Homeಕರ್ನಾಟಕಸುಳ್ಳು ಕೇಸಿನಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ಎಲ್ಲೆಡೆ ತೀವ್ರ ಖಂಡನೆ

ಸುಳ್ಳು ಕೇಸಿನಲ್ಲಿ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ: ಎಲ್ಲೆಡೆ ತೀವ್ರ ಖಂಡನೆ

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಉದ್ಯಮಿಯಾಗಿ, ಹೋರಾಟಗಾರರಾಗಿ ತದನಂತರ ಪತ್ರಕರ್ತರಾಗಿ ಸದ್ಯ ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ.

- Advertisement -
- Advertisement -

ಅಕ್ಟೋಬರ್ 24ರ ಗುರುವಾರ ಪತ್ರಕರ್ತ ಮತ್ತು ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ವಿಚಾರಣೆಗೆಂದು ಕರೆದೊಯ್ದಿದ್ದ ರಾಯಚೂರು ಪೊಲೀಸರು ನಿನ್ನೆ ಕೋರ್ಟಿಗೆ ಹಾಜರುಪಡಿಸಿದ್ದಾರೆ. ನವೆಂಬರ್ 06ಕ್ಕೆ ವಿಚಾರಣೆಯನ್ನು ಮುಂದೂಡಿರುವ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ವಿನೋದ, ಮೂರ್ತಿ, ಬಸವರಾಜು ಎಂದೆಲ್ಲಾ ಹೆಸರುಗಳಿಂದ ಆರೋಪಿಸಿರುವ ಪೊಲೀಸರು 1994ರ ರಾಯಚೂರು ಗ್ರಾಮೀಣ (ಯಾಪಲದಿನ್ನಿ) ಪೊಲೀಸ್ ಠಾಣೆಯಲ್ಲಿ ಮೂರು ಕೇಸುಗಳನ್ನು, ರಾಯಚೂರು ನೇತಾಜಿ ನಗರ ಠಾಣೆಯಲ್ಲಿ ಒಂದು ಕೇಸನ್ನು ಹಾಕಿದ್ದಾರೆ. ಕಲಂ 143, 147, 148, 307, 355, 385, 120(ಬಿ) 124(ಎ) ಸೇರಿದಂತೆ ಸುಮಾರು 21 ಸೆಕ್ಷನ್ ಗಳನ್ನು ಹಾಕಿದ್ದಾರೆ. ಅಲ್ಲದೇ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಅಕ್ಟೋಬರ್ 24ರ ಗುರುವಾರ ರಾಯಚೂರಿನಲ್ಲಿ ನಡೆದ ಗೌರಿಲಂಕೇಶ್ ಬಳಗದ ವಿಚಾರಸಂಕಿರಣದಲ್ಲಿ ಭಾಗವಹಿಸಿದ ನಂತರ ದೊಡ್ಡಿಪಾಳ್ಯರವರನ್ನು ವಶಕ್ಕೆ ಪಡೆದಿದ್ದರು. ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಮತ್ತು ಡಿವೈಎಸ್ಪಿ ಶೀಲವಂತರ್ ಸೇರಿದಂತೆ ಹಲವು ಪೊಲೀಸರು ಒಂದು ದಿನಗಳ ಕಾಲ ಸತತ ವಿಚಾರಣೆ ನಡೆಸಿದ್ದಾರೆ. ಅವರ ಮೇಲಿನ ಎಲ್ಲಾ ಆರೋಪಗಳನ್ನು ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ನಿರಾಕರಿಸಿದ್ದಾರೆ.

ಪೊಲೀಸರ ಆರೋಪ ನಿರಾಧಾರ, ಇವೆಲ್ಲವೂ ರಾಜಕೀಯ ಪ್ರೇರಿತ ಸುಳ್ಳು ಕೇಸುಗಳು

ನರಸಿಂಹಮೂರ್ತಿಯವರ ಬಂಧನ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಜನಶಕ್ತಿಯ ಕಾರ್ಯಕಾರಿ ಸಮಿತಿ ಸದಸ್ಯರಾದ ಕುಮಾರ್ ಸಮತಳರವರು ಪೊಲೀಸರ ಆರೋಪ ನಿರಾಧಾರ, ಇವೆಲ್ಲವೂ ರಾಜಕೀಯ ಪ್ರೇರಿತ ಸುಳ್ಳು ಕೇಸುಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರಸಿಂಹಮೂರ್ತಿಯವರು 1990ರಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದು ಬಿಎಂಐಸಿ ವಿರೋಧಿ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಅವರ ಅಣ್ಣನೊಂದಿಗೆ ಸೇರಿ ರೇಷ್ಮೆ ಮಿಲ್ ವ್ಯವಹಾರ ನಡೆಸಿದ್ದಾರೆ. ಇವೆಲ್ಲದಕ್ಕೂ ಸಾಕಷ್ಟು ದಾಖಲೆಗಳಿರುವುದಲ್ಲದೇ ರಾಯಚೂರಿನ ಕೇಸಿಗೂ ಅವರಿಗೂ ಸಂಬಂಧವಿಲ್ಲ ಎಂದಿದ್ದಾರೆ.

ಯಾರದೋ ಮೇಲಿನ ಕೇಸುಗಳನ್ನು ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರ ಮೇಲೆ ಹಾಕಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ. ಅಲ್ಲದೇ ಪೊಲೀಸರು ಉಲ್ಲೇಖಿಸಿರುವ ಎಲ್ಲಾ ಕೇಸುಗಳು ಈಗಾಗಲೇ ವಿಚಾರಣೆ ನಡೆದು ಖುಲಾಸೆಗೊಂಡಿವೆ. ದೊಡ್ಡಿಪಾಳ್ಯ ನರಸಿಂಹಮೂರ್ತಿಯವರು ಉದ್ಯಮಿಯಾಗಿ, ಹೋರಾಟಗಾರರಾಗಿ ತದನಂತರ ಪತ್ರಕರ್ತರಾಗಿ ಸದ್ಯ ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಇಂತವರ ಮೇಲೆ ಸುಳ್ಳು ಕೇಸು ಹಾಕಿರುವುದು ಸರಿಯಲ್ಲ, ಪೊಲೀಸರು ಕೂಡಲೇ ಕೇಸನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ನರಸಿಂಹಮೂರ್ತಿಯವರ ಬಂಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ

ಪೊಲೀಸರು ಖುಲಾಸೆಯಾಗಿರುವ ಕೇಸು ಹಾಕಿರುವುದು ಮತ್ತು 25 ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎಂದು ಹೇಳಿರುವುದು ಬಹಳಷ್ಟು ಜನರ ವಿರೋಧಕ್ಕೆ ಗುರಿಯಾಗಿದೆ. ಪೊಲೀಸರ ನಡೆಯನ್ನು ಹಲವಾರು ಜನರು ವ್ಯಂಗ್ಯ ಮಾಡಿ ಟ್ರೋಲ್ ಮಾಡಿದರೆ ಮತ್ತಷ್ಟು ಜನರ ಸರ್ಕಾರದ  ದಮನಕಾರಿ ನೀತಿಯನ್ನು ಕಟುವಾಗಿ ಟೀಕಿಸಿದ್ದಾರೆ.

ದೊಡ್ಡಿಪಾಳ್ಯ ನರಸಿಂಹಮೂರ್ತಿಯವರಿಗೆ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕೇ ಸಿಗುತ್ತದೆ, ಅದು ಬೇರೆ ವಿಷಯ. ಆದರೆ ಸರ್ಕಾರ ಕೂಡಲೇ‌ ಅವರನ್ನು ಬಿಡುಗಡೆ‌ ಮಾಡಿ ಕ್ಷಮೆ ಕೋರಬೇಕು.‌ ಯಾಕೆಂದರೆ ಬಂಧಿಸಿದ ಕಾರಣ, ಕೇಸು, ಎಸ್ ಪಿ ಕೊಟ್ಟ‌ ಸಮರ್ಥನೆ ಎಲ್ಲವೂ ನಗೆಪಾಟಲಿಗೀಡಾಗುವಂಥದ್ದು. ನಾಗರಿಕ ಸರ್ಕಾರ ಯಾವುದೂ ಈ ಬಗೆಯ‌ ಬ್ಲಂಡರ್ ಮಾಡಲು ಸಾಧ್ಯವಿಲ್ಲ. ನಿಮ್ಮದೇ ಮರ್ಯಾದೆ ಉಳಿಸಿಕೊಳ್ಳಲಾದರೂ ಕೂಡಲೇ ಬಿಡುಗಡೆ ಮಾಡಿ ಎಂದು ಪತ್ರಕರ್ತರಾದ  ದಿನೇಶ್ ಕುಮಾರ್ ದಿನೂರವರು ಒತ್ತಾಯಿಸಿದ್ದಾರೆ.

“ಸರಕಾರ ಬಡವರಿಗಾಗಿ ರೂಪಿಸಿದ ಯೋಜನೆಗಳು ಬಡವರನ್ನು ತಲುಪುತ್ತಿಲ್ಲ” ಎಂದು ಹೇಳುವುದು ಐಪಿಸಿಯ ಯಾವುದೋ ಕಲಂ ಪ್ರಕಾರ ಗಂಭೀರ ಅಪರಾಧವಂತೆ. ಎಷ್ಟು ಯೋಚಿಸಿದರೂ ಅದು ಯಾವ ಕಲಂ ಎಂಬುದು ನೆನಪಿಗೆ ಬರುತ್ತಿಲ್ಲ. ಯಾರಿಗಾದರೂ ಗೊತ್ತಿದ್ದರೆ ಹೇಳಿ” ಎಂದು ಹಿರಿಯರಾದ ಶ್ರೀನಿವಾಸ ಕಾರ್ಕಳರವರು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರನ್ನು ಕಳೆದ ೨೦ ವರ್ಷಗಳಿಂದ ‘ ತಲೆಮರೆಸಿಕೊಂಡಿದ್ದರೆಂದು’ ಹೇಳಿ, ರಾಯಚೂರು ಪೋಲೀಸರು ಬಂಧಿಸಿರುವುದು ಆಘಾತಕಾರಿಯಾಗಿದೆ. ಇದು ಈಗಾಗಲೇ ದೇಶದಾದ್ಯಂತ ನಡೆಯುತ್ತಿರುವ ಇಂಥದ್ದೇ ಹಲವು ಘಟನೆಗಳಿಗೆ ಪೂರಕವಾಗಿದೆ ಮಾತ್ರವಲ್ಲ ದೇಶಕ್ಕೊಂದು ಸಂದೇಶವನ್ನೂ ರವಾನೆ ಮಾಡುತ್ತಿದೆ. ಇಂಥ ಘಟನೆಗಳು ಸಾಮಾಜಿಕ ಚಿಂತ‌ನಾ ಕ್ರಮಗಳನ್ನೇ ಅಳಿಸಿ ಹಾಕುವ ಪ್ರಯತ್ನಗಳಾಗಿವೆ.
ನಾವೆಲ್ಲ ದಿನಾ ಪೋಲಿಸ್ ಸ್ಟೇಷನ್ ಗೆ ಹೋಗಿ ಸಹಿಹಾಕಿ ಬಂದರೆ ಮಾತ್ರ ‘ ತಲೆಮರೆಸಿಕೊಂಡಿಲ್ಲ’ ಎಂಬರ್ಥ ಹೊರಡುವ ಕ್ರಿಯೆಗಳಿವು.
ನಾವೆಲ್ಲರೂ ದೊಡ್ಡಿಪಾಳ್ಯರ ಬೆಂಬಲಕ್ಕೆ ನಿಲ್ಲುವುದರ ಮೂಲಕ ನಮ್ಮ ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳೋಣ.
ಯಾರಿಗೂ ಜೀವಂತ ಆತ್ಮಗಳನ್ನು ಕೊಲ್ಲಲು ಸಾಧ್ಯವಿಲ್ಲ ಎಂದು ದೆಹಲಿಯ ಜೆ.ಎನ್‌.ಯು ಪ್ರಾಧ್ಯಪಾಕರಾದ ಪ್ರೊ.ಪುರುಷೋತ್ತಮ ಬಿಳಿಮಲೆಯವರು ತಿಳಿಸಿದ್ದಾರೆ.

ಈಗ ಕಡಿಮೆಯೆಂದರೂ 15-20 ವರ್ಷಗಳಿಂದ ಸಾರ್ವಜನಿಕ ಬದುಕಿನಲ್ಲಿ ಚಳವಳಿಗಳಲ್ಲಿ, ಪತ್ರಕರ್ತರಾಗಿ, ಸ್ವರಾಜ್ ಇಂಡಿಯಾ ಪಕ್ಷದ ರಾಜ್ಯ ನಾಯಕರಾಗಿ ಇಡೀ ರಾಜ್ಯಕ್ಕೇ ಚಿರಪರಿಚಿತರಾಗಿರುವ ದೊಡ್ಡಿಪಾಳ್ಯ ನರಸಿಂಹಮೂರ್ತಿ ಯವರನ್ನು ಏಕಾಏಕಿಯಾಗಿ ಪೊಲೀಸರು ಬಂಧಿಸಿದ್ದಾರೆ. 20 ವರ್ಷಗಳ ಹಿಂದೆ ಅವರು ನಕ್ಸಲೀಯ ಚಳುವಳಿಯಲ್ಲಿದ್ದರಂತೆ ಹೀಗಾಗಿ ಬಂಧಿಸಿದ್ದಾರಂತೆ. ಈ 20 ವರ್ಷಗಳ ಹಿಂದೆ ರಾಯಚೂರಿನಲ್ಲಿ ಇದ್ದ ಯಾರೋ ವಿನೋದ್ ಎಂಬ ನಕ್ಸಲೀಯರ ಹೆಸರಿಗೂ ದೊಡ್ಡಿಪಾಳ್ಯ ಮೂರ್ತಿಯವರಿಗೂ ಸಂಬಂಧ ಕಲ್ಪಿಸಿ ಈಗ ಬಂಧಿಸಿರುವುದು ಎಷ್ಟು ಸರಿ? ದೊಡ್ಡಿಪಾಳ್ಯ ನರಸಿಂಹ ಮೂರ್ತಿ ನನಗೆ ಪರಿಚಯವಾಗಿ ಈಗ ಸುಮಾರು 15 ವರ್ಷಗಳಾಯಿತು. ಅಂದಿನಿಂದಲೂ ಬೆಂಗಳೂರಿನಲ್ಲಿ ಅವರು ತಮ್ಮ ಕುಟುಂಬದೊಂದಿಗೆ ವಾಸವಾಗಿದ್ದು, ನಮಗೆಲ್ಲ ಆತ್ಮೀಯ ಗೆಳೆಯರಾಗಿಯೂ ಇದ್ದಾರೆ.

2011ರಿಂದ ಕೆಲವು ವರ್ಷಗಳ ಕಾಲ ನಾವು ದ ಸಂಡೆ ಇಂಡಿಯನ್ ಪತ್ರಿಕೆಯಲ್ಲಿ ಸಹೋದ್ಯೋಗಿಗಳಾಗಿಯೂ ಕೆಲಸ ಮಾಡಿದ್ದೆವು. ನಂತರ ಅವರು ಗೌರಿ ಲಂಕೇಶ್ ಪತ್ರಿಕೆಯಲ್ಲಿ ಸಕ್ರಿಯವಾಗಿದ್ದರು. ಕಾನೂನುಬದ್ಧವಾಗಿ ದಶಕಗಳಿಂದಲೂ ಚಳವಳಿಗಳಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳನ್ನು ಸುಳ್ಳುಕೇಸು ಹಾಕಿ ಜೈಲಿಗೆ ಕಳಿಸುವ ಕೆಲಸ ಶುರುವಾಗಿದೆಯೇ?  ಹೀಗೆ ಹಸಿ ಸುಳ್ಳಿನ ಮೇಲೆ ರಾಜಕೀಯ ಕಾರ್ಯಕರ್ತರೊಬ್ಬರನ್ನು ಬಂಧಿಸುವ ಕೆಲಸವನ್ನು ಪೊಲೀಸರು ಯಾವುದೋ ರಾಜಕೀಯ ಒತ್ತಡದಿಂದಲೇ ಪೊಲೀಸರು ಹೀಗೆ ಮಾಡಿರಬಹುದೇ? ಏನೇ ಆಗಲಿ ಇದು ಖಂಡಿನೀಯ. ಕೂಡಲೇ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಪತ್ರಕರ್ತರಾದ ಹರ್ಷಕುಮಾರ್ ಕುಗ್ವೆಯವರು ಅಭಿಪ್ರಾಯಪಟ್ಟಿದ್ದಾರೆ.

KVS ಆಯೋಜಿಸಿದ ಭಗತ್ ಸಿಂಗ್ ಹುತಾತ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಹೋರಾಟಗಾರ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಸ್ಥಳೀಯ ಪೋಲಿಸ್ ಇನ್ಸ್ಪೆಕ್ಟರ್ ಅವರ ಜೊತೆಗೂಡಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಿದ್ದ ಚಿತ್ರಗಳಿವು. ಇಂತಹ ನೂರಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ ಮತ್ತು ಭಾಗವಹಿಸಿದ್ದಾರೆ. ಜನಪರವಾದ ಹೋರಾಟಗಳಲ್ಲಿ ಸದಾ ಸಕ್ರಿಯವಾಗಿ ದುಡಿಯುವ ವರ್ಗದವರ ಪರ ಶ್ರಮಿಸುತ್ತಿರುವ ನಮ್ಮ ಮೂರ್ತಿ ಅಣ್ಣ ಬದ್ಧತೆವುಳ್ಳ ಪತ್ರಕರ್ತರೂ ಹೌದು ಎಂದು ನಿಮಗೆಲ್ಲಾ ಗೊತ್ತೇಯಿದೆ ಆದರೂ ಸುಳ್ಳು ಹೇಳುವುದನ್ನು ಪೋಲಿಸರಿಂದ ಕಲಿಯಿರಿ ಎಂದು ಸರೋವರ್ ಬೆಂಕಿಕೆರೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....