಭಾರತದ ಖ್ಯಾತ ವಿಶ್ವವಿದ್ಯಾಲಯ ಜೆಎನ್‌ಯುನಲ್ಲಿ ಓದಿರುವ ಸ್ವರ ಭಾಸ್ಕರ್‌ರವರು ಅಲ್ಲಿನ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಗಳಿಗೆ ಬೆಂಬಲ ಸೂಚಿಸಿದ್ದಾರೆ. ಸಮಾನ ಮತ್ತು ಉಚಿತ ಶಿಕ್ಷಣಕ್ಕೆ ಒತ್ತಾಯಿಸಿದ್ದ ಅವರು, “ನಾನು ತೆರಿಗೆ ಪಾವತಿಸುವವಳು. ಉನ್ನತ ಶಿಕ್ಷಣವನ್ನು ಸಬ್ಸಿಡಿಯಾಗಿ ನೀಡಲು ನನ್ನ ತೆರಿಗೆಗಳನ್ನು ಬಳಸುವುದಕ್ಕೆ ನನಗೆ ಸಂಪೂರ್ಣ ಒಪ್ಪಿಗೆಯಿದೆ. ಏಕೆಂದರೆ ಶಿಕ್ಷಣವು ಹಣವುಳ್ಳ ಕೆಲವೇ ಜನರಿಗೆ ಮಾತ್ರ ಕೈಗೆಟುವಂಥ ಸರಕು ಆಗಬಾರದು ಎಂದು ನಾನು ದೃಢವಾಗಿ ನಂಬುತ್ತೇನೆ. ಇದು ಎಲ್ಲಾ ಜನರಿಗೂ ಸಿಗಬೇಕೆ ಹೊರತು ಕೆಲವೇ ಜನರ ಸ್ವತ್ತಾಗಬಾರದು” ಎಂದಿದ್ದರು.

ಇದನ್ನೂ ಓದಿ: ಶಿಕ್ಷಣವು ಸಾಂವಿಧಾನಿಕ ಹಕ್ಕು: JNU ಹೋರಾಟಕ್ಕೆ ಬೆಂಬಲ ಸೂಚಿಸಿದ ಬಾಲಿವುಡ್‌ ನಟಿ ಸ್ವರ ಭಾಸ್ಕರ್

ಈ ಹಿಂದೆಯು ಸಹ ಸ್ವರ ಭಾಸ್ಕರ್‌ ಹಲವು ವಿಷಯಗಳ ಪರವಾಗಿ ಮಾತಾಡಿದ್ದಲ್ಲದೇ ಕಳೆದ ಲೋಕಸಭೆ ಚುನಾವಣೆ ವೇಳೆ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ್ತು ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್‌ ಪರವಾಗಿ ಪ್ರಚಾರ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...