Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಸ್ವರಾಜ್ ಇಂಡಿಯಾ ಆಗ್ರಹ..

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಸ್ವರಾಜ್ ಇಂಡಿಯಾ ಆಗ್ರಹ..

ನರಸಿಂಹಮೂರ್ತಿ ಅವರ ಏಕಾಏಕಿ ಬಂಧನದಿಂದ ಆಡಳಿತ ಪಕ್ಷವು ಅದರ ವಿರುದ್ಧ ಮಾತನಾಡುವ ವ್ಯಕ್ತಿಗಳ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ. ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವುದು ಮತ್ತು ನಿಗ್ರಹಿಸುವುದು ಪ್ರಜಾಪ್ರಭುತ್ವಕ್ಕೆ ಒಂದು ಗಂಭೀರ ಹಿನ್ನಡೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಸ್ವರಾಜ್ ಇಂಡಿಯಾ ಕರ್ನಾಟಕದ ಪ್ರಧಾನ ಕಾರ್ಯದರ್ಶಿ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವನ್ನು ಸ್ವರಾಜ್ ಇಂಡಿಯಾ ಖಂಡಿಸುತ್ತದೆ. ಅವರ ಮೇಲೆ ಹೊರಿಸಲಾಗಿರುವ ಆರೋಪಗಳು ಆಧಾರರಹಿತ ಎಂದು ಸ್ವರಾಜ್ ಇಂಡಿಯಾ ಪಕ್ಷವು ಹೇಳಿದೆ.

ಈ ಕುರಿತು ಸ್ವರಾಜ್ ಇಂಡಿಯಾ ಪಕ್ಷದ ಪರವಾಗಿ ಚಾಮರಸ ಮಾಲಿ ಪಾಟೀಲ, ಅಮ್ಜದ್ ಪಾಷ, ದೇವನೂರ ಮಹಾದೇವರವರು ಹೇಳಿಕೆ ಬಿಡುಗಡೆ ಮಾಡಿದ್ದು, ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಹೇಳಿ ಬಂಧಿಸಲಾಗಿರುವುದು ಆಧಾರ ರಹಿತ. ದೊಡ್ಡಿಪಾಳ್ಯ ನರಸಿಂಹಮೂರ್ತಿ ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ಬಹಿರಂಗವಾಗಿ ತೊಡಗಿಸಿಕೊಂಡಿದ್ದಾರೆ. ಪತ್ರಕರ್ತರಾಗಿ ಮತ್ತು ಬರಹಗಾರರಾಗಿಯೂ ಮನ್ನಣೆ ಗಳಿಸಿದ್ದಾರೆ. ಗೌರಿ ಮೀಡಿಯಾ ಟ್ರಸ್ಟ್ ನಿಂದ ಬಿಡುಗಡೆಯಾಗುತ್ತಿರುವ ನ್ಯಾಯಪಥ ಪತ್ರಿಕೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 24 ರಂದು ರಾಯಚೂರಿನಲ್ಲಿ ‘ಪರ್ಯಾಯ ಮಾಧ್ಯಮಗಳು’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಅಲ್ಲಿ ನರಸಿಂಹಮೂರ್ತಿ ಅವರನ್ನು ಪ್ರಮುಖ ಭಾಷಣಕಾರರಾಗಿ ಆಹ್ವಾನಿಸಲಾಗಿತ್ತು. ಅಲ್ಲಿಯೇ ರಾಯಚೂರು ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡು ಅಕ್ಟೋಬರ್ 25ರಂದು ಬಂಧಿಸಲಾಗಿದೆ ಎಂದು ರಾಯಚೂರು ಪೊಲೀಸರು ಹೇಳಿಕೆ ನೀಡಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಕರೆ ತಂದು ನವೆಂಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನರಸಿಂಹಮೂರ್ತಿ ಅವರ ಮೇಲೆ ದೇಶದ್ರೋಹದಂತಹ ಗಂಭೀರ ಪ್ರಕರಣಗಳನ್ನು ರಾಯಚೂರು ಪೊಲೀಸ್ ದಾಖಲಿಸಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಎರಡು ದಶಕಗಳ ಹಿಂದೆ ನಡೆದಿವೆ ಎನ್ನಲಾದ ನಕ್ಸಲೀಯ ಚಟವಟಿಕೆಗಳಿಗೆ ಗಂಟು ಹಾಕುವ ಪ್ರಯತ್ನ ಮಾಡಲಾಗಿದೆ. ನರಸಿಂಹಮೂರ್ತಿ ಅವರನ್ನು ಮೊದಲು ವಿಚಾರಣೆಗೆ ಎಂದು ವಶಕ್ಕೆ ಪಡೆದು, ನಂತರ ಬಂಧಿಸಿ, ಗಂಭೀರ ಆರೋಪ ಮಾಡುತ್ತಿರುವುದು, ಕರ್ನಾಟಕದಲ್ಲಿ ಪತ್ರಿಕೋದ್ಯಮದ ಅಭಿವ್ಯಕ್ತಿ ಮತ್ತು ರಾಜಕೀಯ ಪ್ರತಿರೋಧದ ಧ್ವನಿ ಅಡಗಿಸಲು ಮಾಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಸಕ್ರಿಯವಾಗಿರುವ ವ್ಯಕ್ತಿ. ಕರ್ನಾಟಕದ ಜನರು ದೊಡ್ಡಿಪಾಳ್ಯ ಅವರನ್ನು ಕಳೆದ ಮೂರು ದಶಕಗಳಿಂದ ನೋಡಿದ್ದಾರೆ. ಪತ್ರಕರ್ತರಾಗಿ ‘ದಿ ಸಂಡೇ ಇಂಡಿಯನ್, ‘ಗೌರಿ ಲಂಕೇಶ್ ಪತ್ರಿಕೆ, ‘ನ್ಯಾಯಪಥ’ ಮುಂತಾದ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಗೌರವಯುತ ರಾಜಕೀಯ ಕಾರ್ಯಕರ್ತರೂ ಆಗಿದ್ದು, ಸದ್ಯಕ್ಕೆ ಸ್ವರಾಜ್ ಇಂಡಿಯಾ- ಕರ್ನಾಟಕದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಷ್ಟು ಬಹಿರಂಗವಾಗಿ ಕೆಲಸ ಮಾಡಿಕೊಂಡು ಓಡಾಡುತ್ತಿದ್ದ ನರಸಿಂಹಮೂರ್ತಿ ಅವರನ್ನು ‘ತಲೆಮರೆಸಿಕೊಂಡಿದ್ದರು’ ಎಂದು ಹೇಳುವುದು ಅತ್ಯಂತ ದುರದೃಷ್ಟಕರ ಮತ್ತು ಸೇಡಿನ ರಾಜಕಾರಣದ ಲಕ್ಷಣಗಳನ್ನು ತೋರಿಸುತ್ತದೆ ಎಂದಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವು ಪ್ರಗತಿಪರ, ಉದಾರವಾದಿ, ಪ್ರಜಾಪ್ರಭುತ್ವವಾದಿ ಹಾಗೂ ಅಂಬೇಡ್ಕರ್ ವಾದಿ  ಚಿಂತಕರು ಹಾಗೂ ಆಡಳಿತ ಪಕ್ಷದ ರಾಜಕೀಯ ನೀತಿ ಮತ್ತು ನಡತೆಗಳನ್ನು ಪ್ರಶ್ನಿಸುವ ಮತ್ತು ಬಹಿರಂಗವಾಗಿಯೇ ವಿಮರ್ಶಿಸುವ ಕಾರ್ಯಕರ್ತರ ಮೇಲೆ ನಡೆಯುತ್ತಿರವ ಇನ್ನೊಂದು ದಾಳಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕು ಕಾರ್ಯಕರ್ತರ ಮತ್ತು ಚಿಂತಕರ ಮೇಲೆ ಸುಳ್ಳು ಪ್ರಕರಣಗಳನ್ನು ಹೊರಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಳ್ಳಬೇಕಿದೆ. ನರಸಿಂಹಮೂರ್ತಿ ಅವರ ಏಕಾಏಕಿ ಬಂಧನದಿಂದ ಆಡಳಿತ ಪಕ್ಷವು ಅದರ ವಿರುದ್ಧ ಮಾತನಾಡುವ ವ್ಯಕ್ತಿಗಳ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ. ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವುದು ಮತ್ತು ನಿಗ್ರಹಿಸುವುದು ಪ್ರಜಾಪ್ರಭುತ್ವಕ್ಕೆ ಒಂದು ಗಂಭೀರ ಹಿನ್ನಡೆ ಎಂದು ಆರೋಪಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಮೇಲೆ ಮಾಡಲಾಗಿರುವ ಆರೋಪಗಳ ಬಗ್ಗೆ ನ್ಯಾಯಯುತ ಮತ್ತು ತ್ವರಿತ ತನಿಖೆಯಾಗಬೇಕು. ಕಾನೂನಾತ್ಮಕವಾಗಿ ನರಸಿಂಹಮೂರ್ತಿ ಅವರ ವಿಚಾರಣಾಪೂರ್ವ ಬಂಧನವನ್ನು ತಕ್ಷಣ ಕೊನೆಗೊಳಿಸಿ ಬಿಡುಗಡೆ ಮಾಡಬೇಕು ಎಂದು ಸ್ವರಾಜ್ ಇಂಡಿಯಾ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...