Homeಮುಖಪುಟಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ರೀಲ್ ಲೈಫ್ ಹೀರೋಗಳ ವಿರುದ್ಧ ರಿಯಲ್ ಲೈಫ್ ಹೀರೋಗಳು ಫರಾಹ್ ಖಾನ್ ಅಲಿ ಕಿಡಿಕಾರಿದ್ದಾರೆ.

- Advertisement -
- Advertisement -

ಪಾಪ್ ಗಾಯಕಿ ರಿಯಾನ್ನ ಭಾರತದ ರೈತ ಹೋರಾಟವನ್ನು ಬೆಂಬಲಿಸಿದ ನಂತರ ಭಾರತದ ಬಾಲಿವುಡ್ ಸಹ ಈ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದೆ. ಆದರೆ ಮೊದಲಿಂದಲೂ ರೈತ ಹೋರಾಟ ಬೆಂಬಲಿಸುತ್ತಾ ಬಂದಿದ್ದ ಬಾಲಿವುಡ್‌ನ ಖ್ಯಾತ ನಟಿಯರಾದ ತಾಪ್ಸಿ ಪನ್ನು, ಫರಾಹ್ ಖಾನ್ ಅಲಿ ಮತ್ತು ಸ್ವರ ಭಾಸ್ಕರ್‌ರವರನ್ನು ನಟ ಅಭಯ್ ಡಿಯೋಲ್ ಶ್ಲಾಘಿಸಿದ್ದಾರೆ.

“ನನ್ನ ಮುಂದಿನ ರಿಹಾನ್ನಾ ಕುರಿತು ಬಾದಗಲ್‌ರಿರಿ ವಿಡಿಯೋದಲ್ಲಿ ನೀವಿರಲೇಬೇಕು. ಏಕೆಂದರೆ ಅದಕ್ಕೆ ಧೈರ್ಯವಿರಬೇಕು. ಈ ಮೂವರು ಪ್ರಿಯ ಮಹಿಳೆಯರನ್ನು ನೋಡಿ” ಎಂದು ಅಭಯ್ ಡಿಯೋಲ್ ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Abhay Deol (@abhaydeol)

ಅಭಯ್ ತನ್ನ ಪೋಸ್ಟ್‌ನಲ್ಲಿ ತಾಪ್ಸಿ ಪನ್ನು ಮಾಡಿದ ಟ್ವೀಟ್‌ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ “ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ… ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸಲು ಕೆಲಸ ಮಾಡಿ. ಬದಲಿಗೆ ಉಳಿದವರಿಗೆ ಪ್ರೊಪಗಂಡಾ ಪಾಠ ಮಾಡಲು ಬರಬೇಡಿ” ಎಂದು ತಾಪ್ಸಿ ಬರೆದಿದ್ದಾರೆ.

ಇನ್ನು ಸ್ವರ ಭಾಸ್ಕರ್ ಈಗಾಗಲೇ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಖುದ್ದು ಹೋಗಿ ಭಾಗವಹಿಸಿ ಬಂದಿದ್ದಾರೆ. ಅಲ್ಲದೆ ಭಾರತದಲ್ಲಿ ನಡೆಯುತ್ತಿರುವ ಟ್ವಿಟರ್ ಆಂದೋಲನದಲ್ಲಿ ರಿಹಾನ್ನ, ಗ್ರೇಟಾ ಥನ್‌ಬರ್ಗ್ ಮತ್ತು ಮಿಯಾ ಖಲೀಫ್ ಸೇರಿದಂತೆ ಹಲವರ ಪರ ದನಿಯೆತ್ತಿದ್ದಾರೆ.

ಇನ್ನು ಫರಾಹ್ ಖಾನ್ ಅಲಿ ಟ್ವೀಟ್ ಮಾಡಿ “ರೀಲ್ ಲೈಫ್ ಹೀರೋಗಳು ಮತ್ತು ರಿಯಲ್ ಲೈಫ್ ಹೀರೋಗಳು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಎಗೆನೆಸ್ಟ್ ಪ್ರೊಪಗಾಂಡ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಒಂದೇ ರೀತಿಯ ಟ್ವೀಟ್‌ಗಳನ್ನು ಮಾಡಿರುವುದು ಮಾರ್ಕೆಟ್ ಗಿಮ್ಮಿಕ್ಕ್ ನಂತೆ ತೋರುತ್ತದೆ. ಏನೇ ಕಾರಣಗಳಿರಲಿ ಮತ್ತು ನಾನು ಅದನ್ನು ನಿರ್ಣಯಿಸಲು ಯಾರು ಅಲ್ಲ, ಆದರೆ ನೀವು ಅದನ್ನು ಒರಿಜಿನಲ್ ನಂತೆ ತೋರಿಸಲು ಪ್ರಯತ್ನಿಸಬಹುದಿತ್ತು. ಈಗ ನೀವು ಅದರಿಂದ ದೂರ ಸರಿದಿದ್ದೀರಿ. ರೀಲ್ ಲೈಫ್ ಹೀರೋಗಳ ವಿರುದ್ಧ ರಿಯಲ್ ಲೈಫ್ ಹೀರೋಗಳು ಎಂದು ಅವರು ಬರೆದಿದ್ದಾರೆ.

“ನಮ್ಮ ದೇಶದ ಕಾರ್ಯಚಟುವಟಿಕೆಗಳನ್ನು ಹೊರಗಿನ ಶಕ್ತಿಗಳು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ನಿಮ್ಮನ್ನು ನಂಬಿಸಲು ಸುದ್ದಿ ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಆದರೆ ನೀವು ನೆನಪಿಡಿ ಟೀಕಿಸಿದವರ್ಯಾರೂ ಅನ್ಯಗ್ರಹ ಜೀವಿಗಳಲ್ಲ. ಮತ್ತೊಬ್ಬರ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಸಹಜೀವಿ ಮನುಷ್ಯರು ಅವರು. ಇವೆರಡು ಭಿನ್ನ ಚರ್ಚೆಗಳು. ನೀತಿ, ಕಾಯ್ದೆ, ಕಾನೂನು ಮತ್ತು ಅವುಗಳ ಪರಿಣಾಮದ ಮೇಲೆ ನಿಮಗೆ ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ ಆ ಭಿನ್ನಾಭಿಪ್ರಾಯವನ್ನು “ಅನ್ಯ” ವಾದಕ್ಕೆ ಬಳಸಿಕೊಳ್ಳಲು ಅವಕಾಶ ಕೊಡಬೇಡಿ. ಟೀಕೆ ಇರುವುದು ಮಾನವ ಹಕ್ಕುಗಳ ಮತ್ತು ಸ್ವಾತಂತ್ರ್ಯದ ಹರಣದ ಬಗ್ಗೆ..” ಎಂದು ಸೋನಾಕ್ಷಿ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ಒಟ್ಟಾರೆಯಾಗಿ ಅಕ್ಷಯ್ ಕುಮರ್, ಅಜಯ್ ದೇವಗನ್, ಕರಣ್ ಜೋಹಾರ್, ಏಕ್ತ ಕಪೂರ್, ಸುನೀಲ್ ಶೆಟ್ಟಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿದರೆ ಕೆಲವರು ರೈತರ ಪರ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...