Homeಮುಖಪುಟಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ರೀಲ್ ಲೈಫ್ ಹೀರೋಗಳ ವಿರುದ್ಧ ರಿಯಲ್ ಲೈಫ್ ಹೀರೋಗಳು ಫರಾಹ್ ಖಾನ್ ಅಲಿ ಕಿಡಿಕಾರಿದ್ದಾರೆ.

- Advertisement -
- Advertisement -

ಪಾಪ್ ಗಾಯಕಿ ರಿಯಾನ್ನ ಭಾರತದ ರೈತ ಹೋರಾಟವನ್ನು ಬೆಂಬಲಿಸಿದ ನಂತರ ಭಾರತದ ಬಾಲಿವುಡ್ ಸಹ ಈ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದೆ. ಆದರೆ ಮೊದಲಿಂದಲೂ ರೈತ ಹೋರಾಟ ಬೆಂಬಲಿಸುತ್ತಾ ಬಂದಿದ್ದ ಬಾಲಿವುಡ್‌ನ ಖ್ಯಾತ ನಟಿಯರಾದ ತಾಪ್ಸಿ ಪನ್ನು, ಫರಾಹ್ ಖಾನ್ ಅಲಿ ಮತ್ತು ಸ್ವರ ಭಾಸ್ಕರ್‌ರವರನ್ನು ನಟ ಅಭಯ್ ಡಿಯೋಲ್ ಶ್ಲಾಘಿಸಿದ್ದಾರೆ.

“ನನ್ನ ಮುಂದಿನ ರಿಹಾನ್ನಾ ಕುರಿತು ಬಾದಗಲ್‌ರಿರಿ ವಿಡಿಯೋದಲ್ಲಿ ನೀವಿರಲೇಬೇಕು. ಏಕೆಂದರೆ ಅದಕ್ಕೆ ಧೈರ್ಯವಿರಬೇಕು. ಈ ಮೂವರು ಪ್ರಿಯ ಮಹಿಳೆಯರನ್ನು ನೋಡಿ” ಎಂದು ಅಭಯ್ ಡಿಯೋಲ್ ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Abhay Deol (@abhaydeol)

ಅಭಯ್ ತನ್ನ ಪೋಸ್ಟ್‌ನಲ್ಲಿ ತಾಪ್ಸಿ ಪನ್ನು ಮಾಡಿದ ಟ್ವೀಟ್‌ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ “ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ… ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸಲು ಕೆಲಸ ಮಾಡಿ. ಬದಲಿಗೆ ಉಳಿದವರಿಗೆ ಪ್ರೊಪಗಂಡಾ ಪಾಠ ಮಾಡಲು ಬರಬೇಡಿ” ಎಂದು ತಾಪ್ಸಿ ಬರೆದಿದ್ದಾರೆ.

ಇನ್ನು ಸ್ವರ ಭಾಸ್ಕರ್ ಈಗಾಗಲೇ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಖುದ್ದು ಹೋಗಿ ಭಾಗವಹಿಸಿ ಬಂದಿದ್ದಾರೆ. ಅಲ್ಲದೆ ಭಾರತದಲ್ಲಿ ನಡೆಯುತ್ತಿರುವ ಟ್ವಿಟರ್ ಆಂದೋಲನದಲ್ಲಿ ರಿಹಾನ್ನ, ಗ್ರೇಟಾ ಥನ್‌ಬರ್ಗ್ ಮತ್ತು ಮಿಯಾ ಖಲೀಫ್ ಸೇರಿದಂತೆ ಹಲವರ ಪರ ದನಿಯೆತ್ತಿದ್ದಾರೆ.

ಇನ್ನು ಫರಾಹ್ ಖಾನ್ ಅಲಿ ಟ್ವೀಟ್ ಮಾಡಿ “ರೀಲ್ ಲೈಫ್ ಹೀರೋಗಳು ಮತ್ತು ರಿಯಲ್ ಲೈಫ್ ಹೀರೋಗಳು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಎಗೆನೆಸ್ಟ್ ಪ್ರೊಪಗಾಂಡ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಒಂದೇ ರೀತಿಯ ಟ್ವೀಟ್‌ಗಳನ್ನು ಮಾಡಿರುವುದು ಮಾರ್ಕೆಟ್ ಗಿಮ್ಮಿಕ್ಕ್ ನಂತೆ ತೋರುತ್ತದೆ. ಏನೇ ಕಾರಣಗಳಿರಲಿ ಮತ್ತು ನಾನು ಅದನ್ನು ನಿರ್ಣಯಿಸಲು ಯಾರು ಅಲ್ಲ, ಆದರೆ ನೀವು ಅದನ್ನು ಒರಿಜಿನಲ್ ನಂತೆ ತೋರಿಸಲು ಪ್ರಯತ್ನಿಸಬಹುದಿತ್ತು. ಈಗ ನೀವು ಅದರಿಂದ ದೂರ ಸರಿದಿದ್ದೀರಿ. ರೀಲ್ ಲೈಫ್ ಹೀರೋಗಳ ವಿರುದ್ಧ ರಿಯಲ್ ಲೈಫ್ ಹೀರೋಗಳು ಎಂದು ಅವರು ಬರೆದಿದ್ದಾರೆ.

“ನಮ್ಮ ದೇಶದ ಕಾರ್ಯಚಟುವಟಿಕೆಗಳನ್ನು ಹೊರಗಿನ ಶಕ್ತಿಗಳು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ನಿಮ್ಮನ್ನು ನಂಬಿಸಲು ಸುದ್ದಿ ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಆದರೆ ನೀವು ನೆನಪಿಡಿ ಟೀಕಿಸಿದವರ್ಯಾರೂ ಅನ್ಯಗ್ರಹ ಜೀವಿಗಳಲ್ಲ. ಮತ್ತೊಬ್ಬರ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಸಹಜೀವಿ ಮನುಷ್ಯರು ಅವರು. ಇವೆರಡು ಭಿನ್ನ ಚರ್ಚೆಗಳು. ನೀತಿ, ಕಾಯ್ದೆ, ಕಾನೂನು ಮತ್ತು ಅವುಗಳ ಪರಿಣಾಮದ ಮೇಲೆ ನಿಮಗೆ ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ ಆ ಭಿನ್ನಾಭಿಪ್ರಾಯವನ್ನು “ಅನ್ಯ” ವಾದಕ್ಕೆ ಬಳಸಿಕೊಳ್ಳಲು ಅವಕಾಶ ಕೊಡಬೇಡಿ. ಟೀಕೆ ಇರುವುದು ಮಾನವ ಹಕ್ಕುಗಳ ಮತ್ತು ಸ್ವಾತಂತ್ರ್ಯದ ಹರಣದ ಬಗ್ಗೆ..” ಎಂದು ಸೋನಾಕ್ಷಿ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ಒಟ್ಟಾರೆಯಾಗಿ ಅಕ್ಷಯ್ ಕುಮರ್, ಅಜಯ್ ದೇವಗನ್, ಕರಣ್ ಜೋಹಾರ್, ಏಕ್ತ ಕಪೂರ್, ಸುನೀಲ್ ಶೆಟ್ಟಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿದರೆ ಕೆಲವರು ರೈತರ ಪರ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...