Homeಮುಖಪುಟಬಾಲಿವುಡ್ ನಟಿ ಸ್ವರ ಭಾಸ್ಕರ್‌ಗೆ ಜೀವ ಬೆದರಿಕೆ ಪತ್ರ: ಮುಂಬೈನಲ್ಲಿ ದೂರು ದಾಖಲು

ಬಾಲಿವುಡ್ ನಟಿ ಸ್ವರ ಭಾಸ್ಕರ್‌ಗೆ ಜೀವ ಬೆದರಿಕೆ ಪತ್ರ: ಮುಂಬೈನಲ್ಲಿ ದೂರು ದಾಖಲು

- Advertisement -
- Advertisement -

ಖ್ಯಾತ ಬಾಲಿವುಡ್ ನಟಿ ಸ್ವರ ಭಾಸ್ಕರ್‌ರವರ ಮುಂಬೈ ನಿವಾಸಕ್ಕೆ ಅನಾಮಧೇಯ ಜೀವ ಬೆದರಿಕೆ ಪತ್ರವೊಂದು ಬಂದ ಹಿನ್ನೆಲೆಯಲ್ಲಿ ಅವರು ವೆರ್ಸೊವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದಲ್ಲಿ ಅಪರಿಚಿತ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬೆದರಿಕೆ ಪತ್ರದಲ್ಲಿ “ವೀರ್‌ ಸಾವರ್ಕರ್‌ಗೆ ಅವಮಾನ ಮಾಡುವುದನ್ನು ಈ ದೇಶದ ಯುವಜನರು ಸಹಿಸುವುದಿಲ್ಲ” ಎಂದು ಹಿಂದಿಯಲ್ಲಿ ಬರೆಯಲಾಗಿದೆ ಎಂದು ವರದಿಯಾಗಿದೆ.

‘ವೀರೆ ದಿ ವೆಡ್ಡಿಂಗ್’ ಚಿತ್ರದ ಮೂಲಕ ಗಮನ ಸೆಳೆದ ಸ್ವರ ಭಾಸ್ಕರ್ ಬಾಲಿವುಡ್‌ನ ಖ್ಯಾತ ನಟಿಯಾಗಿದ್ದಾರೆ. ಜೊತೆ ಜೊತೆಗೆ ಅವರು ಸಮಾಜದ ಆಗುಹೋಗುಗಳಿಗೆ ಸಕ್ರಿಯವಾಗಿ ಪ್ರತಿಕ್ರಿಯಿಸುತ್ತಿರುತ್ತಾರೆ. ಸಿಎಎ, ಎನ್‌ಆರ್‌ಸಿ ವಿರುದ್ಧ ಗಟ್ಟಿ ದನಿಯೆತ್ತಿದವರಲ್ಲಿ ಅವರು ಒಬ್ಬರು. ಲಾಕ್‌ಡೌನ್ ಸಂದರ್ಭದಲ್ಲಿ ಸಾವಿರಾರು ವಲಸೆ ಕಾರ್ಮಿಕರಿಗೆ ಅವರು ಸಹಾಯ ಮಾಡಿದ್ದಾರೆ. 1300ಕ್ಕೂ ಹೆಚ್ಚು ಜನರಿಗೆ ರೈಲು ಟಿಕೆಟ್ ಬುಕ್ ಮಾಡಿಕೊಟ್ಟು, ಮತ್ತಷ್ಟು ಜನರಿಗೆ ಅಗತ್ಯ ವಸ್ತುಗಳನ್ನು ಒದಗಿಸಿದ್ದರು.

ಕೃಷಿ ಕಾಯ್ದೆಗಳ ವಿರುದ್ಧ ನಡೆದ ಹೋರಾಟದಲ್ಲಿ ಅವರು ರೈತರ ಪರ ನಿಂತಿದ್ದರು. ಸರ್ಕಾರದ ನೀತಿಗಳ ವಿಮರ್ಶಕರಲ್ಲಿ ಅವರು ಒಬ್ಬರಾಗಿದ್ದಾರೆ. ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಟೀಕಿಸುವ ಮತ್ತು ಸರ್ಕಾರವನ್ನು ಖಂಡಿಸುವ ಹೇಳಿಕೆ ನೀಡಿದ್ದಕ್ಕಾಗಿ ಸ್ವರ ವಿರುದ್ಧ ವಿಚಾರಣೆ ನಡೆಸುವಂತೆ ಮಾನನಷ್ಟ ಮೊಕದ್ದಮೆಯಡಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅದನ್ನು ಅಟಾರ್ನಿ ಜನರಲ್ ಆಫ್ ಇಂಡಿಯಾ ತಿರಸ್ಕರಿದ್ದರು.

ಭಾರತದ ಖ್ಯಾತ ವಿಶ್ವವಿದ್ಯಾಲಯ ಜೆಎನ್‌ಯುನಲ್ಲಿ ಓದಿರುವ ಸ್ವರ ಭಾಸ್ಕರ್‌ರವರು ಅಲ್ಲಿನ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಗಳಿಗೆ ಬೆಂಬಲ ಸೂಚಿಸಿದ್ದಾರೆ. ಸಮಾನ ಮತ್ತು ಉಚಿತ ಶಿಕ್ಷಣಕ್ಕೆ ಒತ್ತಾಯಿಸಿದ್ದ ಅವರು, “ನಾನು ತೆರಿಗೆ ಪಾವತಿಸುವವಳು. ಉನ್ನತ ಶಿಕ್ಷಣವನ್ನು ಸಬ್ಸಿಡಿಯಾಗಿ ನೀಡಲು ನನ್ನ ತೆರಿಗೆಗಳನ್ನು ಬಳಸುವುದಕ್ಕೆ ನನಗೆ ಸಂಪೂರ್ಣ ಒಪ್ಪಿಗೆಯಿದೆ. ಏಕೆಂದರೆ ಶಿಕ್ಷಣವು ಹಣವುಳ್ಳ ಕೆಲವೇ ಜನರಿಗೆ ಮಾತ್ರ ಕೈಗೆಟುವಂಥ ಸರಕು ಆಗಬಾರದು ಎಂದು ನಾನು ದೃಢವಾಗಿ ನಂಬುತ್ತೇನೆ. ಇದು ಎಲ್ಲಾ ಜನರಿಗೂ ಸಿಗಬೇಕೆ ಹೊರತು ಕೆಲವೇ ಜನರ ಸ್ವತ್ತಾಗಬಾರದು” ಎಂದಿದ್ದರು.

ಇದನ್ನೂ ಓದಿ: ಶಿಕ್ಷಣವು ಸಾಂವಿಧಾನಿಕ ಹಕ್ಕು: JNU ಹೋರಾಟಕ್ಕೆ ಬೆಂಬಲ ಸೂಚಿಸಿದ ಬಾಲಿವುಡ್‌ ನಟಿ ಸ್ವರ ಭಾಸ್ಕರ್

ಈ ಹಿಂದೆಯು ಸಹ ಸ್ವರ ಭಾಸ್ಕರ್‌ ಹಲವು ವಿಷಯಗಳ ಪರವಾಗಿ ಮಾತಾಡಿದ್ದಲ್ಲದೇ ಕಳೆದ ಲೋಕಸಭೆ ಚುನಾವಣೆ ವೇಳೆ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ್ತು ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್‌ ಪರವಾಗಿ ಪ್ರಚಾರ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...