Homeಮುಖಪುಟಸ್ವರಾಜ್ ಎಂಬ ನಿಜವಾದ ಅಭಿವೃದ್ಧಿ : ಸುಮನಸ್ ಕೌಲಗಿ

ಸ್ವರಾಜ್ ಎಂಬ ನಿಜವಾದ ಅಭಿವೃದ್ಧಿ : ಸುಮನಸ್ ಕೌಲಗಿ

ಸ್ವರಾಜ್‌ ಅಭಿವೃದ್ದಿಯಲ್ಲಿ ಒಬ್ಬ ವ್ಯಕ್ತಿ ಮತ್ತೊಬ್ಬನನ್ನು ಶೋಷಿಸದೆ, ಪ್ರೀತಿಯಿಂದ ಬದುಕುವುದರೊಟ್ಟಿಗೆ, ಬೇರೊಬ್ಬನು ತನ್ನನ್ನು ಶೋಷಿಸದಂತೆ ತಡೆಯುವುದೂ ಕೂಡ ಅಹಿಂಸೆಯ ಭಾಗವಾಗಿದೆ..

- Advertisement -
- Advertisement -

ಕಾಡಂಚಿನ ಒಂದು ಹಳ್ಳಿಯ ಮಧ್ಯವಯಸ್ಕ ವ್ಯಕ್ತಿಯನ್ನು ಅಂದು ಮಾತನಾಡಿಸುತ್ತಿದ್ದೆ. ಮಾತು ತಿರುತಿರುಗಿ ಅತನ ಹಳ್ಳಿಯ ಬಗ್ಗೆ ಬಂತು. ಮಾತಿನ ಮಧ್ಯೆ ಆತ ತನ್ನ ಹಳ್ಳಿ ಹಾಗೆಯೇ ಕುಗ್ರಾಮವಾಗಿಯೇ ಉಳಿದಿದ್ದು ತನ್ನ ಹಳ್ಳಿಯು ಇನ್ನೂ ‘ಡೆವಲಪ್’ ಆಗಿಲ್ಲ ಎಂದು ಕೊರಗತೊಡಗಿದ. ಕೆಲವು ದಿನಗಳ ಹಿಂದೆ ಸಾಫ್ಟ್ವೇರ್ ಗೆಳೆಯನೊಬ್ಬ ಬೆಂಗಳೂರಿನ ಬಗ್ಗೆ ಇದೇ ಮಾತನ್ನು ಹೇಳಿದ್ದು ನೆನಪಿಗೆ ಬಂತು. ಈ ‘ಡೆವಲಪ್’ ಅಥವಾ ಅಭಿವೃದ್ಧಿ ಎಂಬ ಪದ ಇತ್ತೀಚಿನ ಕೆಲವು ವರ್ಷಗಳಲ್ಲಿ ಹೆಚ್ಚು ಚಾಲ್ತಿಗೆ ಬಂದ ಶಬ್ದ. ಹಳ್ಳಿಯಿಂದ ದಿಲ್ಲಿಯವರೆಗೂ ಇದು ಜನರ ಶಬ್ದಭಂಡಾರಕ್ಕೆ ಸೇರಿಹೋಗಿದೆ. ಸಾಮಾನ್ಯರ ಕಲ್ಪನೆಯಲ್ಲಿ ಒಳ್ಳೆಯ ಜೀವನದ ಕನಸೊಂದನ್ನು ನನಸಾಗಿಸುವ ವಿಧಾನವೇ ‘ಡೆವಲಪ್’ ಆಗುವುದಾಗಿದೆ. ಈ ಅಭಿವೃದ್ಧಿ ಎಂಬ ಕಲ್ಪನೆಯು ಒಬ್ಬ ವ್ಯಕ್ತಿಗೆ, ಸಮುದಾಯಕ್ಕೆ ಹಾಗು ದೇಶಕ್ಕೆ ದಿಕ್ಕನ್ನು ತೋರಿಸುವ ದಿಕ್ಸೂಚಿಯಂತೆ ಕೆಲಸಮಾಡತೊಡಗಿದೆ.

ಅಮೂರ್ತವಾಗಿರುವ ಈ ಅಭಿವೃದ್ಧಿ ಕಲ್ಪನೆ ಸಮಾಜದ ಎಲ್ಲಾ ಸ್ಥರದವರಲ್ಲಿ ಹೆಚ್ಚು ಕಡಿಮೆ ಒಂದೇ ರೀತಿಯದಾಗಿದೆ. ಈ ಕಲ್ಪನೆ ನೂರಕ್ಕೆ ನೂರು ಭೌತಿಕ ಅಭಿವೃದ್ಧಿಯನ್ನು ತನ್ನ ಒಡಲಾಳದಲ್ಲಿ ಇಟ್ಟುಕೊಂಡಿದೆ. ಈ ಕಲ್ಪನೆಯಲ್ಲಿ ಹೆಚ್ಚಿನ ಭೌತಿಕ ವಸ್ತು ಸಂಗ್ರಹಣೆಯು ವ್ಯಕ್ತಿಯ, ಸಮುದಾಯದ ಅಥವಾ ದೇಶದ ಅಭಿವೃದ್ಧಿಯ ಸಂಕೇತವಾಗಿದೆ. ಜೀವನದಲ್ಲಿ ನೆಮ್ಮದಿ ಹಾಗು ಶಾಂತಿಯನ್ನು ಪಡೆವುದು ಈ ‘ಡೆವಲಪ್’ ಆಗುವುದರ ಹಿಂದಿನ ಬಯಕೆ ಎಂಬುದು ಯಾರೇ ಜನಸಾಮಾನ್ಯರೊಟ್ಟಿಗೆ ಮಾತನಾಡಿದರೆ ತಿಳಿಯುತ್ತದೆ. ಆದರೆ ನಾವು ನಂಬಿರುವ ಈ ವಸ್ತುಕೇಂದ್ರಿತ ಅಭಿವೃದ್ಧಿ, ಎಷ್ಟರ ಮಟ್ಟಿಗೆ ಈ ಬಯಕೆಯನ್ನು ಈಡೇರಿಸಿದೆ ಎಂದು ಪರೀಕ್ಷಿಸಿಕೊಳ್ಳುವುದು ಇಂದಿಗೆ ಅತ್ಯಗತ್ಯ. ಈ ಪರಾಮರ್ಶೆಯಿಂದ ಒಂದು ನಾಗರೀಕತೆಯಾಗಿ ನಾವು ಸರಿಯಾದ ದಿಕ್ಕಿನೆಡೆಗೆ ಹೆಜ್ಜೆ ಇಡುತ್ತಿದ್ದೇವೆಯೆ ಅಥವಾ ಇಲ್ಲವೆ ಎಂಬುದು ತಿಳಿಯಬೇಕಿದೆ.

ಒಂದೆಡೆ, ವಸ್ತು ಕೇಂದ್ರಿತ ಅಭಿವೃದ್ಧಿಯಿಂದ ಪರಿಸರದ ಮೇಲೆ ಮಿತಿಮೀರಿದ ಒತ್ತಡ ಉಂಟಾಗಿ ನಾವು ಬದುಕಲೇ ಆಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇತ್ತಿಚೆಗಷ್ಟೆ, ಮೆಲ್‌ಬರ್ನ್‌ನ ‘ಬ್ರೇಕ್‌ಥ್ರೂ ನ್ಯಾಶನಲ್ ಸೆಂಟರ್ ಫಾರ್ ಕ್ಲೈಮೇಟ್ ರಿಸ್ಟೊರೇಶನ್’ ಸಂಸ್ಥೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ನಾವು ಅನುಸರಿಸುತ್ತಿರುವ ಅಭಿವೃದ್ಧಿ ಮಾದರಿಯು 2050ನೇ ಇಸವಿಯ ವೇಳೆಗೆ ಮನುಷ್ಯನ ಮೂಲಭೂತ ಅಗತ್ಯಗಳಾದ ಒಳ್ಳೆಯ ಗಾಳಿ, ನೀರು, ಮಣ್ಣು ಸಿಗದಂತೆ ಮಾಡಿ ಮಾನವ ಕುಲವೇ ವಿನಾಶದ ಅಂಚಿಗೆ ತಲುಪುತ್ತದೆ ಎನ್ನುತ್ತದೆ. ಇಂಗ್ಲೆಂಡಿನ ಆಕ್ಸಫಾಮ್ ಸಂಸ್ಥೆಯ ವರದಿಯ ಪ್ರಕಾರ ಈ ಅಭಿವೃದ್ಧಿಯ ಮಾದರಿಯಿಂದಾಗಿ ಬಡವ ಬಲ್ಲಿದರ ನಡುವಿನ ಅಂತರ ದಿನದಿಂದ ದಿನಕ್ಕೆ ದೊಡ್ಡದಾಗುತ್ತಾ ಹೋಗುತ್ತಿದೆ. ಭಾರತ ದೇಶದ ಶೇ.77ರಷ್ಟು ಸಂಪತ್ತು ಕೇವಲ ಶೇ.10ರಷ್ಟು ಜನರ ಬಳಿ ಸೇರಿದೆ. ವರ್ಷದಿಂದ ವರ್ಷಕ್ಕೆ ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ, ಬಡವರು ಬಡವರಾಗುತ್ತಿದ್ದಾರೆ. ಇದಷ್ಟೇ ಅಲ್ಲದೆ ಜನರಿಗೆ ತಮ್ಮ ಜೀವನದ ಮೇಲಿನ ಹಿಡಿತ ಕಡಿಮೆಯಾಗಿ, ನೆಮ್ಮದಿ ಹಾಗು ಸಂತೋಷ ಕುಸಿಯುತ್ತಿದೆ. ಹಾಗಾಗಿ ಪರಿಸರ ಸುಸ್ಥಿರತೆ ಮತ್ತು ಸಾಮಾಜಿಕ ಆರ್ಥಿಕ ಸಮಾನತೆಯನ್ನು ಹೆಚ್ಚಿಸಿ, ಜನರಿಗೆ ತಮ್ಮ ಬದುಕಿನ ಮೇಲೆ ಹೆಚ್ಚಿನ ಹಿಡಿತವನ್ನು ನೀಡಬಲ್ಲ ಅಭಿವೃದ್ಧಿಯ ಕಲ್ಪನೆಯನ್ನು ನೀಡಬೇಕಿದೆ. ಇಂತಹ ಒಂದು ಅಭಿವೃದ್ಧಿ ಕಲ್ಪನೆಯು ಮಹಾತ್ಮಗಾಂಧಿ ಹಾಗು ಅವರ ಒಡನಾಡಿ ಜೆ.ಸಿ ಕುಮಾರಪ್ಪನವರ ಚಿಂತನೆಯಲ್ಲಿ ಅಡಗಿದೆ. ಅದು ಸ್ವರಾಜ್ ಅಭಿವೃದ್ಧಿ ಕಲ್ಪನೆಯಾಗಿದೆ.

ಜೆ.ಸಿ ಕುಮಾರಪ್ಪ

ಸ್ವರಾಜ್ ಎಂದರೆ ಒಬ್ಬ ವ್ಯಕ್ತಿಯು ಸಂಪೂರ್ಣವಾಗಿ ತನ್ನ ಜೀವನದ ಮೇಲೆ ಹಿಡಿತವನ್ನು ತಾನೇ ಹೊಂದಿರುವುದು ಎಂಬುದಾಗಿದೆ. ಸ್ವರಾಜ್ ಅಭಿವೃದ್ಧಿ ಕಲ್ಪನೆಯು ನ್ಯಾಚುರಲ್ ಆರ್ಡರ್ ಎಂಬ ಸಮಷ್ಟಿ ದೃಷ್ಟಿಯ ಮೇಲೆ ನಿಂತಿದೆ. ಈ ಸಮಷ್ಟಿ ನೋಟವು ಪರಿಸರದಲ್ಲಿ ಮಾನವನ ಸ್ಥಾನವನ್ನು ಗುರುತಿಸಿ, ಸತ್ಯ ಮತ್ತು ಅಹಿಂಸೆ ಎಂಬ ಮೂಲ ತತ್ವಗಳನ್ನು ಆಧಾರವಾಗಿ ಹೊಂದಿದೆ. ಸತ್ಯವೆಂದರೆ ಮನುಷ್ಯನನ್ನೂ ಒಳಗೊಂಡಂತೆ ವಿಶ್ವದಲ್ಲಿರುವ ಎಲ್ಲಾ ಜೀವ ಹಾಗು ನಿರ್ಜೀವ ವಸ್ತುಗಳ ನಡುವೆ ಒಂದು ಅವಿನಾಭಾವ ಸಂಬಂಧವಿದೆ ಎಂಬ ದೃಷ್ಟಿಕೋನ. ಒಬ್ಬ ವ್ಯಕ್ತಿಯ ಒಳಿತು ವಿಶ್ವದ ಒಳಿತಿನಲ್ಲಿದೆ ಎಂಬುದು ಈ ದೃಷ್ಟಿಕೋನದ ನೈತಿಕ ನಿಲುವು. ಹಾಗಾಗಿ ಸತ್ಯದ ಅರಿವಿನಲ್ಲಿ ಬದುಕಲು, ಅಹಿಂಸಾತ್ಮಕ ಜೀವನ ಅನಿವಾರ್ಯವಾಗುತ್ತದೆ. ಇಲ್ಲಿ ಕೇವಲ ಒಬ್ಬ ವ್ಯಕ್ತಿ ಮತ್ತೊಬ್ಬನನ್ನು ಶೋಷಿಸದೆ, ಪ್ರೀತಿಯಿಂದ ಬದುಕುವುದರೊಟ್ಟಿಗೆ, ಬೇರೊಬ್ಬನು ತನ್ನನ್ನು ಶೋಷಿಸದಂತೆ ತಡೆಯುವುದೂ ಕೂಡ ಅಹಿಂಸೆಯ ಭಾಗವಾಗಿದೆ. ಈ ರೀತಿಯ ಅಹಿಂಸಾತ್ಮಕ ಬದುಕನ್ನು ನಡೆಸಲು ಎಲ್ಲ ಮನುಷ್ಯರಿಗೂ ತಮ್ಮ ಮೂಲಭೂತ ಭೌತಿಕ ಅಗತ್ಯತೆಗಳಾದ ಆಹಾರ, ಬಟ್ಟೆ ಮತ್ತು ವಸತಿಯ ಪೂರೈಕೆಯಾಗುವುದು ಅತ್ಯಗತ್ಯ. ಈ ಮೂಲಭೂತ ಅಗತ್ಯಗಳಿಂದ ವಂಚಿತನಾದವನಿಗೆ, ತನ್ನ ದೈಹಿಕ ಬದುಕು ಮುಖ್ಯವಾಗಿ, ಸಮಾಜದ ಒಳಿತು ಹಿಂದಕ್ಕೆ ಸರಿಯುವ ಸಾಧ್ಯತೆ ಹೆಚ್ಚಾಗುತ್ತದೆ. ಆದ್ದರಿಂದ ಸ್ವರಾಜ್ ಕಲ್ಪನೆಯಲ್ಲಿ ಅಭಿವೃದ್ಧಿಯು ಮೂಲಭೂತ ಭೌತಿಕ ಅಗತ್ಯತೆಗಳನ್ನು ಪೂರೈಸಿದ ನಂತರ ನೈತಿಕತೆಯ ಕಡೆಗೆ ಮುಖಮಾಡುತ್ತದೆ. ಇದು ಒಬ್ಬ ವ್ಯಕ್ತಿ ತನ್ನ ಅಹಂಅನ್ನು ಕಳೆದುಕೊಂಡು ವಿಶ್ವದೊಟ್ಟಿಗೆ ಒಂದಾಗಿ ಬದುಕಲು ಪ್ರೇರೇಪಿಸುತ್ತದೆ. ಇದರ ಫಲವೇ ವ್ಯಕ್ತಿಜೀವನದಲ್ಲಿ ಹಾಗೂ ಸಮಾಜದಲ್ಲಿ ನೆಮ್ಮದಿ ಮತ್ತು ಶಾಂತಿ ನೆಲೆಗೊಳ್ಳುವಂತೆ ಮಾಡುತ್ತದೆ.

ಸ್ವರಾಜ್ ಅಭಿವೃದ್ಧಿಯು ಮೂಲಭೂತ ಭೌತಿಕ ಅಗತ್ಯತೆಗಳನ್ನು ಎಲ್ಲರು ಪೂರೈಸಿಕೊಳ್ಳುವಂತೆ ಮಾಡಲು ರಾಜಕೀಯ ವಿಕೇಂದ್ರಿಕರಣ ಹಾಗು ಸ್ವಾವಲಂಬಿ ಆರ್ಥಿಕ ವ್ಯವಸ್ಥೆಯನ್ನು ಪ್ರತಿಪಾದಿಸುತ್ತದೆ. ರಾಜಕೀಯ ವಿಕೇಂದ್ರಿಕರಣವು ಎರಡು ಮುಖವನ್ನು ಹೊಂದಿದೆ. ಒಂದು, ಅಹಿಂಸಾತ್ಮಕ ಪ್ರಜಾಪ್ರಭುತ್ವ, ಮತ್ತೊಂದು ಸತ್ಯಾಗ್ರಹದ ಮೂಲಕ ಶೋಷಣೆಯ ವಿರುದ್ಧ ಅಹಿಂಸಾತ್ಮಕ ಹೋರಾಟ. ಅಹಿಂಸಾತ್ಮಕ ಪ್ರಜಾಪ್ರಭುತ್ವವು ಹೆಚ್ಚಿನ ರಾಜಕೀಯ ಅಧಿಕಾರವನ್ನು ಸಮುದಾಯಕ್ಕೆ ನೀಡಿ, ನಿರ್ಧಾರಗಳನ್ನು ಆದಷ್ಟು ಒಮ್ಮತದ ಮೇಲೆ ಮಾಡುವಂತೆ ಪ್ರೋತ್ಸಾಹಿಸುತ್ತದೆ. ಈ ವ್ಯವಸ್ಥೆಯು ಸಮುದಾಯದ ಭಾಗವಾಗಿರುವ ವ್ಯಕ್ತಿಗೆ ತನ್ನ ಜೀವನದ ಮೇಲೆ ಹೆಚ್ಚಿನ ಹಿಡಿತವನ್ನು ನೀಡಿ ರಾಜಕೀಯ ಶೋಷಣೆಯನ್ನು ಕಡಿಮೆಗೊಳಿಸುತ್ತದೆ. ಈ ರೀತಿಯ ಪ್ರಜಾಪ್ರಭುತ್ವವು, ಬೆಂಗಳೂರಿನಲ್ಲೋ ಅಥವ ದೆಹಲಿಯಲ್ಲೋ ಕುಳಿತು ಯಾವುದೋ ಒಂದು ಹಳ್ಳಿಗೆ ಅಲ್ಲಿಯ ಜನರನ್ನು ಗಮನಕ್ಕೇ ತೆಗೆದುಕೊಳ್ಳದೇ ಏನು ಬೇಕು ಏನು ಬೇಡ ಎಂದು ನಿರ್ಧರಿಸುವ ಇಂದಿನ ರಾಜಕೀಯ ವ್ಯವಸ್ಥೆಗೆ ತದ್ವಿರುದ್ಧವಾಗಿದೆ. ಮನುಷ್ಯನಿಗೆ, ಪರಹಿತದ ಜೊತೆಗೆ ಸ್ವಹಿತಾಸಕ್ತಿಯ ಮುಖವೂ ಇರುವುದರಿಂದ ಅಹಿಂಸಾತ್ಮಕ ಪ್ರಜಾಪ್ರಭುತ್ವದಲ್ಲಿಯೂ ಶೋಷಣೆಯ ಸಾಧ್ಯತೆಗಳಿರುತ್ತದೆ. ಹಾಗಾಗಿ ಸತ್ಯಾಗ್ರಹ ಅಥವಾ ಪ್ರೀತಿಯ ಮೂಲಕ ಶೋಷಿತರು ಶೋಷಣೆ ಮಾಡುವರ ಮನಸ್ಸನ್ನು ಗೆದ್ದು ಶೋಷಣೆಯಿಂದ ಹೊರಬರುವುದು ಸ್ವರಾಜ್ ಅಭಿವೃದ್ಧಿಯಲ್ಲಿ ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ.

ರಾಜಕೀಯ ವಿಕೇಂದ್ರಿಕರಣಕ್ಕೆ, ಸ್ವಾವಲಂಬಿ ಆರ್ಥಿಕ ವ್ಯವಸ್ಥೆಯು ಅತ್ಯಗತ್ಯ. ಈ ವ್ಯವಸ್ಥೆಯು ಉತ್ಪತ್ತಿ ಹಾಗು ಕೊಳ್ಳುವಿಕೆಯು ಕೇವಲ ಭೌತಿಕ ವ್ಯವಹಾರವಲ್ಲದೆ, ನೈತಿಕ ವ್ಯವಹಾರ ಕೂಡ ಆಗಿದೆ ಎಂಬುದನ್ನು ಗುರುತಿಸುತ್ತದೆ. ಉದಾಹರಣೆಗೆ ಮಕ್ಕಳನ್ನು ಶೋಷಿಸಿ ತಯಾರಾದ ಒಂದು ವಸ್ತುವನ್ನು ಕೊಂಡ ವ್ಯಕ್ತಿಯೊಬ್ಬ ಪರೋಕ್ಷವಾಗಿ ಆ ಮಕ್ಕಳ ಶೋಷಣೆಗೆ ಕಾರಣನಾಗಿರುತ್ತಾನೆ. ಆದ್ದರಿಂದ ಒಬ್ಬ ವ್ಯಕ್ತಿಯು ಅಹಿಂಸಾತ್ಮಕ ಬದುಕನ್ನು ನಡೆಸಬೇಕಾದರೆ, ತಾನು ಕೊಂಡಿರುವ ವಸ್ತು ಹೇಗೆ ತಯಾರಾಗಿದೆ, ಅದರ ತಯಾರಿಕೆಯ ಹಿಂದಿನ ಕತೆಯೇನು ಎಂಬುದನ್ನು ಖುದ್ದು ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಹಾಗಾಗಿ ಉತ್ಪಾದಕ ಮತ್ತು ಗ್ರಾಹಕರ ನಡುವಿನ ಅಂತರ ಕಡಿಮೆ ಇರುವಂತೆ ಸ್ವಾವಲಂಬಿ ಆರ್ಥಿಕ ವ್ಯವಸ್ಥೆಯು ಪ್ರೇರೇಪಿಸುತ್ತದೆ. ಈ ಅರ್ಥ ವ್ಯವಸ್ಥೆಯು ಮಾನವ ಶ್ರಮ ಆಧಾರಿತ ಉದ್ಯೋಗಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ಏಕೆಂದರೆ ಮಾನವ ಶ್ರಮವನ್ನು ಒಂದು ಶಕ್ತಿಯ ರೂಪವಾಗಿ ನೋಡಿದರೆ, ಅದರಷ್ಟು ಪರಿಸರ ಸ್ನೇಹಿಯಾದ ಶಕ್ತಿಯ ಮೂಲ ಮತ್ತೊಂದಿಲ್ಲ. ಹಣದ ಬಂಡವಾಳ ಕೇವಲ ಕೆಲವರ ಬಳಿ ಮಾತ್ರ ಇದೆ. ಶ್ರಮಕ್ಕೆ ಬೇಕಾದ ಶಕ್ತಿ ಎಲ್ಲರ ಬಳಿಯಲ್ಲೂ ಇದೆ. ಹಾಗಾಗಿ ಶ್ರಮಾಧಾರಿತ ವ್ಯವಸ್ಥೆ ಹೆಚ್ಚಿನ ಜನ ತಮ್ಮ ಕಾಲ ಮೇಲೆ ನಿಲ್ಲಲು ಸಾಧ್ಯ ಮಾಡಿಕೊಡುತ್ತದೆ. ಉದಾಹರಣೆಗೆ ಶ್ರಮಾಧಾರಿತ ಕೈಮಗ್ಗಕ್ಕೆ ಬೇಕಾದ ಬಂಡವಾಳವು ಕೇವಲ ಇಪ್ಪತ್ತು ಸಾವಿರ ರೂಪಾಯಿಗಳಾದರೆ, ಬಂಡವಾಳ ಆಧಾರಿತ ವಿದ್ಯುತ್ ಮಗ್ಗಕ್ಕೆ ಎರಡು ಲಕ್ಷ ರುಪಾಯಿಗಳಷ್ಟು ಬೇಕಾಗುತ್ತದೆ. ಕೈಮಗ್ಗದ ಸ್ಥಾಪನೆಗೆ ಬಂಡವಾಳ ಕಡಿಮೆ ಇರುವುದರಿಂದ ಹೆಚ್ಚಿನ ಜನ ಸ್ವಂತ ಉದ್ಯೋಗವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಉತ್ಪಾದನೆಯ ಹಂತದಲ್ಲಿಯೇ ಸಂಪತ್ತು ಹಂಚಿಕೆಯಾಗಿ ಸಮಾಜದಲ್ಲಿ ಹೆಚ್ಚಿನ ಸಮಾನತೆ ಸಾಧ್ಯವಾಗುತ್ತದೆ. ಒಟ್ಟಾರೆಯಾಗಿ ಸ್ವರಾಜ್ ಅಭಿವೃದ್ಧಿಯತ್ತ ಹೊರಳುವುದು, ಮಾನವಕುಲದ ಉಳಿವಿಗೆ ಅನಿವಾರ್ಯವಾಗಿದೆ ಎಂಬುದು ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ. ಈ ಅನಿವಾರ್ಯತೆಯೇ 150 ವರ್ಷಗಳ ನಂತರವೂ ಗಾಂಧಿಯ ಪ್ರಸ್ತುತತೆಯನ್ನು ನಮಗೆ ತಿಳಿಸುತ್ತದೆ.

  • ಸುಮನಸ್ ಕೌಲಗಿ

ಮೇಲುಕೋಟೆಯವರಾದ ಸುಮನಸ್, ಗಾಂಧಿ ವಿಚಾರಧಾರೆಯನ್ನು ಸ್ವತಃ ಮೈಗೂಡಿಸಿಕೊಂಡಿರುವುದಲ್ಲದೆ ಅದರ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ‘ಸ್ವರಾಜ್ ಅಭಿವೃದ್ಧಿ ಚಿಂತನೆ’ಯ ಬಗ್ಗೆ ಇಂಗ್ಲೆಡಿನ ಯೂನಿವರ್ಸಿಟಿ ಆಫ್ ಸಸೆಕ್ಸ್‌ನಲ್ಲಿ ಪಿಎಚ್‌ಡಿ ಪ್ರಬಂಧ ಮಂಡಿಸಿದ್ದಾರೆ.


ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...