Homeಕರ್ನಾಟಕಸುಳ್ಳು ಕೇಸಿನಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ಎಲ್ಲೆಡೆ ತೀವ್ರ ಖಂಡನೆ

ಸುಳ್ಳು ಕೇಸಿನಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ಎಲ್ಲೆಡೆ ತೀವ್ರ ಖಂಡನೆ

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಉದ್ಯಮಿಯಾಗಿ, ಹೋರಾಟಗಾರರಾಗಿ ತದನಂತರ ಪತ್ರಕರ್ತರಾಗಿ ಸದ್ಯ ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.

- Advertisement -
- Advertisement -

ಅಕ್ಟೋಬರ್ 24ರ ಗುರುವಾರ ಪತ್ರಕರ್ತ ಮತ್ತು ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ವಿಚಾರಣೆಗೆಂದು ಕರೆದೊಯ್ದಿದ್ದ ರಾಯಚೂರು ಪೊಲೀಸರು ನಿನ್ನೆ ಕೋರ್ಟಿಗೆ ಹಾಜರುಪಡಿಸಿದ್ದಾರೆ. ನವೆಂಬರ್ 06ಕ್ಕೆ ವಿಚಾರಣೆಯನ್ನು ಮುಂದೂಡಿರುವ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ವಿನೋದ, ಮೂರ್ತಿ, ಬಸವರಾಜು ಎಂದೆಲ್ಲಾ ಹೆಸರುಗಳಿಂದ ಆರೋಪಿಸಿರುವ ಪೊಲೀಸರು 1994ರ ರಾಯಚೂರು ಗ್ರಾಮೀಣ (ಯಾಪಲದಿನ್ನಿ) ಪೊಲೀಸ್ ಠಾಣೆಯಲ್ಲಿ ಮೂರು ಕೇಸುಗಳನ್ನು, ರಾಯಚೂರು ನೇತಾಜಿ ನಗರ ಠಾಣೆಯಲ್ಲಿ ಒಂದು ಕೇಸನ್ನು ಹಾಕಿದ್ದಾರೆ. ಕಲಂ 143, 147, 148, 307, 355, 385, 120(ಬಿ) 124(ಎ) ಸೇರಿದಂತೆ ಸುಮಾರು 21 ಸೆಕ್ಷನ್ ಗಳನ್ನು ಹಾಕಿದ್ದಾರೆ. ಅಲ್ಲದೇ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಅಕ್ಟೋಬರ್ 24ರ ಗುರುವಾರ ರಾಯಚೂರಿನಲ್ಲಿ ನಡೆದ ಗೌರಿಲಂಕೇಶ್ ಬಳಗದ ವಿಚಾರಸಂಕಿರಣದಲ್ಲಿ ಭಾಗವಹಿಸಿದ ನಂತರ ದೊಡ್ಡಿಪಾಳ್ಯರವರನ್ನು ವಶಕ್ಕೆ ಪಡೆದಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಮತ್ತು ಡಿವೈಎಸ್ಪಿ ಶೀಲವಂತರ್ ಸೇರಿದಂತೆ ಹಲವು ಪೊಲೀಸರು ಒಂದು ದಿನಗಳ ಕಾಲ ಸತತ ವಿಚಾರಣೆ ನಡೆಸಿದ್ದಾರೆ. ಅವರ ಮೇಲಿನ ಎಲ್ಲಾ ಆರೋಪಗಳನ್ನು ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ನಿರಾಕರಿಸಿದ್ದಾರೆ.

ಪೊಲೀಸರ ಆರೋಪ ನಿರಾಧಾರ, ಇವೆಲ್ಲವೂ ರಾಜಕೀಯ ಪ್ರೇರಿತ ಸುಳ್ಳು ಕೇಸುಗಳು

ನರಸಿಂಹಮೂರ್ತಿಯವರ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಜನಶಕ್ತಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕುಮಾರ್ ಸಮತಳರವರು ಪೊಲೀಸರ ಆರೋಪ ನಿರಾಧಾರ, ಇವೆಲ್ಲವೂ ರಾಜಕೀಯ ಪ್ರೇರಿತ ಸುಳ್ಳು ಕೇಸುಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರಸಿಂಹಮೂರ್ತಿಯವರು 1990ರಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದು ಬಿಎಂಐಸಿ ವಿರೋಧಿ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಅವರ ಅಣ್ಣನೊಂದಿಗೆ ಸೇರಿ ರೇಷ್ಮೆ ಮಿಲ್ ವ್ಯವಹಾರ ನಡೆಸಿದ್ದಾರೆ. ಇವೆಲ್ಲದಕ್ಕೂ ಸಾಕಷ್ಟು ದಾಖಲೆಗಳಿರುವುದಲ್ಲದೇ ರಾಯಚೂರಿನ ಕೇಸಿಗೂ ಅವರಿಗೂ ಸಂಬಂಧವಿಲ್ಲ ಎಂದಿದ್ದಾರೆ.

ಯಾರದೋ ಮೇಲಿನ ಕೇಸುಗಳನ್ನು ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರ ಮೇಲೆ ಹಾಕಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ. ಅಲ್ಲದೇ ಪೊಲೀಸರು ಉಲ್ಲೇಖಿಸಿರುವ ಎಲ್ಲಾ ಕೇಸುಗಳು ಈಗಾಗಲೇ ವಿಚಾರಣೆ ನಡೆದು ಖುಲಾಸೆಗೊಂಡಿವೆ. ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಉದ್ಯಮಿಯಾಗಿ, ಹೋರಾಟಗಾರರಾಗಿ ತದನಂತರ ಪತ್ರಕರ್ತರಾಗಿ ಸದ್ಯ ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಇಂತವರ ಮೇಲೆ ಸುಳ್ಳು ಕೇಸು ಹಾಕಿರುವುದು ಸರಿಯಲ್ಲ, ಪೊಲೀಸರು ಕೂಡಲೇ ಕೇಸನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ನರಸಿಂಹಮೂರ್ತಿಯವರ ಬಂಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ

ಪೊಲೀಸರು ಖುಲಾಸೆಯಾಗಿರುವ ಕೇಸು ಹಾಕಿರುವುದು ಮತ್ತು 25 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಹೇಳಿರುವುದು ಬಹಳಷ್ಟು ಜನರ ವಿರೋಧಕ್ಕೆ ಗುರಿಯಾಗಿದೆ. ಪೊಲೀಸರ ನಡೆಯನ್ನು ಹಲವಾರು ಜನರು ವ್ಯಂಗ್ಯ ಮಾಡಿ ಟ್ರೋಲ್ ಮಾಡಿದರೆ ಮತ್ತಷ್ಟು ಜನರ ಸರ್ಕಾರದ  ದಮನಕಾರಿ ನೀತಿಯನ್ನು ಕಟುವಾಗಿ ಟೀಕಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರಿಗೆ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕೇ ಸಿಗುತ್ತದೆ, ಅದು ಬೇರೆ ವಿಷಯ. ಆದರೆ ಸರ್ಕಾರ ಕೂಡಲೇ‌ ಅವರನ್ನು ಬಿಡುಗಡೆ‌ ಮಾಡಿ ಕ್ಷಮೆ ಕೋರಬೇಕು.‌ ಯಾಕೆಂದರೆ ಬಂಧಿಸಿದ ಕಾರಣ, ಕೇಸು, ಎಸ್ ಪಿ ಕೊಟ್ಟ‌ ಸಮರ್ಥನೆ ಎಲ್ಲವೂ ನಗೆಪಾಟಲಿಗೀಡಾಗುವಂಥದ್ದು. ನಾಗರಿಕ ಸರ್ಕಾರ ಯಾವುದೂ ಈ ಬಗೆಯ‌ ಬ್ಲಂಡರ್ ಮಾಡಲು ಸಾಧ್ಯವಿಲ್ಲ. ನಿಮ್ಮದೇ ಮರ್ಯಾದೆ ಉಳಿಸಿಕೊಳ್ಳಲಾದರೂ ಕೂಡಲೇ ಬಿಡುಗಡೆ ಮಾಡಿ ಎಂದು ಪತ್ರಕರ್ತರಾದ  ದಿನೇಶ್ ಕುಮಾರ್ ದಿನೂರವರು ಒತ್ತಾಯಿಸಿದ್ದಾರೆ.

“ಸರಕಾರ ಬಡವರಿಗಾಗಿ ರೂಪಿಸಿದ ಯೋಜನೆಗಳು ಬಡವರನ್ನು ತಲುಪುತ್ತಿಲ್ಲ” ಎಂದು ಹೇಳುವುದು ಐಪಿಸಿಯ ಯಾವುದೋ ಕಲಂ ಪ್ರಕಾರ ಗಂಭೀರ ಅಪರಾಧವಂತೆ. ಎಷ್ಟು ಯೋಚಿಸಿದರೂ ಅದು ಯಾವ ಕಲಂ ಎಂಬುದು ನೆನಪಿಗೆ ಬರುತ್ತಿಲ್ಲ. ಯಾರಿಗಾದರೂ ಗೊತ್ತಿದ್ದರೆ ಹೇಳಿ” ಎಂದು ಹಿರಿಯರಾದ ಶ್ರೀನಿವಾಸ ಕಾರ್ಕಳರವರು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರನ್ನು ಕಳೆದ ೨೦ ವರ್ಷಗಳಿಂದ ‘ ತಲೆಮರೆಸಿಕೊಂಡಿದ್ದರೆಂದು’ ಹೇಳಿ, ರಾಯಚೂರು ಪೋಲೀಸರು ಬಂಧಿಸಿರುವುದು ಆಘಾತಕಾರಿಯಾಗಿದೆ. ಇದು ಈಗಾಗಲೇ ದೇಶದಾದ್ಯಂತ ನಡೆಯುತ್ತಿರುವ ಇಂಥದ್ದೇ ಹಲವು ಘಟನೆಗಳಿಗೆ ಪೂರಕವಾಗಿದೆ ಮಾತ್ರವಲ್ಲ ದೇಶಕ್ಕೊಂದು ಸಂದೇಶವನ್ನೂ ರವಾನೆ ಮಾಡುತ್ತಿದೆ. ಇಂಥ ಘಟನೆಗಳು ಸಾಮಾಜಿಕ ಚಿಂತ‌ನಾ ಕ್ರಮಗಳನ್ನೇ ಅಳಿಸಿ ಹಾಕುವ ಪ್ರಯತ್ನಗಳಾಗಿವೆ.
ನಾವೆಲ್ಲ ದಿನಾ ಪೋಲಿಸ್ ಸ್ಟೇಷನ್ ಗೆ ಹೋಗಿ ಸಹಿಹಾಕಿ ಬಂದರೆ ಮಾತ್ರ ‘ ತಲೆಮರೆಸಿಕೊಂಡಿಲ್ಲ’ ಎಂಬರ್ಥ ಹೊರಡುವ ಕ್ರಿಯೆಗಳಿವು.
ನಾವೆಲ್ಲರೂ ದೊಡ್ಡಿಪಾಳ್ಯರ ಬೆಂಬಲಕ್ಕೆ ನಿಲ್ಲುವುದರ ಮೂಲಕ ನಮ್ಮ ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳೋಣ.
ಯಾರಿಗೂ ಜೀವಂತ ಆತ್ಮಗಳನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ದೆಹಲಿಯ ಜೆ.ಎನ್‌.ಯು ಪ್ರಾಧ್ಯಪಾಕರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ತಿಳಿಸಿದ್ದಾರೆ.

ಈಗ ಕಡಿಮೆಯೆಂದರೂ 15-20 ವರ್ಷಗಳಿಂದ ಸಾರ್ವಜನಿಕ ಬದುಕಿನಲ್ಲಿ ಚಳವಳಿಗಳಲ್ಲಿ, ಪತ್ರಕರ್ತರಾಗಿ, ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ನಾಯಕರಾಗಿ ಇಡೀ ರಾಜ್ಯಕ್ಕೇ ಚಿರಪರಿಚಿತರಾಗಿರುವ ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರನ್ನು ಏಕಾಏಕಿಯಾಗಿ ಪೊಲೀಸರು ಬಂಧಿಸಿದ್ದಾರೆ. 20 ವರ್ಷಗಳ ಹಿಂದೆ ಅವರು ನಕ್ಸಲೀಯ ಚಳುವಳಿಯಲ್ಲಿದ್ದರಂತೆ ಹೀಗಾಗಿ ಬಂಧಿಸಿದ್ದಾರಂತೆ. ಈ 20 ವರ್ಷಗಳ ಹಿಂದೆ ರಾಯಚೂರಿನಲ್ಲಿ ಇದ್ದ ಯಾರೋ ವಿನೋದ್ ಎಂಬ ನಕ್ಸಲೀಯರ ಹೆಸರಿಗೂ ದೊಡ್ಡಿಪಾಳ್ಯ ಮೂರ್ತಿಯವರಿಗೂ ಸಂಬಂಧ ಕಲ್ಪಿಸಿ ಈಗ ಬಂಧಿಸಿರುವುದು ಎಷ್ಟು ಸರಿ? ದೊಡ್ಡಿಪಾಳ್ಯ ನರಸಿಂಹ ಮೂರ್ತಿ ನನಗೆ ಪರಿಚಯವಾಗಿ ಈಗ ಸುಮಾರು 15 ವರ್ಷಗಳಾಯಿತು. ಅಂದಿನಿಂದಲೂ ಬೆಂಗಳೂರಿನಲ್ಲಿ ಅವರು ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದು, ನಮಗೆಲ್ಲ ಆತ್ಮೀಯ ಗೆಳೆಯರಾಗಿಯೂ ಇದ್ದಾರೆ.

2011ರಿಂದ ಕೆಲವು ವರ್ಷಗಳ ಕಾಲ ನಾವು ದ ಸಂಡೆ ಇಂಡಿಯನ್ ಪತ್ರಿಕೆಯಲ್ಲಿ ಸಹೋದ್ಯೋಗಿಗಳಾಗಿಯೂ ಕೆಲಸ ಮಾಡಿದ್ದೆವು. ನಂತರ ಅವರು ಗೌರಿ ಲಂಕೇಶ್ ಪತ್ರಿಕೆಯಲ್ಲಿ ಸಕ್ರಿಯವಾಗಿದ್ದರು. ಕಾನೂನುಬದ್ಧವಾಗಿ ದಶಕಗಳಿಂದಲೂ ಚಳವಳಿಗಳಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳನ್ನು ಸುಳ್ಳುಕೇಸು ಹಾಕಿ ಜೈಲಿಗೆ ಕಳಿಸುವ ಕೆಲಸ ಶುರುವಾಗಿದೆಯೇ?  ಹೀಗೆ ಹಸಿ ಸುಳ್ಳಿನ ಮೇಲೆ ರಾಜಕೀಯ ಕಾರ್ಯಕರ್ತರೊಬ್ಬರನ್ನು ಬಂಧಿಸುವ ಕೆಲಸವನ್ನು ಪೊಲೀಸರು ಯಾವುದೋ ರಾಜಕೀಯ ಒತ್ತಡದಿಂದಲೇ ಪೊಲೀಸರು ಹೀಗೆ ಮಾಡಿರಬಹುದೇ? ಏನೇ ಆಗಲಿ ಇದು ಖಂಡಿನೀಯ. ಕೂಡಲೇ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆಯವರು ಅಭಿಪ್ರಾಯಪಟ್ಟಿದ್ದಾರೆ.

KVS ಆಯೋಜಿಸಿದ ಭಗತ್ ಸಿಂಗ್ ಹುತಾತ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಹೋರಾಟಗಾರ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಸ್ಥಳೀಯ ಪೋಲಿಸ್ ಇನ್ಸ್ಪೆಕ್ಟರ್ ಅವರ ಜೊತೆಗೂಡಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಿದ್ದ ಚಿತ್ರಗಳಿವು. ಇಂತಹ ನೂರಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ ಮತ್ತು ಭಾಗವಹಿಸಿದ್ದಾರೆ. ಜನಪರವಾದ ಹೋರಾಟಗಳಲ್ಲಿ ಸದಾ ಸಕ್ರಿಯವಾಗಿ ದುಡಿಯುವ ವರ್ಗದವರ ಪರ ಶ್ರಮಿಸುತ್ತಿರುವ ನಮ್ಮ ಮೂರ್ತಿ ಅಣ್ಣ ಬದ್ಧತೆವುಳ್ಳ ಪತ್ರಕರ್ತರೂ ಹೌದು ಎಂದು ನಿಮಗೆಲ್ಲಾ ಗೊತ್ತೇಯಿದೆ ಆದರೂ ಸುಳ್ಳು ಹೇಳುವುದನ್ನು ಪೋಲಿಸರಿಂದ ಕಲಿಯಿರಿ ಎಂದು ಸರೋವರ್ ಬೆಂಕಿಕೆರೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....