Homeಕರ್ನಾಟಕಸುಳ್ಳು ಕೇಸಿನಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ಎಲ್ಲೆಡೆ ತೀವ್ರ ಖಂಡನೆ

ಸುಳ್ಳು ಕೇಸಿನಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ಎಲ್ಲೆಡೆ ತೀವ್ರ ಖಂಡನೆ

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಉದ್ಯಮಿಯಾಗಿ, ಹೋರಾಟಗಾರರಾಗಿ ತದನಂತರ ಪತ್ರಕರ್ತರಾಗಿ ಸದ್ಯ ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.

- Advertisement -
- Advertisement -

ಅಕ್ಟೋಬರ್ 24ರ ಗುರುವಾರ ಪತ್ರಕರ್ತ ಮತ್ತು ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ವಿಚಾರಣೆಗೆಂದು ಕರೆದೊಯ್ದಿದ್ದ ರಾಯಚೂರು ಪೊಲೀಸರು ನಿನ್ನೆ ಕೋರ್ಟಿಗೆ ಹಾಜರುಪಡಿಸಿದ್ದಾರೆ. ನವೆಂಬರ್ 06ಕ್ಕೆ ವಿಚಾರಣೆಯನ್ನು ಮುಂದೂಡಿರುವ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ವಿನೋದ, ಮೂರ್ತಿ, ಬಸವರಾಜು ಎಂದೆಲ್ಲಾ ಹೆಸರುಗಳಿಂದ ಆರೋಪಿಸಿರುವ ಪೊಲೀಸರು 1994ರ ರಾಯಚೂರು ಗ್ರಾಮೀಣ (ಯಾಪಲದಿನ್ನಿ) ಪೊಲೀಸ್ ಠಾಣೆಯಲ್ಲಿ ಮೂರು ಕೇಸುಗಳನ್ನು, ರಾಯಚೂರು ನೇತಾಜಿ ನಗರ ಠಾಣೆಯಲ್ಲಿ ಒಂದು ಕೇಸನ್ನು ಹಾಕಿದ್ದಾರೆ. ಕಲಂ 143, 147, 148, 307, 355, 385, 120(ಬಿ) 124(ಎ) ಸೇರಿದಂತೆ ಸುಮಾರು 21 ಸೆಕ್ಷನ್ ಗಳನ್ನು ಹಾಕಿದ್ದಾರೆ. ಅಲ್ಲದೇ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಅಕ್ಟೋಬರ್ 24ರ ಗುರುವಾರ ರಾಯಚೂರಿನಲ್ಲಿ ನಡೆದ ಗೌರಿಲಂಕೇಶ್ ಬಳಗದ ವಿಚಾರಸಂಕಿರಣದಲ್ಲಿ ಭಾಗವಹಿಸಿದ ನಂತರ ದೊಡ್ಡಿಪಾಳ್ಯರವರನ್ನು ವಶಕ್ಕೆ ಪಡೆದಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಮತ್ತು ಡಿವೈಎಸ್ಪಿ ಶೀಲವಂತರ್ ಸೇರಿದಂತೆ ಹಲವು ಪೊಲೀಸರು ಒಂದು ದಿನಗಳ ಕಾಲ ಸತತ ವಿಚಾರಣೆ ನಡೆಸಿದ್ದಾರೆ. ಅವರ ಮೇಲಿನ ಎಲ್ಲಾ ಆರೋಪಗಳನ್ನು ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ನಿರಾಕರಿಸಿದ್ದಾರೆ.

ಪೊಲೀಸರ ಆರೋಪ ನಿರಾಧಾರ, ಇವೆಲ್ಲವೂ ರಾಜಕೀಯ ಪ್ರೇರಿತ ಸುಳ್ಳು ಕೇಸುಗಳು

ನರಸಿಂಹಮೂರ್ತಿಯವರ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಜನಶಕ್ತಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕುಮಾರ್ ಸಮತಳರವರು ಪೊಲೀಸರ ಆರೋಪ ನಿರಾಧಾರ, ಇವೆಲ್ಲವೂ ರಾಜಕೀಯ ಪ್ರೇರಿತ ಸುಳ್ಳು ಕೇಸುಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರಸಿಂಹಮೂರ್ತಿಯವರು 1990ರಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದು ಬಿಎಂಐಸಿ ವಿರೋಧಿ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಅವರ ಅಣ್ಣನೊಂದಿಗೆ ಸೇರಿ ರೇಷ್ಮೆ ಮಿಲ್ ವ್ಯವಹಾರ ನಡೆಸಿದ್ದಾರೆ. ಇವೆಲ್ಲದಕ್ಕೂ ಸಾಕಷ್ಟು ದಾಖಲೆಗಳಿರುವುದಲ್ಲದೇ ರಾಯಚೂರಿನ ಕೇಸಿಗೂ ಅವರಿಗೂ ಸಂಬಂಧವಿಲ್ಲ ಎಂದಿದ್ದಾರೆ.

ಯಾರದೋ ಮೇಲಿನ ಕೇಸುಗಳನ್ನು ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರ ಮೇಲೆ ಹಾಕಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ. ಅಲ್ಲದೇ ಪೊಲೀಸರು ಉಲ್ಲೇಖಿಸಿರುವ ಎಲ್ಲಾ ಕೇಸುಗಳು ಈಗಾಗಲೇ ವಿಚಾರಣೆ ನಡೆದು ಖುಲಾಸೆಗೊಂಡಿವೆ. ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಉದ್ಯಮಿಯಾಗಿ, ಹೋರಾಟಗಾರರಾಗಿ ತದನಂತರ ಪತ್ರಕರ್ತರಾಗಿ ಸದ್ಯ ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಇಂತವರ ಮೇಲೆ ಸುಳ್ಳು ಕೇಸು ಹಾಕಿರುವುದು ಸರಿಯಲ್ಲ, ಪೊಲೀಸರು ಕೂಡಲೇ ಕೇಸನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ನರಸಿಂಹಮೂರ್ತಿಯವರ ಬಂಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ

ಪೊಲೀಸರು ಖುಲಾಸೆಯಾಗಿರುವ ಕೇಸು ಹಾಕಿರುವುದು ಮತ್ತು 25 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಹೇಳಿರುವುದು ಬಹಳಷ್ಟು ಜನರ ವಿರೋಧಕ್ಕೆ ಗುರಿಯಾಗಿದೆ. ಪೊಲೀಸರ ನಡೆಯನ್ನು ಹಲವಾರು ಜನರು ವ್ಯಂಗ್ಯ ಮಾಡಿ ಟ್ರೋಲ್ ಮಾಡಿದರೆ ಮತ್ತಷ್ಟು ಜನರ ಸರ್ಕಾರದ  ದಮನಕಾರಿ ನೀತಿಯನ್ನು ಕಟುವಾಗಿ ಟೀಕಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರಿಗೆ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕೇ ಸಿಗುತ್ತದೆ, ಅದು ಬೇರೆ ವಿಷಯ. ಆದರೆ ಸರ್ಕಾರ ಕೂಡಲೇ‌ ಅವರನ್ನು ಬಿಡುಗಡೆ‌ ಮಾಡಿ ಕ್ಷಮೆ ಕೋರಬೇಕು.‌ ಯಾಕೆಂದರೆ ಬಂಧಿಸಿದ ಕಾರಣ, ಕೇಸು, ಎಸ್ ಪಿ ಕೊಟ್ಟ‌ ಸಮರ್ಥನೆ ಎಲ್ಲವೂ ನಗೆಪಾಟಲಿಗೀಡಾಗುವಂಥದ್ದು. ನಾಗರಿಕ ಸರ್ಕಾರ ಯಾವುದೂ ಈ ಬಗೆಯ‌ ಬ್ಲಂಡರ್ ಮಾಡಲು ಸಾಧ್ಯವಿಲ್ಲ. ನಿಮ್ಮದೇ ಮರ್ಯಾದೆ ಉಳಿಸಿಕೊಳ್ಳಲಾದರೂ ಕೂಡಲೇ ಬಿಡುಗಡೆ ಮಾಡಿ ಎಂದು ಪತ್ರಕರ್ತರಾದ  ದಿನೇಶ್ ಕುಮಾರ್ ದಿನೂರವರು ಒತ್ತಾಯಿಸಿದ್ದಾರೆ.

“ಸರಕಾರ ಬಡವರಿಗಾಗಿ ರೂಪಿಸಿದ ಯೋಜನೆಗಳು ಬಡವರನ್ನು ತಲುಪುತ್ತಿಲ್ಲ” ಎಂದು ಹೇಳುವುದು ಐಪಿಸಿಯ ಯಾವುದೋ ಕಲಂ ಪ್ರಕಾರ ಗಂಭೀರ ಅಪರಾಧವಂತೆ. ಎಷ್ಟು ಯೋಚಿಸಿದರೂ ಅದು ಯಾವ ಕಲಂ ಎಂಬುದು ನೆನಪಿಗೆ ಬರುತ್ತಿಲ್ಲ. ಯಾರಿಗಾದರೂ ಗೊತ್ತಿದ್ದರೆ ಹೇಳಿ” ಎಂದು ಹಿರಿಯರಾದ ಶ್ರೀನಿವಾಸ ಕಾರ್ಕಳರವರು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರನ್ನು ಕಳೆದ ೨೦ ವರ್ಷಗಳಿಂದ ‘ ತಲೆಮರೆಸಿಕೊಂಡಿದ್ದರೆಂದು’ ಹೇಳಿ, ರಾಯಚೂರು ಪೋಲೀಸರು ಬಂಧಿಸಿರುವುದು ಆಘಾತಕಾರಿಯಾಗಿದೆ. ಇದು ಈಗಾಗಲೇ ದೇಶದಾದ್ಯಂತ ನಡೆಯುತ್ತಿರುವ ಇಂಥದ್ದೇ ಹಲವು ಘಟನೆಗಳಿಗೆ ಪೂರಕವಾಗಿದೆ ಮಾತ್ರವಲ್ಲ ದೇಶಕ್ಕೊಂದು ಸಂದೇಶವನ್ನೂ ರವಾನೆ ಮಾಡುತ್ತಿದೆ. ಇಂಥ ಘಟನೆಗಳು ಸಾಮಾಜಿಕ ಚಿಂತ‌ನಾ ಕ್ರಮಗಳನ್ನೇ ಅಳಿಸಿ ಹಾಕುವ ಪ್ರಯತ್ನಗಳಾಗಿವೆ.
ನಾವೆಲ್ಲ ದಿನಾ ಪೋಲಿಸ್ ಸ್ಟೇಷನ್ ಗೆ ಹೋಗಿ ಸಹಿಹಾಕಿ ಬಂದರೆ ಮಾತ್ರ ‘ ತಲೆಮರೆಸಿಕೊಂಡಿಲ್ಲ’ ಎಂಬರ್ಥ ಹೊರಡುವ ಕ್ರಿಯೆಗಳಿವು.
ನಾವೆಲ್ಲರೂ ದೊಡ್ಡಿಪಾಳ್ಯರ ಬೆಂಬಲಕ್ಕೆ ನಿಲ್ಲುವುದರ ಮೂಲಕ ನಮ್ಮ ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳೋಣ.
ಯಾರಿಗೂ ಜೀವಂತ ಆತ್ಮಗಳನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ದೆಹಲಿಯ ಜೆ.ಎನ್‌.ಯು ಪ್ರಾಧ್ಯಪಾಕರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ತಿಳಿಸಿದ್ದಾರೆ.

ಈಗ ಕಡಿಮೆಯೆಂದರೂ 15-20 ವರ್ಷಗಳಿಂದ ಸಾರ್ವಜನಿಕ ಬದುಕಿನಲ್ಲಿ ಚಳವಳಿಗಳಲ್ಲಿ, ಪತ್ರಕರ್ತರಾಗಿ, ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ನಾಯಕರಾಗಿ ಇಡೀ ರಾಜ್ಯಕ್ಕೇ ಚಿರಪರಿಚಿತರಾಗಿರುವ ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರನ್ನು ಏಕಾಏಕಿಯಾಗಿ ಪೊಲೀಸರು ಬಂಧಿಸಿದ್ದಾರೆ. 20 ವರ್ಷಗಳ ಹಿಂದೆ ಅವರು ನಕ್ಸಲೀಯ ಚಳುವಳಿಯಲ್ಲಿದ್ದರಂತೆ ಹೀಗಾಗಿ ಬಂಧಿಸಿದ್ದಾರಂತೆ. ಈ 20 ವರ್ಷಗಳ ಹಿಂದೆ ರಾಯಚೂರಿನಲ್ಲಿ ಇದ್ದ ಯಾರೋ ವಿನೋದ್ ಎಂಬ ನಕ್ಸಲೀಯರ ಹೆಸರಿಗೂ ದೊಡ್ಡಿಪಾಳ್ಯ ಮೂರ್ತಿಯವರಿಗೂ ಸಂಬಂಧ ಕಲ್ಪಿಸಿ ಈಗ ಬಂಧಿಸಿರುವುದು ಎಷ್ಟು ಸರಿ? ದೊಡ್ಡಿಪಾಳ್ಯ ನರಸಿಂಹ ಮೂರ್ತಿ ನನಗೆ ಪರಿಚಯವಾಗಿ ಈಗ ಸುಮಾರು 15 ವರ್ಷಗಳಾಯಿತು. ಅಂದಿನಿಂದಲೂ ಬೆಂಗಳೂರಿನಲ್ಲಿ ಅವರು ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದು, ನಮಗೆಲ್ಲ ಆತ್ಮೀಯ ಗೆಳೆಯರಾಗಿಯೂ ಇದ್ದಾರೆ.

2011ರಿಂದ ಕೆಲವು ವರ್ಷಗಳ ಕಾಲ ನಾವು ದ ಸಂಡೆ ಇಂಡಿಯನ್ ಪತ್ರಿಕೆಯಲ್ಲಿ ಸಹೋದ್ಯೋಗಿಗಳಾಗಿಯೂ ಕೆಲಸ ಮಾಡಿದ್ದೆವು. ನಂತರ ಅವರು ಗೌರಿ ಲಂಕೇಶ್ ಪತ್ರಿಕೆಯಲ್ಲಿ ಸಕ್ರಿಯವಾಗಿದ್ದರು. ಕಾನೂನುಬದ್ಧವಾಗಿ ದಶಕಗಳಿಂದಲೂ ಚಳವಳಿಗಳಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳನ್ನು ಸುಳ್ಳುಕೇಸು ಹಾಕಿ ಜೈಲಿಗೆ ಕಳಿಸುವ ಕೆಲಸ ಶುರುವಾಗಿದೆಯೇ?  ಹೀಗೆ ಹಸಿ ಸುಳ್ಳಿನ ಮೇಲೆ ರಾಜಕೀಯ ಕಾರ್ಯಕರ್ತರೊಬ್ಬರನ್ನು ಬಂಧಿಸುವ ಕೆಲಸವನ್ನು ಪೊಲೀಸರು ಯಾವುದೋ ರಾಜಕೀಯ ಒತ್ತಡದಿಂದಲೇ ಪೊಲೀಸರು ಹೀಗೆ ಮಾಡಿರಬಹುದೇ? ಏನೇ ಆಗಲಿ ಇದು ಖಂಡಿನೀಯ. ಕೂಡಲೇ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆಯವರು ಅಭಿಪ್ರಾಯಪಟ್ಟಿದ್ದಾರೆ.

KVS ಆಯೋಜಿಸಿದ ಭಗತ್ ಸಿಂಗ್ ಹುತಾತ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಹೋರಾಟಗಾರ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಸ್ಥಳೀಯ ಪೋಲಿಸ್ ಇನ್ಸ್ಪೆಕ್ಟರ್ ಅವರ ಜೊತೆಗೂಡಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಿದ್ದ ಚಿತ್ರಗಳಿವು. ಇಂತಹ ನೂರಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ ಮತ್ತು ಭಾಗವಹಿಸಿದ್ದಾರೆ. ಜನಪರವಾದ ಹೋರಾಟಗಳಲ್ಲಿ ಸದಾ ಸಕ್ರಿಯವಾಗಿ ದುಡಿಯುವ ವರ್ಗದವರ ಪರ ಶ್ರಮಿಸುತ್ತಿರುವ ನಮ್ಮ ಮೂರ್ತಿ ಅಣ್ಣ ಬದ್ಧತೆವುಳ್ಳ ಪತ್ರಕರ್ತರೂ ಹೌದು ಎಂದು ನಿಮಗೆಲ್ಲಾ ಗೊತ್ತೇಯಿದೆ ಆದರೂ ಸುಳ್ಳು ಹೇಳುವುದನ್ನು ಪೋಲಿಸರಿಂದ ಕಲಿಯಿರಿ ಎಂದು ಸರೋವರ್ ಬೆಂಕಿಕೆರೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...