Homeಮುಖಪುಟಸ್ವರಾಜ್ ಎಂಬ ನಿಜವಾದ ಅಭಿವೃದ್ಧಿ : ಸುಮನಸ್ ಕೌಲಗಿ

ಸ್ವರಾಜ್ ಎಂಬ ನಿಜವಾದ ಅಭಿವೃದ್ಧಿ : ಸುಮನಸ್ ಕೌಲಗಿ

ಸ್ವರಾಜ್‌ ಅಭಿವೃದ್ದಿಯಲ್ಲಿ ಒಬ್ಬ ವ್ಯಕ್ತಿ ಮತ್ತೊಬ್ಬನನ್ನು ಶೋಷಿಸದೆ, ಪ್ರೀತಿಯಿಂದ ಬದುಕುವುದರೊಟ್ಟಿಗೆ, ಬೇರೊಬ್ಬನು ತನ್ನನ್ನು ಶೋಷಿಸದಂತೆ ತಡೆಯುವುದೂ ಕೂಡ ಅಹಿಂಸೆಯ ಭಾಗವಾಗಿದೆ..

- Advertisement -
- Advertisement -

ಕಾಡಂಚಿನ ಒಂದು ಹಳ್ಳಿಯ ಮಧ್ಯವಯಸ್ಕ ವ್ಯಕ್ತಿಯನ್ನು ಅಂದು ಮಾತನಾಡಿಸುತ್ತಿದ್ದೆ. ಮಾತು ತಿರುತಿರುಗಿ ಅತನ ಹಳ್ಳಿಯ ಬಗ್ಗೆ ಬಂತು. ಮಾತಿನ ಮಧ್ಯೆ ಆತ ತನ್ನ ಹಳ್ಳಿ ಹಾಗೆಯೇ ಕುಗ್ರಾಮವಾಗಿಯೇ ಉಳಿದಿದ್ದು ತನ್ನ ಹಳ್ಳಿಯು ಇನ್ನೂ ‘ಡೆವಲಪ್’ ಆಗಿಲ್ಲ ಎಂದು ಕೊರಗತೊಡಗಿದ. ಕೆಲವು ದಿನಗಳ ಹಿಂದೆ ಸಾಫ್ಟ್ವೇರ್ ಗೆಳೆಯನೊಬ್ಬ ಬೆಂಗಳೂರಿನ ಬಗ್ಗೆ ಇದೇ ಮಾತನ್ನು ಹೇಳಿದ್ದು ನೆನಪಿಗೆ ಬಂತು. ಈ ‘ಡೆವಲಪ್’ ಅಥವಾ ಅಭಿವೃದ್ಧಿ ಎಂಬ ಪದ ಇತ್ತೀಚಿನ ಕೆಲವು ವರ್ಷಗಳಲ್ಲಿ ಹೆಚ್ಚು ಚಾಲ್ತಿಗೆ ಬಂದ ಶಬ್ದ. ಹಳ್ಳಿಯಿಂದ ದಿಲ್ಲಿಯವರೆಗೂ ಇದು ಜನರ ಶಬ್ದಭಂಡಾರಕ್ಕೆ ಸೇರಿಹೋಗಿದೆ. ಸಾಮಾನ್ಯರ ಕಲ್ಪನೆಯಲ್ಲಿ ಒಳ್ಳೆಯ ಜೀವನದ ಕನಸೊಂದನ್ನು ನನಸಾಗಿಸುವ ವಿಧಾನವೇ ‘ಡೆವಲಪ್’ ಆಗುವುದಾಗಿದೆ. ಈ ಅಭಿವೃದ್ಧಿ ಎಂಬ ಕಲ್ಪನೆಯು ಒಬ್ಬ ವ್ಯಕ್ತಿಗೆ, ಸಮುದಾಯಕ್ಕೆ ಹಾಗು ದೇಶಕ್ಕೆ ದಿಕ್ಕನ್ನು ತೋರಿಸುವ ದಿಕ್ಸೂಚಿಯಂತೆ ಕೆಲಸಮಾಡತೊಡಗಿದೆ.

ಅಮೂರ್ತವಾಗಿರುವ ಈ ಅಭಿವೃದ್ಧಿ ಕಲ್ಪನೆ ಸಮಾಜದ ಎಲ್ಲಾ ಸ್ಥರದವರಲ್ಲಿ ಹೆಚ್ಚು ಕಡಿಮೆ ಒಂದೇ ರೀತಿಯದಾಗಿದೆ. ಈ ಕಲ್ಪನೆ ನೂರಕ್ಕೆ ನೂರು ಭೌತಿಕ ಅಭಿವೃದ್ಧಿಯನ್ನು ತನ್ನ ಒಡಲಾಳದಲ್ಲಿ ಇಟ್ಟುಕೊಂಡಿದೆ. ಈ ಕಲ್ಪನೆಯಲ್ಲಿ ಹೆಚ್ಚಿನ ಭೌತಿಕ ವಸ್ತು ಸಂಗ್ರಹಣೆಯು ವ್ಯಕ್ತಿಯ, ಸಮುದಾಯದ ಅಥವಾ ದೇಶದ ಅಭಿವೃದ್ಧಿಯ ಸಂಕೇತವಾಗಿದೆ. ಜೀವನದಲ್ಲಿ ನೆಮ್ಮದಿ ಹಾಗು ಶಾಂತಿಯನ್ನು ಪಡೆವುದು ಈ ‘ಡೆವಲಪ್’ ಆಗುವುದರ ಹಿಂದಿನ ಬಯಕೆ ಎಂಬುದು ಯಾರೇ ಜನಸಾಮಾನ್ಯರೊಟ್ಟಿಗೆ ಮಾತನಾಡಿದರೆ ತಿಳಿಯುತ್ತದೆ. ಆದರೆ ನಾವು ನಂಬಿರುವ ಈ ವಸ್ತುಕೇಂದ್ರಿತ ಅಭಿವೃದ್ಧಿ, ಎಷ್ಟರ ಮಟ್ಟಿಗೆ ಈ ಬಯಕೆಯನ್ನು ಈಡೇರಿಸಿದೆ ಎಂದು ಪರೀಕ್ಷಿಸಿಕೊಳ್ಳುವುದು ಇಂದಿಗೆ ಅತ್ಯಗತ್ಯ. ಈ ಪರಾಮರ್ಶೆಯಿಂದ ಒಂದು ನಾಗರೀಕತೆಯಾಗಿ ನಾವು ಸರಿಯಾದ ದಿಕ್ಕಿನೆಡೆಗೆ ಹೆಜ್ಜೆ ಇಡುತ್ತಿದ್ದೇವೆಯೆ ಅಥವಾ ಇಲ್ಲವೆ ಎಂಬುದು ತಿಳಿಯಬೇಕಿದೆ.

ಒಂದೆಡೆ, ವಸ್ತು ಕೇಂದ್ರಿತ ಅಭಿವೃದ್ಧಿಯಿಂದ ಪರಿಸರದ ಮೇಲೆ ಮಿತಿಮೀರಿದ ಒತ್ತಡ ಉಂಟಾಗಿ ನಾವು ಬದುಕಲೇ ಆಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇತ್ತಿಚೆಗಷ್ಟೆ, ಮೆಲ್‌ಬರ್ನ್‌ನ ‘ಬ್ರೇಕ್‌ಥ್ರೂ ನ್ಯಾಶನಲ್ ಸೆಂಟರ್ ಫಾರ್ ಕ್ಲೈಮೇಟ್ ರಿಸ್ಟೊರೇಶನ್’ ಸಂಸ್ಥೆ ಬಿಡುಗಡೆ ಮಾಡಿದ ವರದಿಯ ಪ್ರಕಾರ, ನಾವು ಅನುಸರಿಸುತ್ತಿರುವ ಅಭಿವೃದ್ಧಿ ಮಾದರಿಯು 2050ನೇ ಇಸವಿಯ ವೇಳೆಗೆ ಮನುಷ್ಯನ ಮೂಲಭೂತ ಅಗತ್ಯಗಳಾದ ಒಳ್ಳೆಯ ಗಾಳಿ, ನೀರು, ಮಣ್ಣು ಸಿಗದಂತೆ ಮಾಡಿ ಮಾನವ ಕುಲವೇ ವಿನಾಶದ ಅಂಚಿಗೆ ತಲುಪುತ್ತದೆ ಎನ್ನುತ್ತದೆ. ಇಂಗ್ಲೆಂಡಿನ ಆಕ್ಸಫಾಮ್ ಸಂಸ್ಥೆಯ ವರದಿಯ ಪ್ರಕಾರ ಈ ಅಭಿವೃದ್ಧಿಯ ಮಾದರಿಯಿಂದಾಗಿ ಬಡವ ಬಲ್ಲಿದರ ನಡುವಿನ ಅಂತರ ದಿನದಿಂದ ದಿನಕ್ಕೆ ದೊಡ್ಡದಾಗುತ್ತಾ ಹೋಗುತ್ತಿದೆ. ಭಾರತ ದೇಶದ ಶೇ.77ರಷ್ಟು ಸಂಪತ್ತು ಕೇವಲ ಶೇ.10ರಷ್ಟು ಜನರ ಬಳಿ ಸೇರಿದೆ. ವರ್ಷದಿಂದ ವರ್ಷಕ್ಕೆ ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ, ಬಡವರು ಬಡವರಾಗುತ್ತಿದ್ದಾರೆ. ಇದಷ್ಟೇ ಅಲ್ಲದೆ ಜನರಿಗೆ ತಮ್ಮ ಜೀವನದ ಮೇಲಿನ ಹಿಡಿತ ಕಡಿಮೆಯಾಗಿ, ನೆಮ್ಮದಿ ಹಾಗು ಸಂತೋಷ ಕುಸಿಯುತ್ತಿದೆ. ಹಾಗಾಗಿ ಪರಿಸರ ಸುಸ್ಥಿರತೆ ಮತ್ತು ಸಾಮಾಜಿಕ ಆರ್ಥಿಕ ಸಮಾನತೆಯನ್ನು ಹೆಚ್ಚಿಸಿ, ಜನರಿಗೆ ತಮ್ಮ ಬದುಕಿನ ಮೇಲೆ ಹೆಚ್ಚಿನ ಹಿಡಿತವನ್ನು ನೀಡಬಲ್ಲ ಅಭಿವೃದ್ಧಿಯ ಕಲ್ಪನೆಯನ್ನು ನೀಡಬೇಕಿದೆ. ಇಂತಹ ಒಂದು ಅಭಿವೃದ್ಧಿ ಕಲ್ಪನೆಯು ಮಹಾತ್ಮಗಾಂಧಿ ಹಾಗು ಅವರ ಒಡನಾಡಿ ಜೆ.ಸಿ ಕುಮಾರಪ್ಪನವರ ಚಿಂತನೆಯಲ್ಲಿ ಅಡಗಿದೆ. ಅದು ಸ್ವರಾಜ್ ಅಭಿವೃದ್ಧಿ ಕಲ್ಪನೆಯಾಗಿದೆ.

ಜೆ.ಸಿ ಕುಮಾರಪ್ಪ

ಸ್ವರಾಜ್ ಎಂದರೆ ಒಬ್ಬ ವ್ಯಕ್ತಿಯು ಸಂಪೂರ್ಣವಾಗಿ ತನ್ನ ಜೀವನದ ಮೇಲೆ ಹಿಡಿತವನ್ನು ತಾನೇ ಹೊಂದಿರುವುದು ಎಂಬುದಾಗಿದೆ. ಸ್ವರಾಜ್ ಅಭಿವೃದ್ಧಿ ಕಲ್ಪನೆಯು ನ್ಯಾಚುರಲ್ ಆರ್ಡರ್ ಎಂಬ ಸಮಷ್ಟಿ ದೃಷ್ಟಿಯ ಮೇಲೆ ನಿಂತಿದೆ. ಈ ಸಮಷ್ಟಿ ನೋಟವು ಪರಿಸರದಲ್ಲಿ ಮಾನವನ ಸ್ಥಾನವನ್ನು ಗುರುತಿಸಿ, ಸತ್ಯ ಮತ್ತು ಅಹಿಂಸೆ ಎಂಬ ಮೂಲ ತತ್ವಗಳನ್ನು ಆಧಾರವಾಗಿ ಹೊಂದಿದೆ. ಸತ್ಯವೆಂದರೆ ಮನುಷ್ಯನನ್ನೂ ಒಳಗೊಂಡಂತೆ ವಿಶ್ವದಲ್ಲಿರುವ ಎಲ್ಲಾ ಜೀವ ಹಾಗು ನಿರ್ಜೀವ ವಸ್ತುಗಳ ನಡುವೆ ಒಂದು ಅವಿನಾಭಾವ ಸಂಬಂಧವಿದೆ ಎಂಬ ದೃಷ್ಟಿಕೋನ. ಒಬ್ಬ ವ್ಯಕ್ತಿಯ ಒಳಿತು ವಿಶ್ವದ ಒಳಿತಿನಲ್ಲಿದೆ ಎಂಬುದು ಈ ದೃಷ್ಟಿಕೋನದ ನೈತಿಕ ನಿಲುವು. ಹಾಗಾಗಿ ಸತ್ಯದ ಅರಿವಿನಲ್ಲಿ ಬದುಕಲು, ಅಹಿಂಸಾತ್ಮಕ ಜೀವನ ಅನಿವಾರ್ಯವಾಗುತ್ತದೆ. ಇಲ್ಲಿ ಕೇವಲ ಒಬ್ಬ ವ್ಯಕ್ತಿ ಮತ್ತೊಬ್ಬನನ್ನು ಶೋಷಿಸದೆ, ಪ್ರೀತಿಯಿಂದ ಬದುಕುವುದರೊಟ್ಟಿಗೆ, ಬೇರೊಬ್ಬನು ತನ್ನನ್ನು ಶೋಷಿಸದಂತೆ ತಡೆಯುವುದೂ ಕೂಡ ಅಹಿಂಸೆಯ ಭಾಗವಾಗಿದೆ. ಈ ರೀತಿಯ ಅಹಿಂಸಾತ್ಮಕ ಬದುಕನ್ನು ನಡೆಸಲು ಎಲ್ಲ ಮನುಷ್ಯರಿಗೂ ತಮ್ಮ ಮೂಲಭೂತ ಭೌತಿಕ ಅಗತ್ಯತೆಗಳಾದ ಆಹಾರ, ಬಟ್ಟೆ ಮತ್ತು ವಸತಿಯ ಪೂರೈಕೆಯಾಗುವುದು ಅತ್ಯಗತ್ಯ. ಈ ಮೂಲಭೂತ ಅಗತ್ಯಗಳಿಂದ ವಂಚಿತನಾದವನಿಗೆ, ತನ್ನ ದೈಹಿಕ ಬದುಕು ಮುಖ್ಯವಾಗಿ, ಸಮಾಜದ ಒಳಿತು ಹಿಂದಕ್ಕೆ ಸರಿಯುವ ಸಾಧ್ಯತೆ ಹೆಚ್ಚಾಗುತ್ತದೆ. ಆದ್ದರಿಂದ ಸ್ವರಾಜ್ ಕಲ್ಪನೆಯಲ್ಲಿ ಅಭಿವೃದ್ಧಿಯು ಮೂಲಭೂತ ಭೌತಿಕ ಅಗತ್ಯತೆಗಳನ್ನು ಪೂರೈಸಿದ ನಂತರ ನೈತಿಕತೆಯ ಕಡೆಗೆ ಮುಖಮಾಡುತ್ತದೆ. ಇದು ಒಬ್ಬ ವ್ಯಕ್ತಿ ತನ್ನ ಅಹಂಅನ್ನು ಕಳೆದುಕೊಂಡು ವಿಶ್ವದೊಟ್ಟಿಗೆ ಒಂದಾಗಿ ಬದುಕಲು ಪ್ರೇರೇಪಿಸುತ್ತದೆ. ಇದರ ಫಲವೇ ವ್ಯಕ್ತಿಜೀವನದಲ್ಲಿ ಹಾಗೂ ಸಮಾಜದಲ್ಲಿ ನೆಮ್ಮದಿ ಮತ್ತು ಶಾಂತಿ ನೆಲೆಗೊಳ್ಳುವಂತೆ ಮಾಡುತ್ತದೆ.

ಸ್ವರಾಜ್ ಅಭಿವೃದ್ಧಿಯು ಮೂಲಭೂತ ಭೌತಿಕ ಅಗತ್ಯತೆಗಳನ್ನು ಎಲ್ಲರು ಪೂರೈಸಿಕೊಳ್ಳುವಂತೆ ಮಾಡಲು ರಾಜಕೀಯ ವಿಕೇಂದ್ರಿಕರಣ ಹಾಗು ಸ್ವಾವಲಂಬಿ ಆರ್ಥಿಕ ವ್ಯವಸ್ಥೆಯನ್ನು ಪ್ರತಿಪಾದಿಸುತ್ತದೆ. ರಾಜಕೀಯ ವಿಕೇಂದ್ರಿಕರಣವು ಎರಡು ಮುಖವನ್ನು ಹೊಂದಿದೆ. ಒಂದು, ಅಹಿಂಸಾತ್ಮಕ ಪ್ರಜಾಪ್ರಭುತ್ವ, ಮತ್ತೊಂದು ಸತ್ಯಾಗ್ರಹದ ಮೂಲಕ ಶೋಷಣೆಯ ವಿರುದ್ಧ ಅಹಿಂಸಾತ್ಮಕ ಹೋರಾಟ. ಅಹಿಂಸಾತ್ಮಕ ಪ್ರಜಾಪ್ರಭುತ್ವವು ಹೆಚ್ಚಿನ ರಾಜಕೀಯ ಅಧಿಕಾರವನ್ನು ಸಮುದಾಯಕ್ಕೆ ನೀಡಿ, ನಿರ್ಧಾರಗಳನ್ನು ಆದಷ್ಟು ಒಮ್ಮತದ ಮೇಲೆ ಮಾಡುವಂತೆ ಪ್ರೋತ್ಸಾಹಿಸುತ್ತದೆ. ಈ ವ್ಯವಸ್ಥೆಯು ಸಮುದಾಯದ ಭಾಗವಾಗಿರುವ ವ್ಯಕ್ತಿಗೆ ತನ್ನ ಜೀವನದ ಮೇಲೆ ಹೆಚ್ಚಿನ ಹಿಡಿತವನ್ನು ನೀಡಿ ರಾಜಕೀಯ ಶೋಷಣೆಯನ್ನು ಕಡಿಮೆಗೊಳಿಸುತ್ತದೆ. ಈ ರೀತಿಯ ಪ್ರಜಾಪ್ರಭುತ್ವವು, ಬೆಂಗಳೂರಿನಲ್ಲೋ ಅಥವ ದೆಹಲಿಯಲ್ಲೋ ಕುಳಿತು ಯಾವುದೋ ಒಂದು ಹಳ್ಳಿಗೆ ಅಲ್ಲಿಯ ಜನರನ್ನು ಗಮನಕ್ಕೇ ತೆಗೆದುಕೊಳ್ಳದೇ ಏನು ಬೇಕು ಏನು ಬೇಡ ಎಂದು ನಿರ್ಧರಿಸುವ ಇಂದಿನ ರಾಜಕೀಯ ವ್ಯವಸ್ಥೆಗೆ ತದ್ವಿರುದ್ಧವಾಗಿದೆ. ಮನುಷ್ಯನಿಗೆ, ಪರಹಿತದ ಜೊತೆಗೆ ಸ್ವಹಿತಾಸಕ್ತಿಯ ಮುಖವೂ ಇರುವುದರಿಂದ ಅಹಿಂಸಾತ್ಮಕ ಪ್ರಜಾಪ್ರಭುತ್ವದಲ್ಲಿಯೂ ಶೋಷಣೆಯ ಸಾಧ್ಯತೆಗಳಿರುತ್ತದೆ. ಹಾಗಾಗಿ ಸತ್ಯಾಗ್ರಹ ಅಥವಾ ಪ್ರೀತಿಯ ಮೂಲಕ ಶೋಷಿತರು ಶೋಷಣೆ ಮಾಡುವರ ಮನಸ್ಸನ್ನು ಗೆದ್ದು ಶೋಷಣೆಯಿಂದ ಹೊರಬರುವುದು ಸ್ವರಾಜ್ ಅಭಿವೃದ್ಧಿಯಲ್ಲಿ ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ.

ರಾಜಕೀಯ ವಿಕೇಂದ್ರಿಕರಣಕ್ಕೆ, ಸ್ವಾವಲಂಬಿ ಆರ್ಥಿಕ ವ್ಯವಸ್ಥೆಯು ಅತ್ಯಗತ್ಯ. ಈ ವ್ಯವಸ್ಥೆಯು ಉತ್ಪತ್ತಿ ಹಾಗು ಕೊಳ್ಳುವಿಕೆಯು ಕೇವಲ ಭೌತಿಕ ವ್ಯವಹಾರವಲ್ಲದೆ, ನೈತಿಕ ವ್ಯವಹಾರ ಕೂಡ ಆಗಿದೆ ಎಂಬುದನ್ನು ಗುರುತಿಸುತ್ತದೆ. ಉದಾಹರಣೆಗೆ ಮಕ್ಕಳನ್ನು ಶೋಷಿಸಿ ತಯಾರಾದ ಒಂದು ವಸ್ತುವನ್ನು ಕೊಂಡ ವ್ಯಕ್ತಿಯೊಬ್ಬ ಪರೋಕ್ಷವಾಗಿ ಆ ಮಕ್ಕಳ ಶೋಷಣೆಗೆ ಕಾರಣನಾಗಿರುತ್ತಾನೆ. ಆದ್ದರಿಂದ ಒಬ್ಬ ವ್ಯಕ್ತಿಯು ಅಹಿಂಸಾತ್ಮಕ ಬದುಕನ್ನು ನಡೆಸಬೇಕಾದರೆ, ತಾನು ಕೊಂಡಿರುವ ವಸ್ತು ಹೇಗೆ ತಯಾರಾಗಿದೆ, ಅದರ ತಯಾರಿಕೆಯ ಹಿಂದಿನ ಕತೆಯೇನು ಎಂಬುದನ್ನು ಖುದ್ದು ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಹಾಗಾಗಿ ಉತ್ಪಾದಕ ಮತ್ತು ಗ್ರಾಹಕರ ನಡುವಿನ ಅಂತರ ಕಡಿಮೆ ಇರುವಂತೆ ಸ್ವಾವಲಂಬಿ ಆರ್ಥಿಕ ವ್ಯವಸ್ಥೆಯು ಪ್ರೇರೇಪಿಸುತ್ತದೆ. ಈ ಅರ್ಥ ವ್ಯವಸ್ಥೆಯು ಮಾನವ ಶ್ರಮ ಆಧಾರಿತ ಉದ್ಯೋಗಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ಏಕೆಂದರೆ ಮಾನವ ಶ್ರಮವನ್ನು ಒಂದು ಶಕ್ತಿಯ ರೂಪವಾಗಿ ನೋಡಿದರೆ, ಅದರಷ್ಟು ಪರಿಸರ ಸ್ನೇಹಿಯಾದ ಶಕ್ತಿಯ ಮೂಲ ಮತ್ತೊಂದಿಲ್ಲ. ಹಣದ ಬಂಡವಾಳ ಕೇವಲ ಕೆಲವರ ಬಳಿ ಮಾತ್ರ ಇದೆ. ಶ್ರಮಕ್ಕೆ ಬೇಕಾದ ಶಕ್ತಿ ಎಲ್ಲರ ಬಳಿಯಲ್ಲೂ ಇದೆ. ಹಾಗಾಗಿ ಶ್ರಮಾಧಾರಿತ ವ್ಯವಸ್ಥೆ ಹೆಚ್ಚಿನ ಜನ ತಮ್ಮ ಕಾಲ ಮೇಲೆ ನಿಲ್ಲಲು ಸಾಧ್ಯ ಮಾಡಿಕೊಡುತ್ತದೆ. ಉದಾಹರಣೆಗೆ ಶ್ರಮಾಧಾರಿತ ಕೈಮಗ್ಗಕ್ಕೆ ಬೇಕಾದ ಬಂಡವಾಳವು ಕೇವಲ ಇಪ್ಪತ್ತು ಸಾವಿರ ರೂಪಾಯಿಗಳಾದರೆ, ಬಂಡವಾಳ ಆಧಾರಿತ ವಿದ್ಯುತ್ ಮಗ್ಗಕ್ಕೆ ಎರಡು ಲಕ್ಷ ರುಪಾಯಿಗಳಷ್ಟು ಬೇಕಾಗುತ್ತದೆ. ಕೈಮಗ್ಗದ ಸ್ಥಾಪನೆಗೆ ಬಂಡವಾಳ ಕಡಿಮೆ ಇರುವುದರಿಂದ ಹೆಚ್ಚಿನ ಜನ ಸ್ವಂತ ಉದ್ಯೋಗವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಉತ್ಪಾದನೆಯ ಹಂತದಲ್ಲಿಯೇ ಸಂಪತ್ತು ಹಂಚಿಕೆಯಾಗಿ ಸಮಾಜದಲ್ಲಿ ಹೆಚ್ಚಿನ ಸಮಾನತೆ ಸಾಧ್ಯವಾಗುತ್ತದೆ. ಒಟ್ಟಾರೆಯಾಗಿ ಸ್ವರಾಜ್ ಅಭಿವೃದ್ಧಿಯತ್ತ ಹೊರಳುವುದು, ಮಾನವಕುಲದ ಉಳಿವಿಗೆ ಅನಿವಾರ್ಯವಾಗಿದೆ ಎಂಬುದು ದಿನದಿಂದ ದಿನಕ್ಕೆ ಸ್ಪಷ್ಟವಾಗುತ್ತಿದೆ. ಈ ಅನಿವಾರ್ಯತೆಯೇ 150 ವರ್ಷಗಳ ನಂತರವೂ ಗಾಂಧಿಯ ಪ್ರಸ್ತುತತೆಯನ್ನು ನಮಗೆ ತಿಳಿಸುತ್ತದೆ.

  • ಸುಮನಸ್ ಕೌಲಗಿ

ಮೇಲುಕೋಟೆಯವರಾದ ಸುಮನಸ್, ಗಾಂಧಿ ವಿಚಾರಧಾರೆಯನ್ನು ಸ್ವತಃ ಮೈಗೂಡಿಸಿಕೊಂಡಿರುವುದಲ್ಲದೆ ಅದರ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ‘ಸ್ವರಾಜ್ ಅಭಿವೃದ್ಧಿ ಚಿಂತನೆ’ಯ ಬಗ್ಗೆ ಇಂಗ್ಲೆಡಿನ ಯೂನಿವರ್ಸಿಟಿ ಆಫ್ ಸಸೆಕ್ಸ್‌ನಲ್ಲಿ ಪಿಎಚ್‌ಡಿ ಪ್ರಬಂಧ ಮಂಡಿಸಿದ್ದಾರೆ.


ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...