Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಸ್ವರಾಜ್ ಇಂಡಿಯಾ ಆಗ್ರಹ..

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಸ್ವರಾಜ್ ಇಂಡಿಯಾ ಆಗ್ರಹ..

ನರಸಿಂಹಮೂರ್ತಿ ಅವರ ಏಕಾಏಕಿ ಬಂಧನದಿಂದ ಆಡಳಿತ ಪಕ್ಷವು ಅದರ ವಿರುದ್ಧ ಮಾತನಾಡುವ ವ್ಯಕ್ತಿಗಳ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ. ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವುದು ಮತ್ತು ನಿಗ್ರಹಿಸುವುದು ಪ್ರಜಾಪ್ರಭುತ್ವಕ್ಕೆ ಒಂದು ಗಂಭೀರ ಹಿನ್ನಡೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಸ್ವರಾಜ್ ಇಂಡಿಯಾ ಕರ್ನಾಟಕದ ಪ್ರಧಾನ ಕಾರ್ಯದರ್ಶಿ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವನ್ನು ಸ್ವರಾಜ್ ಇಂಡಿಯಾ ಖಂಡಿಸುತ್ತದೆ. ಅವರ ಮೇಲೆ ಹೊರಿಸಲಾಗಿರುವ ಆರೋಪಗಳು ಆಧಾರರಹಿತ ಎಂದು ಸ್ವರಾಜ್ ಇಂಡಿಯಾ ಪಕ್ಷವು ಹೇಳಿದೆ.

ಈ ಕುರಿತು ಸ್ವರಾಜ್ ಇಂಡಿಯಾ ಪಕ್ಷದ ಪರವಾಗಿ ಚಾಮರಸ ಮಾಲಿ ಪಾಟೀಲ, ಅಮ್ಜದ್ ಪಾಷ, ದೇವನೂರ ಮಹಾದೇವರವರು ಹೇಳಿಕೆ ಬಿಡುಗಡೆ ಮಾಡಿದ್ದು, ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಹೇಳಿ ಬಂಧಿಸಲಾಗಿರುವುದು ಆಧಾರ ರಹಿತ. ದೊಡ್ಡಿಪಾಳ್ಯ ನರಸಿಂಹಮೂರ್ತಿ ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ಬಹಿರಂಗವಾಗಿ ತೊಡಗಿಸಿಕೊಂಡಿದ್ದಾರೆ. ಪತ್ರಕರ್ತರಾಗಿ ಮತ್ತು ಬರಹಗಾರರಾಗಿಯೂ ಮನ್ನಣೆ ಗಳಿಸಿದ್ದಾರೆ. ಗೌರಿ ಮೀಡಿಯಾ ಟ್ರಸ್ಟ್ ನಿಂದ ಬಿಡುಗಡೆಯಾಗುತ್ತಿರುವ ನ್ಯಾಯಪಥ ಪತ್ರಿಕೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 24 ರಂದು ರಾಯಚೂರಿನಲ್ಲಿ ‘ಪರ್ಯಾಯ ಮಾಧ್ಯಮಗಳು’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಅಲ್ಲಿ ನರಸಿಂಹಮೂರ್ತಿ ಅವರನ್ನು ಪ್ರಮುಖ ಭಾಷಣಕಾರರಾಗಿ ಆಹ್ವಾನಿಸಲಾಗಿತ್ತು. ಅಲ್ಲಿಯೇ ರಾಯಚೂರು ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡು ಅಕ್ಟೋಬರ್ 25ರಂದು ಬಂಧಿಸಲಾಗಿದೆ ಎಂದು ರಾಯಚೂರು ಪೊಲೀಸರು ಹೇಳಿಕೆ ನೀಡಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಕರೆ ತಂದು ನವೆಂಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನರಸಿಂಹಮೂರ್ತಿ ಅವರ ಮೇಲೆ ದೇಶದ್ರೋಹದಂತಹ ಗಂಭೀರ ಪ್ರಕರಣಗಳನ್ನು ರಾಯಚೂರು ಪೊಲೀಸ್ ದಾಖಲಿಸಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಎರಡು ದಶಕಗಳ ಹಿಂದೆ ನಡೆದಿವೆ ಎನ್ನಲಾದ ನಕ್ಸಲೀಯ ಚಟವಟಿಕೆಗಳಿಗೆ ಗಂಟು ಹಾಕುವ ಪ್ರಯತ್ನ ಮಾಡಲಾಗಿದೆ. ನರಸಿಂಹಮೂರ್ತಿ ಅವರನ್ನು ಮೊದಲು ವಿಚಾರಣೆಗೆ ಎಂದು ವಶಕ್ಕೆ ಪಡೆದು, ನಂತರ ಬಂಧಿಸಿ, ಗಂಭೀರ ಆರೋಪ ಮಾಡುತ್ತಿರುವುದು, ಕರ್ನಾಟಕದಲ್ಲಿ ಪತ್ರಿಕೋದ್ಯಮದ ಅಭಿವ್ಯಕ್ತಿ ಮತ್ತು ರಾಜಕೀಯ ಪ್ರತಿರೋಧದ ಧ್ವನಿ ಅಡಗಿಸಲು ಮಾಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಸಕ್ರಿಯವಾಗಿರುವ ವ್ಯಕ್ತಿ. ಕರ್ನಾಟಕದ ಜನರು ದೊಡ್ಡಿಪಾಳ್ಯ ಅವರನ್ನು ಕಳೆದ ಮೂರು ದಶಕಗಳಿಂದ ನೋಡಿದ್ದಾರೆ. ಪತ್ರಕರ್ತರಾಗಿ ‘ದಿ ಸಂಡೇ ಇಂಡಿಯನ್, ‘ಗೌರಿ ಲಂಕೇಶ್ ಪತ್ರಿಕೆ, ‘ನ್ಯಾಯಪಥ’ ಮುಂತಾದ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಗೌರವಯುತ ರಾಜಕೀಯ ಕಾರ್ಯಕರ್ತರೂ ಆಗಿದ್ದು, ಸದ್ಯಕ್ಕೆ ಸ್ವರಾಜ್ ಇಂಡಿಯಾ- ಕರ್ನಾಟಕದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಷ್ಟು ಬಹಿರಂಗವಾಗಿ ಕೆಲಸ ಮಾಡಿಕೊಂಡು ಓಡಾಡುತ್ತಿದ್ದ ನರಸಿಂಹಮೂರ್ತಿ ಅವರನ್ನು ‘ತಲೆಮರೆಸಿಕೊಂಡಿದ್ದರು’ ಎಂದು ಹೇಳುವುದು ಅತ್ಯಂತ ದುರದೃಷ್ಟಕರ ಮತ್ತು ಸೇಡಿನ ರಾಜಕಾರಣದ ಲಕ್ಷಣಗಳನ್ನು ತೋರಿಸುತ್ತದೆ ಎಂದಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವು ಪ್ರಗತಿಪರ, ಉದಾರವಾದಿ, ಪ್ರಜಾಪ್ರಭುತ್ವವಾದಿ ಹಾಗೂ ಅಂಬೇಡ್ಕರ್ ವಾದಿ  ಚಿಂತಕರು ಹಾಗೂ ಆಡಳಿತ ಪಕ್ಷದ ರಾಜಕೀಯ ನೀತಿ ಮತ್ತು ನಡತೆಗಳನ್ನು ಪ್ರಶ್ನಿಸುವ ಮತ್ತು ಬಹಿರಂಗವಾಗಿಯೇ ವಿಮರ್ಶಿಸುವ ಕಾರ್ಯಕರ್ತರ ಮೇಲೆ ನಡೆಯುತ್ತಿರವ ಇನ್ನೊಂದು ದಾಳಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕು ಕಾರ್ಯಕರ್ತರ ಮತ್ತು ಚಿಂತಕರ ಮೇಲೆ ಸುಳ್ಳು ಪ್ರಕರಣಗಳನ್ನು ಹೊರಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಳ್ಳಬೇಕಿದೆ. ನರಸಿಂಹಮೂರ್ತಿ ಅವರ ಏಕಾಏಕಿ ಬಂಧನದಿಂದ ಆಡಳಿತ ಪಕ್ಷವು ಅದರ ವಿರುದ್ಧ ಮಾತನಾಡುವ ವ್ಯಕ್ತಿಗಳ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ. ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವುದು ಮತ್ತು ನಿಗ್ರಹಿಸುವುದು ಪ್ರಜಾಪ್ರಭುತ್ವಕ್ಕೆ ಒಂದು ಗಂಭೀರ ಹಿನ್ನಡೆ ಎಂದು ಆರೋಪಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಮೇಲೆ ಮಾಡಲಾಗಿರುವ ಆರೋಪಗಳ ಬಗ್ಗೆ ನ್ಯಾಯಯುತ ಮತ್ತು ತ್ವರಿತ ತನಿಖೆಯಾಗಬೇಕು. ಕಾನೂನಾತ್ಮಕವಾಗಿ ನರಸಿಂಹಮೂರ್ತಿ ಅವರ ವಿಚಾರಣಾಪೂರ್ವ ಬಂಧನವನ್ನು ತಕ್ಷಣ ಕೊನೆಗೊಳಿಸಿ ಬಿಡುಗಡೆ ಮಾಡಬೇಕು ಎಂದು ಸ್ವರಾಜ್ ಇಂಡಿಯಾ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...