Homeರಾಜಕೀಯಯುಪಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ವತಂತ್ರ ದೇವ್ ಸಿಂಗ್ ರಾಜೀನಾಮೆ

ಯುಪಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ವತಂತ್ರ ದೇವ್ ಸಿಂಗ್ ರಾಜೀನಾಮೆ

ರಾಜ್ಯ ಘಟಕದ ಮುಖ್ಯಸ್ಥರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂಪ್ರದಾಯ ಬಿಜೆಪಿಯಲ್ಲಿ ಇಲ್ಲ

- Advertisement -
- Advertisement -

ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸ್ವತಂತ್ರ ದೇವ್ ಸಿಂಗ್ ಅವರು ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸ್ವತಂತ್ರ ದೇವ್‌ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದು, ಮೂರು ದಿನಗಳ ಹಿಂದೆ ಅವರು ಜೆಪಿ ನಡ್ಡಾ ಅವರಿಗೆ ರಾಜೀನಾಮೆ ನೀಡಿದ್ದಾರೆ ಎಂದು ಅವರ ನಿಕಟ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿವೆ. ಅವರ ಮೂರು ವರ್ಷಗಳ ಅಧಿಕಾರಾವಧಿಯು ಜುಲೈ 16 ರಂದು ಕೊನೆಗೊಂಡಿತ್ತು.

ತಾನು ದಲಿತ ಎಂಬ ಕಾರಣಕ್ಕೆ ರಾಜ್ಯ ಸರ್ಕಾರವು ತನ್ನ ಮೇಲೆ ದುರುದ್ದೇಶ ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೂಲಕ ತಮ್ಮ ರಾಜೀನಾಮೆ ನೀಡಿದ್ದ ಕಿರಿಯ ಸಚಿವ ದಿನೇಶ್ ಖಾಟಿಕ್ ಅವರ ರಾಜೀನಾಮೆಯ ಕೆಲವೇ ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ಯದ ನೀರಾವರಿ ಸಚಿವರೂ ಆಗಿರುವ ಸ್ವತಂತ್ರ ದೇವ್‌ ಅವರು ರಾಜೀನಾಮೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನೀರಾವರಿ ಇಲಾಖೆಯ ಒಟ್ಟಾರೆ ಕಾರ್ಯನಿರ್ವಹಣೆ ಮಾಡುತ್ತಿದ್ದ ಸ್ವತಂತ್ರ ದೇವ್‌‌ ಮತ್ತು ಅವರ ಅಧಿಕಾರಿಗಳ ತಂಡದೊಂದಿಗೆ ಕಿರಿಯ ಸಚಿವರಾಗಿದ್ದ ದಿನೇಸ್‌ ಖಟಿಕ್ ಅಸಮಾಧಾನಗೊಂಡಿದ್ದರು ಎಂದು ವರದಿಯಾಗಿದೆ.

ದಿನೇಶ್‌ ಖಟಿಕ್ ಅವರು ಸಿಎಂ ಆದಿತ್ಯನಾಥ್ ಅವರನ್ನು ಭೇಟಿಯಾದ ನಂತರ ತಮ್ಮ ಭಿನ್ನಾಭಿಪ್ರಾಯಗಳನ್ನು ಹೊರಹಾಕಿದ್ದಾರೆ. ಆದರೆ ಆರ್‌ಎಸ್‌ಎಸ್‌ನೊಂದಿಗಿನ ಸ್ವತಂತ್ರ ದೇವ್‌ ಅವರ ನಿಕಟ ಸಂಬಂಧವು ಯುಪಿ ಬಿಜೆಪಿ ಹುದ್ದೆಯನ್ನು ಬಿಟ್ಟುಕೊಡುವಂತೆ ಮಾಡಿರುವ ಸಾಧ್ಯತೆಯಿದೆ ಎಂದು ಬಿಜೆಪಿ ಮೂಲಗಳನ್ನು ಉಲ್ಲೇಖಿಸಿ ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕಿಯರನ್ನು ಶಾಲಾ ಸಮವಸ್ತ್ರ ತೆಗೆಯುವಂತೆ ಒತ್ತಾಯಿಸಿದ ಶಿಕ್ಷಕರು

2014ರ ಲೋಕಸಭೆ ಚುನಾವಣೆಯ ನಂತರ ಬಿಜೆಪಿಯನ್ನು ಬೆಂಬಲಿಸುತ್ತಿರುವ ದಲಿತರು ಮತ್ತು ಸಾಮಾಜಿಕವಾಗಿ ತುಳಿತಕ್ಕೊಳಗಾದವರ ಬಗ್ಗೆ ಸೌಹಾರ್ದಯುತವಾಗಿ ವರ್ತಿಸುವ ಅಗತ್ಯವನ್ನು ಆರ್‌ಎಸ್‌ಎಸ್ ಇತ್ತೀಚೆಗೆ ಒತ್ತಿ ಹೇಳುತ್ತಿದೆ.

ಸ್ವತಂತ್ರ ದೇವ್‌ ಅವರಂತೆ, ದಿನೇಶ್‌ ಕಟಿಕ್ ಕೂಡಾ ಆರ್‌ಎಸ್‌ಎಸ್‌ ಜೊತೆಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. 2017 ಮತ್ತು 2022 ರ ವಿಧಾನಸಭಾ ಚುನಾವಣೆಯಲ್ಲಿ ಮೀರತ್‌ನ ಹಸ್ತಿನಾಪುರ ಮೀಸಲು ಸ್ಥಾನದಿಂದ ಗೆದ್ದಿರುವ ಅವರ ಸಚಿವ ಸ್ಥಾನಕ್ಕೆ ಏರಿದ್ದರು. ದಿನೇಶ್‌ ಖಟಿಕ್‌ ಅವರ ಅಜ್ಜ ಬನ್ವಾರಿ ಖಟಿಕ್ ಮತ್ತು ತಂದೆ ದೇವೇಂದ್ರ ಕುಮಾರ್ ಕೂಡ ಆರ್‌ಎಸ್‌ಎಸ್ ಪದಾಧಿಕಾರಿಗಳಾಗಿದ್ದರು.

ವೈದ್ಯಕೀಯ ಮತ್ತು ಆರೋಗ್ಯ ಖಾತೆಯನ್ನು ಹೊಂದಿರುವ, ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್‌ ಮತ್ತು ಪಿಡಬ್ಲ್ಯೂಡಿ ಸಚಿವ ಜಿತಿನ್ ಪ್ರಸಾದ ಸೇರಿದಂತೆ ಇತರ ಹಲವು ಹಿರಿಯ ಸಚಿವರು, ತಮ್ಮ ಇಲಾಖೆಗಳಲ್ಲಿನ ಅಧಿಕಾರಿಗಳನ್ನು ವಿವಾದಾತ್ಮಕವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ದಿನೇಶ್‌ ಖಟಿಕ್‌ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದಲಿತ, ಒಬಿಸಿ ಅಥವಾ ಬ್ರಾಹ್ಮಣ: ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥರು ಯಾರಾಗುತ್ತಾರೆ?

ವಿಶೇಷವೇನೆಂದರೆ, ರಾಜ್ಯ ಘಟಕದ ಮುಖ್ಯಸ್ಥರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂಪ್ರದಾಯವನ್ನು ಬಿಜೆಪಿ ಹೊಂದಿಲ್ಲ. ಸ್ವತಂತ್ರ ದೇವ್‌ ಸಿಂಗ್ ಅವರಿಗಿಂತ ಮೊದಲು, ಕಲ್ರಾಜ್ ಮಿಶ್ರಾ ಮತ್ತು ಸೂರ್ಯ ಪ್ರತಾಪ್ ಶಾಹಿ ಅವರು ಕ್ರಮವಾಗಿ 2002 ಮತ್ತು 2012 ರಲ್ಲಿ ಯುಪಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಅದು ಆಗ ನಡೆದ ರಾಜ್ಯ ಚುನಾವಣೆಯಲ್ಲಿ ಪಕ್ಷದ ಸೋಲಿನ ಕಾರಣಕ್ಕಾಗಿ ನಡೆದಿತ್ತು.

ಸ್ವತಂತ್ರ ಸಿಂಗ್ ಅಧಿಕಾರವಧಿಯಲ್ಲಿ ಬಿಜೆಪಿಯು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಮತ್ತೊಮ್ಮೆ ಸತತವಾಗಿ ಯುಪಿಯಲ್ಲಿ ಅಧಿಕಾರಕ್ಕೆ ಮರಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...