Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಸ್ವರಾಜ್ ಇಂಡಿಯಾ ಆಗ್ರಹ..

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಸ್ವರಾಜ್ ಇಂಡಿಯಾ ಆಗ್ರಹ..

ನರಸಿಂಹಮೂರ್ತಿ ಅವರ ಏಕಾಏಕಿ ಬಂಧನದಿಂದ ಆಡಳಿತ ಪಕ್ಷವು ಅದರ ವಿರುದ್ಧ ಮಾತನಾಡುವ ವ್ಯಕ್ತಿಗಳ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ. ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವುದು ಮತ್ತು ನಿಗ್ರಹಿಸುವುದು ಪ್ರಜಾಪ್ರಭುತ್ವಕ್ಕೆ ಒಂದು ಗಂಭೀರ ಹಿನ್ನಡೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಸ್ವರಾಜ್ ಇಂಡಿಯಾ ಕರ್ನಾಟಕದ ಪ್ರಧಾನ ಕಾರ್ಯದರ್ಶಿ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವನ್ನು ಸ್ವರಾಜ್ ಇಂಡಿಯಾ ಖಂಡಿಸುತ್ತದೆ. ಅವರ ಮೇಲೆ ಹೊರಿಸಲಾಗಿರುವ ಆರೋಪಗಳು ಆಧಾರರಹಿತ ಎಂದು ಸ್ವರಾಜ್ ಇಂಡಿಯಾ ಪಕ್ಷವು ಹೇಳಿದೆ.

ಈ ಕುರಿತು ಸ್ವರಾಜ್ ಇಂಡಿಯಾ ಪಕ್ಷದ ಪರವಾಗಿ ಚಾಮರಸ ಮಾಲಿ ಪಾಟೀಲ, ಅಮ್ಜದ್ ಪಾಷ, ದೇವನೂರ ಮಹಾದೇವರವರು ಹೇಳಿಕೆ ಬಿಡುಗಡೆ ಮಾಡಿದ್ದು, ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಹೇಳಿ ಬಂಧಿಸಲಾಗಿರುವುದು ಆಧಾರ ರಹಿತ. ದೊಡ್ಡಿಪಾಳ್ಯ ನರಸಿಂಹಮೂರ್ತಿ ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ಬಹಿರಂಗವಾಗಿ ತೊಡಗಿಸಿಕೊಂಡಿದ್ದಾರೆ. ಪತ್ರಕರ್ತರಾಗಿ ಮತ್ತು ಬರಹಗಾರರಾಗಿಯೂ ಮನ್ನಣೆ ಗಳಿಸಿದ್ದಾರೆ. ಗೌರಿ ಮೀಡಿಯಾ ಟ್ರಸ್ಟ್ ನಿಂದ ಬಿಡುಗಡೆಯಾಗುತ್ತಿರುವ ನ್ಯಾಯಪಥ ಪತ್ರಿಕೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 24 ರಂದು ರಾಯಚೂರಿನಲ್ಲಿ ‘ಪರ್ಯಾಯ ಮಾಧ್ಯಮಗಳು’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಅಲ್ಲಿ ನರಸಿಂಹಮೂರ್ತಿ ಅವರನ್ನು ಪ್ರಮುಖ ಭಾಷಣಕಾರರಾಗಿ ಆಹ್ವಾನಿಸಲಾಗಿತ್ತು. ಅಲ್ಲಿಯೇ ರಾಯಚೂರು ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡು ಅಕ್ಟೋಬರ್ 25ರಂದು ಬಂಧಿಸಲಾಗಿದೆ ಎಂದು ರಾಯಚೂರು ಪೊಲೀಸರು ಹೇಳಿಕೆ ನೀಡಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಕರೆ ತಂದು ನವೆಂಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನರಸಿಂಹಮೂರ್ತಿ ಅವರ ಮೇಲೆ ದೇಶದ್ರೋಹದಂತಹ ಗಂಭೀರ ಪ್ರಕರಣಗಳನ್ನು ರಾಯಚೂರು ಪೊಲೀಸ್ ದಾಖಲಿಸಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಎರಡು ದಶಕಗಳ ಹಿಂದೆ ನಡೆದಿವೆ ಎನ್ನಲಾದ ನಕ್ಸಲೀಯ ಚಟವಟಿಕೆಗಳಿಗೆ ಗಂಟು ಹಾಕುವ ಪ್ರಯತ್ನ ಮಾಡಲಾಗಿದೆ. ನರಸಿಂಹಮೂರ್ತಿ ಅವರನ್ನು ಮೊದಲು ವಿಚಾರಣೆಗೆ ಎಂದು ವಶಕ್ಕೆ ಪಡೆದು, ನಂತರ ಬಂಧಿಸಿ, ಗಂಭೀರ ಆರೋಪ ಮಾಡುತ್ತಿರುವುದು, ಕರ್ನಾಟಕದಲ್ಲಿ ಪತ್ರಿಕೋದ್ಯಮದ ಅಭಿವ್ಯಕ್ತಿ ಮತ್ತು ರಾಜಕೀಯ ಪ್ರತಿರೋಧದ ಧ್ವನಿ ಅಡಗಿಸಲು ಮಾಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಸಕ್ರಿಯವಾಗಿರುವ ವ್ಯಕ್ತಿ. ಕರ್ನಾಟಕದ ಜನರು ದೊಡ್ಡಿಪಾಳ್ಯ ಅವರನ್ನು ಕಳೆದ ಮೂರು ದಶಕಗಳಿಂದ ನೋಡಿದ್ದಾರೆ. ಪತ್ರಕರ್ತರಾಗಿ ‘ದಿ ಸಂಡೇ ಇಂಡಿಯನ್, ‘ಗೌರಿ ಲಂಕೇಶ್ ಪತ್ರಿಕೆ, ‘ನ್ಯಾಯಪಥ’ ಮುಂತಾದ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಗೌರವಯುತ ರಾಜಕೀಯ ಕಾರ್ಯಕರ್ತರೂ ಆಗಿದ್ದು, ಸದ್ಯಕ್ಕೆ ಸ್ವರಾಜ್ ಇಂಡಿಯಾ- ಕರ್ನಾಟಕದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಷ್ಟು ಬಹಿರಂಗವಾಗಿ ಕೆಲಸ ಮಾಡಿಕೊಂಡು ಓಡಾಡುತ್ತಿದ್ದ ನರಸಿಂಹಮೂರ್ತಿ ಅವರನ್ನು ‘ತಲೆಮರೆಸಿಕೊಂಡಿದ್ದರು’ ಎಂದು ಹೇಳುವುದು ಅತ್ಯಂತ ದುರದೃಷ್ಟಕರ ಮತ್ತು ಸೇಡಿನ ರಾಜಕಾರಣದ ಲಕ್ಷಣಗಳನ್ನು ತೋರಿಸುತ್ತದೆ ಎಂದಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವು ಪ್ರಗತಿಪರ, ಉದಾರವಾದಿ, ಪ್ರಜಾಪ್ರಭುತ್ವವಾದಿ ಹಾಗೂ ಅಂಬೇಡ್ಕರ್ ವಾದಿ  ಚಿಂತಕರು ಹಾಗೂ ಆಡಳಿತ ಪಕ್ಷದ ರಾಜಕೀಯ ನೀತಿ ಮತ್ತು ನಡತೆಗಳನ್ನು ಪ್ರಶ್ನಿಸುವ ಮತ್ತು ಬಹಿರಂಗವಾಗಿಯೇ ವಿಮರ್ಶಿಸುವ ಕಾರ್ಯಕರ್ತರ ಮೇಲೆ ನಡೆಯುತ್ತಿರವ ಇನ್ನೊಂದು ದಾಳಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕು ಕಾರ್ಯಕರ್ತರ ಮತ್ತು ಚಿಂತಕರ ಮೇಲೆ ಸುಳ್ಳು ಪ್ರಕರಣಗಳನ್ನು ಹೊರಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಳ್ಳಬೇಕಿದೆ. ನರಸಿಂಹಮೂರ್ತಿ ಅವರ ಏಕಾಏಕಿ ಬಂಧನದಿಂದ ಆಡಳಿತ ಪಕ್ಷವು ಅದರ ವಿರುದ್ಧ ಮಾತನಾಡುವ ವ್ಯಕ್ತಿಗಳ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ. ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವುದು ಮತ್ತು ನಿಗ್ರಹಿಸುವುದು ಪ್ರಜಾಪ್ರಭುತ್ವಕ್ಕೆ ಒಂದು ಗಂಭೀರ ಹಿನ್ನಡೆ ಎಂದು ಆರೋಪಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಮೇಲೆ ಮಾಡಲಾಗಿರುವ ಆರೋಪಗಳ ಬಗ್ಗೆ ನ್ಯಾಯಯುತ ಮತ್ತು ತ್ವರಿತ ತನಿಖೆಯಾಗಬೇಕು. ಕಾನೂನಾತ್ಮಕವಾಗಿ ನರಸಿಂಹಮೂರ್ತಿ ಅವರ ವಿಚಾರಣಾಪೂರ್ವ ಬಂಧನವನ್ನು ತಕ್ಷಣ ಕೊನೆಗೊಳಿಸಿ ಬಿಡುಗಡೆ ಮಾಡಬೇಕು ಎಂದು ಸ್ವರಾಜ್ ಇಂಡಿಯಾ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...