Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಸ್ವರಾಜ್ ಇಂಡಿಯಾ ಆಗ್ರಹ..

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಸ್ವರಾಜ್ ಇಂಡಿಯಾ ಆಗ್ರಹ..

ನರಸಿಂಹಮೂರ್ತಿ ಅವರ ಏಕಾಏಕಿ ಬಂಧನದಿಂದ ಆಡಳಿತ ಪಕ್ಷವು ಅದರ ವಿರುದ್ಧ ಮಾತನಾಡುವ ವ್ಯಕ್ತಿಗಳ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ. ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವುದು ಮತ್ತು ನಿಗ್ರಹಿಸುವುದು ಪ್ರಜಾಪ್ರಭುತ್ವಕ್ಕೆ ಒಂದು ಗಂಭೀರ ಹಿನ್ನಡೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಸ್ವರಾಜ್ ಇಂಡಿಯಾ ಕರ್ನಾಟಕದ ಪ್ರಧಾನ ಕಾರ್ಯದರ್ಶಿ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವನ್ನು ಸ್ವರಾಜ್ ಇಂಡಿಯಾ ಖಂಡಿಸುತ್ತದೆ. ಅವರ ಮೇಲೆ ಹೊರಿಸಲಾಗಿರುವ ಆರೋಪಗಳು ಆಧಾರರಹಿತ ಎಂದು ಸ್ವರಾಜ್ ಇಂಡಿಯಾ ಪಕ್ಷವು ಹೇಳಿದೆ.

ಈ ಕುರಿತು ಸ್ವರಾಜ್ ಇಂಡಿಯಾ ಪಕ್ಷದ ಪರವಾಗಿ ಚಾಮರಸ ಮಾಲಿ ಪಾಟೀಲ, ಅಮ್ಜದ್ ಪಾಷ, ದೇವನೂರ ಮಹಾದೇವರವರು ಹೇಳಿಕೆ ಬಿಡುಗಡೆ ಮಾಡಿದ್ದು, ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಹೇಳಿ ಬಂಧಿಸಲಾಗಿರುವುದು ಆಧಾರ ರಹಿತ. ದೊಡ್ಡಿಪಾಳ್ಯ ನರಸಿಂಹಮೂರ್ತಿ ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ಬಹಿರಂಗವಾಗಿ ತೊಡಗಿಸಿಕೊಂಡಿದ್ದಾರೆ. ಪತ್ರಕರ್ತರಾಗಿ ಮತ್ತು ಬರಹಗಾರರಾಗಿಯೂ ಮನ್ನಣೆ ಗಳಿಸಿದ್ದಾರೆ. ಗೌರಿ ಮೀಡಿಯಾ ಟ್ರಸ್ಟ್ ನಿಂದ ಬಿಡುಗಡೆಯಾಗುತ್ತಿರುವ ನ್ಯಾಯಪಥ ಪತ್ರಿಕೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 24 ರಂದು ರಾಯಚೂರಿನಲ್ಲಿ ‘ಪರ್ಯಾಯ ಮಾಧ್ಯಮಗಳು’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಅಲ್ಲಿ ನರಸಿಂಹಮೂರ್ತಿ ಅವರನ್ನು ಪ್ರಮುಖ ಭಾಷಣಕಾರರಾಗಿ ಆಹ್ವಾನಿಸಲಾಗಿತ್ತು. ಅಲ್ಲಿಯೇ ರಾಯಚೂರು ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡು ಅಕ್ಟೋಬರ್ 25ರಂದು ಬಂಧಿಸಲಾಗಿದೆ ಎಂದು ರಾಯಚೂರು ಪೊಲೀಸರು ಹೇಳಿಕೆ ನೀಡಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಕರೆ ತಂದು ನವೆಂಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನರಸಿಂಹಮೂರ್ತಿ ಅವರ ಮೇಲೆ ದೇಶದ್ರೋಹದಂತಹ ಗಂಭೀರ ಪ್ರಕರಣಗಳನ್ನು ರಾಯಚೂರು ಪೊಲೀಸ್ ದಾಖಲಿಸಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಎರಡು ದಶಕಗಳ ಹಿಂದೆ ನಡೆದಿವೆ ಎನ್ನಲಾದ ನಕ್ಸಲೀಯ ಚಟವಟಿಕೆಗಳಿಗೆ ಗಂಟು ಹಾಕುವ ಪ್ರಯತ್ನ ಮಾಡಲಾಗಿದೆ. ನರಸಿಂಹಮೂರ್ತಿ ಅವರನ್ನು ಮೊದಲು ವಿಚಾರಣೆಗೆ ಎಂದು ವಶಕ್ಕೆ ಪಡೆದು, ನಂತರ ಬಂಧಿಸಿ, ಗಂಭೀರ ಆರೋಪ ಮಾಡುತ್ತಿರುವುದು, ಕರ್ನಾಟಕದಲ್ಲಿ ಪತ್ರಿಕೋದ್ಯಮದ ಅಭಿವ್ಯಕ್ತಿ ಮತ್ತು ರಾಜಕೀಯ ಪ್ರತಿರೋಧದ ಧ್ವನಿ ಅಡಗಿಸಲು ಮಾಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಸಕ್ರಿಯವಾಗಿರುವ ವ್ಯಕ್ತಿ. ಕರ್ನಾಟಕದ ಜನರು ದೊಡ್ಡಿಪಾಳ್ಯ ಅವರನ್ನು ಕಳೆದ ಮೂರು ದಶಕಗಳಿಂದ ನೋಡಿದ್ದಾರೆ. ಪತ್ರಕರ್ತರಾಗಿ ‘ದಿ ಸಂಡೇ ಇಂಡಿಯನ್, ‘ಗೌರಿ ಲಂಕೇಶ್ ಪತ್ರಿಕೆ, ‘ನ್ಯಾಯಪಥ’ ಮುಂತಾದ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಗೌರವಯುತ ರಾಜಕೀಯ ಕಾರ್ಯಕರ್ತರೂ ಆಗಿದ್ದು, ಸದ್ಯಕ್ಕೆ ಸ್ವರಾಜ್ ಇಂಡಿಯಾ- ಕರ್ನಾಟಕದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಷ್ಟು ಬಹಿರಂಗವಾಗಿ ಕೆಲಸ ಮಾಡಿಕೊಂಡು ಓಡಾಡುತ್ತಿದ್ದ ನರಸಿಂಹಮೂರ್ತಿ ಅವರನ್ನು ‘ತಲೆಮರೆಸಿಕೊಂಡಿದ್ದರು’ ಎಂದು ಹೇಳುವುದು ಅತ್ಯಂತ ದುರದೃಷ್ಟಕರ ಮತ್ತು ಸೇಡಿನ ರಾಜಕಾರಣದ ಲಕ್ಷಣಗಳನ್ನು ತೋರಿಸುತ್ತದೆ ಎಂದಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವು ಪ್ರಗತಿಪರ, ಉದಾರವಾದಿ, ಪ್ರಜಾಪ್ರಭುತ್ವವಾದಿ ಹಾಗೂ ಅಂಬೇಡ್ಕರ್ ವಾದಿ  ಚಿಂತಕರು ಹಾಗೂ ಆಡಳಿತ ಪಕ್ಷದ ರಾಜಕೀಯ ನೀತಿ ಮತ್ತು ನಡತೆಗಳನ್ನು ಪ್ರಶ್ನಿಸುವ ಮತ್ತು ಬಹಿರಂಗವಾಗಿಯೇ ವಿಮರ್ಶಿಸುವ ಕಾರ್ಯಕರ್ತರ ಮೇಲೆ ನಡೆಯುತ್ತಿರವ ಇನ್ನೊಂದು ದಾಳಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕು ಕಾರ್ಯಕರ್ತರ ಮತ್ತು ಚಿಂತಕರ ಮೇಲೆ ಸುಳ್ಳು ಪ್ರಕರಣಗಳನ್ನು ಹೊರಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಳ್ಳಬೇಕಿದೆ. ನರಸಿಂಹಮೂರ್ತಿ ಅವರ ಏಕಾಏಕಿ ಬಂಧನದಿಂದ ಆಡಳಿತ ಪಕ್ಷವು ಅದರ ವಿರುದ್ಧ ಮಾತನಾಡುವ ವ್ಯಕ್ತಿಗಳ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ. ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವುದು ಮತ್ತು ನಿಗ್ರಹಿಸುವುದು ಪ್ರಜಾಪ್ರಭುತ್ವಕ್ಕೆ ಒಂದು ಗಂಭೀರ ಹಿನ್ನಡೆ ಎಂದು ಆರೋಪಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಮೇಲೆ ಮಾಡಲಾಗಿರುವ ಆರೋಪಗಳ ಬಗ್ಗೆ ನ್ಯಾಯಯುತ ಮತ್ತು ತ್ವರಿತ ತನಿಖೆಯಾಗಬೇಕು. ಕಾನೂನಾತ್ಮಕವಾಗಿ ನರಸಿಂಹಮೂರ್ತಿ ಅವರ ವಿಚಾರಣಾಪೂರ್ವ ಬಂಧನವನ್ನು ತಕ್ಷಣ ಕೊನೆಗೊಳಿಸಿ ಬಿಡುಗಡೆ ಮಾಡಬೇಕು ಎಂದು ಸ್ವರಾಜ್ ಇಂಡಿಯಾ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...