Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಸ್ವರಾಜ್ ಇಂಡಿಯಾ ಆಗ್ರಹ..

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಸ್ವರಾಜ್ ಇಂಡಿಯಾ ಆಗ್ರಹ..

ನರಸಿಂಹಮೂರ್ತಿ ಅವರ ಏಕಾಏಕಿ ಬಂಧನದಿಂದ ಆಡಳಿತ ಪಕ್ಷವು ಅದರ ವಿರುದ್ಧ ಮಾತನಾಡುವ ವ್ಯಕ್ತಿಗಳ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ. ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವುದು ಮತ್ತು ನಿಗ್ರಹಿಸುವುದು ಪ್ರಜಾಪ್ರಭುತ್ವಕ್ಕೆ ಒಂದು ಗಂಭೀರ ಹಿನ್ನಡೆ ಎಂದು ಆರೋಪಿಸಿದ್ದಾರೆ.

- Advertisement -
- Advertisement -

ಸ್ವರಾಜ್ ಇಂಡಿಯಾ ಕರ್ನಾಟಕದ ಪ್ರಧಾನ ಕಾರ್ಯದರ್ಶಿ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವನ್ನು ಸ್ವರಾಜ್ ಇಂಡಿಯಾ ಖಂಡಿಸುತ್ತದೆ. ಅವರ ಮೇಲೆ ಹೊರಿಸಲಾಗಿರುವ ಆರೋಪಗಳು ಆಧಾರರಹಿತ ಎಂದು ಸ್ವರಾಜ್ ಇಂಡಿಯಾ ಪಕ್ಷವು ಹೇಳಿದೆ.

ಈ ಕುರಿತು ಸ್ವರಾಜ್ ಇಂಡಿಯಾ ಪಕ್ಷದ ಪರವಾಗಿ ಚಾಮರಸ ಮಾಲಿ ಪಾಟೀಲ, ಅಮ್ಜದ್ ಪಾಷ, ದೇವನೂರ ಮಹಾದೇವರವರು ಹೇಳಿಕೆ ಬಿಡುಗಡೆ ಮಾಡಿದ್ದು, ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಹೇಳಿ ಬಂಧಿಸಲಾಗಿರುವುದು ಆಧಾರ ರಹಿತ. ದೊಡ್ಡಿಪಾಳ್ಯ ನರಸಿಂಹಮೂರ್ತಿ ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ಬಹಿರಂಗವಾಗಿ ತೊಡಗಿಸಿಕೊಂಡಿದ್ದಾರೆ. ಪತ್ರಕರ್ತರಾಗಿ ಮತ್ತು ಬರಹಗಾರರಾಗಿಯೂ ಮನ್ನಣೆ ಗಳಿಸಿದ್ದಾರೆ. ಗೌರಿ ಮೀಡಿಯಾ ಟ್ರಸ್ಟ್ ನಿಂದ ಬಿಡುಗಡೆಯಾಗುತ್ತಿರುವ ನ್ಯಾಯಪಥ ಪತ್ರಿಕೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಅಕ್ಟೋಬರ್ 24 ರಂದು ರಾಯಚೂರಿನಲ್ಲಿ ‘ಪರ್ಯಾಯ ಮಾಧ್ಯಮಗಳು’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು. ಅಲ್ಲಿ ನರಸಿಂಹಮೂರ್ತಿ ಅವರನ್ನು ಪ್ರಮುಖ ಭಾಷಣಕಾರರಾಗಿ ಆಹ್ವಾನಿಸಲಾಗಿತ್ತು. ಅಲ್ಲಿಯೇ ರಾಯಚೂರು ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡು ಅಕ್ಟೋಬರ್ 25ರಂದು ಬಂಧಿಸಲಾಗಿದೆ ಎಂದು ರಾಯಚೂರು ಪೊಲೀಸರು ಹೇಳಿಕೆ ನೀಡಿದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಕರೆ ತಂದು ನವೆಂಬರ್ 6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನರಸಿಂಹಮೂರ್ತಿ ಅವರ ಮೇಲೆ ದೇಶದ್ರೋಹದಂತಹ ಗಂಭೀರ ಪ್ರಕರಣಗಳನ್ನು ರಾಯಚೂರು ಪೊಲೀಸ್ ದಾಖಲಿಸಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಎರಡು ದಶಕಗಳ ಹಿಂದೆ ನಡೆದಿವೆ ಎನ್ನಲಾದ ನಕ್ಸಲೀಯ ಚಟವಟಿಕೆಗಳಿಗೆ ಗಂಟು ಹಾಕುವ ಪ್ರಯತ್ನ ಮಾಡಲಾಗಿದೆ. ನರಸಿಂಹಮೂರ್ತಿ ಅವರನ್ನು ಮೊದಲು ವಿಚಾರಣೆಗೆ ಎಂದು ವಶಕ್ಕೆ ಪಡೆದು, ನಂತರ ಬಂಧಿಸಿ, ಗಂಭೀರ ಆರೋಪ ಮಾಡುತ್ತಿರುವುದು, ಕರ್ನಾಟಕದಲ್ಲಿ ಪತ್ರಿಕೋದ್ಯಮದ ಅಭಿವ್ಯಕ್ತಿ ಮತ್ತು ರಾಜಕೀಯ ಪ್ರತಿರೋಧದ ಧ್ವನಿ ಅಡಗಿಸಲು ಮಾಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಸಕ್ರಿಯವಾಗಿರುವ ವ್ಯಕ್ತಿ. ಕರ್ನಾಟಕದ ಜನರು ದೊಡ್ಡಿಪಾಳ್ಯ ಅವರನ್ನು ಕಳೆದ ಮೂರು ದಶಕಗಳಿಂದ ನೋಡಿದ್ದಾರೆ. ಪತ್ರಕರ್ತರಾಗಿ ‘ದಿ ಸಂಡೇ ಇಂಡಿಯನ್, ‘ಗೌರಿ ಲಂಕೇಶ್ ಪತ್ರಿಕೆ, ‘ನ್ಯಾಯಪಥ’ ಮುಂತಾದ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಗೌರವಯುತ ರಾಜಕೀಯ ಕಾರ್ಯಕರ್ತರೂ ಆಗಿದ್ದು, ಸದ್ಯಕ್ಕೆ ಸ್ವರಾಜ್ ಇಂಡಿಯಾ- ಕರ್ನಾಟಕದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಷ್ಟು ಬಹಿರಂಗವಾಗಿ ಕೆಲಸ ಮಾಡಿಕೊಂಡು ಓಡಾಡುತ್ತಿದ್ದ ನರಸಿಂಹಮೂರ್ತಿ ಅವರನ್ನು ‘ತಲೆಮರೆಸಿಕೊಂಡಿದ್ದರು’ ಎಂದು ಹೇಳುವುದು ಅತ್ಯಂತ ದುರದೃಷ್ಟಕರ ಮತ್ತು ಸೇಡಿನ ರಾಜಕಾರಣದ ಲಕ್ಷಣಗಳನ್ನು ತೋರಿಸುತ್ತದೆ ಎಂದಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಬಂಧನವು ಪ್ರಗತಿಪರ, ಉದಾರವಾದಿ, ಪ್ರಜಾಪ್ರಭುತ್ವವಾದಿ ಹಾಗೂ ಅಂಬೇಡ್ಕರ್ ವಾದಿ  ಚಿಂತಕರು ಹಾಗೂ ಆಡಳಿತ ಪಕ್ಷದ ರಾಜಕೀಯ ನೀತಿ ಮತ್ತು ನಡತೆಗಳನ್ನು ಪ್ರಶ್ನಿಸುವ ಮತ್ತು ಬಹಿರಂಗವಾಗಿಯೇ ವಿಮರ್ಶಿಸುವ ಕಾರ್ಯಕರ್ತರ ಮೇಲೆ ನಡೆಯುತ್ತಿರವ ಇನ್ನೊಂದು ದಾಳಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕು ಕಾರ್ಯಕರ್ತರ ಮತ್ತು ಚಿಂತಕರ ಮೇಲೆ ಸುಳ್ಳು ಪ್ರಕರಣಗಳನ್ನು ಹೊರಿಸುತ್ತಿರುವುದನ್ನು ಗಮನದಲ್ಲಿಟ್ಟುಕೊಳ್ಳಬೇಕಿದೆ. ನರಸಿಂಹಮೂರ್ತಿ ಅವರ ಏಕಾಏಕಿ ಬಂಧನದಿಂದ ಆಡಳಿತ ಪಕ್ಷವು ಅದರ ವಿರುದ್ಧ ಮಾತನಾಡುವ ವ್ಯಕ್ತಿಗಳ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎನ್ನುವ ಆತಂಕ ಸೃಷ್ಟಿಯಾಗಿದೆ. ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವುದು ಮತ್ತು ನಿಗ್ರಹಿಸುವುದು ಪ್ರಜಾಪ್ರಭುತ್ವಕ್ಕೆ ಒಂದು ಗಂಭೀರ ಹಿನ್ನಡೆ ಎಂದು ಆರೋಪಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರ ಮೇಲೆ ಮಾಡಲಾಗಿರುವ ಆರೋಪಗಳ ಬಗ್ಗೆ ನ್ಯಾಯಯುತ ಮತ್ತು ತ್ವರಿತ ತನಿಖೆಯಾಗಬೇಕು. ಕಾನೂನಾತ್ಮಕವಾಗಿ ನರಸಿಂಹಮೂರ್ತಿ ಅವರ ವಿಚಾರಣಾಪೂರ್ವ ಬಂಧನವನ್ನು ತಕ್ಷಣ ಕೊನೆಗೊಳಿಸಿ ಬಿಡುಗಡೆ ಮಾಡಬೇಕು ಎಂದು ಸ್ವರಾಜ್ ಇಂಡಿಯಾ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...