Homeಮುಖಪುಟಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ರೀಲ್ ಲೈಫ್ ಹೀರೋಗಳ ವಿರುದ್ಧ ರಿಯಲ್ ಲೈಫ್ ಹೀರೋಗಳು ಫರಾಹ್ ಖಾನ್ ಅಲಿ ಕಿಡಿಕಾರಿದ್ದಾರೆ.

- Advertisement -
- Advertisement -

ಪಾಪ್ ಗಾಯಕಿ ರಿಯಾನ್ನ ಭಾರತದ ರೈತ ಹೋರಾಟವನ್ನು ಬೆಂಬಲಿಸಿದ ನಂತರ ಭಾರತದ ಬಾಲಿವುಡ್ ಸಹ ಈ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದೆ. ಆದರೆ ಮೊದಲಿಂದಲೂ ರೈತ ಹೋರಾಟ ಬೆಂಬಲಿಸುತ್ತಾ ಬಂದಿದ್ದ ಬಾಲಿವುಡ್‌ನ ಖ್ಯಾತ ನಟಿಯರಾದ ತಾಪ್ಸಿ ಪನ್ನು, ಫರಾಹ್ ಖಾನ್ ಅಲಿ ಮತ್ತು ಸ್ವರ ಭಾಸ್ಕರ್‌ರವರನ್ನು ನಟ ಅಭಯ್ ಡಿಯೋಲ್ ಶ್ಲಾಘಿಸಿದ್ದಾರೆ.

“ನನ್ನ ಮುಂದಿನ ರಿಹಾನ್ನಾ ಕುರಿತು ಬಾದಗಲ್‌ರಿರಿ ವಿಡಿಯೋದಲ್ಲಿ ನೀವಿರಲೇಬೇಕು. ಏಕೆಂದರೆ ಅದಕ್ಕೆ ಧೈರ್ಯವಿರಬೇಕು. ಈ ಮೂವರು ಪ್ರಿಯ ಮಹಿಳೆಯರನ್ನು ನೋಡಿ” ಎಂದು ಅಭಯ್ ಡಿಯೋಲ್ ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Abhay Deol (@abhaydeol)

ಅಭಯ್ ತನ್ನ ಪೋಸ್ಟ್‌ನಲ್ಲಿ ತಾಪ್ಸಿ ಪನ್ನು ಮಾಡಿದ ಟ್ವೀಟ್‌ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ “ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ… ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸಲು ಕೆಲಸ ಮಾಡಿ. ಬದಲಿಗೆ ಉಳಿದವರಿಗೆ ಪ್ರೊಪಗಂಡಾ ಪಾಠ ಮಾಡಲು ಬರಬೇಡಿ” ಎಂದು ತಾಪ್ಸಿ ಬರೆದಿದ್ದಾರೆ.

ಇನ್ನು ಸ್ವರ ಭಾಸ್ಕರ್ ಈಗಾಗಲೇ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಖುದ್ದು ಹೋಗಿ ಭಾಗವಹಿಸಿ ಬಂದಿದ್ದಾರೆ. ಅಲ್ಲದೆ ಭಾರತದಲ್ಲಿ ನಡೆಯುತ್ತಿರುವ ಟ್ವಿಟರ್ ಆಂದೋಲನದಲ್ಲಿ ರಿಹಾನ್ನ, ಗ್ರೇಟಾ ಥನ್‌ಬರ್ಗ್ ಮತ್ತು ಮಿಯಾ ಖಲೀಫ್ ಸೇರಿದಂತೆ ಹಲವರ ಪರ ದನಿಯೆತ್ತಿದ್ದಾರೆ.

ಇನ್ನು ಫರಾಹ್ ಖಾನ್ ಅಲಿ ಟ್ವೀಟ್ ಮಾಡಿ “ರೀಲ್ ಲೈಫ್ ಹೀರೋಗಳು ಮತ್ತು ರಿಯಲ್ ಲೈಫ್ ಹೀರೋಗಳು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಎಗೆನೆಸ್ಟ್ ಪ್ರೊಪಗಾಂಡ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಒಂದೇ ರೀತಿಯ ಟ್ವೀಟ್‌ಗಳನ್ನು ಮಾಡಿರುವುದು ಮಾರ್ಕೆಟ್ ಗಿಮ್ಮಿಕ್ಕ್ ನಂತೆ ತೋರುತ್ತದೆ. ಏನೇ ಕಾರಣಗಳಿರಲಿ ಮತ್ತು ನಾನು ಅದನ್ನು ನಿರ್ಣಯಿಸಲು ಯಾರು ಅಲ್ಲ, ಆದರೆ ನೀವು ಅದನ್ನು ಒರಿಜಿನಲ್ ನಂತೆ ತೋರಿಸಲು ಪ್ರಯತ್ನಿಸಬಹುದಿತ್ತು. ಈಗ ನೀವು ಅದರಿಂದ ದೂರ ಸರಿದಿದ್ದೀರಿ. ರೀಲ್ ಲೈಫ್ ಹೀರೋಗಳ ವಿರುದ್ಧ ರಿಯಲ್ ಲೈಫ್ ಹೀರೋಗಳು ಎಂದು ಅವರು ಬರೆದಿದ್ದಾರೆ.

“ನಮ್ಮ ದೇಶದ ಕಾರ್ಯಚಟುವಟಿಕೆಗಳನ್ನು ಹೊರಗಿನ ಶಕ್ತಿಗಳು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ನಿಮ್ಮನ್ನು ನಂಬಿಸಲು ಸುದ್ದಿ ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಆದರೆ ನೀವು ನೆನಪಿಡಿ ಟೀಕಿಸಿದವರ್ಯಾರೂ ಅನ್ಯಗ್ರಹ ಜೀವಿಗಳಲ್ಲ. ಮತ್ತೊಬ್ಬರ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಸಹಜೀವಿ ಮನುಷ್ಯರು ಅವರು. ಇವೆರಡು ಭಿನ್ನ ಚರ್ಚೆಗಳು. ನೀತಿ, ಕಾಯ್ದೆ, ಕಾನೂನು ಮತ್ತು ಅವುಗಳ ಪರಿಣಾಮದ ಮೇಲೆ ನಿಮಗೆ ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ ಆ ಭಿನ್ನಾಭಿಪ್ರಾಯವನ್ನು “ಅನ್ಯ” ವಾದಕ್ಕೆ ಬಳಸಿಕೊಳ್ಳಲು ಅವಕಾಶ ಕೊಡಬೇಡಿ. ಟೀಕೆ ಇರುವುದು ಮಾನವ ಹಕ್ಕುಗಳ ಮತ್ತು ಸ್ವಾತಂತ್ರ್ಯದ ಹರಣದ ಬಗ್ಗೆ..” ಎಂದು ಸೋನಾಕ್ಷಿ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ಒಟ್ಟಾರೆಯಾಗಿ ಅಕ್ಷಯ್ ಕುಮರ್, ಅಜಯ್ ದೇವಗನ್, ಕರಣ್ ಜೋಹಾರ್, ಏಕ್ತ ಕಪೂರ್, ಸುನೀಲ್ ಶೆಟ್ಟಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿದರೆ ಕೆಲವರು ರೈತರ ಪರ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...