Homeಕರ್ನಾಟಕಸುಳ್ಳು ಕೇಸಿನಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ಎಲ್ಲೆಡೆ ತೀವ್ರ ಖಂಡನೆ

ಸುಳ್ಳು ಕೇಸಿನಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ಎಲ್ಲೆಡೆ ತೀವ್ರ ಖಂಡನೆ

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಉದ್ಯಮಿಯಾಗಿ, ಹೋರಾಟಗಾರರಾಗಿ ತದನಂತರ ಪತ್ರಕರ್ತರಾಗಿ ಸದ್ಯ ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.

- Advertisement -
- Advertisement -

ಅಕ್ಟೋಬರ್ 24ರ ಗುರುವಾರ ಪತ್ರಕರ್ತ ಮತ್ತು ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ವಿಚಾರಣೆಗೆಂದು ಕರೆದೊಯ್ದಿದ್ದ ರಾಯಚೂರು ಪೊಲೀಸರು ನಿನ್ನೆ ಕೋರ್ಟಿಗೆ ಹಾಜರುಪಡಿಸಿದ್ದಾರೆ. ನವೆಂಬರ್ 06ಕ್ಕೆ ವಿಚಾರಣೆಯನ್ನು ಮುಂದೂಡಿರುವ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ವಿನೋದ, ಮೂರ್ತಿ, ಬಸವರಾಜು ಎಂದೆಲ್ಲಾ ಹೆಸರುಗಳಿಂದ ಆರೋಪಿಸಿರುವ ಪೊಲೀಸರು 1994ರ ರಾಯಚೂರು ಗ್ರಾಮೀಣ (ಯಾಪಲದಿನ್ನಿ) ಪೊಲೀಸ್ ಠಾಣೆಯಲ್ಲಿ ಮೂರು ಕೇಸುಗಳನ್ನು, ರಾಯಚೂರು ನೇತಾಜಿ ನಗರ ಠಾಣೆಯಲ್ಲಿ ಒಂದು ಕೇಸನ್ನು ಹಾಕಿದ್ದಾರೆ. ಕಲಂ 143, 147, 148, 307, 355, 385, 120(ಬಿ) 124(ಎ) ಸೇರಿದಂತೆ ಸುಮಾರು 21 ಸೆಕ್ಷನ್ ಗಳನ್ನು ಹಾಕಿದ್ದಾರೆ. ಅಲ್ಲದೇ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಅಕ್ಟೋಬರ್ 24ರ ಗುರುವಾರ ರಾಯಚೂರಿನಲ್ಲಿ ನಡೆದ ಗೌರಿಲಂಕೇಶ್ ಬಳಗದ ವಿಚಾರಸಂಕಿರಣದಲ್ಲಿ ಭಾಗವಹಿಸಿದ ನಂತರ ದೊಡ್ಡಿಪಾಳ್ಯರವರನ್ನು ವಶಕ್ಕೆ ಪಡೆದಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಮತ್ತು ಡಿವೈಎಸ್ಪಿ ಶೀಲವಂತರ್ ಸೇರಿದಂತೆ ಹಲವು ಪೊಲೀಸರು ಒಂದು ದಿನಗಳ ಕಾಲ ಸತತ ವಿಚಾರಣೆ ನಡೆಸಿದ್ದಾರೆ. ಅವರ ಮೇಲಿನ ಎಲ್ಲಾ ಆರೋಪಗಳನ್ನು ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ನಿರಾಕರಿಸಿದ್ದಾರೆ.

ಪೊಲೀಸರ ಆರೋಪ ನಿರಾಧಾರ, ಇವೆಲ್ಲವೂ ರಾಜಕೀಯ ಪ್ರೇರಿತ ಸುಳ್ಳು ಕೇಸುಗಳು

ನರಸಿಂಹಮೂರ್ತಿಯವರ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಜನಶಕ್ತಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕುಮಾರ್ ಸಮತಳರವರು ಪೊಲೀಸರ ಆರೋಪ ನಿರಾಧಾರ, ಇವೆಲ್ಲವೂ ರಾಜಕೀಯ ಪ್ರೇರಿತ ಸುಳ್ಳು ಕೇಸುಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರಸಿಂಹಮೂರ್ತಿಯವರು 1990ರಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದು ಬಿಎಂಐಸಿ ವಿರೋಧಿ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಅವರ ಅಣ್ಣನೊಂದಿಗೆ ಸೇರಿ ರೇಷ್ಮೆ ಮಿಲ್ ವ್ಯವಹಾರ ನಡೆಸಿದ್ದಾರೆ. ಇವೆಲ್ಲದಕ್ಕೂ ಸಾಕಷ್ಟು ದಾಖಲೆಗಳಿರುವುದಲ್ಲದೇ ರಾಯಚೂರಿನ ಕೇಸಿಗೂ ಅವರಿಗೂ ಸಂಬಂಧವಿಲ್ಲ ಎಂದಿದ್ದಾರೆ.

ಯಾರದೋ ಮೇಲಿನ ಕೇಸುಗಳನ್ನು ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರ ಮೇಲೆ ಹಾಕಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ. ಅಲ್ಲದೇ ಪೊಲೀಸರು ಉಲ್ಲೇಖಿಸಿರುವ ಎಲ್ಲಾ ಕೇಸುಗಳು ಈಗಾಗಲೇ ವಿಚಾರಣೆ ನಡೆದು ಖುಲಾಸೆಗೊಂಡಿವೆ. ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಉದ್ಯಮಿಯಾಗಿ, ಹೋರಾಟಗಾರರಾಗಿ ತದನಂತರ ಪತ್ರಕರ್ತರಾಗಿ ಸದ್ಯ ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಇಂತವರ ಮೇಲೆ ಸುಳ್ಳು ಕೇಸು ಹಾಕಿರುವುದು ಸರಿಯಲ್ಲ, ಪೊಲೀಸರು ಕೂಡಲೇ ಕೇಸನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ನರಸಿಂಹಮೂರ್ತಿಯವರ ಬಂಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ

ಪೊಲೀಸರು ಖುಲಾಸೆಯಾಗಿರುವ ಕೇಸು ಹಾಕಿರುವುದು ಮತ್ತು 25 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಹೇಳಿರುವುದು ಬಹಳಷ್ಟು ಜನರ ವಿರೋಧಕ್ಕೆ ಗುರಿಯಾಗಿದೆ. ಪೊಲೀಸರ ನಡೆಯನ್ನು ಹಲವಾರು ಜನರು ವ್ಯಂಗ್ಯ ಮಾಡಿ ಟ್ರೋಲ್ ಮಾಡಿದರೆ ಮತ್ತಷ್ಟು ಜನರ ಸರ್ಕಾರದ  ದಮನಕಾರಿ ನೀತಿಯನ್ನು ಕಟುವಾಗಿ ಟೀಕಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರಿಗೆ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕೇ ಸಿಗುತ್ತದೆ, ಅದು ಬೇರೆ ವಿಷಯ. ಆದರೆ ಸರ್ಕಾರ ಕೂಡಲೇ‌ ಅವರನ್ನು ಬಿಡುಗಡೆ‌ ಮಾಡಿ ಕ್ಷಮೆ ಕೋರಬೇಕು.‌ ಯಾಕೆಂದರೆ ಬಂಧಿಸಿದ ಕಾರಣ, ಕೇಸು, ಎಸ್ ಪಿ ಕೊಟ್ಟ‌ ಸಮರ್ಥನೆ ಎಲ್ಲವೂ ನಗೆಪಾಟಲಿಗೀಡಾಗುವಂಥದ್ದು. ನಾಗರಿಕ ಸರ್ಕಾರ ಯಾವುದೂ ಈ ಬಗೆಯ‌ ಬ್ಲಂಡರ್ ಮಾಡಲು ಸಾಧ್ಯವಿಲ್ಲ. ನಿಮ್ಮದೇ ಮರ್ಯಾದೆ ಉಳಿಸಿಕೊಳ್ಳಲಾದರೂ ಕೂಡಲೇ ಬಿಡುಗಡೆ ಮಾಡಿ ಎಂದು ಪತ್ರಕರ್ತರಾದ  ದಿನೇಶ್ ಕುಮಾರ್ ದಿನೂರವರು ಒತ್ತಾಯಿಸಿದ್ದಾರೆ.

“ಸರಕಾರ ಬಡವರಿಗಾಗಿ ರೂಪಿಸಿದ ಯೋಜನೆಗಳು ಬಡವರನ್ನು ತಲುಪುತ್ತಿಲ್ಲ” ಎಂದು ಹೇಳುವುದು ಐಪಿಸಿಯ ಯಾವುದೋ ಕಲಂ ಪ್ರಕಾರ ಗಂಭೀರ ಅಪರಾಧವಂತೆ. ಎಷ್ಟು ಯೋಚಿಸಿದರೂ ಅದು ಯಾವ ಕಲಂ ಎಂಬುದು ನೆನಪಿಗೆ ಬರುತ್ತಿಲ್ಲ. ಯಾರಿಗಾದರೂ ಗೊತ್ತಿದ್ದರೆ ಹೇಳಿ” ಎಂದು ಹಿರಿಯರಾದ ಶ್ರೀನಿವಾಸ ಕಾರ್ಕಳರವರು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರನ್ನು ಕಳೆದ ೨೦ ವರ್ಷಗಳಿಂದ ‘ ತಲೆಮರೆಸಿಕೊಂಡಿದ್ದರೆಂದು’ ಹೇಳಿ, ರಾಯಚೂರು ಪೋಲೀಸರು ಬಂಧಿಸಿರುವುದು ಆಘಾತಕಾರಿಯಾಗಿದೆ. ಇದು ಈಗಾಗಲೇ ದೇಶದಾದ್ಯಂತ ನಡೆಯುತ್ತಿರುವ ಇಂಥದ್ದೇ ಹಲವು ಘಟನೆಗಳಿಗೆ ಪೂರಕವಾಗಿದೆ ಮಾತ್ರವಲ್ಲ ದೇಶಕ್ಕೊಂದು ಸಂದೇಶವನ್ನೂ ರವಾನೆ ಮಾಡುತ್ತಿದೆ. ಇಂಥ ಘಟನೆಗಳು ಸಾಮಾಜಿಕ ಚಿಂತ‌ನಾ ಕ್ರಮಗಳನ್ನೇ ಅಳಿಸಿ ಹಾಕುವ ಪ್ರಯತ್ನಗಳಾಗಿವೆ.
ನಾವೆಲ್ಲ ದಿನಾ ಪೋಲಿಸ್ ಸ್ಟೇಷನ್ ಗೆ ಹೋಗಿ ಸಹಿಹಾಕಿ ಬಂದರೆ ಮಾತ್ರ ‘ ತಲೆಮರೆಸಿಕೊಂಡಿಲ್ಲ’ ಎಂಬರ್ಥ ಹೊರಡುವ ಕ್ರಿಯೆಗಳಿವು.
ನಾವೆಲ್ಲರೂ ದೊಡ್ಡಿಪಾಳ್ಯರ ಬೆಂಬಲಕ್ಕೆ ನಿಲ್ಲುವುದರ ಮೂಲಕ ನಮ್ಮ ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳೋಣ.
ಯಾರಿಗೂ ಜೀವಂತ ಆತ್ಮಗಳನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ದೆಹಲಿಯ ಜೆ.ಎನ್‌.ಯು ಪ್ರಾಧ್ಯಪಾಕರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ತಿಳಿಸಿದ್ದಾರೆ.

ಈಗ ಕಡಿಮೆಯೆಂದರೂ 15-20 ವರ್ಷಗಳಿಂದ ಸಾರ್ವಜನಿಕ ಬದುಕಿನಲ್ಲಿ ಚಳವಳಿಗಳಲ್ಲಿ, ಪತ್ರಕರ್ತರಾಗಿ, ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ನಾಯಕರಾಗಿ ಇಡೀ ರಾಜ್ಯಕ್ಕೇ ಚಿರಪರಿಚಿತರಾಗಿರುವ ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರನ್ನು ಏಕಾಏಕಿಯಾಗಿ ಪೊಲೀಸರು ಬಂಧಿಸಿದ್ದಾರೆ. 20 ವರ್ಷಗಳ ಹಿಂದೆ ಅವರು ನಕ್ಸಲೀಯ ಚಳುವಳಿಯಲ್ಲಿದ್ದರಂತೆ ಹೀಗಾಗಿ ಬಂಧಿಸಿದ್ದಾರಂತೆ. ಈ 20 ವರ್ಷಗಳ ಹಿಂದೆ ರಾಯಚೂರಿನಲ್ಲಿ ಇದ್ದ ಯಾರೋ ವಿನೋದ್ ಎಂಬ ನಕ್ಸಲೀಯರ ಹೆಸರಿಗೂ ದೊಡ್ಡಿಪಾಳ್ಯ ಮೂರ್ತಿಯವರಿಗೂ ಸಂಬಂಧ ಕಲ್ಪಿಸಿ ಈಗ ಬಂಧಿಸಿರುವುದು ಎಷ್ಟು ಸರಿ? ದೊಡ್ಡಿಪಾಳ್ಯ ನರಸಿಂಹ ಮೂರ್ತಿ ನನಗೆ ಪರಿಚಯವಾಗಿ ಈಗ ಸುಮಾರು 15 ವರ್ಷಗಳಾಯಿತು. ಅಂದಿನಿಂದಲೂ ಬೆಂಗಳೂರಿನಲ್ಲಿ ಅವರು ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದು, ನಮಗೆಲ್ಲ ಆತ್ಮೀಯ ಗೆಳೆಯರಾಗಿಯೂ ಇದ್ದಾರೆ.

2011ರಿಂದ ಕೆಲವು ವರ್ಷಗಳ ಕಾಲ ನಾವು ದ ಸಂಡೆ ಇಂಡಿಯನ್ ಪತ್ರಿಕೆಯಲ್ಲಿ ಸಹೋದ್ಯೋಗಿಗಳಾಗಿಯೂ ಕೆಲಸ ಮಾಡಿದ್ದೆವು. ನಂತರ ಅವರು ಗೌರಿ ಲಂಕೇಶ್ ಪತ್ರಿಕೆಯಲ್ಲಿ ಸಕ್ರಿಯವಾಗಿದ್ದರು. ಕಾನೂನುಬದ್ಧವಾಗಿ ದಶಕಗಳಿಂದಲೂ ಚಳವಳಿಗಳಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳನ್ನು ಸುಳ್ಳುಕೇಸು ಹಾಕಿ ಜೈಲಿಗೆ ಕಳಿಸುವ ಕೆಲಸ ಶುರುವಾಗಿದೆಯೇ?  ಹೀಗೆ ಹಸಿ ಸುಳ್ಳಿನ ಮೇಲೆ ರಾಜಕೀಯ ಕಾರ್ಯಕರ್ತರೊಬ್ಬರನ್ನು ಬಂಧಿಸುವ ಕೆಲಸವನ್ನು ಪೊಲೀಸರು ಯಾವುದೋ ರಾಜಕೀಯ ಒತ್ತಡದಿಂದಲೇ ಪೊಲೀಸರು ಹೀಗೆ ಮಾಡಿರಬಹುದೇ? ಏನೇ ಆಗಲಿ ಇದು ಖಂಡಿನೀಯ. ಕೂಡಲೇ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆಯವರು ಅಭಿಪ್ರಾಯಪಟ್ಟಿದ್ದಾರೆ.

KVS ಆಯೋಜಿಸಿದ ಭಗತ್ ಸಿಂಗ್ ಹುತಾತ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಹೋರಾಟಗಾರ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಸ್ಥಳೀಯ ಪೋಲಿಸ್ ಇನ್ಸ್ಪೆಕ್ಟರ್ ಅವರ ಜೊತೆಗೂಡಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಿದ್ದ ಚಿತ್ರಗಳಿವು. ಇಂತಹ ನೂರಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ ಮತ್ತು ಭಾಗವಹಿಸಿದ್ದಾರೆ. ಜನಪರವಾದ ಹೋರಾಟಗಳಲ್ಲಿ ಸದಾ ಸಕ್ರಿಯವಾಗಿ ದುಡಿಯುವ ವರ್ಗದವರ ಪರ ಶ್ರಮಿಸುತ್ತಿರುವ ನಮ್ಮ ಮೂರ್ತಿ ಅಣ್ಣ ಬದ್ಧತೆವುಳ್ಳ ಪತ್ರಕರ್ತರೂ ಹೌದು ಎಂದು ನಿಮಗೆಲ್ಲಾ ಗೊತ್ತೇಯಿದೆ ಆದರೂ ಸುಳ್ಳು ಹೇಳುವುದನ್ನು ಪೋಲಿಸರಿಂದ ಕಲಿಯಿರಿ ಎಂದು ಸರೋವರ್ ಬೆಂಕಿಕೆರೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...